Homeಕರ್ನಾಟಕಅಗತ್ಯವಿದ್ದರಷ್ಟೆ ಈಶ್ವರಪ್ಪರನ್ನು ಪೊಲೀಸರು ಬಂಧಿಸಲಿದ್ದಾರೆ: ಸಿಎಂ ಬೊಮ್ಮಾಯಿ

ಅಗತ್ಯವಿದ್ದರಷ್ಟೆ ಈಶ್ವರಪ್ಪರನ್ನು ಪೊಲೀಸರು ಬಂಧಿಸಲಿದ್ದಾರೆ: ಸಿಎಂ ಬೊಮ್ಮಾಯಿ

- Advertisement -
- Advertisement -

ಗುರುವಾರ ಸಂಜೆ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದ, ಸಂತೋಷ್‌ ಆತ್ಮಹತ್ಯೆ ಪ್ರಚೋದನೆಯ ಪ್ರಮುಖ ಆರೋಪಿ ಸಚಿವ ಈಶ್ವರಪ್ಪನನ್ನು ಅಗತ್ಯವಿದ್ದರಷ್ಟೆ ಪೊಲೀಸರು ಬಂಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ಈಶ್ವರಪ್ಪ ಅವರು ಸ್ವಯಂ ಪ್ರೇರಣೆಯಿಂದ ರಾಜೀನಾಮೆ ನೀಡಿದ್ದಾರೆ. ಅವರ ಮೇಲೆ ಯಾವುದೇ ಒತ್ತಡ ಇರಲಿಲ್ಲ. ಸಾವು ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಅಗತ್ಯವಿದ್ದರೆ ಅವರನ್ನು ಬಂಧಿಸಲಿದ್ದಾರೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈಶ್ವರಪ್ಪ ಅವರೊಂದಿಗೆ ತಾನು ಈಗಾಗಲೆ ಮಾತನಾಡಿದ್ದೇನೆ ಎಂದು ಹೇಳಿರುವ ಸಿಎಂ ಬೊಮ್ಮಾಯಿ, “ಈಶ್ವರಪ್ಪ ತಾವು ನಿರಪರಾಧಿ ಎಂದು ಹೇಳಿದ್ದು, ಆದಷ್ಟು ಬೇಗನೆ ತನಿಖೆ ಮಾಡಿದರೆ ಆರೋಪದಿಂದ ಮುಕ್ತನಾಗುತ್ತೇನೆ ಎಂದು ತಿಳಿಸಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂತೋಷ್‌ ಸಾವು ಪ್ರಕರಣ: ಸಚಿವ ಈಶ್ವರಪ್ಪ ರಾಜೀನಾಮೆ ಘೋಷಣೆ

ನಿನ್ನೆ ಸಂಜೆ ವೇಳೆ ತಮ್ಮ ಕಾರ್ಯಕ್ಷೇತ್ರವಾದ ಶಿವಮೊಗ್ಗದಲ್ಲಿ ದಿಢೀರ್‌‌ ಸುದ್ದಿಗೋಷ್ಠಿ ಕರೆದು ಮಾತನಾಡಿದ್ದ ಈಶ್ವರಪ್ಪ, “ಪ್ರಕರಣದ ವಿಚಾರದಲ್ಲಿ ಪಕ್ಷದ ಹಿರಿಯರಿಗೆ, ಮುಖ್ಯಮಂತ್ರಿಗಳಿಗೆ, ರಾಷ್ಟ್ರೀಯ ನಾಯಕರುಗಳಿಗೆ ಇರುಸುಮುರುಸು ಆಗಬಾರದು. ಈ ಒಂದೇ ಕಾರಣಕ್ಕೆ ನಾನು ರಾಜೀನಾಮೆ ಕೊಡುತ್ತಿದ್ದೇನೆ. ಈ ವಿಷಯದ ಬಗ್ಗೆ ನಾನು ಮುಖ್ಯಮಂತ್ರಿಗೆ ಈಗಾಗಲೇ ಹೇಳಿದ್ದೇನೆ” ಎಂದು ಹೇಳಿದ್ದರು.

“ಶುಕ್ರವಾರ ಸಂಜೆ ಬೆಂಗಳೂರಿಗೆ ಹೋಗಿ ಮುಖ್ಯಮಂತ್ರಿಗಳಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸುತ್ತಾ ಇದ್ದೇನೆ. ಇಲ್ಲಿ ತನಕ ಸಹಕಾರ ಕೊಟ್ಟಂತಹ ಮುಖ್ಯಮಂತ್ರಿಗಳಿಗೆ ಹಾಗೂ ಎಲ್ಲಾ ಸ್ನೇಹಿತರಿಗೆ ಅಭಿನಂಧನೆ ಸಲ್ಲಿಸುತ್ತೇನೆ. ನಾನು ದೇವರನ್ನು ನಂಬುವವನು, ಪ್ರಕರಣದ ಬಗ್ಗೆ ನನಗೆ ಪೂರ್ಣ ವಿಶ್ವಾವಿದೆ.  ಈ ಇಡೀ ಎಪಿಸೋಡಲ್ಲಿ ಒಂದೇ ಒಂದು ಪರ್ಸೆಂಟ್ ನನ್ನದೇನಾದರೂ ತಪ್ಪಿದ್ದರೆ, ಆ ಭಗವಂತ ನನಗೆ ಶಿಕ್ಷೆ ಕೊಡಲಿ ಎಂದು ನಾನು ಕೇಳಿಕೊಳ್ಳುತ್ತೇನೆ” ಎಂದು ಹೇಳಿದ್ದರು.

“ಪ್ರಕರಣದಲ್ಲಿ ನಾನು ಮುಕ್ತವಾಗಿ ಹೊರಬರುತ್ತೇನೆ ಎಂದು ನನಗೆ ಪೂರ್ಣ ನಂಬಿಕೆ ಇದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ನಾನು ಮುಖ್ಯಮಂತ್ರಿಗೆ ಹೇಳಿದಾಗ ಅವರು ಕೂಡಾ ಸಂತೋಷದಿಂದ ತನಿಖೆ ಮಾಡುತ್ತೇನೆ ಎಂದು ಅವರು ಒಪ್ಪಿಕೊಂಡಿದ್ದಾರೆ. ನನ್ನ ಮನೆ ದೇವರಾದ ಚೌಡೇಶ್ವರಿ ನಾನು ತಪ್ಪಿತಸ್ಥ ಅಲ್ಲ ಎಂದು ನಿರ್ದೋಷಿಯಾಗಿ ನನ್ನನ್ನು ಹೊರ ತರುತ್ತಾಳೆ” ಎಂದು ಈಶ್ವರಪ್ಪ ಗುರುವಾರ ಹೇಳಿದ್ದರು.

“ನನಗೆ ಸಹಕಾರ ಕೊಟ್ಟ ಎಲ್ಲಾ ಕಾರ್ಯಕರ್ತರಿಗೆ ಅಭಿನಂಧನೆ ಅರ್ಪಿಸುತ್ತೇನೆ. ಗ್ರಾಮೀಣಾಭಿವೃದ್ದಿ ಇಲಾಖೆ ಸಿಕ್ಕಿದ್ದು ನನ್ನ ಸೌಭಾಗ್ಯ. ಇಲಾಖೆಯಲ್ಲಿ ನಾನು ಸಾಕಷ್ಟು ಕೆಲಸ ಮಾಡಿದ್ದೇನೆ. ಪ್ರಕರಣದಲ್ಲಿ ಯಾರಿಗೂ ಇರಿಸುಮುರಿಸು ಮಾಡಲು ಇಷ್ಟವಿಲ್ಲ. ಎಲ್ಲವನ್ನೂ ಎದುರಿಸಿ ಮುಕ್ತವಾಗಿ ಹೊರಬರುತ್ತೇನೆ. ಒಂದೇ ಒಂದು ಪರ್ಸೆಂಟ್ ತಪ್ಪಿದ್ದರೆ ಸಾಬೀತಾಗಲಿ” ಎಂದು ಈಶ್ವರಪ್ಪ ಗುರುವಾರ ಶಿವಮೊಗ್ಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ರಾಜೀನಾಮೆ ಸಾಲದು, ಈಶ್ವರಪ್ಪ ಬಂಧನವಾಗಬೇಕು: ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...