Homeಕರ್ನಾಟಕಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್‌ನಿಂದ ಒತ್ತಡವಿಲ್ಲ: ಸಿಎಂ ಬೊಮ್ಮಾಯಿ

ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್‌ನಿಂದ ಒತ್ತಡವಿಲ್ಲ: ಸಿಎಂ ಬೊಮ್ಮಾಯಿ

- Advertisement -
- Advertisement -

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಈಶ್ವರಪ್ಪನವರನ್ನು ಸದ್ಯಕ್ಕೆ ಸಚಿವ ಸಂಪುಟದಲ್ಲಿ ಇರುತ್ತಾರೆ. ಪ್ರಾಥಮಿಕ ತನಿಖೆ ಆರಂಭವಾಗಿದೆ. ತನಿಖೆಯ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಈ ಹಿಂದೆಯೇ ಹೇಳಿದಂತೆ ಯಾರ ಮೇಲೆಯೂ ಈ ಕೂಡಲೇ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಪ್ರಾಥಮಿಕ ತನಿಖೆ ಆರಂಭವಾಗಿದ್ದು ಅದರ ಫಲಿತಾಂಶದ ಮೇಲೆಷ್ಟೆ ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ಈಶ್ವರಪ್ಪನವರ ರಾಜೀನಾಮೆಗೆ ಬಿಜೆಪಿ ಹೈಕಮಾಂಡ್ ಒತ್ತಡ ಹೇರಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಹೈಕಮಾಂಡ್‌ಗೆ ಪ್ರಕರಣದ ಕುರಿತು ಮಾಹಿತಿ ನೀಡಿದ್ದೇವೆ. ಆದರೆ ಹೈಕಮಾಂಡ್ ಯಾವುದೇ ಸಲಹೆ-ಸೂಚನೆ ನೀಡಿಲ್ಲ, ನನ್ನ ಮೆಲೆ ಯಾವುದೇ ಒತ್ತಡವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಹೈಕಮಾಂಡ್‌ಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ತನಿಖೆಯಿಂದಷ್ಟೇ ಸತ್ಯಾಸತ್ಯತೆ ಹೊರಬರಲು ಸಾಧ್ಯ. ನಂತರವಷ್ಟೇ ಕ್ರಮದ ಬಗ್ಗೆ ಚರ್ಚಿಸಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದಲ್ಲಿ 40% ಕಮಿಷನ್ ಭ್ರಷ್ಟಾಚಾರ ನಡೆಯುತ್ತಿರುವುದರ ಬಗ್ಗೆ ಗುತ್ತಿಗೆದಾರ ಸಂಘದ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಅವೆಲ್ಲವೂ ಆಧಾರರಹಿತ ಆರೋಪಗಳಾಗಿವೆ. ಭ್ರಷ್ಟಾಚಾರ ನಡೆದುದ್ದರ ಬಗ್ಗೆ ದಾಖಲೆ ಒದಗಿಸಿದರೆ ನಾವು ತನಿಖೆಗೆ ಸಿದ್ದ” ಎಂದಿದ್ದಾರೆ.

ಕಾಂಗ್ರೆಸ್ ಅವಧಿಯಲ್ಲಿಯೇ ಹೆಚ್ಚಿನ ಭ್ರಷ್ಟಾಚಾರಗಳು ನಡೆದಿವೆ. ಹಾಗಾಗಿ ಸಂತೋಷ್ ಸಾವನ್ನು ಇಟ್ಟುಕೊಂಡು ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ ಎಂದು ಇದೇ ಸಂದರ್ಭದಲ್ಲಿ ಅವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮೃತ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ 

ಇನ್ನೊಂದೆಡೆ ಬೆಳಗಾವಿಯಲ್ಲಿ ಮೃತ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ ನೆರವೇರಿದೆ. ಆರಂಭದಲ್ಲಿ ಬಿಜೆಪಿಯ ಹಿರಿಯ ಮುಖಂಡರು ಸ್ಥಳಕ್ಕೆ ಆಗಮಿಸುವವರೆಗೂ ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ಸಂಬಂಧಿಗಳು ಪಟ್ಟು ಹಿಡಿದಿದ್ದರು. ಸಚಿವ ಈಶ್ವರಪ್ಪನ ರಾಜೀನಾಮೆ ಪಡೆದು ಬಂಧಿಸಬೇಕೆಂದು ಆಗ್ರಹಿಸಿದ್ದರು. ನಂತರ ಕಾಂಗ್ರೆಸ್ ಮುಖಂಡರಾದ ಅದಿವೇಶ್ ಇಟಗಿ ಮಾತನಾಡಿ ಸಂಬಂಧಿಗಳನ್ನು ಸಮಾಧಾನ ಪಡಿಸಿದರು. ನಂತರ ಅಂತ್ಯಕ್ರಿಯೆ ಜರುಗಿದೆ.


ಇದನ್ನೂ ಓದಿ: Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೈಕಮಾಂಡ್ ಆಗಿರುವ ಎಲ್ಲಾರೂ ಒಂದೊಲ್ಲ ಒಂದು ಪ್ರಕರಣಗಳಲ್ಲಿ ಭಾಗಿಯಾಗಿರುವವರು ಅದಕ್ಕಾಗಿ ಒತ್ತಡ ಹಾಕಿಲ್ಲ ಏಕೆಂದರೆ ನಾವು ಮಾಡಿದ್ದು ಅವನು ಮಾಡಿದ್ದಾನೆಂದು ಸುಮ್ಮನೆ ಇದ್ದಾರೆ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...