Homeಮುಖಪುಟಕೆ.ಎಸ್‌ ಈಶ್ವರಪ್ಪನವರ ವಿವಾದಾತ್ಮಕ ಹೇಳಿಕೆಗಳು ಹೊಸದೇನಲ್ಲ: ಇಲ್ಲಿವೆ ಸಾಲು ಸಾಲು ಪ್ರಕರಣಗಳು

ಕೆ.ಎಸ್‌ ಈಶ್ವರಪ್ಪನವರ ವಿವಾದಾತ್ಮಕ ಹೇಳಿಕೆಗಳು ಹೊಸದೇನಲ್ಲ: ಇಲ್ಲಿವೆ ಸಾಲು ಸಾಲು ಪ್ರಕರಣಗಳು

- Advertisement -
- Advertisement -

ಕರ್ನಾಟಕ ರಾಜಕಾರಣದ ಮಟ್ಟಿಗೆ ಆಗಿಂದಾಗ್ಗೆ ವಿವಾದಾತ್ಮಕ ಹೇಳಿಕೆ ನೀಡುವ ಮತ್ತು ಪ್ರಚೋದನಾಕಾರಿ ಭಾಷಣ ಮಾಡುವುದರಲ್ಲಿ ಬಿಜೆಪಿ ಹಿರಿಯ ನಾಯಕ ಮತ್ತು ಸಚಿವ ಕೆ.ಎಸ್. ಈಶ್ವರಪ್ಪ ಅಗ್ರಗಣ್ಯರು. ಇಂತಹ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಅವರು ಪೇಚಿಗೆ ಸಿಲುಕಿ, ನಂತರ ಕ್ಷಮೆ ಕೇಳಿದ ಪ್ರಸಂಗಗಳೂ ಸಾಕಷ್ಟಿವೆ. ತೀರಾ ಇತ್ತೀಚೆಗೆ ಮಾಧ್ಯಮದವರ ಜೊತೆಗೆ ಮಾತನಾಡಿದ್ದ ಕೆ.ಎಸ್. ಈಶ್ವರಪ್ಪ “ಮುಂದೊಂದು ದಿನ ತ್ರಿವರ್ಣ ಧ್ವಜದ ಬದಲು ಕೇಸರಿ ಭಾಗವಧ್ವಜವೇ ದೇಶದ ರಾಷ್ಟ್ರೀಯ ಧ್ವಜವಾದರೂ ಆಗಬಹುದು” ಎಂಬ ಹೇಳಿಕೆ ನೀಡಿ ಮತ್ತೆ ವಿವಾದದ ಕೇಂದ್ರವಾಗಿದ್ದರು. ಈಶ್ವರಪ್ಪನವರ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಿರತರಾಗಿದ್ದಾರೆ. ಅಲ್ಲದೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರೇ ಈ ಹೇಳಿಕೆಯನ್ನು ಟೀಕಿಸಿ ಮಾತನಾಡಿದ್ದಾರೆ.

ಇದೇ ಸಂದರ್ಭದಲ್ಲಿ ಫೆ.20 ರಂದು ಶಿವಮೊಗ್ಗದಲ್ಲಿ ಬಜರಂಗದಳದ ಹರ್ಷ ಎಂಬ ಹುಡುಗನ ಕೊಲೆಯಾಗುತ್ತದೆ. ಕೂಡಲೇ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತಲುಪಿಕೊಳ್ಳುವ ಈಶ್ವರಪ್ಪ, “ಇದು ಮುಸ್ಲಿಂ ಗೂಂಡಾಗಳು ಮಾಡಿದ ಕಾರ್ಯ” ಎಂಬ ಹೇಳಿಕೆ ಕೊಡುವುದರ ಜೊತೆಗೆ ಶವದ ಮೆರವಣಿಗೆಯನ್ನೂ ಮುಂದೆ ನಿಂತು ನಡೆಸುತ್ತಾರೆ. ನಂತರ ಇದು ಇಡೀ ಶಿವಮೊಗ್ಗ ನಗರದಾದ್ಯಂತ ಕರ್ಫ್ಯೂ ಜಾರಿ ಮಾಡುವ ಮಟ್ಟಿಗಿನ ಕೋಮುದಳ್ಳುರಿಗೆ ಕಾರಣವಾಗಿದೆ. ಆದರೆ, ಸಚಿವ ಈಶ್ವರಪ್ಪ ಹೀಗೆ ವಿವಾದಾತ್ಮಕ ಅಥವಾ ಪ್ರಚೋದನಕಾರಿ ಹೇಳಿಕೆ ನೀಡಿ ಪೇಚಿಗೆ ಸಿಲುಕುತ್ತಿರುವುದು ಇದೇ ಮೊದಲೇನಲ್ಲ.

ಈಶ್ವರಪ್ಪನವರ ಹಲವು ವಿವಾದಾತ್ಮಕ ಹೇಳಿಕೆಗಳ ಪಟ್ಟಿ ಇಲ್ಲಿದೆ:

2014 ಕೊಪ್ಪಳ: ಕಾಂಗ್ರೆಸ್‌ನಲ್ಲಿ ತಾಯಿ ಹಾಲು ಕುಡಿದ ಗಂಡಸರೇ ಇಲ್ಲ:

ಲೋಕಸಭಾ ಚುನಾವಣೆ ಗರಿಗೆದರಿದ್ದ ದಿನಗಳವು. ನರೇಂದ್ರ ಮೋದಿ ಬಿಜೆಪಿ ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ದೇಶದ ವಿವಿಧೆಡೆ ಪ್ರಚಾರದಲ್ಲಿ ತೊಡಗಿದ್ದ ಕಾಲ. ಆಗ ಕೊಪ್ಪಳಕ್ಕೂ ಮೋದಿ ಪ್ರಚಾರಕ್ಕೆ ಆಗಮಿಸುವುದು ಪಕ್ಕಾ ಆಗಿತ್ತು. ಹೀಗಾಗಿ ಮೋದಿ ಕೊಪ್ಪಳಕ್ಕೆ ಆಗಮಿಸುವುದಕ್ಕೂ ಮೊದಲು ಕೊಪ್ಪಳದಲ್ಲಿ ಕಾರ್ಯಕಾರಿಣಿ ಸಭೆ ಆಯೋಜಿಸಿ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಈಶ್ವರಪ್ಪನವರನ್ನು ಜಿಲ್ಲೆಗೆ ಕಳುಹಿಸಿಕೊಡಲಾಗಿತ್ತು.

ಆದರೆ, ಕೊಪ್ಪಳ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ್ದ ಈಶ್ವರಪ್ಪ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ಕಿಡಿಕಾರಿದ್ದರು. ಅಲ್ಲದೆ, “ಮನಮೋಹನ್ ಸಿಂಗ್ ಗಂಡಸೇ ಅಲ್ಲ, ಕಾಂಗ್ರೆಸ್‌ನಲ್ಲಿ ತಾಯಿ ಮೊಲೆಹಾಲು ಕುಡಿದ ಗಂಡಸರೇ ಇಲ್ಲ” ಎಂಬಂತಹ ಮಾತುಗಳನ್ನು ಆಡಿಬಿಟ್ಟಿದ್ದರು. ಈ ಹೇಳಿಕೆ ದೇಶದಾದ್ಯಂತ ದೊಡ್ಡ ಸಂಚಲನಕ್ಕೆ ಕಾರಣವಾಗಿತ್ತು. ಈಶ್ವರಪ್ಪನ ಸುತ್ತ ದೊಡ್ಡ ವಿವಾದವೂ ರೂಪ ತಳೆದಿತ್ತು. ಕೊನೆಗೆ ಈಶ್ವರಪ್ಪ ಕ್ಷಮೆ ಕೇಳುವುದರೊಂಗಿಗೆ ಈ ವಿವಾದಕ್ಕೆ ಇತಿಶ್ರೀ ಹಾಡಲಾಗಿತ್ತು.

ಡಿಸೆಂಬರ್. 9 2017: ರಾಜಕಾರಣಿಗಳು ಸುಳ್ಳೋ ಪೊಳ್ಳೊ ಹೇಳಿ ಓಟ್ ಕೇಳ್ಬೇಕು:

ರಾಜ್ಯದ ಎಲ್ಲಾ ಪಕ್ಷಗಳೂ 2018ರ ವಿಧಾನಸಭಾ ಚುನಾವಣೆಗೆ ಅಣಿಯಾಗುತ್ತಿದ್ದ ಸಂದರ್ಭ. ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಮತ ಕೇಳುವ ಬಗ್ಗೆ ಕಿವಿಮಾತು ಹೇಳಿದ್ದ ಈಶ್ವರಪ್ಪ, “ಬಿಜೆಪಿ ಸರಕಾರ ಏನು ಮಾಡಿದೆ, ಕೇಂದ್ರ ಸರಕಾರ ಏನು ಮಾಡಿದೆ. ನಾವು ಬಂದ್ಮೇಲೆ ಏನೇನು ಮಾಡ್ತೀವಿ, ದಲಿತರಿಗೆ, ಹಿಂದುಳಿದವರಿಗೆ ರೈತರಿಗೆ ಹೆಣ್ಮಕ್ಕಳಿಗೆ ವಯಸ್ಸಾಗಿರೋರಿಗೆ ಏನು ಮಾಡುತ್ತೇವೆ ಈ ವಿಷಯಗಳೆಲ್ಲಾ ಗೊತ್ತಿರಬೇಕು, ನಾವಿದನ್ನೆಲ್ಲಾ ತಿಳ್ಕೊಂಡು ಹೋಗ್ಬೇಕು… ಅಕಸ್ಮಾತ್ ನಮಗೆ ಗೊತ್ತಿಲ್ಲ ಅಂದ್ರೆ… ಒಂದನ್ನು ನೆನಪಿಟ್ಕೊಬೇಕು.. .ರಾಜಕಾರಣಿಗಳು ಗೊತ್ತಿಲ್ಲ ಅಂತ ಯಾವಾಗ್ಲೋ ಒಪ್ಕೋಬಾರ್ದು. ಸುಳ್ಳೋ ಪೊಳ್ಳೋ ಏನೋ ಒಂದು ಹೇಳಿ ಬಂಡ್ಬಿಡ್ಬೇಕು.

ವಾಜಪೇಯಿ ಇದ್ದಂತ ಸಂದರ್ಭದಲ್ಲಿ ಪಾಕಿಸ್ತಾನದ ಸೈನಿಕರು ಹೊಡೆದು ಹೊಡೆದು ಸಾಯಿಸ್ಬಿಟ್ರು ಎಂದು ಹೇಳಬೇಕು. ನೀವು ನೋಡಿದ್ದೀರಾ .. ನಿಮಗೆ ಗೊತ್ತಿಲ್ಲ ಆದರೂ ಹೀಗೆ ಹೇಳ್ಬೇಕು.. ನೋಡಿ ವಾಜಪೇಯಿ ಇದ್ದ ಸಂದರ್ಭದಲ್ಲಿ ಪಾಕಿಸ್ತಾನವು ತಲೆ ಎತ್ತಿಲ್ಲ. ಮನಮೋಹನ್ ಸಿಂಗ್ ಬಂದಾಗ ಅಲ್ಲಿಂದಂತಹ ಪಾಕಿಸ್ತಾನದ ಸೈನಿಕರು ಭಾರತದ ಸೈನಿಕರನ್ನು ಕೊಂದು ಹಾಕಿದ್ರು.. ನರೇಂದ್ರ ಮೋದಿಯವರು ಬರ್ತಾ ಇದ್ದಂಗೆ ಪಾಕಿಸ್ತಾನವನ್ನ ಇಲ್ಲಾ ಅನ್ನಿಸಿಬಿಡ್ತಾರೆ. ನರೇಂದ್ರ ಮೋದಿ ಗಂಡುಗಲಿ ಅಂತ ಇಡೀ ಪಪಂಚ ಒಪ್ತಿದೆ ತಾನೇ..” ಎಂದು ಏನೋ ಒಂದು ಹೇಳಿಬಿಡಬೇಕು” ಎಂದು ಈಶ್ವರಪ್ಪ ಹೇಳಿದ್ದರು. ಈಶ್ವರಪ್ಪನವರ ಈ ಹೇಳಿಕೆಯ ವಿರುದ್ಧವೂ ಸಾರ್ವಜನಿಕ ವಲಯದಿಂದ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಕೆ.ಎಸ್ ಈಶ್ವರಪ್ಪನವರಿಗೆ ಬೈದಿದ್ದನ್ನು ಸಿದ್ದರಾಮಯ್ಯನವರಿಗೆ ಸಿ.ಎಂ. ಇಬ್ರಾಹಿಂ ಏಕವಚನದಲ್ಲಿ ಬೈಗುಳ ಎಂದು ತಿರುಚಲಾಗಿದೆ

ಆಗಸ್ಟ್ 08 2021, ಶಿವಮೊಗ್ಗ: ಹಿಂದೂಗಳ ಮೇಲೆ ಕೈ ಮಾಡಿದ್ರೆ ಒಂದಕ್ಕೆ ಎರಡು ತೆಗೀರಿ:

ಕಳೆದ ವರ್ಷ ಶಿವಮೊಗ್ಗದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಕಾರ್ಯಕರ್ತರ ಎದುರು ಮಾತನಾಡಿದ್ದ ಸಚಿವ ಈಶ್ವರಪ್ಪ, “ಈ ಹಿಂದೆ ಹಿಂದುತ್ವದ ಬಗ್ಗೆ ಮಾತಾಡಿದ್ರೆ ಕೊಲೆ ಆಗ್ತಾ ಇತ್ತು. ಕೇರಳದಲ್ಲಿ ಸಾಕಷ್ಟು ಹಿಂದೂ ಕಾರ್ಯಕರ್ತರ ಕೊಲೆಯಾಗಿದೆ. ಆಗ ವಾಪಾಸ್ ಹೊಡಿಯೋ ಶಕ್ತಿ ನಮಗೆ ಇರಲಿಲ್ಲ. ಆದರೆ, ಈಗ ದೇಶದಲ್ಲಿ ಬಿಜೆಪಿ ದೊಡ್ಡದಾಗಿ ಬೆಳೀತಿದೆ. ನಮಗೆ ಈಗ ತಿರುಗಿಸಿ ಹೊಡೆಯುವ ಶಕ್ತಿ ಬಂದಿದೆ. ಹೀಗಾಗಿ ಯಾರು ನಮ್ಮ ಕಾರ್ಯಕರ್ತರ ಮೇಲೆ ಯಾವುದರಲ್ಲಿ ಹೊಡೀತಾರೋ ಅದ್ರಲ್ಲೆ ತಿರುಗಿಸಿ ಹೊಡೆಯಿರಿ, ಒಂದಕ್ಕೆ ಎರಡು ತೆಗೀರಿ” ಎಂದು ಬಹಿರಂಗವಾಗಿ ಹಿಂಸಾಕೃತ್ಯಕ್ಕೆ ಕರೆ ನೀಡಿದ್ದರು.

ಸರ್ಕಾರದಲ್ಲಿ ಜವಾಬ್ದಾರಿ ಹುದ್ದೆಯಲ್ಲಿರುವ ಸಚಿವರೊಬ್ಬರ ಈ ಹೇಳಿಕೆ ವಿರೋಧ ಪಕ್ಷ ಮತ್ತು ಪ್ರಜ್ಞಾವಂತ ಸಮಾಜದಿಂದ ಸಾಕಷ್ಟು ಟೀಕೆಗೆ ಒಳಗಾಯಿತು. ಮಾಧ್ಯಮಗಳು ಈ ಬಗ್ಗೆ ದಿನಗಟ್ಟಲೆ ಚರ್ಚೆಗಳನ್ನೂ ನಡೆಸಿತ್ತು. ಆದರೆ, ಕೊನೆವರೆಗೂ ಈಶ್ವರಪ್ಪ ತಮ್ಮ ಬೇಜವಾಬ್ದಾರಿ ಹೇಳಿಕೆಗೆ ಕ್ಷಮೆ ಕೇಳಿರಲಿಲ್ಲ.

ಇದನ್ನೂ ಓದಿ:‘ರೆಬಲ್ ಆಗುವುದು ಗೊತ್ತಿಲ್ಲ, ನ್ಯಾಯ ಕೇಳುವುದನ್ನು ಬಿಡಲ್ಲ’: ಕೆ.ಎಸ್ ಈಶ್ವರಪ್ಪ ಪತ್ರಿಕಾಗೋಷ್ಠಿ

ಆಗಸ್ಟ್ 10 2021 ಬೆಂಗಳೂರು, ಕಾಂಗ್ರೇಸಿಗರು ಕುಡುಕ ಸೂ….ಮಕ್ಕಳು:

“ಹಿಂದೂ ಕಾರ್ಯಕರ್ತರ ಮೇಲೆ ಕೈ ಮಾಡಿದವರನ್ನು ಒಂದಕ್ಕೆ ಎರಡು ತೆಗೆದುಬಿಡಿ” ಎಂಬ ಈಶ್ವರಪ್ಪನವರ ಹೇಳಿಕೆ ವಿರುದ್ಧ ಕಾಂಗ್ರೆಸ್ ನಾಯಕರು ಟೀಕಾಪ್ರಹಾರವನ್ನೇ ನಡೆಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು” ಈಶ್ವರಪ್ಪನವರ ಹೇಳಿಕೆ ಸರಿಯಲ್ಲ ಇದು ಹಿಂಸೆಯನ್ನು ಪ್ರಚೋದಿಸುವಂತಿದೆ” ಎಂದು ಖಂಡಿಸಿದ್ದರು.

ಆದರೆ, ಕಾಂಗ್ರೆಸ್ ನಾಯಕರ ಈ ಅಭಿಪ್ರಾಯದ ವಿರುದ್ಧ ಬಹಿರಂಗವಾಗಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಸಭ್ಯವಾದ ಪದವನ್ನು ಬಳಸಿದ್ದ ಈಶ್ವರಪ್ಪನವರು, “ಕಾಂಗ್ರೇಸಿಗರು ಕುಡುಕ ಸೂ….ಮಕ್ಕಳು” ಎಂಬ ಪದವನ್ನು ಬಳಿಸಿಬಿಟ್ಟಿದ್ದರು. ಕೊನೆಗೆ ಈ ಹೇಳಿಕೆ ವಿರುದ್ಧ ಸಾಕಷ್ಟು ವಿರೋಧಗಳು ವ್ಯಕ್ತವಾದ ಬೆನ್ನಿಗೆ ಈಶ್ವರಪ್ಪ ಕ್ಷಮೆ ಕೋರಿದ್ದರು.

ನವೆಂಬರ್.30 2021, ಬೆಂಗಳೂರು: ಸಿದ್ದರಾಮಯ್ಯ ಕುಡುಕ ಮೋಸಗಾರ:

ವಿರೋಧ ಪಕ್ಷದ ನಾಯಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದರು. ರಾಜಕೀಯದಲ್ಲಿ ಪಕ್ಷಗಳ ನಾಯಕರು ಹೀಗೆ ಪರಸ್ಪರ ವಾಗ್ದಾಳಿ ನಡೆಸುವುದು ತೀರಾ ಸಾಮಾನ್ಯವಾದ ವಿಚಾರ. ಆದರೆ, ಸಿದ್ದರಾಮಯ್ಯನವರ ಟೀಕೆಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಈಶ್ವರಪ್ಪ, “ಸಿದ್ದರಾಮಯ್ಯ ಓರ್ವ ಕುಡುಕ, ಮೋಸಗಾರ. ಯಾವ ಸಂದರ್ಭದಲ್ಲಿ ಕುಡೀತಾರೆ, ಕುಡಿದಾಗ ಏನು ಮಾತಾಡ್ತಾರೆ ಅಂತ ಅವರಿಗೆ ಗೊತ್ತಿರಲ್ಲ” ಎಂದು ವಯಕ್ತಿಕವಾಗಿ ನಿಂದಿಸಿದ್ದರು. ಈ ಹೇಳಿಕೆ ಸಹ ಸಾರ್ವಜನಿಕ ವಲಯದಲ್ಲಿ ಭಾರೀ ಟೀಕೆಗೆ ಗುರಿಯಾಗಿತ್ತು.


ಇದನ್ನೂ ಓದಿ: ಸಿ.ಎಂ ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ರಾಜಕಾರಣ ಭುಗಿಲೆದ್ದಿತಾ? – ಎನ್‌. ರವಿಕುಮಾರ್ ಟೆಲೆಕ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....