Homeಮುಖಪುಟಕಮಿಷನ್‌ಗಾಗಿ ಈಶ್ವರಪ್ಪ ಪೀಡಿಸುತ್ತಿದ್ದಾರೆಂದು ಹಿಂದುತ್ವ ಮುಖಂಡ ದೂರು; ಕಾಂಗ್ರೆಸ್ ನಾಯಕರ ವಾಗ್ದಾಳಿ

ಕಮಿಷನ್‌ಗಾಗಿ ಈಶ್ವರಪ್ಪ ಪೀಡಿಸುತ್ತಿದ್ದಾರೆಂದು ಹಿಂದುತ್ವ ಮುಖಂಡ ದೂರು; ಕಾಂಗ್ರೆಸ್ ನಾಯಕರ ವಾಗ್ದಾಳಿ

ಗುತ್ತಿಗೆದಾರ ಸಂತೋಷ್ ಕೆ ಪಾಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಆರ್‌ಡಿಪಿಆರ್ ಸಚಿವ ಗಿರಿರಾಜ್ ಸಿಂಗ್ ಅವರಿಗೆ ಪತ್ರ ಬರೆದು, ಒಂದು ವರ್ಷದಿಂದ ತಮಗಾಗುತ್ತಿರುವ ಕಿರುಕುಳವನ್ನು ಹೇಳಿಕೊಂಡಿದ್ದಾರೆ.

- Advertisement -
- Advertisement -

ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಅವರ ಸಹಚರರು ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಕೆ ಪಾಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ (ಆರ್‌ಡಿಪಿಆರ್) ಗಿರಿರಾಜ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ. ಸುಮಾರು ಒಂದು ವರ್ಷದಿಂದ ಬಾಕಿ ಇರುವ ಬಿಲ್‌ಗಳನ್ನು ಪಾವತಿಸದೆ “ಕಮಿಷನ್”ಗಾಗಿ ಈಶ್ವರಪ್ಪನವರು ಪೀಡಿಸುತ್ತಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಆರೋಪಗಳನ್ನು ತಳ್ಳಿಹಾಕಿರುವ ಈಶ್ವರಪ್ಪ, ಆರೋಪಗಳು ಸುಳ್ಳು ಮತ್ತು ಆಧಾರರಹಿತವಾಗಿವೆ ಎಂದು ತಿಳಿಸಿದ್ದಾರೆ. “ನನಗೆ ಈ ವ್ಯಕ್ತಿ ಪರಿಚಯವಿಲ್ಲ” ಎಂದು ಈಶ್ವರಪ್ಪ ತಿಳಿಸಿರುವುದಾಗಿ ಟೈಮ್ಸ್ ಆಫ್‌ ಇಂಡಿಯಾ ವರದಿ ಮಾಡಿದೆ.

“ಈ ದೂರಿನ ಬಗ್ಗೆ ನನಗೆ ತಿಳಿದ ತಕ್ಷಣ, ನಾನು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದೇನೆ. ಶೀಘ್ರದಲ್ಲೇ ನೋಟಿಸ್ ನೀಡಲಾಗುವುದು” ಎಂದಿದ್ದಾರೆ. ಆದರೆ ಯಾವ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ ಅಥವಾ ಯಾವ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂಬುದನ್ನು ವಿವರಿಸಲಿಲ್ಲ ಎಂದು ವರದಿ ಹೇಳಿದೆ.

ಪಾಟೀಲ್ ಅವರು ಹಿಂದೂ ವಾಹಿನಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದಾರೆ. ಬಿಜೆಪಿ ಕಾರ್ಯಕರ್ತರೂ ಹೌದು. ಅವರ ಪತ್ರಕ್ಕೆ ಪ್ರತಿಕ್ರಿಯಿಸಿದ ಗಿರಿರಾಜ್ ಸಿಂಗ್ ಅವರ ಕಚೇರಿ, ದೂರನ್ನು ಸಂಬಂಧಪಟ್ಟ ಇಲಾಖೆಗೆ ರವಾನಿಸಲಾಗಿದೆ ಎಂದಿದ್ದಾರೆ. ಪಾಟೀಲ್ ಅವರು ಮಾರ್ಚ್‌ನಲ್ಲಿ ದೆಹಲಿಯ ನಿವಾಸದಲ್ಲಿ ಕೇಂದ್ರ ಸಚಿವರನ್ನು ಖುದ್ದು ಭೇಟಿ ಮಾಡಿದ್ದರು.

ಬಿಜೆಪಿ ಆಡಳಿತವಿರುವ ಹಿಂಡಲ ಗ್ರಾಮ ಪಂಚಾಯಿತಿಯಲ್ಲಿ ತಾನು ಮತ್ತು ಇತರ ಆರು ಗುತ್ತಿಗೆದಾರರು ರಸ್ತೆ ಕಾಮಗಾರಿಯನ್ನು ನಡೆಸಿದ್ದಾಗಿ ಪಾಟೀಲ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

“ದೇವಸ್ಥಾನದ ಜಾತ್ರೆ ಇದ್ದು, ಆ ಸಮಯದಲ್ಲಿ ಈಶ್ವರಪ್ಪ ಅವರನ್ನು ಭೇಟಿ ಮಾಡಿ ರಸ್ತೆ ಕಾಮಗಾರಿಗೆ ಅನುದಾನ ನೀಡುವಂತೆ ಕೋರಿದ್ದೆವು. ನಂತರ ಕಾಮಗಾರಿ ಆದೇಶ ನೀಡುವುದಾಗಿ ಹೇಳಿ ಕಾಮಗಾರಿ ಆರಂಭಿಸುವಂತೆ ನನಗೆ ಹಾಗೂ ಇತರೆ ಗುತ್ತಿಗೆದಾರರಿಗೆ ಸಚಿವರು ಸೂಚಿಸಿದ್ದರು” ಪತ್ರದಲ್ಲಿ ಪಾಟೀಲ್ ವಿವರಿಸಿದ್ದಾರೆ.

“ನಾನು ಮತ್ತು ಇತರೆ ಗುತ್ತಿಗೆದಾರರು ಸೇರಿ 108 ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದು, ಬಹುತೇಕ ರಸ್ತೆಗಳ ಕಾಮಗಾರಿಗೆ 4 ಕೋಟಿ ರೂ. ಈ ಹಣವನ್ನು ಬಡ್ಡಿಯ ಮೇಲೆ ಪಡೆಯಲಾಗಿದೆ. ಸಾಲಗಾರರು ಮರುಪಾವತಿಗೆ ಒತ್ತಾಯಿಸುತ್ತಿದ್ದಾರೆ” ಎಂದು ಅಳಲು ತೋಡಿಕೊಳ್ಳಲಾಗಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ ಮನೋಳ್ಕರ್ ಮಾತನಾಡಿ, “ಕಾಮಗಾರಿ ತ್ವರಿತವಾಗಿ ನಡೆದಿದ್ದರೂ ಸರಕಾರದಿಂದ ಹಣ ಪಾವತಿಯಾಗಿಲ್ಲ” ಎಂದು ದೂರಿದ್ದಾರೆ.

ಗುತ್ತಿಗೆದಾರರು ಬಡ್ಡಿಗೆ ಸಾಲ ಮಾಡಿ ಇದೀಗ ದಿವಾಳಿಯ ಅಂಚಿಗೆ ಬಂದಿದ್ದು, ಗುತ್ತಿಗೆದಾರರಿಗೆ ಹಣ ನೀಡುವುದು ಸರಕಾರದ ಕರ್ತವ್ಯವಾಗಿದೆ ಎಂದು ಪಾಟೀಲ್ ತಿಳಿಸಿದ್ದಾರೆ. 2021ರ ಮೇ ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡಿದ್ದು, ಬಿಲ್‌ಗಳನ್ನು ತೆರವುಗೊಳಿಸುವಂತೆ ಈಶ್ವರಪ್ಪ ಅವರನ್ನು ಹಲವು ಬಾರಿ ಭೇಟಿ ಮಾಡಿ ಒತ್ತಾಯಿಸಲಾಗಿದೆ. ಆದರೆ, ಕಾಲಾಂತರದಲ್ಲಿ 15 ಲಕ್ಷ ರೂಪಾಯಿ ಕಮಿಷನ್ ನೀಡುವಂತೆ ಬೇಡಿಕೆ ಇಡಲಾಗಿದೆ. ಈಶ್ವರಪ್ಪ ಅವರ ಸಂಗಡಿಗರು ಕೂಡ ಒಟ್ಟು ಬಿಲ್ ನ ಶೇ.40ರಷ್ಟು ಮೊತ್ತವನ್ನು ಒಂದೇ ಬಾರಿ ಪಾವತಿಸುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.

“ನಾನು ಸಚಿವರನ್ನು ಕನಿಷ್ಠ 80 ಬಾರಿ ಭೇಟಿ ಮಾಡಿದ್ದೇನೆ” ಎಂದು ಪಾಟೀಲ್ ತಿಳಿಸಿದ್ದಾರೆ. “ಬಿಲ್ಗಳನ್ನು ತೆರವುಗೊಳಿಸಲಾಗುವುದು ಎಂದು ಅವರು ಯಾವಾಗಲೂ ಹೇಳುತ್ತಿದ್ದರು, ಆದರೆ ಅವರ ಸಹಚರರು ಹೆಚ್ಚಿನ ಹಣವನ್ನು ಕೇಳುತ್ತಿದ್ದರು” ಎಂದಿದ್ದಾರೆ.

ಪಾಟೀಲ್ ಅವರು ಕರ್ನಾಟಕದ ಪ್ರಭಾರಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್ ಅವರನ್ನು ಭೇಟಿಯಾಗಿ ಸಹಾಯ ಮಾಡುವ ಭರವಸೆ ಪಡೆದಿದ್ದಾರೆ. ಪಾಟೀಲ್ ಈಗ ಪ್ರಧಾನಿ ಕಚೇರಿಯ ಪ್ರತಿಕ್ರಿಯೆಗೆ ಕಾಯುತ್ತಾ ಕುಳಿತ್ತಿದ್ದಾರೆ.

 ಕಾಂಗ್ರೆಸ್ ನಾಯಕರು ತಿರುಗೇಟು

ಸಚಿವ ಈಶ್ವರಪ್ಪ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಸಂಬಂಧ ಹಲವು ಕಾಂಗ್ರೆಸ್ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.

ದೆಹಲಿಯಲ್ಲಿ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಮಾತನಾಡಿದ್ದು, ಬಿಜೆಪಿ ಕಾರ್ಯಕರ್ತರಿಗೆ ಭ್ರಷ್ಟಾಚಾರದ ಬಿಸಿ ಈಗ ತಟ್ಟಿದೆ. ಭ್ರಷ್ಟಾಚಾರಕ್ಕೆ ಬಿಜೆಪಿಯವರಿಗೆ ರಾಷ್ಟ್ರೀಯ ಪರವಾನಗಿ ಸಿಕ್ಕಿದೆಯಾ? ಇಡಿ, ಸಿಬಿಐ, ಐಟಿ ಬಿಜೆಪಿ ನಾಯಕರಿಗೆ ಸಂಬಂಧಿಸುವುದಿಲ್ಲ. ಒಬ್ಬ ಶಾಸಕನ ಮಗಳು ಸುಳ್ಳು ಎಸ್‌ಸಿ, ಎಸ್‌ಟಿ ಪ್ರಮಾಣ ಪತ್ರ ಮಾಡಿಸಿದ್ದಾರೆ. ಪ್ರಮಾಣ ಪತ್ರದ ಮೇಲೆ 80 ಲಕ್ಷ ರೂ. ಸಾಲ ಪಡೆದಿದ್ದಾರೆ. ಇದನ್ನು ಸಾಮಾನ್ಯ ಜನರು ಮಾಡಿದ್ದರೆ ಜೈಲು ಸೇರುತ್ತಿದ್ದರು ಎಂದಿದ್ದಾರೆ.

ಸಂಸದ ಡಿ.ಕೆ.ಸುರೇಶ್‌ ಪ್ರತಿಕ್ರಿಯಿಸಿ, “ಸಚಿವ ಈಶ್ವರಪ್ಪ ವಿರುದ್ಧ ಕೂಡಲೇ ಕ್ರಮಕೈಗೊಳ್ಳಬೇಕು. ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಬೂತ್ ಮಟ್ಟದಲ್ಲಿ ಹೋರಾಟ ಮಾಡುತ್ತೇವೆ. ಸರ್ಕಾರದ ಭ್ರಷ್ಟಾಚಾರ ನೋಡಿಯೂ ಮೋದಿ ಸುಮ್ಮನಿದ್ದಾರೆ” ಎಂದು ಕುಟುಕಿದ್ದಾರೆ.

ಮಾಜಿ ಸಚಿವರಾದ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ ನೀಡಿದ್ದು, “ಈ‌ ಹಿಂದೆ ಈಶ್ವರಪ್ಪನವರೇ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಗುತ್ತಿಗೆದಾರರು ಕೂಡ ಶೇ 40ರ ಕಮಿಷನ್ ಬಗ್ಗೆ ಆರೋಪ ಮಾಡಿ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಕೇವಲ ಯಡಿಯೂರಪ್ಪ, ಮುಖ್ಯಮಂತ್ರಿ ಬೊಮ್ಮಾಯಿ ಮಾತ್ರವಲ್ಲ, ಇಡೀ ರಾಜ್ಯ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ” ಎಂದು ಆರೋಪಿಸಿದ್ದಾರೆ.

ವಿಧಾನ ಪರಿಷತ್​ನ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಮಾತನಾಡಿದ್ದು, “ರಾಜ್ಯ ಸರ್ಕಾರದ ವಿರುದ್ಧ ಕಮಿಷನ್ ಆರೋಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಆರೋಪಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ. ಸಚಿವ ಕೆ.ಎಸ್.ಈಶ್ವರಪ್ಪ ತಕ್ಷಣ ರಾಜೀನಾಮೆ ಕೊಡಬೇಕು. ಆರೋಪ ಮುಕ್ತರಾಗುವ ತನಕ ಸಂಪುಟದಲ್ಲಿ ಮುಂದುವರಿಯಬಾರದು ಎಂದು ಆಗ್ರಹಿಸಿದ್ದಾರೆ.

ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ‌ಅವರು ತಮ್ಮ ಅಭಿಪ್ರಾಯವನ್ನು ಪೋಸ್ಟ್ ಮಾಡಿದ್ದು, “ಹಿಂದುತ್ವದ ಬಗ್ಗೆ ಹಗಲಿರುಳೂ ಪುಂಖಾನುಪುಂಕವಾಗಿ ಮಾತನಾಡಿ ಕೊನೆಯಲ್ಲಿ ಆ ಹಿಂದೂ ಸಂಘಟನೆಯ ಮುಖಂಡರ ಬಳಿಯೇ 40% ಕಮಿಷನ್ ಕೇಳುವ ಈಶ್ವರಪ್ಪ ಹಿಂದೂವಾದಿಯಲ್ಲ, ಆತನೋರ್ವ ಹಿಂದೂ ವ್ಯಾಧಿ” ಎಂದು  ಟೀಕಿಸಿದ್ದಾರೆ.

“ರಾಷ್ಟ್ರಧ್ವಜವನ್ನೇ ಅವಮಾನಿಸಿದ ಈತ ಹಿಂದೂಗಳ ಹಿತ ಕಾಯುತ್ತಾನೆ ಎಂಬುದು ಶತಮಾನದ ಜೋಕುಗಳಲ್ಲಿ ಒಂದು. 40% ಗಿರಾಕಿ ಈಶ್ವರಪ್ಪ ಕೂಡಲೇ ರಾಜೀನಾಮೆ ನೀಡಲಿ ಮತ್ತು ಆತನ ಮೇಲೆ ಸೂಕ್ತ ತನಿಖೆಯಾಗಲಿ ಎಂದು ಈ ಮೂಲಕ ಆಗ್ರಹಿಸುತ್ತೇನೆ” ಎಂದಿದ್ದಾರೆ.


ಇದನ್ನೂ ಓದಿರಿ: ರಾಜ್ಯ ಬಿಜೆಪಿಯದ್ದು 40 ಪರ್ಸೆಂಟ್ ಕಮಿಷನ್‌ ಸರ್ಕಾರ: ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...