Homeಮುಖಪುಟಕೆ.ಎಸ್‌ ಈಶ್ವರಪ್ಪನವರ ವಿವಾದಾತ್ಮಕ ಹೇಳಿಕೆಗಳು ಹೊಸದೇನಲ್ಲ: ಇಲ್ಲಿವೆ ಸಾಲು ಸಾಲು ಪ್ರಕರಣಗಳು

ಕೆ.ಎಸ್‌ ಈಶ್ವರಪ್ಪನವರ ವಿವಾದಾತ್ಮಕ ಹೇಳಿಕೆಗಳು ಹೊಸದೇನಲ್ಲ: ಇಲ್ಲಿವೆ ಸಾಲು ಸಾಲು ಪ್ರಕರಣಗಳು

- Advertisement -
- Advertisement -

ಕರ್ನಾಟಕ ರಾಜಕಾರಣದ ಮಟ್ಟಿಗೆ ಆಗಿಂದಾಗ್ಗೆ ವಿವಾದಾತ್ಮಕ ಹೇಳಿಕೆ ನೀಡುವ ಮತ್ತು ಪ್ರಚೋದನಾಕಾರಿ ಭಾಷಣ ಮಾಡುವುದರಲ್ಲಿ ಬಿಜೆಪಿ ಹಿರಿಯ ನಾಯಕ ಮತ್ತು ಸಚಿವ ಕೆ.ಎಸ್. ಈಶ್ವರಪ್ಪ ಅಗ್ರಗಣ್ಯರು. ಇಂತಹ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಅವರು ಪೇಚಿಗೆ ಸಿಲುಕಿ, ನಂತರ ಕ್ಷಮೆ ಕೇಳಿದ ಪ್ರಸಂಗಗಳೂ ಸಾಕಷ್ಟಿವೆ. ತೀರಾ ಇತ್ತೀಚೆಗೆ ಮಾಧ್ಯಮದವರ ಜೊತೆಗೆ ಮಾತನಾಡಿದ್ದ ಕೆ.ಎಸ್. ಈಶ್ವರಪ್ಪ “ಮುಂದೊಂದು ದಿನ ತ್ರಿವರ್ಣ ಧ್ವಜದ ಬದಲು ಕೇಸರಿ ಭಾಗವಧ್ವಜವೇ ದೇಶದ ರಾಷ್ಟ್ರೀಯ ಧ್ವಜವಾದರೂ ಆಗಬಹುದು” ಎಂಬ ಹೇಳಿಕೆ ನೀಡಿ ಮತ್ತೆ ವಿವಾದದ ಕೇಂದ್ರವಾಗಿದ್ದರು. ಈಶ್ವರಪ್ಪನವರ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಿರತರಾಗಿದ್ದಾರೆ. ಅಲ್ಲದೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರೇ ಈ ಹೇಳಿಕೆಯನ್ನು ಟೀಕಿಸಿ ಮಾತನಾಡಿದ್ದಾರೆ.

ಇದೇ ಸಂದರ್ಭದಲ್ಲಿ ಫೆ.20 ರಂದು ಶಿವಮೊಗ್ಗದಲ್ಲಿ ಬಜರಂಗದಳದ ಹರ್ಷ ಎಂಬ ಹುಡುಗನ ಕೊಲೆಯಾಗುತ್ತದೆ. ಕೂಡಲೇ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತಲುಪಿಕೊಳ್ಳುವ ಈಶ್ವರಪ್ಪ, “ಇದು ಮುಸ್ಲಿಂ ಗೂಂಡಾಗಳು ಮಾಡಿದ ಕಾರ್ಯ” ಎಂಬ ಹೇಳಿಕೆ ಕೊಡುವುದರ ಜೊತೆಗೆ ಶವದ ಮೆರವಣಿಗೆಯನ್ನೂ ಮುಂದೆ ನಿಂತು ನಡೆಸುತ್ತಾರೆ. ನಂತರ ಇದು ಇಡೀ ಶಿವಮೊಗ್ಗ ನಗರದಾದ್ಯಂತ ಕರ್ಫ್ಯೂ ಜಾರಿ ಮಾಡುವ ಮಟ್ಟಿಗಿನ ಕೋಮುದಳ್ಳುರಿಗೆ ಕಾರಣವಾಗಿದೆ. ಆದರೆ, ಸಚಿವ ಈಶ್ವರಪ್ಪ ಹೀಗೆ ವಿವಾದಾತ್ಮಕ ಅಥವಾ ಪ್ರಚೋದನಕಾರಿ ಹೇಳಿಕೆ ನೀಡಿ ಪೇಚಿಗೆ ಸಿಲುಕುತ್ತಿರುವುದು ಇದೇ ಮೊದಲೇನಲ್ಲ.

ಈಶ್ವರಪ್ಪನವರ ಹಲವು ವಿವಾದಾತ್ಮಕ ಹೇಳಿಕೆಗಳ ಪಟ್ಟಿ ಇಲ್ಲಿದೆ:

2014 ಕೊಪ್ಪಳ: ಕಾಂಗ್ರೆಸ್‌ನಲ್ಲಿ ತಾಯಿ ಹಾಲು ಕುಡಿದ ಗಂಡಸರೇ ಇಲ್ಲ:

ಲೋಕಸಭಾ ಚುನಾವಣೆ ಗರಿಗೆದರಿದ್ದ ದಿನಗಳವು. ನರೇಂದ್ರ ಮೋದಿ ಬಿಜೆಪಿ ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ದೇಶದ ವಿವಿಧೆಡೆ ಪ್ರಚಾರದಲ್ಲಿ ತೊಡಗಿದ್ದ ಕಾಲ. ಆಗ ಕೊಪ್ಪಳಕ್ಕೂ ಮೋದಿ ಪ್ರಚಾರಕ್ಕೆ ಆಗಮಿಸುವುದು ಪಕ್ಕಾ ಆಗಿತ್ತು. ಹೀಗಾಗಿ ಮೋದಿ ಕೊಪ್ಪಳಕ್ಕೆ ಆಗಮಿಸುವುದಕ್ಕೂ ಮೊದಲು ಕೊಪ್ಪಳದಲ್ಲಿ ಕಾರ್ಯಕಾರಿಣಿ ಸಭೆ ಆಯೋಜಿಸಿ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಈಶ್ವರಪ್ಪನವರನ್ನು ಜಿಲ್ಲೆಗೆ ಕಳುಹಿಸಿಕೊಡಲಾಗಿತ್ತು.

ಆದರೆ, ಕೊಪ್ಪಳ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ್ದ ಈಶ್ವರಪ್ಪ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ಕಿಡಿಕಾರಿದ್ದರು. ಅಲ್ಲದೆ, “ಮನಮೋಹನ್ ಸಿಂಗ್ ಗಂಡಸೇ ಅಲ್ಲ, ಕಾಂಗ್ರೆಸ್‌ನಲ್ಲಿ ತಾಯಿ ಮೊಲೆಹಾಲು ಕುಡಿದ ಗಂಡಸರೇ ಇಲ್ಲ” ಎಂಬಂತಹ ಮಾತುಗಳನ್ನು ಆಡಿಬಿಟ್ಟಿದ್ದರು. ಈ ಹೇಳಿಕೆ ದೇಶದಾದ್ಯಂತ ದೊಡ್ಡ ಸಂಚಲನಕ್ಕೆ ಕಾರಣವಾಗಿತ್ತು. ಈಶ್ವರಪ್ಪನ ಸುತ್ತ ದೊಡ್ಡ ವಿವಾದವೂ ರೂಪ ತಳೆದಿತ್ತು. ಕೊನೆಗೆ ಈಶ್ವರಪ್ಪ ಕ್ಷಮೆ ಕೇಳುವುದರೊಂಗಿಗೆ ಈ ವಿವಾದಕ್ಕೆ ಇತಿಶ್ರೀ ಹಾಡಲಾಗಿತ್ತು.

ಡಿಸೆಂಬರ್. 9 2017: ರಾಜಕಾರಣಿಗಳು ಸುಳ್ಳೋ ಪೊಳ್ಳೊ ಹೇಳಿ ಓಟ್ ಕೇಳ್ಬೇಕು:

ರಾಜ್ಯದ ಎಲ್ಲಾ ಪಕ್ಷಗಳೂ 2018ರ ವಿಧಾನಸಭಾ ಚುನಾವಣೆಗೆ ಅಣಿಯಾಗುತ್ತಿದ್ದ ಸಂದರ್ಭ. ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಮತ ಕೇಳುವ ಬಗ್ಗೆ ಕಿವಿಮಾತು ಹೇಳಿದ್ದ ಈಶ್ವರಪ್ಪ, “ಬಿಜೆಪಿ ಸರಕಾರ ಏನು ಮಾಡಿದೆ, ಕೇಂದ್ರ ಸರಕಾರ ಏನು ಮಾಡಿದೆ. ನಾವು ಬಂದ್ಮೇಲೆ ಏನೇನು ಮಾಡ್ತೀವಿ, ದಲಿತರಿಗೆ, ಹಿಂದುಳಿದವರಿಗೆ ರೈತರಿಗೆ ಹೆಣ್ಮಕ್ಕಳಿಗೆ ವಯಸ್ಸಾಗಿರೋರಿಗೆ ಏನು ಮಾಡುತ್ತೇವೆ ಈ ವಿಷಯಗಳೆಲ್ಲಾ ಗೊತ್ತಿರಬೇಕು, ನಾವಿದನ್ನೆಲ್ಲಾ ತಿಳ್ಕೊಂಡು ಹೋಗ್ಬೇಕು… ಅಕಸ್ಮಾತ್ ನಮಗೆ ಗೊತ್ತಿಲ್ಲ ಅಂದ್ರೆ… ಒಂದನ್ನು ನೆನಪಿಟ್ಕೊಬೇಕು.. .ರಾಜಕಾರಣಿಗಳು ಗೊತ್ತಿಲ್ಲ ಅಂತ ಯಾವಾಗ್ಲೋ ಒಪ್ಕೋಬಾರ್ದು. ಸುಳ್ಳೋ ಪೊಳ್ಳೋ ಏನೋ ಒಂದು ಹೇಳಿ ಬಂಡ್ಬಿಡ್ಬೇಕು.

ವಾಜಪೇಯಿ ಇದ್ದಂತ ಸಂದರ್ಭದಲ್ಲಿ ಪಾಕಿಸ್ತಾನದ ಸೈನಿಕರು ಹೊಡೆದು ಹೊಡೆದು ಸಾಯಿಸ್ಬಿಟ್ರು ಎಂದು ಹೇಳಬೇಕು. ನೀವು ನೋಡಿದ್ದೀರಾ .. ನಿಮಗೆ ಗೊತ್ತಿಲ್ಲ ಆದರೂ ಹೀಗೆ ಹೇಳ್ಬೇಕು.. ನೋಡಿ ವಾಜಪೇಯಿ ಇದ್ದ ಸಂದರ್ಭದಲ್ಲಿ ಪಾಕಿಸ್ತಾನವು ತಲೆ ಎತ್ತಿಲ್ಲ. ಮನಮೋಹನ್ ಸಿಂಗ್ ಬಂದಾಗ ಅಲ್ಲಿಂದಂತಹ ಪಾಕಿಸ್ತಾನದ ಸೈನಿಕರು ಭಾರತದ ಸೈನಿಕರನ್ನು ಕೊಂದು ಹಾಕಿದ್ರು.. ನರೇಂದ್ರ ಮೋದಿಯವರು ಬರ್ತಾ ಇದ್ದಂಗೆ ಪಾಕಿಸ್ತಾನವನ್ನ ಇಲ್ಲಾ ಅನ್ನಿಸಿಬಿಡ್ತಾರೆ. ನರೇಂದ್ರ ಮೋದಿ ಗಂಡುಗಲಿ ಅಂತ ಇಡೀ ಪಪಂಚ ಒಪ್ತಿದೆ ತಾನೇ..” ಎಂದು ಏನೋ ಒಂದು ಹೇಳಿಬಿಡಬೇಕು” ಎಂದು ಈಶ್ವರಪ್ಪ ಹೇಳಿದ್ದರು. ಈಶ್ವರಪ್ಪನವರ ಈ ಹೇಳಿಕೆಯ ವಿರುದ್ಧವೂ ಸಾರ್ವಜನಿಕ ವಲಯದಿಂದ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಕೆ.ಎಸ್ ಈಶ್ವರಪ್ಪನವರಿಗೆ ಬೈದಿದ್ದನ್ನು ಸಿದ್ದರಾಮಯ್ಯನವರಿಗೆ ಸಿ.ಎಂ. ಇಬ್ರಾಹಿಂ ಏಕವಚನದಲ್ಲಿ ಬೈಗುಳ ಎಂದು ತಿರುಚಲಾಗಿದೆ

ಆಗಸ್ಟ್ 08 2021, ಶಿವಮೊಗ್ಗ: ಹಿಂದೂಗಳ ಮೇಲೆ ಕೈ ಮಾಡಿದ್ರೆ ಒಂದಕ್ಕೆ ಎರಡು ತೆಗೀರಿ:

ಕಳೆದ ವರ್ಷ ಶಿವಮೊಗ್ಗದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಕಾರ್ಯಕರ್ತರ ಎದುರು ಮಾತನಾಡಿದ್ದ ಸಚಿವ ಈಶ್ವರಪ್ಪ, “ಈ ಹಿಂದೆ ಹಿಂದುತ್ವದ ಬಗ್ಗೆ ಮಾತಾಡಿದ್ರೆ ಕೊಲೆ ಆಗ್ತಾ ಇತ್ತು. ಕೇರಳದಲ್ಲಿ ಸಾಕಷ್ಟು ಹಿಂದೂ ಕಾರ್ಯಕರ್ತರ ಕೊಲೆಯಾಗಿದೆ. ಆಗ ವಾಪಾಸ್ ಹೊಡಿಯೋ ಶಕ್ತಿ ನಮಗೆ ಇರಲಿಲ್ಲ. ಆದರೆ, ಈಗ ದೇಶದಲ್ಲಿ ಬಿಜೆಪಿ ದೊಡ್ಡದಾಗಿ ಬೆಳೀತಿದೆ. ನಮಗೆ ಈಗ ತಿರುಗಿಸಿ ಹೊಡೆಯುವ ಶಕ್ತಿ ಬಂದಿದೆ. ಹೀಗಾಗಿ ಯಾರು ನಮ್ಮ ಕಾರ್ಯಕರ್ತರ ಮೇಲೆ ಯಾವುದರಲ್ಲಿ ಹೊಡೀತಾರೋ ಅದ್ರಲ್ಲೆ ತಿರುಗಿಸಿ ಹೊಡೆಯಿರಿ, ಒಂದಕ್ಕೆ ಎರಡು ತೆಗೀರಿ” ಎಂದು ಬಹಿರಂಗವಾಗಿ ಹಿಂಸಾಕೃತ್ಯಕ್ಕೆ ಕರೆ ನೀಡಿದ್ದರು.

ಸರ್ಕಾರದಲ್ಲಿ ಜವಾಬ್ದಾರಿ ಹುದ್ದೆಯಲ್ಲಿರುವ ಸಚಿವರೊಬ್ಬರ ಈ ಹೇಳಿಕೆ ವಿರೋಧ ಪಕ್ಷ ಮತ್ತು ಪ್ರಜ್ಞಾವಂತ ಸಮಾಜದಿಂದ ಸಾಕಷ್ಟು ಟೀಕೆಗೆ ಒಳಗಾಯಿತು. ಮಾಧ್ಯಮಗಳು ಈ ಬಗ್ಗೆ ದಿನಗಟ್ಟಲೆ ಚರ್ಚೆಗಳನ್ನೂ ನಡೆಸಿತ್ತು. ಆದರೆ, ಕೊನೆವರೆಗೂ ಈಶ್ವರಪ್ಪ ತಮ್ಮ ಬೇಜವಾಬ್ದಾರಿ ಹೇಳಿಕೆಗೆ ಕ್ಷಮೆ ಕೇಳಿರಲಿಲ್ಲ.

ಇದನ್ನೂ ಓದಿ:‘ರೆಬಲ್ ಆಗುವುದು ಗೊತ್ತಿಲ್ಲ, ನ್ಯಾಯ ಕೇಳುವುದನ್ನು ಬಿಡಲ್ಲ’: ಕೆ.ಎಸ್ ಈಶ್ವರಪ್ಪ ಪತ್ರಿಕಾಗೋಷ್ಠಿ

ಆಗಸ್ಟ್ 10 2021 ಬೆಂಗಳೂರು, ಕಾಂಗ್ರೇಸಿಗರು ಕುಡುಕ ಸೂ….ಮಕ್ಕಳು:

“ಹಿಂದೂ ಕಾರ್ಯಕರ್ತರ ಮೇಲೆ ಕೈ ಮಾಡಿದವರನ್ನು ಒಂದಕ್ಕೆ ಎರಡು ತೆಗೆದುಬಿಡಿ” ಎಂಬ ಈಶ್ವರಪ್ಪನವರ ಹೇಳಿಕೆ ವಿರುದ್ಧ ಕಾಂಗ್ರೆಸ್ ನಾಯಕರು ಟೀಕಾಪ್ರಹಾರವನ್ನೇ ನಡೆಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು” ಈಶ್ವರಪ್ಪನವರ ಹೇಳಿಕೆ ಸರಿಯಲ್ಲ ಇದು ಹಿಂಸೆಯನ್ನು ಪ್ರಚೋದಿಸುವಂತಿದೆ” ಎಂದು ಖಂಡಿಸಿದ್ದರು.

ಆದರೆ, ಕಾಂಗ್ರೆಸ್ ನಾಯಕರ ಈ ಅಭಿಪ್ರಾಯದ ವಿರುದ್ಧ ಬಹಿರಂಗವಾಗಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಸಭ್ಯವಾದ ಪದವನ್ನು ಬಳಸಿದ್ದ ಈಶ್ವರಪ್ಪನವರು, “ಕಾಂಗ್ರೇಸಿಗರು ಕುಡುಕ ಸೂ….ಮಕ್ಕಳು” ಎಂಬ ಪದವನ್ನು ಬಳಿಸಿಬಿಟ್ಟಿದ್ದರು. ಕೊನೆಗೆ ಈ ಹೇಳಿಕೆ ವಿರುದ್ಧ ಸಾಕಷ್ಟು ವಿರೋಧಗಳು ವ್ಯಕ್ತವಾದ ಬೆನ್ನಿಗೆ ಈಶ್ವರಪ್ಪ ಕ್ಷಮೆ ಕೋರಿದ್ದರು.

ನವೆಂಬರ್.30 2021, ಬೆಂಗಳೂರು: ಸಿದ್ದರಾಮಯ್ಯ ಕುಡುಕ ಮೋಸಗಾರ:

ವಿರೋಧ ಪಕ್ಷದ ನಾಯಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದರು. ರಾಜಕೀಯದಲ್ಲಿ ಪಕ್ಷಗಳ ನಾಯಕರು ಹೀಗೆ ಪರಸ್ಪರ ವಾಗ್ದಾಳಿ ನಡೆಸುವುದು ತೀರಾ ಸಾಮಾನ್ಯವಾದ ವಿಚಾರ. ಆದರೆ, ಸಿದ್ದರಾಮಯ್ಯನವರ ಟೀಕೆಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಈಶ್ವರಪ್ಪ, “ಸಿದ್ದರಾಮಯ್ಯ ಓರ್ವ ಕುಡುಕ, ಮೋಸಗಾರ. ಯಾವ ಸಂದರ್ಭದಲ್ಲಿ ಕುಡೀತಾರೆ, ಕುಡಿದಾಗ ಏನು ಮಾತಾಡ್ತಾರೆ ಅಂತ ಅವರಿಗೆ ಗೊತ್ತಿರಲ್ಲ” ಎಂದು ವಯಕ್ತಿಕವಾಗಿ ನಿಂದಿಸಿದ್ದರು. ಈ ಹೇಳಿಕೆ ಸಹ ಸಾರ್ವಜನಿಕ ವಲಯದಲ್ಲಿ ಭಾರೀ ಟೀಕೆಗೆ ಗುರಿಯಾಗಿತ್ತು.


ಇದನ್ನೂ ಓದಿ: ಸಿ.ಎಂ ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ರಾಜಕಾರಣ ಭುಗಿಲೆದ್ದಿತಾ? – ಎನ್‌. ರವಿಕುಮಾರ್ ಟೆಲೆಕ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...