Homeಮುಖಪುಟಕೆ.ಎಸ್‌ ಈಶ್ವರಪ್ಪನವರ ವಿವಾದಾತ್ಮಕ ಹೇಳಿಕೆಗಳು ಹೊಸದೇನಲ್ಲ: ಇಲ್ಲಿವೆ ಸಾಲು ಸಾಲು ಪ್ರಕರಣಗಳು

ಕೆ.ಎಸ್‌ ಈಶ್ವರಪ್ಪನವರ ವಿವಾದಾತ್ಮಕ ಹೇಳಿಕೆಗಳು ಹೊಸದೇನಲ್ಲ: ಇಲ್ಲಿವೆ ಸಾಲು ಸಾಲು ಪ್ರಕರಣಗಳು

- Advertisement -
- Advertisement -

ಕರ್ನಾಟಕ ರಾಜಕಾರಣದ ಮಟ್ಟಿಗೆ ಆಗಿಂದಾಗ್ಗೆ ವಿವಾದಾತ್ಮಕ ಹೇಳಿಕೆ ನೀಡುವ ಮತ್ತು ಪ್ರಚೋದನಾಕಾರಿ ಭಾಷಣ ಮಾಡುವುದರಲ್ಲಿ ಬಿಜೆಪಿ ಹಿರಿಯ ನಾಯಕ ಮತ್ತು ಸಚಿವ ಕೆ.ಎಸ್. ಈಶ್ವರಪ್ಪ ಅಗ್ರಗಣ್ಯರು. ಇಂತಹ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಅವರು ಪೇಚಿಗೆ ಸಿಲುಕಿ, ನಂತರ ಕ್ಷಮೆ ಕೇಳಿದ ಪ್ರಸಂಗಗಳೂ ಸಾಕಷ್ಟಿವೆ. ತೀರಾ ಇತ್ತೀಚೆಗೆ ಮಾಧ್ಯಮದವರ ಜೊತೆಗೆ ಮಾತನಾಡಿದ್ದ ಕೆ.ಎಸ್. ಈಶ್ವರಪ್ಪ “ಮುಂದೊಂದು ದಿನ ತ್ರಿವರ್ಣ ಧ್ವಜದ ಬದಲು ಕೇಸರಿ ಭಾಗವಧ್ವಜವೇ ದೇಶದ ರಾಷ್ಟ್ರೀಯ ಧ್ವಜವಾದರೂ ಆಗಬಹುದು” ಎಂಬ ಹೇಳಿಕೆ ನೀಡಿ ಮತ್ತೆ ವಿವಾದದ ಕೇಂದ್ರವಾಗಿದ್ದರು. ಈಶ್ವರಪ್ಪನವರ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಿರತರಾಗಿದ್ದಾರೆ. ಅಲ್ಲದೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರೇ ಈ ಹೇಳಿಕೆಯನ್ನು ಟೀಕಿಸಿ ಮಾತನಾಡಿದ್ದಾರೆ.

ಇದೇ ಸಂದರ್ಭದಲ್ಲಿ ಫೆ.20 ರಂದು ಶಿವಮೊಗ್ಗದಲ್ಲಿ ಬಜರಂಗದಳದ ಹರ್ಷ ಎಂಬ ಹುಡುಗನ ಕೊಲೆಯಾಗುತ್ತದೆ. ಕೂಡಲೇ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತಲುಪಿಕೊಳ್ಳುವ ಈಶ್ವರಪ್ಪ, “ಇದು ಮುಸ್ಲಿಂ ಗೂಂಡಾಗಳು ಮಾಡಿದ ಕಾರ್ಯ” ಎಂಬ ಹೇಳಿಕೆ ಕೊಡುವುದರ ಜೊತೆಗೆ ಶವದ ಮೆರವಣಿಗೆಯನ್ನೂ ಮುಂದೆ ನಿಂತು ನಡೆಸುತ್ತಾರೆ. ನಂತರ ಇದು ಇಡೀ ಶಿವಮೊಗ್ಗ ನಗರದಾದ್ಯಂತ ಕರ್ಫ್ಯೂ ಜಾರಿ ಮಾಡುವ ಮಟ್ಟಿಗಿನ ಕೋಮುದಳ್ಳುರಿಗೆ ಕಾರಣವಾಗಿದೆ. ಆದರೆ, ಸಚಿವ ಈಶ್ವರಪ್ಪ ಹೀಗೆ ವಿವಾದಾತ್ಮಕ ಅಥವಾ ಪ್ರಚೋದನಕಾರಿ ಹೇಳಿಕೆ ನೀಡಿ ಪೇಚಿಗೆ ಸಿಲುಕುತ್ತಿರುವುದು ಇದೇ ಮೊದಲೇನಲ್ಲ.

ಈಶ್ವರಪ್ಪನವರ ಹಲವು ವಿವಾದಾತ್ಮಕ ಹೇಳಿಕೆಗಳ ಪಟ್ಟಿ ಇಲ್ಲಿದೆ:

2014 ಕೊಪ್ಪಳ: ಕಾಂಗ್ರೆಸ್‌ನಲ್ಲಿ ತಾಯಿ ಹಾಲು ಕುಡಿದ ಗಂಡಸರೇ ಇಲ್ಲ:

ಲೋಕಸಭಾ ಚುನಾವಣೆ ಗರಿಗೆದರಿದ್ದ ದಿನಗಳವು. ನರೇಂದ್ರ ಮೋದಿ ಬಿಜೆಪಿ ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ದೇಶದ ವಿವಿಧೆಡೆ ಪ್ರಚಾರದಲ್ಲಿ ತೊಡಗಿದ್ದ ಕಾಲ. ಆಗ ಕೊಪ್ಪಳಕ್ಕೂ ಮೋದಿ ಪ್ರಚಾರಕ್ಕೆ ಆಗಮಿಸುವುದು ಪಕ್ಕಾ ಆಗಿತ್ತು. ಹೀಗಾಗಿ ಮೋದಿ ಕೊಪ್ಪಳಕ್ಕೆ ಆಗಮಿಸುವುದಕ್ಕೂ ಮೊದಲು ಕೊಪ್ಪಳದಲ್ಲಿ ಕಾರ್ಯಕಾರಿಣಿ ಸಭೆ ಆಯೋಜಿಸಿ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಈಶ್ವರಪ್ಪನವರನ್ನು ಜಿಲ್ಲೆಗೆ ಕಳುಹಿಸಿಕೊಡಲಾಗಿತ್ತು.

ಆದರೆ, ಕೊಪ್ಪಳ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ್ದ ಈಶ್ವರಪ್ಪ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ಕಿಡಿಕಾರಿದ್ದರು. ಅಲ್ಲದೆ, “ಮನಮೋಹನ್ ಸಿಂಗ್ ಗಂಡಸೇ ಅಲ್ಲ, ಕಾಂಗ್ರೆಸ್‌ನಲ್ಲಿ ತಾಯಿ ಮೊಲೆಹಾಲು ಕುಡಿದ ಗಂಡಸರೇ ಇಲ್ಲ” ಎಂಬಂತಹ ಮಾತುಗಳನ್ನು ಆಡಿಬಿಟ್ಟಿದ್ದರು. ಈ ಹೇಳಿಕೆ ದೇಶದಾದ್ಯಂತ ದೊಡ್ಡ ಸಂಚಲನಕ್ಕೆ ಕಾರಣವಾಗಿತ್ತು. ಈಶ್ವರಪ್ಪನ ಸುತ್ತ ದೊಡ್ಡ ವಿವಾದವೂ ರೂಪ ತಳೆದಿತ್ತು. ಕೊನೆಗೆ ಈಶ್ವರಪ್ಪ ಕ್ಷಮೆ ಕೇಳುವುದರೊಂಗಿಗೆ ಈ ವಿವಾದಕ್ಕೆ ಇತಿಶ್ರೀ ಹಾಡಲಾಗಿತ್ತು.

ಡಿಸೆಂಬರ್. 9 2017: ರಾಜಕಾರಣಿಗಳು ಸುಳ್ಳೋ ಪೊಳ್ಳೊ ಹೇಳಿ ಓಟ್ ಕೇಳ್ಬೇಕು:

ರಾಜ್ಯದ ಎಲ್ಲಾ ಪಕ್ಷಗಳೂ 2018ರ ವಿಧಾನಸಭಾ ಚುನಾವಣೆಗೆ ಅಣಿಯಾಗುತ್ತಿದ್ದ ಸಂದರ್ಭ. ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಮತ ಕೇಳುವ ಬಗ್ಗೆ ಕಿವಿಮಾತು ಹೇಳಿದ್ದ ಈಶ್ವರಪ್ಪ, “ಬಿಜೆಪಿ ಸರಕಾರ ಏನು ಮಾಡಿದೆ, ಕೇಂದ್ರ ಸರಕಾರ ಏನು ಮಾಡಿದೆ. ನಾವು ಬಂದ್ಮೇಲೆ ಏನೇನು ಮಾಡ್ತೀವಿ, ದಲಿತರಿಗೆ, ಹಿಂದುಳಿದವರಿಗೆ ರೈತರಿಗೆ ಹೆಣ್ಮಕ್ಕಳಿಗೆ ವಯಸ್ಸಾಗಿರೋರಿಗೆ ಏನು ಮಾಡುತ್ತೇವೆ ಈ ವಿಷಯಗಳೆಲ್ಲಾ ಗೊತ್ತಿರಬೇಕು, ನಾವಿದನ್ನೆಲ್ಲಾ ತಿಳ್ಕೊಂಡು ಹೋಗ್ಬೇಕು… ಅಕಸ್ಮಾತ್ ನಮಗೆ ಗೊತ್ತಿಲ್ಲ ಅಂದ್ರೆ… ಒಂದನ್ನು ನೆನಪಿಟ್ಕೊಬೇಕು.. .ರಾಜಕಾರಣಿಗಳು ಗೊತ್ತಿಲ್ಲ ಅಂತ ಯಾವಾಗ್ಲೋ ಒಪ್ಕೋಬಾರ್ದು. ಸುಳ್ಳೋ ಪೊಳ್ಳೋ ಏನೋ ಒಂದು ಹೇಳಿ ಬಂಡ್ಬಿಡ್ಬೇಕು.

ವಾಜಪೇಯಿ ಇದ್ದಂತ ಸಂದರ್ಭದಲ್ಲಿ ಪಾಕಿಸ್ತಾನದ ಸೈನಿಕರು ಹೊಡೆದು ಹೊಡೆದು ಸಾಯಿಸ್ಬಿಟ್ರು ಎಂದು ಹೇಳಬೇಕು. ನೀವು ನೋಡಿದ್ದೀರಾ .. ನಿಮಗೆ ಗೊತ್ತಿಲ್ಲ ಆದರೂ ಹೀಗೆ ಹೇಳ್ಬೇಕು.. ನೋಡಿ ವಾಜಪೇಯಿ ಇದ್ದ ಸಂದರ್ಭದಲ್ಲಿ ಪಾಕಿಸ್ತಾನವು ತಲೆ ಎತ್ತಿಲ್ಲ. ಮನಮೋಹನ್ ಸಿಂಗ್ ಬಂದಾಗ ಅಲ್ಲಿಂದಂತಹ ಪಾಕಿಸ್ತಾನದ ಸೈನಿಕರು ಭಾರತದ ಸೈನಿಕರನ್ನು ಕೊಂದು ಹಾಕಿದ್ರು.. ನರೇಂದ್ರ ಮೋದಿಯವರು ಬರ್ತಾ ಇದ್ದಂಗೆ ಪಾಕಿಸ್ತಾನವನ್ನ ಇಲ್ಲಾ ಅನ್ನಿಸಿಬಿಡ್ತಾರೆ. ನರೇಂದ್ರ ಮೋದಿ ಗಂಡುಗಲಿ ಅಂತ ಇಡೀ ಪಪಂಚ ಒಪ್ತಿದೆ ತಾನೇ..” ಎಂದು ಏನೋ ಒಂದು ಹೇಳಿಬಿಡಬೇಕು” ಎಂದು ಈಶ್ವರಪ್ಪ ಹೇಳಿದ್ದರು. ಈಶ್ವರಪ್ಪನವರ ಈ ಹೇಳಿಕೆಯ ವಿರುದ್ಧವೂ ಸಾರ್ವಜನಿಕ ವಲಯದಿಂದ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಕೆ.ಎಸ್ ಈಶ್ವರಪ್ಪನವರಿಗೆ ಬೈದಿದ್ದನ್ನು ಸಿದ್ದರಾಮಯ್ಯನವರಿಗೆ ಸಿ.ಎಂ. ಇಬ್ರಾಹಿಂ ಏಕವಚನದಲ್ಲಿ ಬೈಗುಳ ಎಂದು ತಿರುಚಲಾಗಿದೆ

ಆಗಸ್ಟ್ 08 2021, ಶಿವಮೊಗ್ಗ: ಹಿಂದೂಗಳ ಮೇಲೆ ಕೈ ಮಾಡಿದ್ರೆ ಒಂದಕ್ಕೆ ಎರಡು ತೆಗೀರಿ:

ಕಳೆದ ವರ್ಷ ಶಿವಮೊಗ್ಗದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಕಾರ್ಯಕರ್ತರ ಎದುರು ಮಾತನಾಡಿದ್ದ ಸಚಿವ ಈಶ್ವರಪ್ಪ, “ಈ ಹಿಂದೆ ಹಿಂದುತ್ವದ ಬಗ್ಗೆ ಮಾತಾಡಿದ್ರೆ ಕೊಲೆ ಆಗ್ತಾ ಇತ್ತು. ಕೇರಳದಲ್ಲಿ ಸಾಕಷ್ಟು ಹಿಂದೂ ಕಾರ್ಯಕರ್ತರ ಕೊಲೆಯಾಗಿದೆ. ಆಗ ವಾಪಾಸ್ ಹೊಡಿಯೋ ಶಕ್ತಿ ನಮಗೆ ಇರಲಿಲ್ಲ. ಆದರೆ, ಈಗ ದೇಶದಲ್ಲಿ ಬಿಜೆಪಿ ದೊಡ್ಡದಾಗಿ ಬೆಳೀತಿದೆ. ನಮಗೆ ಈಗ ತಿರುಗಿಸಿ ಹೊಡೆಯುವ ಶಕ್ತಿ ಬಂದಿದೆ. ಹೀಗಾಗಿ ಯಾರು ನಮ್ಮ ಕಾರ್ಯಕರ್ತರ ಮೇಲೆ ಯಾವುದರಲ್ಲಿ ಹೊಡೀತಾರೋ ಅದ್ರಲ್ಲೆ ತಿರುಗಿಸಿ ಹೊಡೆಯಿರಿ, ಒಂದಕ್ಕೆ ಎರಡು ತೆಗೀರಿ” ಎಂದು ಬಹಿರಂಗವಾಗಿ ಹಿಂಸಾಕೃತ್ಯಕ್ಕೆ ಕರೆ ನೀಡಿದ್ದರು.

ಸರ್ಕಾರದಲ್ಲಿ ಜವಾಬ್ದಾರಿ ಹುದ್ದೆಯಲ್ಲಿರುವ ಸಚಿವರೊಬ್ಬರ ಈ ಹೇಳಿಕೆ ವಿರೋಧ ಪಕ್ಷ ಮತ್ತು ಪ್ರಜ್ಞಾವಂತ ಸಮಾಜದಿಂದ ಸಾಕಷ್ಟು ಟೀಕೆಗೆ ಒಳಗಾಯಿತು. ಮಾಧ್ಯಮಗಳು ಈ ಬಗ್ಗೆ ದಿನಗಟ್ಟಲೆ ಚರ್ಚೆಗಳನ್ನೂ ನಡೆಸಿತ್ತು. ಆದರೆ, ಕೊನೆವರೆಗೂ ಈಶ್ವರಪ್ಪ ತಮ್ಮ ಬೇಜವಾಬ್ದಾರಿ ಹೇಳಿಕೆಗೆ ಕ್ಷಮೆ ಕೇಳಿರಲಿಲ್ಲ.

ಇದನ್ನೂ ಓದಿ:‘ರೆಬಲ್ ಆಗುವುದು ಗೊತ್ತಿಲ್ಲ, ನ್ಯಾಯ ಕೇಳುವುದನ್ನು ಬಿಡಲ್ಲ’: ಕೆ.ಎಸ್ ಈಶ್ವರಪ್ಪ ಪತ್ರಿಕಾಗೋಷ್ಠಿ

ಆಗಸ್ಟ್ 10 2021 ಬೆಂಗಳೂರು, ಕಾಂಗ್ರೇಸಿಗರು ಕುಡುಕ ಸೂ….ಮಕ್ಕಳು:

“ಹಿಂದೂ ಕಾರ್ಯಕರ್ತರ ಮೇಲೆ ಕೈ ಮಾಡಿದವರನ್ನು ಒಂದಕ್ಕೆ ಎರಡು ತೆಗೆದುಬಿಡಿ” ಎಂಬ ಈಶ್ವರಪ್ಪನವರ ಹೇಳಿಕೆ ವಿರುದ್ಧ ಕಾಂಗ್ರೆಸ್ ನಾಯಕರು ಟೀಕಾಪ್ರಹಾರವನ್ನೇ ನಡೆಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು” ಈಶ್ವರಪ್ಪನವರ ಹೇಳಿಕೆ ಸರಿಯಲ್ಲ ಇದು ಹಿಂಸೆಯನ್ನು ಪ್ರಚೋದಿಸುವಂತಿದೆ” ಎಂದು ಖಂಡಿಸಿದ್ದರು.

ಆದರೆ, ಕಾಂಗ್ರೆಸ್ ನಾಯಕರ ಈ ಅಭಿಪ್ರಾಯದ ವಿರುದ್ಧ ಬಹಿರಂಗವಾಗಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಸಭ್ಯವಾದ ಪದವನ್ನು ಬಳಸಿದ್ದ ಈಶ್ವರಪ್ಪನವರು, “ಕಾಂಗ್ರೇಸಿಗರು ಕುಡುಕ ಸೂ….ಮಕ್ಕಳು” ಎಂಬ ಪದವನ್ನು ಬಳಿಸಿಬಿಟ್ಟಿದ್ದರು. ಕೊನೆಗೆ ಈ ಹೇಳಿಕೆ ವಿರುದ್ಧ ಸಾಕಷ್ಟು ವಿರೋಧಗಳು ವ್ಯಕ್ತವಾದ ಬೆನ್ನಿಗೆ ಈಶ್ವರಪ್ಪ ಕ್ಷಮೆ ಕೋರಿದ್ದರು.

ನವೆಂಬರ್.30 2021, ಬೆಂಗಳೂರು: ಸಿದ್ದರಾಮಯ್ಯ ಕುಡುಕ ಮೋಸಗಾರ:

ವಿರೋಧ ಪಕ್ಷದ ನಾಯಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದರು. ರಾಜಕೀಯದಲ್ಲಿ ಪಕ್ಷಗಳ ನಾಯಕರು ಹೀಗೆ ಪರಸ್ಪರ ವಾಗ್ದಾಳಿ ನಡೆಸುವುದು ತೀರಾ ಸಾಮಾನ್ಯವಾದ ವಿಚಾರ. ಆದರೆ, ಸಿದ್ದರಾಮಯ್ಯನವರ ಟೀಕೆಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಈಶ್ವರಪ್ಪ, “ಸಿದ್ದರಾಮಯ್ಯ ಓರ್ವ ಕುಡುಕ, ಮೋಸಗಾರ. ಯಾವ ಸಂದರ್ಭದಲ್ಲಿ ಕುಡೀತಾರೆ, ಕುಡಿದಾಗ ಏನು ಮಾತಾಡ್ತಾರೆ ಅಂತ ಅವರಿಗೆ ಗೊತ್ತಿರಲ್ಲ” ಎಂದು ವಯಕ್ತಿಕವಾಗಿ ನಿಂದಿಸಿದ್ದರು. ಈ ಹೇಳಿಕೆ ಸಹ ಸಾರ್ವಜನಿಕ ವಲಯದಲ್ಲಿ ಭಾರೀ ಟೀಕೆಗೆ ಗುರಿಯಾಗಿತ್ತು.


ಇದನ್ನೂ ಓದಿ: ಸಿ.ಎಂ ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ರಾಜಕಾರಣ ಭುಗಿಲೆದ್ದಿತಾ? – ಎನ್‌. ರವಿಕುಮಾರ್ ಟೆಲೆಕ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....