Homeಮುಖಪುಟಕೆ.ಎಸ್‌ ಈಶ್ವರಪ್ಪನವರ ವಿವಾದಾತ್ಮಕ ಹೇಳಿಕೆಗಳು ಹೊಸದೇನಲ್ಲ: ಇಲ್ಲಿವೆ ಸಾಲು ಸಾಲು ಪ್ರಕರಣಗಳು

ಕೆ.ಎಸ್‌ ಈಶ್ವರಪ್ಪನವರ ವಿವಾದಾತ್ಮಕ ಹೇಳಿಕೆಗಳು ಹೊಸದೇನಲ್ಲ: ಇಲ್ಲಿವೆ ಸಾಲು ಸಾಲು ಪ್ರಕರಣಗಳು

- Advertisement -
- Advertisement -

ಕರ್ನಾಟಕ ರಾಜಕಾರಣದ ಮಟ್ಟಿಗೆ ಆಗಿಂದಾಗ್ಗೆ ವಿವಾದಾತ್ಮಕ ಹೇಳಿಕೆ ನೀಡುವ ಮತ್ತು ಪ್ರಚೋದನಾಕಾರಿ ಭಾಷಣ ಮಾಡುವುದರಲ್ಲಿ ಬಿಜೆಪಿ ಹಿರಿಯ ನಾಯಕ ಮತ್ತು ಸಚಿವ ಕೆ.ಎಸ್. ಈಶ್ವರಪ್ಪ ಅಗ್ರಗಣ್ಯರು. ಇಂತಹ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಅವರು ಪೇಚಿಗೆ ಸಿಲುಕಿ, ನಂತರ ಕ್ಷಮೆ ಕೇಳಿದ ಪ್ರಸಂಗಗಳೂ ಸಾಕಷ್ಟಿವೆ. ತೀರಾ ಇತ್ತೀಚೆಗೆ ಮಾಧ್ಯಮದವರ ಜೊತೆಗೆ ಮಾತನಾಡಿದ್ದ ಕೆ.ಎಸ್. ಈಶ್ವರಪ್ಪ “ಮುಂದೊಂದು ದಿನ ತ್ರಿವರ್ಣ ಧ್ವಜದ ಬದಲು ಕೇಸರಿ ಭಾಗವಧ್ವಜವೇ ದೇಶದ ರಾಷ್ಟ್ರೀಯ ಧ್ವಜವಾದರೂ ಆಗಬಹುದು” ಎಂಬ ಹೇಳಿಕೆ ನೀಡಿ ಮತ್ತೆ ವಿವಾದದ ಕೇಂದ್ರವಾಗಿದ್ದರು. ಈಶ್ವರಪ್ಪನವರ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಿರತರಾಗಿದ್ದಾರೆ. ಅಲ್ಲದೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರೇ ಈ ಹೇಳಿಕೆಯನ್ನು ಟೀಕಿಸಿ ಮಾತನಾಡಿದ್ದಾರೆ.

ಇದೇ ಸಂದರ್ಭದಲ್ಲಿ ಫೆ.20 ರಂದು ಶಿವಮೊಗ್ಗದಲ್ಲಿ ಬಜರಂಗದಳದ ಹರ್ಷ ಎಂಬ ಹುಡುಗನ ಕೊಲೆಯಾಗುತ್ತದೆ. ಕೂಡಲೇ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತಲುಪಿಕೊಳ್ಳುವ ಈಶ್ವರಪ್ಪ, “ಇದು ಮುಸ್ಲಿಂ ಗೂಂಡಾಗಳು ಮಾಡಿದ ಕಾರ್ಯ” ಎಂಬ ಹೇಳಿಕೆ ಕೊಡುವುದರ ಜೊತೆಗೆ ಶವದ ಮೆರವಣಿಗೆಯನ್ನೂ ಮುಂದೆ ನಿಂತು ನಡೆಸುತ್ತಾರೆ. ನಂತರ ಇದು ಇಡೀ ಶಿವಮೊಗ್ಗ ನಗರದಾದ್ಯಂತ ಕರ್ಫ್ಯೂ ಜಾರಿ ಮಾಡುವ ಮಟ್ಟಿಗಿನ ಕೋಮುದಳ್ಳುರಿಗೆ ಕಾರಣವಾಗಿದೆ. ಆದರೆ, ಸಚಿವ ಈಶ್ವರಪ್ಪ ಹೀಗೆ ವಿವಾದಾತ್ಮಕ ಅಥವಾ ಪ್ರಚೋದನಕಾರಿ ಹೇಳಿಕೆ ನೀಡಿ ಪೇಚಿಗೆ ಸಿಲುಕುತ್ತಿರುವುದು ಇದೇ ಮೊದಲೇನಲ್ಲ.

ಈಶ್ವರಪ್ಪನವರ ಹಲವು ವಿವಾದಾತ್ಮಕ ಹೇಳಿಕೆಗಳ ಪಟ್ಟಿ ಇಲ್ಲಿದೆ:

2014 ಕೊಪ್ಪಳ: ಕಾಂಗ್ರೆಸ್‌ನಲ್ಲಿ ತಾಯಿ ಹಾಲು ಕುಡಿದ ಗಂಡಸರೇ ಇಲ್ಲ:

ಲೋಕಸಭಾ ಚುನಾವಣೆ ಗರಿಗೆದರಿದ್ದ ದಿನಗಳವು. ನರೇಂದ್ರ ಮೋದಿ ಬಿಜೆಪಿ ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ದೇಶದ ವಿವಿಧೆಡೆ ಪ್ರಚಾರದಲ್ಲಿ ತೊಡಗಿದ್ದ ಕಾಲ. ಆಗ ಕೊಪ್ಪಳಕ್ಕೂ ಮೋದಿ ಪ್ರಚಾರಕ್ಕೆ ಆಗಮಿಸುವುದು ಪಕ್ಕಾ ಆಗಿತ್ತು. ಹೀಗಾಗಿ ಮೋದಿ ಕೊಪ್ಪಳಕ್ಕೆ ಆಗಮಿಸುವುದಕ್ಕೂ ಮೊದಲು ಕೊಪ್ಪಳದಲ್ಲಿ ಕಾರ್ಯಕಾರಿಣಿ ಸಭೆ ಆಯೋಜಿಸಿ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಈಶ್ವರಪ್ಪನವರನ್ನು ಜಿಲ್ಲೆಗೆ ಕಳುಹಿಸಿಕೊಡಲಾಗಿತ್ತು.

ಆದರೆ, ಕೊಪ್ಪಳ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ್ದ ಈಶ್ವರಪ್ಪ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ಕಿಡಿಕಾರಿದ್ದರು. ಅಲ್ಲದೆ, “ಮನಮೋಹನ್ ಸಿಂಗ್ ಗಂಡಸೇ ಅಲ್ಲ, ಕಾಂಗ್ರೆಸ್‌ನಲ್ಲಿ ತಾಯಿ ಮೊಲೆಹಾಲು ಕುಡಿದ ಗಂಡಸರೇ ಇಲ್ಲ” ಎಂಬಂತಹ ಮಾತುಗಳನ್ನು ಆಡಿಬಿಟ್ಟಿದ್ದರು. ಈ ಹೇಳಿಕೆ ದೇಶದಾದ್ಯಂತ ದೊಡ್ಡ ಸಂಚಲನಕ್ಕೆ ಕಾರಣವಾಗಿತ್ತು. ಈಶ್ವರಪ್ಪನ ಸುತ್ತ ದೊಡ್ಡ ವಿವಾದವೂ ರೂಪ ತಳೆದಿತ್ತು. ಕೊನೆಗೆ ಈಶ್ವರಪ್ಪ ಕ್ಷಮೆ ಕೇಳುವುದರೊಂಗಿಗೆ ಈ ವಿವಾದಕ್ಕೆ ಇತಿಶ್ರೀ ಹಾಡಲಾಗಿತ್ತು.

ಡಿಸೆಂಬರ್. 9 2017: ರಾಜಕಾರಣಿಗಳು ಸುಳ್ಳೋ ಪೊಳ್ಳೊ ಹೇಳಿ ಓಟ್ ಕೇಳ್ಬೇಕು:

ರಾಜ್ಯದ ಎಲ್ಲಾ ಪಕ್ಷಗಳೂ 2018ರ ವಿಧಾನಸಭಾ ಚುನಾವಣೆಗೆ ಅಣಿಯಾಗುತ್ತಿದ್ದ ಸಂದರ್ಭ. ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಮತ ಕೇಳುವ ಬಗ್ಗೆ ಕಿವಿಮಾತು ಹೇಳಿದ್ದ ಈಶ್ವರಪ್ಪ, “ಬಿಜೆಪಿ ಸರಕಾರ ಏನು ಮಾಡಿದೆ, ಕೇಂದ್ರ ಸರಕಾರ ಏನು ಮಾಡಿದೆ. ನಾವು ಬಂದ್ಮೇಲೆ ಏನೇನು ಮಾಡ್ತೀವಿ, ದಲಿತರಿಗೆ, ಹಿಂದುಳಿದವರಿಗೆ ರೈತರಿಗೆ ಹೆಣ್ಮಕ್ಕಳಿಗೆ ವಯಸ್ಸಾಗಿರೋರಿಗೆ ಏನು ಮಾಡುತ್ತೇವೆ ಈ ವಿಷಯಗಳೆಲ್ಲಾ ಗೊತ್ತಿರಬೇಕು, ನಾವಿದನ್ನೆಲ್ಲಾ ತಿಳ್ಕೊಂಡು ಹೋಗ್ಬೇಕು… ಅಕಸ್ಮಾತ್ ನಮಗೆ ಗೊತ್ತಿಲ್ಲ ಅಂದ್ರೆ… ಒಂದನ್ನು ನೆನಪಿಟ್ಕೊಬೇಕು.. .ರಾಜಕಾರಣಿಗಳು ಗೊತ್ತಿಲ್ಲ ಅಂತ ಯಾವಾಗ್ಲೋ ಒಪ್ಕೋಬಾರ್ದು. ಸುಳ್ಳೋ ಪೊಳ್ಳೋ ಏನೋ ಒಂದು ಹೇಳಿ ಬಂಡ್ಬಿಡ್ಬೇಕು.

ವಾಜಪೇಯಿ ಇದ್ದಂತ ಸಂದರ್ಭದಲ್ಲಿ ಪಾಕಿಸ್ತಾನದ ಸೈನಿಕರು ಹೊಡೆದು ಹೊಡೆದು ಸಾಯಿಸ್ಬಿಟ್ರು ಎಂದು ಹೇಳಬೇಕು. ನೀವು ನೋಡಿದ್ದೀರಾ .. ನಿಮಗೆ ಗೊತ್ತಿಲ್ಲ ಆದರೂ ಹೀಗೆ ಹೇಳ್ಬೇಕು.. ನೋಡಿ ವಾಜಪೇಯಿ ಇದ್ದ ಸಂದರ್ಭದಲ್ಲಿ ಪಾಕಿಸ್ತಾನವು ತಲೆ ಎತ್ತಿಲ್ಲ. ಮನಮೋಹನ್ ಸಿಂಗ್ ಬಂದಾಗ ಅಲ್ಲಿಂದಂತಹ ಪಾಕಿಸ್ತಾನದ ಸೈನಿಕರು ಭಾರತದ ಸೈನಿಕರನ್ನು ಕೊಂದು ಹಾಕಿದ್ರು.. ನರೇಂದ್ರ ಮೋದಿಯವರು ಬರ್ತಾ ಇದ್ದಂಗೆ ಪಾಕಿಸ್ತಾನವನ್ನ ಇಲ್ಲಾ ಅನ್ನಿಸಿಬಿಡ್ತಾರೆ. ನರೇಂದ್ರ ಮೋದಿ ಗಂಡುಗಲಿ ಅಂತ ಇಡೀ ಪಪಂಚ ಒಪ್ತಿದೆ ತಾನೇ..” ಎಂದು ಏನೋ ಒಂದು ಹೇಳಿಬಿಡಬೇಕು” ಎಂದು ಈಶ್ವರಪ್ಪ ಹೇಳಿದ್ದರು. ಈಶ್ವರಪ್ಪನವರ ಈ ಹೇಳಿಕೆಯ ವಿರುದ್ಧವೂ ಸಾರ್ವಜನಿಕ ವಲಯದಿಂದ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಕೆ.ಎಸ್ ಈಶ್ವರಪ್ಪನವರಿಗೆ ಬೈದಿದ್ದನ್ನು ಸಿದ್ದರಾಮಯ್ಯನವರಿಗೆ ಸಿ.ಎಂ. ಇಬ್ರಾಹಿಂ ಏಕವಚನದಲ್ಲಿ ಬೈಗುಳ ಎಂದು ತಿರುಚಲಾಗಿದೆ

ಆಗಸ್ಟ್ 08 2021, ಶಿವಮೊಗ್ಗ: ಹಿಂದೂಗಳ ಮೇಲೆ ಕೈ ಮಾಡಿದ್ರೆ ಒಂದಕ್ಕೆ ಎರಡು ತೆಗೀರಿ:

ಕಳೆದ ವರ್ಷ ಶಿವಮೊಗ್ಗದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಕಾರ್ಯಕರ್ತರ ಎದುರು ಮಾತನಾಡಿದ್ದ ಸಚಿವ ಈಶ್ವರಪ್ಪ, “ಈ ಹಿಂದೆ ಹಿಂದುತ್ವದ ಬಗ್ಗೆ ಮಾತಾಡಿದ್ರೆ ಕೊಲೆ ಆಗ್ತಾ ಇತ್ತು. ಕೇರಳದಲ್ಲಿ ಸಾಕಷ್ಟು ಹಿಂದೂ ಕಾರ್ಯಕರ್ತರ ಕೊಲೆಯಾಗಿದೆ. ಆಗ ವಾಪಾಸ್ ಹೊಡಿಯೋ ಶಕ್ತಿ ನಮಗೆ ಇರಲಿಲ್ಲ. ಆದರೆ, ಈಗ ದೇಶದಲ್ಲಿ ಬಿಜೆಪಿ ದೊಡ್ಡದಾಗಿ ಬೆಳೀತಿದೆ. ನಮಗೆ ಈಗ ತಿರುಗಿಸಿ ಹೊಡೆಯುವ ಶಕ್ತಿ ಬಂದಿದೆ. ಹೀಗಾಗಿ ಯಾರು ನಮ್ಮ ಕಾರ್ಯಕರ್ತರ ಮೇಲೆ ಯಾವುದರಲ್ಲಿ ಹೊಡೀತಾರೋ ಅದ್ರಲ್ಲೆ ತಿರುಗಿಸಿ ಹೊಡೆಯಿರಿ, ಒಂದಕ್ಕೆ ಎರಡು ತೆಗೀರಿ” ಎಂದು ಬಹಿರಂಗವಾಗಿ ಹಿಂಸಾಕೃತ್ಯಕ್ಕೆ ಕರೆ ನೀಡಿದ್ದರು.

ಸರ್ಕಾರದಲ್ಲಿ ಜವಾಬ್ದಾರಿ ಹುದ್ದೆಯಲ್ಲಿರುವ ಸಚಿವರೊಬ್ಬರ ಈ ಹೇಳಿಕೆ ವಿರೋಧ ಪಕ್ಷ ಮತ್ತು ಪ್ರಜ್ಞಾವಂತ ಸಮಾಜದಿಂದ ಸಾಕಷ್ಟು ಟೀಕೆಗೆ ಒಳಗಾಯಿತು. ಮಾಧ್ಯಮಗಳು ಈ ಬಗ್ಗೆ ದಿನಗಟ್ಟಲೆ ಚರ್ಚೆಗಳನ್ನೂ ನಡೆಸಿತ್ತು. ಆದರೆ, ಕೊನೆವರೆಗೂ ಈಶ್ವರಪ್ಪ ತಮ್ಮ ಬೇಜವಾಬ್ದಾರಿ ಹೇಳಿಕೆಗೆ ಕ್ಷಮೆ ಕೇಳಿರಲಿಲ್ಲ.

ಇದನ್ನೂ ಓದಿ:‘ರೆಬಲ್ ಆಗುವುದು ಗೊತ್ತಿಲ್ಲ, ನ್ಯಾಯ ಕೇಳುವುದನ್ನು ಬಿಡಲ್ಲ’: ಕೆ.ಎಸ್ ಈಶ್ವರಪ್ಪ ಪತ್ರಿಕಾಗೋಷ್ಠಿ

ಆಗಸ್ಟ್ 10 2021 ಬೆಂಗಳೂರು, ಕಾಂಗ್ರೇಸಿಗರು ಕುಡುಕ ಸೂ….ಮಕ್ಕಳು:

“ಹಿಂದೂ ಕಾರ್ಯಕರ್ತರ ಮೇಲೆ ಕೈ ಮಾಡಿದವರನ್ನು ಒಂದಕ್ಕೆ ಎರಡು ತೆಗೆದುಬಿಡಿ” ಎಂಬ ಈಶ್ವರಪ್ಪನವರ ಹೇಳಿಕೆ ವಿರುದ್ಧ ಕಾಂಗ್ರೆಸ್ ನಾಯಕರು ಟೀಕಾಪ್ರಹಾರವನ್ನೇ ನಡೆಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು” ಈಶ್ವರಪ್ಪನವರ ಹೇಳಿಕೆ ಸರಿಯಲ್ಲ ಇದು ಹಿಂಸೆಯನ್ನು ಪ್ರಚೋದಿಸುವಂತಿದೆ” ಎಂದು ಖಂಡಿಸಿದ್ದರು.

ಆದರೆ, ಕಾಂಗ್ರೆಸ್ ನಾಯಕರ ಈ ಅಭಿಪ್ರಾಯದ ವಿರುದ್ಧ ಬಹಿರಂಗವಾಗಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಸಭ್ಯವಾದ ಪದವನ್ನು ಬಳಸಿದ್ದ ಈಶ್ವರಪ್ಪನವರು, “ಕಾಂಗ್ರೇಸಿಗರು ಕುಡುಕ ಸೂ….ಮಕ್ಕಳು” ಎಂಬ ಪದವನ್ನು ಬಳಿಸಿಬಿಟ್ಟಿದ್ದರು. ಕೊನೆಗೆ ಈ ಹೇಳಿಕೆ ವಿರುದ್ಧ ಸಾಕಷ್ಟು ವಿರೋಧಗಳು ವ್ಯಕ್ತವಾದ ಬೆನ್ನಿಗೆ ಈಶ್ವರಪ್ಪ ಕ್ಷಮೆ ಕೋರಿದ್ದರು.

ನವೆಂಬರ್.30 2021, ಬೆಂಗಳೂರು: ಸಿದ್ದರಾಮಯ್ಯ ಕುಡುಕ ಮೋಸಗಾರ:

ವಿರೋಧ ಪಕ್ಷದ ನಾಯಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದರು. ರಾಜಕೀಯದಲ್ಲಿ ಪಕ್ಷಗಳ ನಾಯಕರು ಹೀಗೆ ಪರಸ್ಪರ ವಾಗ್ದಾಳಿ ನಡೆಸುವುದು ತೀರಾ ಸಾಮಾನ್ಯವಾದ ವಿಚಾರ. ಆದರೆ, ಸಿದ್ದರಾಮಯ್ಯನವರ ಟೀಕೆಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಈಶ್ವರಪ್ಪ, “ಸಿದ್ದರಾಮಯ್ಯ ಓರ್ವ ಕುಡುಕ, ಮೋಸಗಾರ. ಯಾವ ಸಂದರ್ಭದಲ್ಲಿ ಕುಡೀತಾರೆ, ಕುಡಿದಾಗ ಏನು ಮಾತಾಡ್ತಾರೆ ಅಂತ ಅವರಿಗೆ ಗೊತ್ತಿರಲ್ಲ” ಎಂದು ವಯಕ್ತಿಕವಾಗಿ ನಿಂದಿಸಿದ್ದರು. ಈ ಹೇಳಿಕೆ ಸಹ ಸಾರ್ವಜನಿಕ ವಲಯದಲ್ಲಿ ಭಾರೀ ಟೀಕೆಗೆ ಗುರಿಯಾಗಿತ್ತು.


ಇದನ್ನೂ ಓದಿ: ಸಿ.ಎಂ ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ರಾಜಕಾರಣ ಭುಗಿಲೆದ್ದಿತಾ? – ಎನ್‌. ರವಿಕುಮಾರ್ ಟೆಲೆಕ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...