Homeಮುಖಪುಟಕೆ.ಎಸ್‌ ಈಶ್ವರಪ್ಪನವರ ವಿವಾದಾತ್ಮಕ ಹೇಳಿಕೆಗಳು ಹೊಸದೇನಲ್ಲ: ಇಲ್ಲಿವೆ ಸಾಲು ಸಾಲು ಪ್ರಕರಣಗಳು

ಕೆ.ಎಸ್‌ ಈಶ್ವರಪ್ಪನವರ ವಿವಾದಾತ್ಮಕ ಹೇಳಿಕೆಗಳು ಹೊಸದೇನಲ್ಲ: ಇಲ್ಲಿವೆ ಸಾಲು ಸಾಲು ಪ್ರಕರಣಗಳು

- Advertisement -
- Advertisement -

ಕರ್ನಾಟಕ ರಾಜಕಾರಣದ ಮಟ್ಟಿಗೆ ಆಗಿಂದಾಗ್ಗೆ ವಿವಾದಾತ್ಮಕ ಹೇಳಿಕೆ ನೀಡುವ ಮತ್ತು ಪ್ರಚೋದನಾಕಾರಿ ಭಾಷಣ ಮಾಡುವುದರಲ್ಲಿ ಬಿಜೆಪಿ ಹಿರಿಯ ನಾಯಕ ಮತ್ತು ಸಚಿವ ಕೆ.ಎಸ್. ಈಶ್ವರಪ್ಪ ಅಗ್ರಗಣ್ಯರು. ಇಂತಹ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಅವರು ಪೇಚಿಗೆ ಸಿಲುಕಿ, ನಂತರ ಕ್ಷಮೆ ಕೇಳಿದ ಪ್ರಸಂಗಗಳೂ ಸಾಕಷ್ಟಿವೆ. ತೀರಾ ಇತ್ತೀಚೆಗೆ ಮಾಧ್ಯಮದವರ ಜೊತೆಗೆ ಮಾತನಾಡಿದ್ದ ಕೆ.ಎಸ್. ಈಶ್ವರಪ್ಪ “ಮುಂದೊಂದು ದಿನ ತ್ರಿವರ್ಣ ಧ್ವಜದ ಬದಲು ಕೇಸರಿ ಭಾಗವಧ್ವಜವೇ ದೇಶದ ರಾಷ್ಟ್ರೀಯ ಧ್ವಜವಾದರೂ ಆಗಬಹುದು” ಎಂಬ ಹೇಳಿಕೆ ನೀಡಿ ಮತ್ತೆ ವಿವಾದದ ಕೇಂದ್ರವಾಗಿದ್ದರು. ಈಶ್ವರಪ್ಪನವರ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಿರತರಾಗಿದ್ದಾರೆ. ಅಲ್ಲದೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರೇ ಈ ಹೇಳಿಕೆಯನ್ನು ಟೀಕಿಸಿ ಮಾತನಾಡಿದ್ದಾರೆ.

ಇದೇ ಸಂದರ್ಭದಲ್ಲಿ ಫೆ.20 ರಂದು ಶಿವಮೊಗ್ಗದಲ್ಲಿ ಬಜರಂಗದಳದ ಹರ್ಷ ಎಂಬ ಹುಡುಗನ ಕೊಲೆಯಾಗುತ್ತದೆ. ಕೂಡಲೇ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತಲುಪಿಕೊಳ್ಳುವ ಈಶ್ವರಪ್ಪ, “ಇದು ಮುಸ್ಲಿಂ ಗೂಂಡಾಗಳು ಮಾಡಿದ ಕಾರ್ಯ” ಎಂಬ ಹೇಳಿಕೆ ಕೊಡುವುದರ ಜೊತೆಗೆ ಶವದ ಮೆರವಣಿಗೆಯನ್ನೂ ಮುಂದೆ ನಿಂತು ನಡೆಸುತ್ತಾರೆ. ನಂತರ ಇದು ಇಡೀ ಶಿವಮೊಗ್ಗ ನಗರದಾದ್ಯಂತ ಕರ್ಫ್ಯೂ ಜಾರಿ ಮಾಡುವ ಮಟ್ಟಿಗಿನ ಕೋಮುದಳ್ಳುರಿಗೆ ಕಾರಣವಾಗಿದೆ. ಆದರೆ, ಸಚಿವ ಈಶ್ವರಪ್ಪ ಹೀಗೆ ವಿವಾದಾತ್ಮಕ ಅಥವಾ ಪ್ರಚೋದನಕಾರಿ ಹೇಳಿಕೆ ನೀಡಿ ಪೇಚಿಗೆ ಸಿಲುಕುತ್ತಿರುವುದು ಇದೇ ಮೊದಲೇನಲ್ಲ.

ಈಶ್ವರಪ್ಪನವರ ಹಲವು ವಿವಾದಾತ್ಮಕ ಹೇಳಿಕೆಗಳ ಪಟ್ಟಿ ಇಲ್ಲಿದೆ:

2014 ಕೊಪ್ಪಳ: ಕಾಂಗ್ರೆಸ್‌ನಲ್ಲಿ ತಾಯಿ ಹಾಲು ಕುಡಿದ ಗಂಡಸರೇ ಇಲ್ಲ:

ಲೋಕಸಭಾ ಚುನಾವಣೆ ಗರಿಗೆದರಿದ್ದ ದಿನಗಳವು. ನರೇಂದ್ರ ಮೋದಿ ಬಿಜೆಪಿ ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ದೇಶದ ವಿವಿಧೆಡೆ ಪ್ರಚಾರದಲ್ಲಿ ತೊಡಗಿದ್ದ ಕಾಲ. ಆಗ ಕೊಪ್ಪಳಕ್ಕೂ ಮೋದಿ ಪ್ರಚಾರಕ್ಕೆ ಆಗಮಿಸುವುದು ಪಕ್ಕಾ ಆಗಿತ್ತು. ಹೀಗಾಗಿ ಮೋದಿ ಕೊಪ್ಪಳಕ್ಕೆ ಆಗಮಿಸುವುದಕ್ಕೂ ಮೊದಲು ಕೊಪ್ಪಳದಲ್ಲಿ ಕಾರ್ಯಕಾರಿಣಿ ಸಭೆ ಆಯೋಜಿಸಿ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಈಶ್ವರಪ್ಪನವರನ್ನು ಜಿಲ್ಲೆಗೆ ಕಳುಹಿಸಿಕೊಡಲಾಗಿತ್ತು.

ಆದರೆ, ಕೊಪ್ಪಳ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ್ದ ಈಶ್ವರಪ್ಪ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ಕಿಡಿಕಾರಿದ್ದರು. ಅಲ್ಲದೆ, “ಮನಮೋಹನ್ ಸಿಂಗ್ ಗಂಡಸೇ ಅಲ್ಲ, ಕಾಂಗ್ರೆಸ್‌ನಲ್ಲಿ ತಾಯಿ ಮೊಲೆಹಾಲು ಕುಡಿದ ಗಂಡಸರೇ ಇಲ್ಲ” ಎಂಬಂತಹ ಮಾತುಗಳನ್ನು ಆಡಿಬಿಟ್ಟಿದ್ದರು. ಈ ಹೇಳಿಕೆ ದೇಶದಾದ್ಯಂತ ದೊಡ್ಡ ಸಂಚಲನಕ್ಕೆ ಕಾರಣವಾಗಿತ್ತು. ಈಶ್ವರಪ್ಪನ ಸುತ್ತ ದೊಡ್ಡ ವಿವಾದವೂ ರೂಪ ತಳೆದಿತ್ತು. ಕೊನೆಗೆ ಈಶ್ವರಪ್ಪ ಕ್ಷಮೆ ಕೇಳುವುದರೊಂಗಿಗೆ ಈ ವಿವಾದಕ್ಕೆ ಇತಿಶ್ರೀ ಹಾಡಲಾಗಿತ್ತು.

ಡಿಸೆಂಬರ್. 9 2017: ರಾಜಕಾರಣಿಗಳು ಸುಳ್ಳೋ ಪೊಳ್ಳೊ ಹೇಳಿ ಓಟ್ ಕೇಳ್ಬೇಕು:

ರಾಜ್ಯದ ಎಲ್ಲಾ ಪಕ್ಷಗಳೂ 2018ರ ವಿಧಾನಸಭಾ ಚುನಾವಣೆಗೆ ಅಣಿಯಾಗುತ್ತಿದ್ದ ಸಂದರ್ಭ. ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಮತ ಕೇಳುವ ಬಗ್ಗೆ ಕಿವಿಮಾತು ಹೇಳಿದ್ದ ಈಶ್ವರಪ್ಪ, “ಬಿಜೆಪಿ ಸರಕಾರ ಏನು ಮಾಡಿದೆ, ಕೇಂದ್ರ ಸರಕಾರ ಏನು ಮಾಡಿದೆ. ನಾವು ಬಂದ್ಮೇಲೆ ಏನೇನು ಮಾಡ್ತೀವಿ, ದಲಿತರಿಗೆ, ಹಿಂದುಳಿದವರಿಗೆ ರೈತರಿಗೆ ಹೆಣ್ಮಕ್ಕಳಿಗೆ ವಯಸ್ಸಾಗಿರೋರಿಗೆ ಏನು ಮಾಡುತ್ತೇವೆ ಈ ವಿಷಯಗಳೆಲ್ಲಾ ಗೊತ್ತಿರಬೇಕು, ನಾವಿದನ್ನೆಲ್ಲಾ ತಿಳ್ಕೊಂಡು ಹೋಗ್ಬೇಕು… ಅಕಸ್ಮಾತ್ ನಮಗೆ ಗೊತ್ತಿಲ್ಲ ಅಂದ್ರೆ… ಒಂದನ್ನು ನೆನಪಿಟ್ಕೊಬೇಕು.. .ರಾಜಕಾರಣಿಗಳು ಗೊತ್ತಿಲ್ಲ ಅಂತ ಯಾವಾಗ್ಲೋ ಒಪ್ಕೋಬಾರ್ದು. ಸುಳ್ಳೋ ಪೊಳ್ಳೋ ಏನೋ ಒಂದು ಹೇಳಿ ಬಂಡ್ಬಿಡ್ಬೇಕು.

ವಾಜಪೇಯಿ ಇದ್ದಂತ ಸಂದರ್ಭದಲ್ಲಿ ಪಾಕಿಸ್ತಾನದ ಸೈನಿಕರು ಹೊಡೆದು ಹೊಡೆದು ಸಾಯಿಸ್ಬಿಟ್ರು ಎಂದು ಹೇಳಬೇಕು. ನೀವು ನೋಡಿದ್ದೀರಾ .. ನಿಮಗೆ ಗೊತ್ತಿಲ್ಲ ಆದರೂ ಹೀಗೆ ಹೇಳ್ಬೇಕು.. ನೋಡಿ ವಾಜಪೇಯಿ ಇದ್ದ ಸಂದರ್ಭದಲ್ಲಿ ಪಾಕಿಸ್ತಾನವು ತಲೆ ಎತ್ತಿಲ್ಲ. ಮನಮೋಹನ್ ಸಿಂಗ್ ಬಂದಾಗ ಅಲ್ಲಿಂದಂತಹ ಪಾಕಿಸ್ತಾನದ ಸೈನಿಕರು ಭಾರತದ ಸೈನಿಕರನ್ನು ಕೊಂದು ಹಾಕಿದ್ರು.. ನರೇಂದ್ರ ಮೋದಿಯವರು ಬರ್ತಾ ಇದ್ದಂಗೆ ಪಾಕಿಸ್ತಾನವನ್ನ ಇಲ್ಲಾ ಅನ್ನಿಸಿಬಿಡ್ತಾರೆ. ನರೇಂದ್ರ ಮೋದಿ ಗಂಡುಗಲಿ ಅಂತ ಇಡೀ ಪಪಂಚ ಒಪ್ತಿದೆ ತಾನೇ..” ಎಂದು ಏನೋ ಒಂದು ಹೇಳಿಬಿಡಬೇಕು” ಎಂದು ಈಶ್ವರಪ್ಪ ಹೇಳಿದ್ದರು. ಈಶ್ವರಪ್ಪನವರ ಈ ಹೇಳಿಕೆಯ ವಿರುದ್ಧವೂ ಸಾರ್ವಜನಿಕ ವಲಯದಿಂದ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಕೆ.ಎಸ್ ಈಶ್ವರಪ್ಪನವರಿಗೆ ಬೈದಿದ್ದನ್ನು ಸಿದ್ದರಾಮಯ್ಯನವರಿಗೆ ಸಿ.ಎಂ. ಇಬ್ರಾಹಿಂ ಏಕವಚನದಲ್ಲಿ ಬೈಗುಳ ಎಂದು ತಿರುಚಲಾಗಿದೆ

ಆಗಸ್ಟ್ 08 2021, ಶಿವಮೊಗ್ಗ: ಹಿಂದೂಗಳ ಮೇಲೆ ಕೈ ಮಾಡಿದ್ರೆ ಒಂದಕ್ಕೆ ಎರಡು ತೆಗೀರಿ:

ಕಳೆದ ವರ್ಷ ಶಿವಮೊಗ್ಗದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಕಾರ್ಯಕರ್ತರ ಎದುರು ಮಾತನಾಡಿದ್ದ ಸಚಿವ ಈಶ್ವರಪ್ಪ, “ಈ ಹಿಂದೆ ಹಿಂದುತ್ವದ ಬಗ್ಗೆ ಮಾತಾಡಿದ್ರೆ ಕೊಲೆ ಆಗ್ತಾ ಇತ್ತು. ಕೇರಳದಲ್ಲಿ ಸಾಕಷ್ಟು ಹಿಂದೂ ಕಾರ್ಯಕರ್ತರ ಕೊಲೆಯಾಗಿದೆ. ಆಗ ವಾಪಾಸ್ ಹೊಡಿಯೋ ಶಕ್ತಿ ನಮಗೆ ಇರಲಿಲ್ಲ. ಆದರೆ, ಈಗ ದೇಶದಲ್ಲಿ ಬಿಜೆಪಿ ದೊಡ್ಡದಾಗಿ ಬೆಳೀತಿದೆ. ನಮಗೆ ಈಗ ತಿರುಗಿಸಿ ಹೊಡೆಯುವ ಶಕ್ತಿ ಬಂದಿದೆ. ಹೀಗಾಗಿ ಯಾರು ನಮ್ಮ ಕಾರ್ಯಕರ್ತರ ಮೇಲೆ ಯಾವುದರಲ್ಲಿ ಹೊಡೀತಾರೋ ಅದ್ರಲ್ಲೆ ತಿರುಗಿಸಿ ಹೊಡೆಯಿರಿ, ಒಂದಕ್ಕೆ ಎರಡು ತೆಗೀರಿ” ಎಂದು ಬಹಿರಂಗವಾಗಿ ಹಿಂಸಾಕೃತ್ಯಕ್ಕೆ ಕರೆ ನೀಡಿದ್ದರು.

ಸರ್ಕಾರದಲ್ಲಿ ಜವಾಬ್ದಾರಿ ಹುದ್ದೆಯಲ್ಲಿರುವ ಸಚಿವರೊಬ್ಬರ ಈ ಹೇಳಿಕೆ ವಿರೋಧ ಪಕ್ಷ ಮತ್ತು ಪ್ರಜ್ಞಾವಂತ ಸಮಾಜದಿಂದ ಸಾಕಷ್ಟು ಟೀಕೆಗೆ ಒಳಗಾಯಿತು. ಮಾಧ್ಯಮಗಳು ಈ ಬಗ್ಗೆ ದಿನಗಟ್ಟಲೆ ಚರ್ಚೆಗಳನ್ನೂ ನಡೆಸಿತ್ತು. ಆದರೆ, ಕೊನೆವರೆಗೂ ಈಶ್ವರಪ್ಪ ತಮ್ಮ ಬೇಜವಾಬ್ದಾರಿ ಹೇಳಿಕೆಗೆ ಕ್ಷಮೆ ಕೇಳಿರಲಿಲ್ಲ.

ಇದನ್ನೂ ಓದಿ:‘ರೆಬಲ್ ಆಗುವುದು ಗೊತ್ತಿಲ್ಲ, ನ್ಯಾಯ ಕೇಳುವುದನ್ನು ಬಿಡಲ್ಲ’: ಕೆ.ಎಸ್ ಈಶ್ವರಪ್ಪ ಪತ್ರಿಕಾಗೋಷ್ಠಿ

ಆಗಸ್ಟ್ 10 2021 ಬೆಂಗಳೂರು, ಕಾಂಗ್ರೇಸಿಗರು ಕುಡುಕ ಸೂ….ಮಕ್ಕಳು:

“ಹಿಂದೂ ಕಾರ್ಯಕರ್ತರ ಮೇಲೆ ಕೈ ಮಾಡಿದವರನ್ನು ಒಂದಕ್ಕೆ ಎರಡು ತೆಗೆದುಬಿಡಿ” ಎಂಬ ಈಶ್ವರಪ್ಪನವರ ಹೇಳಿಕೆ ವಿರುದ್ಧ ಕಾಂಗ್ರೆಸ್ ನಾಯಕರು ಟೀಕಾಪ್ರಹಾರವನ್ನೇ ನಡೆಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು” ಈಶ್ವರಪ್ಪನವರ ಹೇಳಿಕೆ ಸರಿಯಲ್ಲ ಇದು ಹಿಂಸೆಯನ್ನು ಪ್ರಚೋದಿಸುವಂತಿದೆ” ಎಂದು ಖಂಡಿಸಿದ್ದರು.

ಆದರೆ, ಕಾಂಗ್ರೆಸ್ ನಾಯಕರ ಈ ಅಭಿಪ್ರಾಯದ ವಿರುದ್ಧ ಬಹಿರಂಗವಾಗಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಸಭ್ಯವಾದ ಪದವನ್ನು ಬಳಸಿದ್ದ ಈಶ್ವರಪ್ಪನವರು, “ಕಾಂಗ್ರೇಸಿಗರು ಕುಡುಕ ಸೂ….ಮಕ್ಕಳು” ಎಂಬ ಪದವನ್ನು ಬಳಿಸಿಬಿಟ್ಟಿದ್ದರು. ಕೊನೆಗೆ ಈ ಹೇಳಿಕೆ ವಿರುದ್ಧ ಸಾಕಷ್ಟು ವಿರೋಧಗಳು ವ್ಯಕ್ತವಾದ ಬೆನ್ನಿಗೆ ಈಶ್ವರಪ್ಪ ಕ್ಷಮೆ ಕೋರಿದ್ದರು.

ನವೆಂಬರ್.30 2021, ಬೆಂಗಳೂರು: ಸಿದ್ದರಾಮಯ್ಯ ಕುಡುಕ ಮೋಸಗಾರ:

ವಿರೋಧ ಪಕ್ಷದ ನಾಯಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದರು. ರಾಜಕೀಯದಲ್ಲಿ ಪಕ್ಷಗಳ ನಾಯಕರು ಹೀಗೆ ಪರಸ್ಪರ ವಾಗ್ದಾಳಿ ನಡೆಸುವುದು ತೀರಾ ಸಾಮಾನ್ಯವಾದ ವಿಚಾರ. ಆದರೆ, ಸಿದ್ದರಾಮಯ್ಯನವರ ಟೀಕೆಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಈಶ್ವರಪ್ಪ, “ಸಿದ್ದರಾಮಯ್ಯ ಓರ್ವ ಕುಡುಕ, ಮೋಸಗಾರ. ಯಾವ ಸಂದರ್ಭದಲ್ಲಿ ಕುಡೀತಾರೆ, ಕುಡಿದಾಗ ಏನು ಮಾತಾಡ್ತಾರೆ ಅಂತ ಅವರಿಗೆ ಗೊತ್ತಿರಲ್ಲ” ಎಂದು ವಯಕ್ತಿಕವಾಗಿ ನಿಂದಿಸಿದ್ದರು. ಈ ಹೇಳಿಕೆ ಸಹ ಸಾರ್ವಜನಿಕ ವಲಯದಲ್ಲಿ ಭಾರೀ ಟೀಕೆಗೆ ಗುರಿಯಾಗಿತ್ತು.


ಇದನ್ನೂ ಓದಿ: ಸಿ.ಎಂ ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ರಾಜಕಾರಣ ಭುಗಿಲೆದ್ದಿತಾ? – ಎನ್‌. ರವಿಕುಮಾರ್ ಟೆಲೆಕ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...