Homeಕರ್ನಾಟಕಐಫೋನ್ ಘಟಕ ಸ್ಥಾಪನೆ- ಸುಳ್ಳು ಹೇಳಿ, ರಾಜ್ಯದ ಜನರ ಕಿವಿಗೆ ಹೂ ಇಟ್ಟ ಸಿಎಂ ಬೊಮ್ಮಾಯಿ:...

ಐಫೋನ್ ಘಟಕ ಸ್ಥಾಪನೆ- ಸುಳ್ಳು ಹೇಳಿ, ರಾಜ್ಯದ ಜನರ ಕಿವಿಗೆ ಹೂ ಇಟ್ಟ ಸಿಎಂ ಬೊಮ್ಮಾಯಿ: ಡಿಕೆ ಶಿವಕುಮಾರ್

- Advertisement -
- Advertisement -

”ಬಿಜೆಪಿಯವರು ರಾಜ್ಯದ ಜನರಿಗೆ ಸುಳ್ಳು ಹೇಳುತ್ತಿರುವುದು ಗೊತ್ತಾಗಿದೆ. ಒಂದು ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆಯನ್ನು ನೀಡಿದರು, ಅವರು ಯಾವ ಆಧಾರದ ಮೇಲೆ ಹೇಳಿದರೋ ಗೊತ್ತಿಲ್ಲ” ಎಂದು ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಅವರು ಭಾನುವಾರ ಹೇಳಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆ ಶಿವಕುಮಾರ್, ”BJP ಬಡಾಯಿ ಬ್ಯಾಂಕ್ ಬ್ಯಾಲೆನ್ಸ್ ನಲ್ಲಿ ಬರೀ ಸುಳ್ಳುಗಳೇ ತುಂಬಿವೆ. ಬೆಂಗಳೂರಲ್ಲಿ iPhone ತಯಾರಿಕಾ ಘಟಕ ಆರಂಭವಾಗಿ, 1 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಪುಂಗಿದ್ದ BJP, ರಾಜ್ಯದ ಮರ್ಯಾದೆಯನ್ನು ನಡುಬೀದಿಯಲ್ಲಿ ಹರಾಜು ಹಾಕಿದೆ. ಎಷ್ಟು ದಿನ ಅಂತಾ ಜನರ ಕಿವಿಗೆ ಹೂ ಇಡ್ತೀರಾ ಸಿಎಂ ಬಸವರಾಜ ಬೊಮ್ಮಾಯಿ ಅವರೇ? ಅಧಿಕಾರ ಹೋಗುವಾಗಲಾದರೂ ಸತ್ಯ ಹೇಳಬಾರದೇ?” ಎಂದು ಕೇಳಿದ್ದಾರೆ.

ರಾಜ್ಯದಲ್ಲಿ ಐಫೋನ್ ಉತ್ಪಾದನ ಘಟಕ ಆಗತ್ತದೆ, ಈ ಬಗ್ಗೆ ಫಾಕ್ಸ್‌ಕಾನ್‌ನೊಂದಿಗೆ ಒಪ್ಪಂದ ಆಗಿದೆ ಎಂದು ಸಿಎಂ ಹೇಳಿದ್ದರು. ಆ ಬಗ್ಗೆ ಫಾಕ್ಸ್‌ಕಾನ್ ಸ್ಪಷ್ಟನೆ ನೀಡಿದ್ದು, ನಾವು ಭಾರತದಲ್ಲಿ ಹೊಸ ಹೂಡಿಕೆಗೆ ಸಂಬಂಧಿಸಿದಂತೆ ”ಯಾವುದೇ ಖಚಿತ, ನಿರ್ಣಾಯಕ ಒಪ್ಪಂದಗಳನ್ನು ಮಾಡಿಕೊಂಡಿಲ್ಲ” ಎಂದು ಹೇಳಿದೆ. ಇದೀಗ ಬೊಮ್ಮಾಯಿ ಸುಳ್ಳು ಹೇಳಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ.

”ಬೆಂಗಳೂರಿನ ಐಫೋನ್ ಉತ್ಪಾದನಾ ಘಟಕ ತೆರೆಯಲಾಗುತ್ತದೆ ಎಂಬ ಸಿಎಂ ಹೇಳಿಕೆಯನ್ನು ಫಾಕ್ಸ್‌ಕಾನ್ ನಿರಾಕರಿಸಿದೆ. ಸುಳ್ಳೇ ಬಿಜೆಪಿಯ ಮನೆದೇವ್ರು ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಸ್ವತಃ ಸಿಎಂ ಸುಳ್ಳು ಹೇಳಿದ್ದು ನಾಚಿಕೆಗೇಡಿನ ಸಂಗತಿ. ಬಸವರಾಜ ಬೊಮ್ಮಾಯಿ ಅವರೇ, ತಾವು ಬಲು ಶಾಣ್ಯ ಇದಿರ್ರಿ.. ಬಾಳ್ ಚೆನ್ನಾಗಿ ಕಿವಿ ಮೇಲೆ ಹೂ ಇಡ್ತಿರ್ರಿ!!” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಭಾರತದಲ್ಲಿ ಯಾವುದೇ ಹೊಸ ಹೂಡಿಕೆ ಒಪ್ಪಂದವಾಗಿಲ್ಲ: ಬೊಮ್ಮಾಯಿ ಹೇಳಿಕೆ ತಳ್ಳಿಹಾಕಿದ ಫಾಕ್ಸ್‌ಕಾನ್

”ಫಾಕ್ಸ್‌ಕಾನ್ ಕಂಪೆನಿಯೊಂದಿಗೆ ಒಪ್ಪಂದಕ್ಕೆ ಸಹಿ ಮಾಡಲಾಯ್ತು ಎಂದಿರುವ ಬಸವರಾಜ ಬೊಮ್ಮಾಯಿ  ಅವರೇ, ನಿಮ್ಮ ಹೇಳಿಕೆಯನ್ನು ಕಂಪೆನಿ ನಿರಾಕರಿಸಿದೆ. ◆ರಾಜ್ಯಕ್ಕೆ ಸುಳ್ಳು ಹೇಳಿದ್ದೇಕೆ? ◆ಸಿಎಂ ಹುದ್ದೆಯ ಜವಾಬ್ದಾರಿ ಮರೆತು ‘ಫೇಕ್‌ನ್ಯೂಸ್’ ಹರಿಬಿಟ್ಟಿದ್ದೇಕೆ? ◆ಉದ್ಯೋಗ ಬಯಸುತ್ತಿರುವ ಯುವಕರಿಗೆ ಕಿವಿ ಮೇಲೆ ಹೂ ಇಟ್ಟಿದ್ದೇಕೆ?” ಎಂದು ಪ್ರಶ್ನೆ ಮಾಡಿದೆ.

”ಒಪ್ಪಂದವೇ ಆಗದೆ ಐಫೋನ್ ತಯಾರಿಕಾ ಘಟಕ ಸ್ಥಾಪನೆ ಆಗಿಯೇ ಬಿಡುತ್ತದೆ ಎಂದು ಕಿವಿ ಮೇಲೆ ಹೂ ಇಡುವ ಮೂಲಕ ಸುಳ್ಳೇ ಬಿಜೆಪಿಯ ಮನೆದೇವ್ರು ಎಂಬುದಕ್ಕೆ ಬಸವರಾಜ ಬೊಮ್ಮಾಯಿ ಅವರು ಮತ್ತೊಂದು ಪುರಾವೆ ಒದಗಿಸಿದ್ದಾರೆ! ಸುಳ್ಳು ಹೇಳುವ ಮೂಲಕ ಸಿಎಂ ಹುದ್ದೆಯ ಘನತೆಯನ್ನು, ಕರ್ನಾಟಕದ ಮರ್ಯಾದೆಯನ್ನು ಜಾಗತಿಕ ಮಟ್ಟದಲ್ಲಿ ಹರಾಜು ಹಾಕಿದ್ದಾರೆ” ಎಂದು ಕಾಂಗ್ರೆಸ್ ಟೀಕಿಸಿದೆ.

ಆತುರಗಾರನಿಗೆ ಬುದ್ದಿ ಮಂದ ಎನ್ನುತ್ತಾರೆ, ಬಸವರಾಜ ಬೊಮ್ಮಾಯಿ ಅವರದ್ದೂ ಹಾಗೇನಾ? ಅಂತಿಮ ಒಪ್ಪಂದವಾಗದೆ ಐಫೋನ್ ಘಟಕ ಸ್ಥಾಪನೆ ಆಗಿಯೇಬಿಟ್ಟಿತು ಎಂದು ಆತುರದಲ್ಲಿ ಘೋಷಿಸಿದ್ದೇಕೆ? ಕರ್ನಾಟಕದಲ್ಲಿ ಹೂಡಿಕೆ ಮಾಡಲು ಹೂಡಿಕೆದಾರರು ಹಿಂಜರಿಯುತ್ತಿರುವುದೇಕೆ? ರಾಜ್ಯದ ಜನರ ಕಿವಿ ಮೇಲೆ ಹೂ ಇಟ್ಟಿದ್ದೇಕೆ? ಫಾಕ್ಸ್‌ಕಾನ್ ಸಂಸ್ಥೆ ನಿರಾಕರಿಸಿದ್ದೇಕೆ? ಎಂದು ಕಾಂಗ್ರೆಸ್ ಘಟಕ ಪ್ರಶ್ನಿಸಿ ಟ್ವೀಟ್ ಮಾಡಿದೆ.

ಒಟ್ಟಾರೆ ಇಲ್ಲಿ ಬಸವರಾಜ ಬೊಮ್ಮಾಯಿ ಅವರು ನಗೆಪಾಟಲಿಗೆ ಈಡಾಗಿರುವುದು ಸುಳ್ಳಲ್ಲ. ಏಕೆಂದರೆ ಐ ಫೋನ್ ಘಟಕ ಸ್ಥಾಪನೆಯ ಒಪ್ಪಂದವೇ ಆಗದೇ ಅದಕ್ಕಾಗಿ ದೊಡ್ಡಬಳ್ಳಾಪುರ ಮತ್ತು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 300 ಎಕರೆ ಭೂಮಿಯನ್ನು ಗುರುತಿಸಿದ್ದಾರೆ.

ಎಲೆಕ್ಟ್ರಾನಿಕ್ಸ್ ಉತ್ಪಾದನಾ ಯೋಜನೆಯು ಮುಂದಿನ 10 ವರ್ಷಗಳಲ್ಲಿ ರಾಜ್ಯದೊಳಗಿನ 1,00,000 ಕ್ಕೂ ಹೆಚ್ಚು ಉದ್ಯೋಗಾವಕಾಶಗಳನ್ನು ಗಳಿಸುವ ನಿರೀಕ್ಷೆಯಿದೆ ಎಂದು ಸಿಎಂ ತಿಳಿಸಿದ್ದರು.

ಫಾಕ್ಸ್‌ಕಾನ್:- ಇದು ವಿಶ್ವದ ಅತಿದೊಡ್ಡ ಎಲೆಕ್ಟ್ರಾನಿಕ್ಸ್ ತಯಾರಕ ಕಂಪನಿಯಾಗಿದ್ದು, 2022 ರಲ್ಲಿ ಒಟ್ಟು ಆದಾಯವು ಹೊಸ ತೈವಾನ್ ಡಾಲರ್ 6 ಟ್ರಿಲಿಯನ್ ಅನ್ನು ಮೀರಿದೆ. ಕಳೆದ ವರ್ಷದಂತೆ, ಇದು ಫಾರ್ಚೂನ್ ಗ್ಲೋಬಲ್ 500ರಲ್ಲಿ 20 ನೇ ಸ್ಥಾನದಲ್ಲಿದೆ.

ಕಂಪನಿಯು ವಿಶ್ವದ 24 ದೇಶಗಳು ಅಥವಾ ಪ್ರದೇಶಗಳಲ್ಲಿ 173 ಕ್ಯಾಂಪಸ್‌ಗಳು ಮತ್ತು ಕಚೇರಿಗಳನ್ನು ಹೊಂದಿದೆ. ಕಂಪನಿಯ ಪ್ರಾಥಮಿಕ ಉತ್ಪನ್ನ ವಿಭಾಗಗಳಲ್ಲಿ ಸ್ಮಾರ್ಟ್ ಗ್ರಾಹಕ ಎಲೆಕ್ಟ್ರಾನಿಕ್ಸ್, ಉದಾಹರಣೆಗೆ ಸ್ಮಾರ್ಟ್‌ಫೋನ್‌ಗಳು, ಟಿವಿಗಳು, ಗೇಮ್ ಕನ್ಸೋಲ್‌ಗಳು, ಸರ್ವರ್‌ಗಳು ಮತ್ತು ಸಂವಹನ ನೆಟ್‌ವರ್ಕ್ ಅನ್ನು ಒಳಗೊಂಡಿರುವ ಕ್ಲೌಡ್ ಮತ್ತು ನೆಟ್‌ವರ್ಕಿಂಗ್ ಉತ್ಪನ್ನಗಳು ಸೇರಿವೆ; ಕಂಪ್ಯೂಟರ್, ಟ್ಯಾಬ್ಲೆಟ್‌ಗಳು ಮತ್ತು ಘಟಕಗಳಂತಹ ಕಂಪ್ಯೂಟಿಂಗ್ ಉತ್ಪನ್ನಗಳು ಮತ್ತು ಕನೆಕ್ಟರ್‌ಗಳು, ಯಾಂತ್ರಿಕ ಭಾಗಗಳು, ಸೇವೆಗಳು ಮುಂತಾದವುಗಳು(ಎಎನ್‌ಐ).

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...