Homeಕರ್ನಾಟಕಐಫೋನ್ ಘಟಕ ಸ್ಥಾಪನೆ- ಸುಳ್ಳು ಹೇಳಿ, ರಾಜ್ಯದ ಜನರ ಕಿವಿಗೆ ಹೂ ಇಟ್ಟ ಸಿಎಂ ಬೊಮ್ಮಾಯಿ:...

ಐಫೋನ್ ಘಟಕ ಸ್ಥಾಪನೆ- ಸುಳ್ಳು ಹೇಳಿ, ರಾಜ್ಯದ ಜನರ ಕಿವಿಗೆ ಹೂ ಇಟ್ಟ ಸಿಎಂ ಬೊಮ್ಮಾಯಿ: ಡಿಕೆ ಶಿವಕುಮಾರ್

- Advertisement -
- Advertisement -

”ಬಿಜೆಪಿಯವರು ರಾಜ್ಯದ ಜನರಿಗೆ ಸುಳ್ಳು ಹೇಳುತ್ತಿರುವುದು ಗೊತ್ತಾಗಿದೆ. ಒಂದು ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆಯನ್ನು ನೀಡಿದರು, ಅವರು ಯಾವ ಆಧಾರದ ಮೇಲೆ ಹೇಳಿದರೋ ಗೊತ್ತಿಲ್ಲ” ಎಂದು ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಅವರು ಭಾನುವಾರ ಹೇಳಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆ ಶಿವಕುಮಾರ್, ”BJP ಬಡಾಯಿ ಬ್ಯಾಂಕ್ ಬ್ಯಾಲೆನ್ಸ್ ನಲ್ಲಿ ಬರೀ ಸುಳ್ಳುಗಳೇ ತುಂಬಿವೆ. ಬೆಂಗಳೂರಲ್ಲಿ iPhone ತಯಾರಿಕಾ ಘಟಕ ಆರಂಭವಾಗಿ, 1 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಪುಂಗಿದ್ದ BJP, ರಾಜ್ಯದ ಮರ್ಯಾದೆಯನ್ನು ನಡುಬೀದಿಯಲ್ಲಿ ಹರಾಜು ಹಾಕಿದೆ. ಎಷ್ಟು ದಿನ ಅಂತಾ ಜನರ ಕಿವಿಗೆ ಹೂ ಇಡ್ತೀರಾ ಸಿಎಂ ಬಸವರಾಜ ಬೊಮ್ಮಾಯಿ ಅವರೇ? ಅಧಿಕಾರ ಹೋಗುವಾಗಲಾದರೂ ಸತ್ಯ ಹೇಳಬಾರದೇ?” ಎಂದು ಕೇಳಿದ್ದಾರೆ.

ರಾಜ್ಯದಲ್ಲಿ ಐಫೋನ್ ಉತ್ಪಾದನ ಘಟಕ ಆಗತ್ತದೆ, ಈ ಬಗ್ಗೆ ಫಾಕ್ಸ್‌ಕಾನ್‌ನೊಂದಿಗೆ ಒಪ್ಪಂದ ಆಗಿದೆ ಎಂದು ಸಿಎಂ ಹೇಳಿದ್ದರು. ಆ ಬಗ್ಗೆ ಫಾಕ್ಸ್‌ಕಾನ್ ಸ್ಪಷ್ಟನೆ ನೀಡಿದ್ದು, ನಾವು ಭಾರತದಲ್ಲಿ ಹೊಸ ಹೂಡಿಕೆಗೆ ಸಂಬಂಧಿಸಿದಂತೆ ”ಯಾವುದೇ ಖಚಿತ, ನಿರ್ಣಾಯಕ ಒಪ್ಪಂದಗಳನ್ನು ಮಾಡಿಕೊಂಡಿಲ್ಲ” ಎಂದು ಹೇಳಿದೆ. ಇದೀಗ ಬೊಮ್ಮಾಯಿ ಸುಳ್ಳು ಹೇಳಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ.

”ಬೆಂಗಳೂರಿನ ಐಫೋನ್ ಉತ್ಪಾದನಾ ಘಟಕ ತೆರೆಯಲಾಗುತ್ತದೆ ಎಂಬ ಸಿಎಂ ಹೇಳಿಕೆಯನ್ನು ಫಾಕ್ಸ್‌ಕಾನ್ ನಿರಾಕರಿಸಿದೆ. ಸುಳ್ಳೇ ಬಿಜೆಪಿಯ ಮನೆದೇವ್ರು ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಸ್ವತಃ ಸಿಎಂ ಸುಳ್ಳು ಹೇಳಿದ್ದು ನಾಚಿಕೆಗೇಡಿನ ಸಂಗತಿ. ಬಸವರಾಜ ಬೊಮ್ಮಾಯಿ ಅವರೇ, ತಾವು ಬಲು ಶಾಣ್ಯ ಇದಿರ್ರಿ.. ಬಾಳ್ ಚೆನ್ನಾಗಿ ಕಿವಿ ಮೇಲೆ ಹೂ ಇಡ್ತಿರ್ರಿ!!” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಭಾರತದಲ್ಲಿ ಯಾವುದೇ ಹೊಸ ಹೂಡಿಕೆ ಒಪ್ಪಂದವಾಗಿಲ್ಲ: ಬೊಮ್ಮಾಯಿ ಹೇಳಿಕೆ ತಳ್ಳಿಹಾಕಿದ ಫಾಕ್ಸ್‌ಕಾನ್

”ಫಾಕ್ಸ್‌ಕಾನ್ ಕಂಪೆನಿಯೊಂದಿಗೆ ಒಪ್ಪಂದಕ್ಕೆ ಸಹಿ ಮಾಡಲಾಯ್ತು ಎಂದಿರುವ ಬಸವರಾಜ ಬೊಮ್ಮಾಯಿ  ಅವರೇ, ನಿಮ್ಮ ಹೇಳಿಕೆಯನ್ನು ಕಂಪೆನಿ ನಿರಾಕರಿಸಿದೆ. ◆ರಾಜ್ಯಕ್ಕೆ ಸುಳ್ಳು ಹೇಳಿದ್ದೇಕೆ? ◆ಸಿಎಂ ಹುದ್ದೆಯ ಜವಾಬ್ದಾರಿ ಮರೆತು ‘ಫೇಕ್‌ನ್ಯೂಸ್’ ಹರಿಬಿಟ್ಟಿದ್ದೇಕೆ? ◆ಉದ್ಯೋಗ ಬಯಸುತ್ತಿರುವ ಯುವಕರಿಗೆ ಕಿವಿ ಮೇಲೆ ಹೂ ಇಟ್ಟಿದ್ದೇಕೆ?” ಎಂದು ಪ್ರಶ್ನೆ ಮಾಡಿದೆ.

”ಒಪ್ಪಂದವೇ ಆಗದೆ ಐಫೋನ್ ತಯಾರಿಕಾ ಘಟಕ ಸ್ಥಾಪನೆ ಆಗಿಯೇ ಬಿಡುತ್ತದೆ ಎಂದು ಕಿವಿ ಮೇಲೆ ಹೂ ಇಡುವ ಮೂಲಕ ಸುಳ್ಳೇ ಬಿಜೆಪಿಯ ಮನೆದೇವ್ರು ಎಂಬುದಕ್ಕೆ ಬಸವರಾಜ ಬೊಮ್ಮಾಯಿ ಅವರು ಮತ್ತೊಂದು ಪುರಾವೆ ಒದಗಿಸಿದ್ದಾರೆ! ಸುಳ್ಳು ಹೇಳುವ ಮೂಲಕ ಸಿಎಂ ಹುದ್ದೆಯ ಘನತೆಯನ್ನು, ಕರ್ನಾಟಕದ ಮರ್ಯಾದೆಯನ್ನು ಜಾಗತಿಕ ಮಟ್ಟದಲ್ಲಿ ಹರಾಜು ಹಾಕಿದ್ದಾರೆ” ಎಂದು ಕಾಂಗ್ರೆಸ್ ಟೀಕಿಸಿದೆ.

ಆತುರಗಾರನಿಗೆ ಬುದ್ದಿ ಮಂದ ಎನ್ನುತ್ತಾರೆ, ಬಸವರಾಜ ಬೊಮ್ಮಾಯಿ ಅವರದ್ದೂ ಹಾಗೇನಾ? ಅಂತಿಮ ಒಪ್ಪಂದವಾಗದೆ ಐಫೋನ್ ಘಟಕ ಸ್ಥಾಪನೆ ಆಗಿಯೇಬಿಟ್ಟಿತು ಎಂದು ಆತುರದಲ್ಲಿ ಘೋಷಿಸಿದ್ದೇಕೆ? ಕರ್ನಾಟಕದಲ್ಲಿ ಹೂಡಿಕೆ ಮಾಡಲು ಹೂಡಿಕೆದಾರರು ಹಿಂಜರಿಯುತ್ತಿರುವುದೇಕೆ? ರಾಜ್ಯದ ಜನರ ಕಿವಿ ಮೇಲೆ ಹೂ ಇಟ್ಟಿದ್ದೇಕೆ? ಫಾಕ್ಸ್‌ಕಾನ್ ಸಂಸ್ಥೆ ನಿರಾಕರಿಸಿದ್ದೇಕೆ? ಎಂದು ಕಾಂಗ್ರೆಸ್ ಘಟಕ ಪ್ರಶ್ನಿಸಿ ಟ್ವೀಟ್ ಮಾಡಿದೆ.

ಒಟ್ಟಾರೆ ಇಲ್ಲಿ ಬಸವರಾಜ ಬೊಮ್ಮಾಯಿ ಅವರು ನಗೆಪಾಟಲಿಗೆ ಈಡಾಗಿರುವುದು ಸುಳ್ಳಲ್ಲ. ಏಕೆಂದರೆ ಐ ಫೋನ್ ಘಟಕ ಸ್ಥಾಪನೆಯ ಒಪ್ಪಂದವೇ ಆಗದೇ ಅದಕ್ಕಾಗಿ ದೊಡ್ಡಬಳ್ಳಾಪುರ ಮತ್ತು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 300 ಎಕರೆ ಭೂಮಿಯನ್ನು ಗುರುತಿಸಿದ್ದಾರೆ.

ಎಲೆಕ್ಟ್ರಾನಿಕ್ಸ್ ಉತ್ಪಾದನಾ ಯೋಜನೆಯು ಮುಂದಿನ 10 ವರ್ಷಗಳಲ್ಲಿ ರಾಜ್ಯದೊಳಗಿನ 1,00,000 ಕ್ಕೂ ಹೆಚ್ಚು ಉದ್ಯೋಗಾವಕಾಶಗಳನ್ನು ಗಳಿಸುವ ನಿರೀಕ್ಷೆಯಿದೆ ಎಂದು ಸಿಎಂ ತಿಳಿಸಿದ್ದರು.

ಫಾಕ್ಸ್‌ಕಾನ್:- ಇದು ವಿಶ್ವದ ಅತಿದೊಡ್ಡ ಎಲೆಕ್ಟ್ರಾನಿಕ್ಸ್ ತಯಾರಕ ಕಂಪನಿಯಾಗಿದ್ದು, 2022 ರಲ್ಲಿ ಒಟ್ಟು ಆದಾಯವು ಹೊಸ ತೈವಾನ್ ಡಾಲರ್ 6 ಟ್ರಿಲಿಯನ್ ಅನ್ನು ಮೀರಿದೆ. ಕಳೆದ ವರ್ಷದಂತೆ, ಇದು ಫಾರ್ಚೂನ್ ಗ್ಲೋಬಲ್ 500ರಲ್ಲಿ 20 ನೇ ಸ್ಥಾನದಲ್ಲಿದೆ.

ಕಂಪನಿಯು ವಿಶ್ವದ 24 ದೇಶಗಳು ಅಥವಾ ಪ್ರದೇಶಗಳಲ್ಲಿ 173 ಕ್ಯಾಂಪಸ್‌ಗಳು ಮತ್ತು ಕಚೇರಿಗಳನ್ನು ಹೊಂದಿದೆ. ಕಂಪನಿಯ ಪ್ರಾಥಮಿಕ ಉತ್ಪನ್ನ ವಿಭಾಗಗಳಲ್ಲಿ ಸ್ಮಾರ್ಟ್ ಗ್ರಾಹಕ ಎಲೆಕ್ಟ್ರಾನಿಕ್ಸ್, ಉದಾಹರಣೆಗೆ ಸ್ಮಾರ್ಟ್‌ಫೋನ್‌ಗಳು, ಟಿವಿಗಳು, ಗೇಮ್ ಕನ್ಸೋಲ್‌ಗಳು, ಸರ್ವರ್‌ಗಳು ಮತ್ತು ಸಂವಹನ ನೆಟ್‌ವರ್ಕ್ ಅನ್ನು ಒಳಗೊಂಡಿರುವ ಕ್ಲೌಡ್ ಮತ್ತು ನೆಟ್‌ವರ್ಕಿಂಗ್ ಉತ್ಪನ್ನಗಳು ಸೇರಿವೆ; ಕಂಪ್ಯೂಟರ್, ಟ್ಯಾಬ್ಲೆಟ್‌ಗಳು ಮತ್ತು ಘಟಕಗಳಂತಹ ಕಂಪ್ಯೂಟಿಂಗ್ ಉತ್ಪನ್ನಗಳು ಮತ್ತು ಕನೆಕ್ಟರ್‌ಗಳು, ಯಾಂತ್ರಿಕ ಭಾಗಗಳು, ಸೇವೆಗಳು ಮುಂತಾದವುಗಳು(ಎಎನ್‌ಐ).

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...