Homeಕರ್ನಾಟಕಐಫೋನ್ ಘಟಕ ಸ್ಥಾಪನೆ- ಸುಳ್ಳು ಹೇಳಿ, ರಾಜ್ಯದ ಜನರ ಕಿವಿಗೆ ಹೂ ಇಟ್ಟ ಸಿಎಂ ಬೊಮ್ಮಾಯಿ:...

ಐಫೋನ್ ಘಟಕ ಸ್ಥಾಪನೆ- ಸುಳ್ಳು ಹೇಳಿ, ರಾಜ್ಯದ ಜನರ ಕಿವಿಗೆ ಹೂ ಇಟ್ಟ ಸಿಎಂ ಬೊಮ್ಮಾಯಿ: ಡಿಕೆ ಶಿವಕುಮಾರ್

- Advertisement -
- Advertisement -

”ಬಿಜೆಪಿಯವರು ರಾಜ್ಯದ ಜನರಿಗೆ ಸುಳ್ಳು ಹೇಳುತ್ತಿರುವುದು ಗೊತ್ತಾಗಿದೆ. ಒಂದು ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆಯನ್ನು ನೀಡಿದರು, ಅವರು ಯಾವ ಆಧಾರದ ಮೇಲೆ ಹೇಳಿದರೋ ಗೊತ್ತಿಲ್ಲ” ಎಂದು ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಅವರು ಭಾನುವಾರ ಹೇಳಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆ ಶಿವಕುಮಾರ್, ”BJP ಬಡಾಯಿ ಬ್ಯಾಂಕ್ ಬ್ಯಾಲೆನ್ಸ್ ನಲ್ಲಿ ಬರೀ ಸುಳ್ಳುಗಳೇ ತುಂಬಿವೆ. ಬೆಂಗಳೂರಲ್ಲಿ iPhone ತಯಾರಿಕಾ ಘಟಕ ಆರಂಭವಾಗಿ, 1 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಪುಂಗಿದ್ದ BJP, ರಾಜ್ಯದ ಮರ್ಯಾದೆಯನ್ನು ನಡುಬೀದಿಯಲ್ಲಿ ಹರಾಜು ಹಾಕಿದೆ. ಎಷ್ಟು ದಿನ ಅಂತಾ ಜನರ ಕಿವಿಗೆ ಹೂ ಇಡ್ತೀರಾ ಸಿಎಂ ಬಸವರಾಜ ಬೊಮ್ಮಾಯಿ ಅವರೇ? ಅಧಿಕಾರ ಹೋಗುವಾಗಲಾದರೂ ಸತ್ಯ ಹೇಳಬಾರದೇ?” ಎಂದು ಕೇಳಿದ್ದಾರೆ.

ರಾಜ್ಯದಲ್ಲಿ ಐಫೋನ್ ಉತ್ಪಾದನ ಘಟಕ ಆಗತ್ತದೆ, ಈ ಬಗ್ಗೆ ಫಾಕ್ಸ್‌ಕಾನ್‌ನೊಂದಿಗೆ ಒಪ್ಪಂದ ಆಗಿದೆ ಎಂದು ಸಿಎಂ ಹೇಳಿದ್ದರು. ಆ ಬಗ್ಗೆ ಫಾಕ್ಸ್‌ಕಾನ್ ಸ್ಪಷ್ಟನೆ ನೀಡಿದ್ದು, ನಾವು ಭಾರತದಲ್ಲಿ ಹೊಸ ಹೂಡಿಕೆಗೆ ಸಂಬಂಧಿಸಿದಂತೆ ”ಯಾವುದೇ ಖಚಿತ, ನಿರ್ಣಾಯಕ ಒಪ್ಪಂದಗಳನ್ನು ಮಾಡಿಕೊಂಡಿಲ್ಲ” ಎಂದು ಹೇಳಿದೆ. ಇದೀಗ ಬೊಮ್ಮಾಯಿ ಸುಳ್ಳು ಹೇಳಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ.

”ಬೆಂಗಳೂರಿನ ಐಫೋನ್ ಉತ್ಪಾದನಾ ಘಟಕ ತೆರೆಯಲಾಗುತ್ತದೆ ಎಂಬ ಸಿಎಂ ಹೇಳಿಕೆಯನ್ನು ಫಾಕ್ಸ್‌ಕಾನ್ ನಿರಾಕರಿಸಿದೆ. ಸುಳ್ಳೇ ಬಿಜೆಪಿಯ ಮನೆದೇವ್ರು ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಸ್ವತಃ ಸಿಎಂ ಸುಳ್ಳು ಹೇಳಿದ್ದು ನಾಚಿಕೆಗೇಡಿನ ಸಂಗತಿ. ಬಸವರಾಜ ಬೊಮ್ಮಾಯಿ ಅವರೇ, ತಾವು ಬಲು ಶಾಣ್ಯ ಇದಿರ್ರಿ.. ಬಾಳ್ ಚೆನ್ನಾಗಿ ಕಿವಿ ಮೇಲೆ ಹೂ ಇಡ್ತಿರ್ರಿ!!” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಭಾರತದಲ್ಲಿ ಯಾವುದೇ ಹೊಸ ಹೂಡಿಕೆ ಒಪ್ಪಂದವಾಗಿಲ್ಲ: ಬೊಮ್ಮಾಯಿ ಹೇಳಿಕೆ ತಳ್ಳಿಹಾಕಿದ ಫಾಕ್ಸ್‌ಕಾನ್

”ಫಾಕ್ಸ್‌ಕಾನ್ ಕಂಪೆನಿಯೊಂದಿಗೆ ಒಪ್ಪಂದಕ್ಕೆ ಸಹಿ ಮಾಡಲಾಯ್ತು ಎಂದಿರುವ ಬಸವರಾಜ ಬೊಮ್ಮಾಯಿ  ಅವರೇ, ನಿಮ್ಮ ಹೇಳಿಕೆಯನ್ನು ಕಂಪೆನಿ ನಿರಾಕರಿಸಿದೆ. ◆ರಾಜ್ಯಕ್ಕೆ ಸುಳ್ಳು ಹೇಳಿದ್ದೇಕೆ? ◆ಸಿಎಂ ಹುದ್ದೆಯ ಜವಾಬ್ದಾರಿ ಮರೆತು ‘ಫೇಕ್‌ನ್ಯೂಸ್’ ಹರಿಬಿಟ್ಟಿದ್ದೇಕೆ? ◆ಉದ್ಯೋಗ ಬಯಸುತ್ತಿರುವ ಯುವಕರಿಗೆ ಕಿವಿ ಮೇಲೆ ಹೂ ಇಟ್ಟಿದ್ದೇಕೆ?” ಎಂದು ಪ್ರಶ್ನೆ ಮಾಡಿದೆ.

”ಒಪ್ಪಂದವೇ ಆಗದೆ ಐಫೋನ್ ತಯಾರಿಕಾ ಘಟಕ ಸ್ಥಾಪನೆ ಆಗಿಯೇ ಬಿಡುತ್ತದೆ ಎಂದು ಕಿವಿ ಮೇಲೆ ಹೂ ಇಡುವ ಮೂಲಕ ಸುಳ್ಳೇ ಬಿಜೆಪಿಯ ಮನೆದೇವ್ರು ಎಂಬುದಕ್ಕೆ ಬಸವರಾಜ ಬೊಮ್ಮಾಯಿ ಅವರು ಮತ್ತೊಂದು ಪುರಾವೆ ಒದಗಿಸಿದ್ದಾರೆ! ಸುಳ್ಳು ಹೇಳುವ ಮೂಲಕ ಸಿಎಂ ಹುದ್ದೆಯ ಘನತೆಯನ್ನು, ಕರ್ನಾಟಕದ ಮರ್ಯಾದೆಯನ್ನು ಜಾಗತಿಕ ಮಟ್ಟದಲ್ಲಿ ಹರಾಜು ಹಾಕಿದ್ದಾರೆ” ಎಂದು ಕಾಂಗ್ರೆಸ್ ಟೀಕಿಸಿದೆ.

ಆತುರಗಾರನಿಗೆ ಬುದ್ದಿ ಮಂದ ಎನ್ನುತ್ತಾರೆ, ಬಸವರಾಜ ಬೊಮ್ಮಾಯಿ ಅವರದ್ದೂ ಹಾಗೇನಾ? ಅಂತಿಮ ಒಪ್ಪಂದವಾಗದೆ ಐಫೋನ್ ಘಟಕ ಸ್ಥಾಪನೆ ಆಗಿಯೇಬಿಟ್ಟಿತು ಎಂದು ಆತುರದಲ್ಲಿ ಘೋಷಿಸಿದ್ದೇಕೆ? ಕರ್ನಾಟಕದಲ್ಲಿ ಹೂಡಿಕೆ ಮಾಡಲು ಹೂಡಿಕೆದಾರರು ಹಿಂಜರಿಯುತ್ತಿರುವುದೇಕೆ? ರಾಜ್ಯದ ಜನರ ಕಿವಿ ಮೇಲೆ ಹೂ ಇಟ್ಟಿದ್ದೇಕೆ? ಫಾಕ್ಸ್‌ಕಾನ್ ಸಂಸ್ಥೆ ನಿರಾಕರಿಸಿದ್ದೇಕೆ? ಎಂದು ಕಾಂಗ್ರೆಸ್ ಘಟಕ ಪ್ರಶ್ನಿಸಿ ಟ್ವೀಟ್ ಮಾಡಿದೆ.

ಒಟ್ಟಾರೆ ಇಲ್ಲಿ ಬಸವರಾಜ ಬೊಮ್ಮಾಯಿ ಅವರು ನಗೆಪಾಟಲಿಗೆ ಈಡಾಗಿರುವುದು ಸುಳ್ಳಲ್ಲ. ಏಕೆಂದರೆ ಐ ಫೋನ್ ಘಟಕ ಸ್ಥಾಪನೆಯ ಒಪ್ಪಂದವೇ ಆಗದೇ ಅದಕ್ಕಾಗಿ ದೊಡ್ಡಬಳ್ಳಾಪುರ ಮತ್ತು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 300 ಎಕರೆ ಭೂಮಿಯನ್ನು ಗುರುತಿಸಿದ್ದಾರೆ.

ಎಲೆಕ್ಟ್ರಾನಿಕ್ಸ್ ಉತ್ಪಾದನಾ ಯೋಜನೆಯು ಮುಂದಿನ 10 ವರ್ಷಗಳಲ್ಲಿ ರಾಜ್ಯದೊಳಗಿನ 1,00,000 ಕ್ಕೂ ಹೆಚ್ಚು ಉದ್ಯೋಗಾವಕಾಶಗಳನ್ನು ಗಳಿಸುವ ನಿರೀಕ್ಷೆಯಿದೆ ಎಂದು ಸಿಎಂ ತಿಳಿಸಿದ್ದರು.

ಫಾಕ್ಸ್‌ಕಾನ್:- ಇದು ವಿಶ್ವದ ಅತಿದೊಡ್ಡ ಎಲೆಕ್ಟ್ರಾನಿಕ್ಸ್ ತಯಾರಕ ಕಂಪನಿಯಾಗಿದ್ದು, 2022 ರಲ್ಲಿ ಒಟ್ಟು ಆದಾಯವು ಹೊಸ ತೈವಾನ್ ಡಾಲರ್ 6 ಟ್ರಿಲಿಯನ್ ಅನ್ನು ಮೀರಿದೆ. ಕಳೆದ ವರ್ಷದಂತೆ, ಇದು ಫಾರ್ಚೂನ್ ಗ್ಲೋಬಲ್ 500ರಲ್ಲಿ 20 ನೇ ಸ್ಥಾನದಲ್ಲಿದೆ.

ಕಂಪನಿಯು ವಿಶ್ವದ 24 ದೇಶಗಳು ಅಥವಾ ಪ್ರದೇಶಗಳಲ್ಲಿ 173 ಕ್ಯಾಂಪಸ್‌ಗಳು ಮತ್ತು ಕಚೇರಿಗಳನ್ನು ಹೊಂದಿದೆ. ಕಂಪನಿಯ ಪ್ರಾಥಮಿಕ ಉತ್ಪನ್ನ ವಿಭಾಗಗಳಲ್ಲಿ ಸ್ಮಾರ್ಟ್ ಗ್ರಾಹಕ ಎಲೆಕ್ಟ್ರಾನಿಕ್ಸ್, ಉದಾಹರಣೆಗೆ ಸ್ಮಾರ್ಟ್‌ಫೋನ್‌ಗಳು, ಟಿವಿಗಳು, ಗೇಮ್ ಕನ್ಸೋಲ್‌ಗಳು, ಸರ್ವರ್‌ಗಳು ಮತ್ತು ಸಂವಹನ ನೆಟ್‌ವರ್ಕ್ ಅನ್ನು ಒಳಗೊಂಡಿರುವ ಕ್ಲೌಡ್ ಮತ್ತು ನೆಟ್‌ವರ್ಕಿಂಗ್ ಉತ್ಪನ್ನಗಳು ಸೇರಿವೆ; ಕಂಪ್ಯೂಟರ್, ಟ್ಯಾಬ್ಲೆಟ್‌ಗಳು ಮತ್ತು ಘಟಕಗಳಂತಹ ಕಂಪ್ಯೂಟಿಂಗ್ ಉತ್ಪನ್ನಗಳು ಮತ್ತು ಕನೆಕ್ಟರ್‌ಗಳು, ಯಾಂತ್ರಿಕ ಭಾಗಗಳು, ಸೇವೆಗಳು ಮುಂತಾದವುಗಳು(ಎಎನ್‌ಐ).

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...