Homeಮುಖಪುಟಕಮಿಷನ್‌ಗಾಗಿ ಈಶ್ವರಪ್ಪ ಪೀಡಿಸುತ್ತಿದ್ದಾರೆಂದು ಹಿಂದುತ್ವ ಮುಖಂಡ ದೂರು; ಕಾಂಗ್ರೆಸ್ ನಾಯಕರ ವಾಗ್ದಾಳಿ

ಕಮಿಷನ್‌ಗಾಗಿ ಈಶ್ವರಪ್ಪ ಪೀಡಿಸುತ್ತಿದ್ದಾರೆಂದು ಹಿಂದುತ್ವ ಮುಖಂಡ ದೂರು; ಕಾಂಗ್ರೆಸ್ ನಾಯಕರ ವಾಗ್ದಾಳಿ

ಗುತ್ತಿಗೆದಾರ ಸಂತೋಷ್ ಕೆ ಪಾಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಆರ್‌ಡಿಪಿಆರ್ ಸಚಿವ ಗಿರಿರಾಜ್ ಸಿಂಗ್ ಅವರಿಗೆ ಪತ್ರ ಬರೆದು, ಒಂದು ವರ್ಷದಿಂದ ತಮಗಾಗುತ್ತಿರುವ ಕಿರುಕುಳವನ್ನು ಹೇಳಿಕೊಂಡಿದ್ದಾರೆ.

- Advertisement -
- Advertisement -

ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಅವರ ಸಹಚರರು ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಕೆ ಪಾಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ (ಆರ್‌ಡಿಪಿಆರ್) ಗಿರಿರಾಜ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ. ಸುಮಾರು ಒಂದು ವರ್ಷದಿಂದ ಬಾಕಿ ಇರುವ ಬಿಲ್‌ಗಳನ್ನು ಪಾವತಿಸದೆ “ಕಮಿಷನ್”ಗಾಗಿ ಈಶ್ವರಪ್ಪನವರು ಪೀಡಿಸುತ್ತಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಆರೋಪಗಳನ್ನು ತಳ್ಳಿಹಾಕಿರುವ ಈಶ್ವರಪ್ಪ, ಆರೋಪಗಳು ಸುಳ್ಳು ಮತ್ತು ಆಧಾರರಹಿತವಾಗಿವೆ ಎಂದು ತಿಳಿಸಿದ್ದಾರೆ. “ನನಗೆ ಈ ವ್ಯಕ್ತಿ ಪರಿಚಯವಿಲ್ಲ” ಎಂದು ಈಶ್ವರಪ್ಪ ತಿಳಿಸಿರುವುದಾಗಿ ಟೈಮ್ಸ್ ಆಫ್‌ ಇಂಡಿಯಾ ವರದಿ ಮಾಡಿದೆ.

“ಈ ದೂರಿನ ಬಗ್ಗೆ ನನಗೆ ತಿಳಿದ ತಕ್ಷಣ, ನಾನು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದೇನೆ. ಶೀಘ್ರದಲ್ಲೇ ನೋಟಿಸ್ ನೀಡಲಾಗುವುದು” ಎಂದಿದ್ದಾರೆ. ಆದರೆ ಯಾವ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ ಅಥವಾ ಯಾವ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂಬುದನ್ನು ವಿವರಿಸಲಿಲ್ಲ ಎಂದು ವರದಿ ಹೇಳಿದೆ.

ಪಾಟೀಲ್ ಅವರು ಹಿಂದೂ ವಾಹಿನಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದಾರೆ. ಬಿಜೆಪಿ ಕಾರ್ಯಕರ್ತರೂ ಹೌದು. ಅವರ ಪತ್ರಕ್ಕೆ ಪ್ರತಿಕ್ರಿಯಿಸಿದ ಗಿರಿರಾಜ್ ಸಿಂಗ್ ಅವರ ಕಚೇರಿ, ದೂರನ್ನು ಸಂಬಂಧಪಟ್ಟ ಇಲಾಖೆಗೆ ರವಾನಿಸಲಾಗಿದೆ ಎಂದಿದ್ದಾರೆ. ಪಾಟೀಲ್ ಅವರು ಮಾರ್ಚ್‌ನಲ್ಲಿ ದೆಹಲಿಯ ನಿವಾಸದಲ್ಲಿ ಕೇಂದ್ರ ಸಚಿವರನ್ನು ಖುದ್ದು ಭೇಟಿ ಮಾಡಿದ್ದರು.

ಬಿಜೆಪಿ ಆಡಳಿತವಿರುವ ಹಿಂಡಲ ಗ್ರಾಮ ಪಂಚಾಯಿತಿಯಲ್ಲಿ ತಾನು ಮತ್ತು ಇತರ ಆರು ಗುತ್ತಿಗೆದಾರರು ರಸ್ತೆ ಕಾಮಗಾರಿಯನ್ನು ನಡೆಸಿದ್ದಾಗಿ ಪಾಟೀಲ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

“ದೇವಸ್ಥಾನದ ಜಾತ್ರೆ ಇದ್ದು, ಆ ಸಮಯದಲ್ಲಿ ಈಶ್ವರಪ್ಪ ಅವರನ್ನು ಭೇಟಿ ಮಾಡಿ ರಸ್ತೆ ಕಾಮಗಾರಿಗೆ ಅನುದಾನ ನೀಡುವಂತೆ ಕೋರಿದ್ದೆವು. ನಂತರ ಕಾಮಗಾರಿ ಆದೇಶ ನೀಡುವುದಾಗಿ ಹೇಳಿ ಕಾಮಗಾರಿ ಆರಂಭಿಸುವಂತೆ ನನಗೆ ಹಾಗೂ ಇತರೆ ಗುತ್ತಿಗೆದಾರರಿಗೆ ಸಚಿವರು ಸೂಚಿಸಿದ್ದರು” ಪತ್ರದಲ್ಲಿ ಪಾಟೀಲ್ ವಿವರಿಸಿದ್ದಾರೆ.

“ನಾನು ಮತ್ತು ಇತರೆ ಗುತ್ತಿಗೆದಾರರು ಸೇರಿ 108 ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದು, ಬಹುತೇಕ ರಸ್ತೆಗಳ ಕಾಮಗಾರಿಗೆ 4 ಕೋಟಿ ರೂ. ಈ ಹಣವನ್ನು ಬಡ್ಡಿಯ ಮೇಲೆ ಪಡೆಯಲಾಗಿದೆ. ಸಾಲಗಾರರು ಮರುಪಾವತಿಗೆ ಒತ್ತಾಯಿಸುತ್ತಿದ್ದಾರೆ” ಎಂದು ಅಳಲು ತೋಡಿಕೊಳ್ಳಲಾಗಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ ಮನೋಳ್ಕರ್ ಮಾತನಾಡಿ, “ಕಾಮಗಾರಿ ತ್ವರಿತವಾಗಿ ನಡೆದಿದ್ದರೂ ಸರಕಾರದಿಂದ ಹಣ ಪಾವತಿಯಾಗಿಲ್ಲ” ಎಂದು ದೂರಿದ್ದಾರೆ.

ಗುತ್ತಿಗೆದಾರರು ಬಡ್ಡಿಗೆ ಸಾಲ ಮಾಡಿ ಇದೀಗ ದಿವಾಳಿಯ ಅಂಚಿಗೆ ಬಂದಿದ್ದು, ಗುತ್ತಿಗೆದಾರರಿಗೆ ಹಣ ನೀಡುವುದು ಸರಕಾರದ ಕರ್ತವ್ಯವಾಗಿದೆ ಎಂದು ಪಾಟೀಲ್ ತಿಳಿಸಿದ್ದಾರೆ. 2021ರ ಮೇ ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡಿದ್ದು, ಬಿಲ್‌ಗಳನ್ನು ತೆರವುಗೊಳಿಸುವಂತೆ ಈಶ್ವರಪ್ಪ ಅವರನ್ನು ಹಲವು ಬಾರಿ ಭೇಟಿ ಮಾಡಿ ಒತ್ತಾಯಿಸಲಾಗಿದೆ. ಆದರೆ, ಕಾಲಾಂತರದಲ್ಲಿ 15 ಲಕ್ಷ ರೂಪಾಯಿ ಕಮಿಷನ್ ನೀಡುವಂತೆ ಬೇಡಿಕೆ ಇಡಲಾಗಿದೆ. ಈಶ್ವರಪ್ಪ ಅವರ ಸಂಗಡಿಗರು ಕೂಡ ಒಟ್ಟು ಬಿಲ್ ನ ಶೇ.40ರಷ್ಟು ಮೊತ್ತವನ್ನು ಒಂದೇ ಬಾರಿ ಪಾವತಿಸುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.

“ನಾನು ಸಚಿವರನ್ನು ಕನಿಷ್ಠ 80 ಬಾರಿ ಭೇಟಿ ಮಾಡಿದ್ದೇನೆ” ಎಂದು ಪಾಟೀಲ್ ತಿಳಿಸಿದ್ದಾರೆ. “ಬಿಲ್ಗಳನ್ನು ತೆರವುಗೊಳಿಸಲಾಗುವುದು ಎಂದು ಅವರು ಯಾವಾಗಲೂ ಹೇಳುತ್ತಿದ್ದರು, ಆದರೆ ಅವರ ಸಹಚರರು ಹೆಚ್ಚಿನ ಹಣವನ್ನು ಕೇಳುತ್ತಿದ್ದರು” ಎಂದಿದ್ದಾರೆ.

ಪಾಟೀಲ್ ಅವರು ಕರ್ನಾಟಕದ ಪ್ರಭಾರಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್ ಅವರನ್ನು ಭೇಟಿಯಾಗಿ ಸಹಾಯ ಮಾಡುವ ಭರವಸೆ ಪಡೆದಿದ್ದಾರೆ. ಪಾಟೀಲ್ ಈಗ ಪ್ರಧಾನಿ ಕಚೇರಿಯ ಪ್ರತಿಕ್ರಿಯೆಗೆ ಕಾಯುತ್ತಾ ಕುಳಿತ್ತಿದ್ದಾರೆ.

 ಕಾಂಗ್ರೆಸ್ ನಾಯಕರು ತಿರುಗೇಟು

ಸಚಿವ ಈಶ್ವರಪ್ಪ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಸಂಬಂಧ ಹಲವು ಕಾಂಗ್ರೆಸ್ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.

ದೆಹಲಿಯಲ್ಲಿ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಮಾತನಾಡಿದ್ದು, ಬಿಜೆಪಿ ಕಾರ್ಯಕರ್ತರಿಗೆ ಭ್ರಷ್ಟಾಚಾರದ ಬಿಸಿ ಈಗ ತಟ್ಟಿದೆ. ಭ್ರಷ್ಟಾಚಾರಕ್ಕೆ ಬಿಜೆಪಿಯವರಿಗೆ ರಾಷ್ಟ್ರೀಯ ಪರವಾನಗಿ ಸಿಕ್ಕಿದೆಯಾ? ಇಡಿ, ಸಿಬಿಐ, ಐಟಿ ಬಿಜೆಪಿ ನಾಯಕರಿಗೆ ಸಂಬಂಧಿಸುವುದಿಲ್ಲ. ಒಬ್ಬ ಶಾಸಕನ ಮಗಳು ಸುಳ್ಳು ಎಸ್‌ಸಿ, ಎಸ್‌ಟಿ ಪ್ರಮಾಣ ಪತ್ರ ಮಾಡಿಸಿದ್ದಾರೆ. ಪ್ರಮಾಣ ಪತ್ರದ ಮೇಲೆ 80 ಲಕ್ಷ ರೂ. ಸಾಲ ಪಡೆದಿದ್ದಾರೆ. ಇದನ್ನು ಸಾಮಾನ್ಯ ಜನರು ಮಾಡಿದ್ದರೆ ಜೈಲು ಸೇರುತ್ತಿದ್ದರು ಎಂದಿದ್ದಾರೆ.

ಸಂಸದ ಡಿ.ಕೆ.ಸುರೇಶ್‌ ಪ್ರತಿಕ್ರಿಯಿಸಿ, “ಸಚಿವ ಈಶ್ವರಪ್ಪ ವಿರುದ್ಧ ಕೂಡಲೇ ಕ್ರಮಕೈಗೊಳ್ಳಬೇಕು. ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಬೂತ್ ಮಟ್ಟದಲ್ಲಿ ಹೋರಾಟ ಮಾಡುತ್ತೇವೆ. ಸರ್ಕಾರದ ಭ್ರಷ್ಟಾಚಾರ ನೋಡಿಯೂ ಮೋದಿ ಸುಮ್ಮನಿದ್ದಾರೆ” ಎಂದು ಕುಟುಕಿದ್ದಾರೆ.

ಮಾಜಿ ಸಚಿವರಾದ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ ನೀಡಿದ್ದು, “ಈ‌ ಹಿಂದೆ ಈಶ್ವರಪ್ಪನವರೇ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಗುತ್ತಿಗೆದಾರರು ಕೂಡ ಶೇ 40ರ ಕಮಿಷನ್ ಬಗ್ಗೆ ಆರೋಪ ಮಾಡಿ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಕೇವಲ ಯಡಿಯೂರಪ್ಪ, ಮುಖ್ಯಮಂತ್ರಿ ಬೊಮ್ಮಾಯಿ ಮಾತ್ರವಲ್ಲ, ಇಡೀ ರಾಜ್ಯ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ” ಎಂದು ಆರೋಪಿಸಿದ್ದಾರೆ.

ವಿಧಾನ ಪರಿಷತ್​ನ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಮಾತನಾಡಿದ್ದು, “ರಾಜ್ಯ ಸರ್ಕಾರದ ವಿರುದ್ಧ ಕಮಿಷನ್ ಆರೋಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಆರೋಪಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ. ಸಚಿವ ಕೆ.ಎಸ್.ಈಶ್ವರಪ್ಪ ತಕ್ಷಣ ರಾಜೀನಾಮೆ ಕೊಡಬೇಕು. ಆರೋಪ ಮುಕ್ತರಾಗುವ ತನಕ ಸಂಪುಟದಲ್ಲಿ ಮುಂದುವರಿಯಬಾರದು ಎಂದು ಆಗ್ರಹಿಸಿದ್ದಾರೆ.

ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ‌ಅವರು ತಮ್ಮ ಅಭಿಪ್ರಾಯವನ್ನು ಪೋಸ್ಟ್ ಮಾಡಿದ್ದು, “ಹಿಂದುತ್ವದ ಬಗ್ಗೆ ಹಗಲಿರುಳೂ ಪುಂಖಾನುಪುಂಕವಾಗಿ ಮಾತನಾಡಿ ಕೊನೆಯಲ್ಲಿ ಆ ಹಿಂದೂ ಸಂಘಟನೆಯ ಮುಖಂಡರ ಬಳಿಯೇ 40% ಕಮಿಷನ್ ಕೇಳುವ ಈಶ್ವರಪ್ಪ ಹಿಂದೂವಾದಿಯಲ್ಲ, ಆತನೋರ್ವ ಹಿಂದೂ ವ್ಯಾಧಿ” ಎಂದು  ಟೀಕಿಸಿದ್ದಾರೆ.

“ರಾಷ್ಟ್ರಧ್ವಜವನ್ನೇ ಅವಮಾನಿಸಿದ ಈತ ಹಿಂದೂಗಳ ಹಿತ ಕಾಯುತ್ತಾನೆ ಎಂಬುದು ಶತಮಾನದ ಜೋಕುಗಳಲ್ಲಿ ಒಂದು. 40% ಗಿರಾಕಿ ಈಶ್ವರಪ್ಪ ಕೂಡಲೇ ರಾಜೀನಾಮೆ ನೀಡಲಿ ಮತ್ತು ಆತನ ಮೇಲೆ ಸೂಕ್ತ ತನಿಖೆಯಾಗಲಿ ಎಂದು ಈ ಮೂಲಕ ಆಗ್ರಹಿಸುತ್ತೇನೆ” ಎಂದಿದ್ದಾರೆ.


ಇದನ್ನೂ ಓದಿರಿ: ರಾಜ್ಯ ಬಿಜೆಪಿಯದ್ದು 40 ಪರ್ಸೆಂಟ್ ಕಮಿಷನ್‌ ಸರ್ಕಾರ: ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...