Homeಕರ್ನಾಟಕಐಫೋನ್ ಘಟಕ ಸ್ಥಾಪನೆ- ಸುಳ್ಳು ಹೇಳಿ, ರಾಜ್ಯದ ಜನರ ಕಿವಿಗೆ ಹೂ ಇಟ್ಟ ಸಿಎಂ ಬೊಮ್ಮಾಯಿ:...

ಐಫೋನ್ ಘಟಕ ಸ್ಥಾಪನೆ- ಸುಳ್ಳು ಹೇಳಿ, ರಾಜ್ಯದ ಜನರ ಕಿವಿಗೆ ಹೂ ಇಟ್ಟ ಸಿಎಂ ಬೊಮ್ಮಾಯಿ: ಡಿಕೆ ಶಿವಕುಮಾರ್

- Advertisement -
- Advertisement -

”ಬಿಜೆಪಿಯವರು ರಾಜ್ಯದ ಜನರಿಗೆ ಸುಳ್ಳು ಹೇಳುತ್ತಿರುವುದು ಗೊತ್ತಾಗಿದೆ. ಒಂದು ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆಯನ್ನು ನೀಡಿದರು, ಅವರು ಯಾವ ಆಧಾರದ ಮೇಲೆ ಹೇಳಿದರೋ ಗೊತ್ತಿಲ್ಲ” ಎಂದು ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಅವರು ಭಾನುವಾರ ಹೇಳಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆ ಶಿವಕುಮಾರ್, ”BJP ಬಡಾಯಿ ಬ್ಯಾಂಕ್ ಬ್ಯಾಲೆನ್ಸ್ ನಲ್ಲಿ ಬರೀ ಸುಳ್ಳುಗಳೇ ತುಂಬಿವೆ. ಬೆಂಗಳೂರಲ್ಲಿ iPhone ತಯಾರಿಕಾ ಘಟಕ ಆರಂಭವಾಗಿ, 1 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಪುಂಗಿದ್ದ BJP, ರಾಜ್ಯದ ಮರ್ಯಾದೆಯನ್ನು ನಡುಬೀದಿಯಲ್ಲಿ ಹರಾಜು ಹಾಕಿದೆ. ಎಷ್ಟು ದಿನ ಅಂತಾ ಜನರ ಕಿವಿಗೆ ಹೂ ಇಡ್ತೀರಾ ಸಿಎಂ ಬಸವರಾಜ ಬೊಮ್ಮಾಯಿ ಅವರೇ? ಅಧಿಕಾರ ಹೋಗುವಾಗಲಾದರೂ ಸತ್ಯ ಹೇಳಬಾರದೇ?” ಎಂದು ಕೇಳಿದ್ದಾರೆ.

ರಾಜ್ಯದಲ್ಲಿ ಐಫೋನ್ ಉತ್ಪಾದನ ಘಟಕ ಆಗತ್ತದೆ, ಈ ಬಗ್ಗೆ ಫಾಕ್ಸ್‌ಕಾನ್‌ನೊಂದಿಗೆ ಒಪ್ಪಂದ ಆಗಿದೆ ಎಂದು ಸಿಎಂ ಹೇಳಿದ್ದರು. ಆ ಬಗ್ಗೆ ಫಾಕ್ಸ್‌ಕಾನ್ ಸ್ಪಷ್ಟನೆ ನೀಡಿದ್ದು, ನಾವು ಭಾರತದಲ್ಲಿ ಹೊಸ ಹೂಡಿಕೆಗೆ ಸಂಬಂಧಿಸಿದಂತೆ ”ಯಾವುದೇ ಖಚಿತ, ನಿರ್ಣಾಯಕ ಒಪ್ಪಂದಗಳನ್ನು ಮಾಡಿಕೊಂಡಿಲ್ಲ” ಎಂದು ಹೇಳಿದೆ. ಇದೀಗ ಬೊಮ್ಮಾಯಿ ಸುಳ್ಳು ಹೇಳಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ.

”ಬೆಂಗಳೂರಿನ ಐಫೋನ್ ಉತ್ಪಾದನಾ ಘಟಕ ತೆರೆಯಲಾಗುತ್ತದೆ ಎಂಬ ಸಿಎಂ ಹೇಳಿಕೆಯನ್ನು ಫಾಕ್ಸ್‌ಕಾನ್ ನಿರಾಕರಿಸಿದೆ. ಸುಳ್ಳೇ ಬಿಜೆಪಿಯ ಮನೆದೇವ್ರು ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಸ್ವತಃ ಸಿಎಂ ಸುಳ್ಳು ಹೇಳಿದ್ದು ನಾಚಿಕೆಗೇಡಿನ ಸಂಗತಿ. ಬಸವರಾಜ ಬೊಮ್ಮಾಯಿ ಅವರೇ, ತಾವು ಬಲು ಶಾಣ್ಯ ಇದಿರ್ರಿ.. ಬಾಳ್ ಚೆನ್ನಾಗಿ ಕಿವಿ ಮೇಲೆ ಹೂ ಇಡ್ತಿರ್ರಿ!!” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಭಾರತದಲ್ಲಿ ಯಾವುದೇ ಹೊಸ ಹೂಡಿಕೆ ಒಪ್ಪಂದವಾಗಿಲ್ಲ: ಬೊಮ್ಮಾಯಿ ಹೇಳಿಕೆ ತಳ್ಳಿಹಾಕಿದ ಫಾಕ್ಸ್‌ಕಾನ್

”ಫಾಕ್ಸ್‌ಕಾನ್ ಕಂಪೆನಿಯೊಂದಿಗೆ ಒಪ್ಪಂದಕ್ಕೆ ಸಹಿ ಮಾಡಲಾಯ್ತು ಎಂದಿರುವ ಬಸವರಾಜ ಬೊಮ್ಮಾಯಿ  ಅವರೇ, ನಿಮ್ಮ ಹೇಳಿಕೆಯನ್ನು ಕಂಪೆನಿ ನಿರಾಕರಿಸಿದೆ. ◆ರಾಜ್ಯಕ್ಕೆ ಸುಳ್ಳು ಹೇಳಿದ್ದೇಕೆ? ◆ಸಿಎಂ ಹುದ್ದೆಯ ಜವಾಬ್ದಾರಿ ಮರೆತು ‘ಫೇಕ್‌ನ್ಯೂಸ್’ ಹರಿಬಿಟ್ಟಿದ್ದೇಕೆ? ◆ಉದ್ಯೋಗ ಬಯಸುತ್ತಿರುವ ಯುವಕರಿಗೆ ಕಿವಿ ಮೇಲೆ ಹೂ ಇಟ್ಟಿದ್ದೇಕೆ?” ಎಂದು ಪ್ರಶ್ನೆ ಮಾಡಿದೆ.

”ಒಪ್ಪಂದವೇ ಆಗದೆ ಐಫೋನ್ ತಯಾರಿಕಾ ಘಟಕ ಸ್ಥಾಪನೆ ಆಗಿಯೇ ಬಿಡುತ್ತದೆ ಎಂದು ಕಿವಿ ಮೇಲೆ ಹೂ ಇಡುವ ಮೂಲಕ ಸುಳ್ಳೇ ಬಿಜೆಪಿಯ ಮನೆದೇವ್ರು ಎಂಬುದಕ್ಕೆ ಬಸವರಾಜ ಬೊಮ್ಮಾಯಿ ಅವರು ಮತ್ತೊಂದು ಪುರಾವೆ ಒದಗಿಸಿದ್ದಾರೆ! ಸುಳ್ಳು ಹೇಳುವ ಮೂಲಕ ಸಿಎಂ ಹುದ್ದೆಯ ಘನತೆಯನ್ನು, ಕರ್ನಾಟಕದ ಮರ್ಯಾದೆಯನ್ನು ಜಾಗತಿಕ ಮಟ್ಟದಲ್ಲಿ ಹರಾಜು ಹಾಕಿದ್ದಾರೆ” ಎಂದು ಕಾಂಗ್ರೆಸ್ ಟೀಕಿಸಿದೆ.

ಆತುರಗಾರನಿಗೆ ಬುದ್ದಿ ಮಂದ ಎನ್ನುತ್ತಾರೆ, ಬಸವರಾಜ ಬೊಮ್ಮಾಯಿ ಅವರದ್ದೂ ಹಾಗೇನಾ? ಅಂತಿಮ ಒಪ್ಪಂದವಾಗದೆ ಐಫೋನ್ ಘಟಕ ಸ್ಥಾಪನೆ ಆಗಿಯೇಬಿಟ್ಟಿತು ಎಂದು ಆತುರದಲ್ಲಿ ಘೋಷಿಸಿದ್ದೇಕೆ? ಕರ್ನಾಟಕದಲ್ಲಿ ಹೂಡಿಕೆ ಮಾಡಲು ಹೂಡಿಕೆದಾರರು ಹಿಂಜರಿಯುತ್ತಿರುವುದೇಕೆ? ರಾಜ್ಯದ ಜನರ ಕಿವಿ ಮೇಲೆ ಹೂ ಇಟ್ಟಿದ್ದೇಕೆ? ಫಾಕ್ಸ್‌ಕಾನ್ ಸಂಸ್ಥೆ ನಿರಾಕರಿಸಿದ್ದೇಕೆ? ಎಂದು ಕಾಂಗ್ರೆಸ್ ಘಟಕ ಪ್ರಶ್ನಿಸಿ ಟ್ವೀಟ್ ಮಾಡಿದೆ.

ಒಟ್ಟಾರೆ ಇಲ್ಲಿ ಬಸವರಾಜ ಬೊಮ್ಮಾಯಿ ಅವರು ನಗೆಪಾಟಲಿಗೆ ಈಡಾಗಿರುವುದು ಸುಳ್ಳಲ್ಲ. ಏಕೆಂದರೆ ಐ ಫೋನ್ ಘಟಕ ಸ್ಥಾಪನೆಯ ಒಪ್ಪಂದವೇ ಆಗದೇ ಅದಕ್ಕಾಗಿ ದೊಡ್ಡಬಳ್ಳಾಪುರ ಮತ್ತು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 300 ಎಕರೆ ಭೂಮಿಯನ್ನು ಗುರುತಿಸಿದ್ದಾರೆ.

ಎಲೆಕ್ಟ್ರಾನಿಕ್ಸ್ ಉತ್ಪಾದನಾ ಯೋಜನೆಯು ಮುಂದಿನ 10 ವರ್ಷಗಳಲ್ಲಿ ರಾಜ್ಯದೊಳಗಿನ 1,00,000 ಕ್ಕೂ ಹೆಚ್ಚು ಉದ್ಯೋಗಾವಕಾಶಗಳನ್ನು ಗಳಿಸುವ ನಿರೀಕ್ಷೆಯಿದೆ ಎಂದು ಸಿಎಂ ತಿಳಿಸಿದ್ದರು.

ಫಾಕ್ಸ್‌ಕಾನ್:- ಇದು ವಿಶ್ವದ ಅತಿದೊಡ್ಡ ಎಲೆಕ್ಟ್ರಾನಿಕ್ಸ್ ತಯಾರಕ ಕಂಪನಿಯಾಗಿದ್ದು, 2022 ರಲ್ಲಿ ಒಟ್ಟು ಆದಾಯವು ಹೊಸ ತೈವಾನ್ ಡಾಲರ್ 6 ಟ್ರಿಲಿಯನ್ ಅನ್ನು ಮೀರಿದೆ. ಕಳೆದ ವರ್ಷದಂತೆ, ಇದು ಫಾರ್ಚೂನ್ ಗ್ಲೋಬಲ್ 500ರಲ್ಲಿ 20 ನೇ ಸ್ಥಾನದಲ್ಲಿದೆ.

ಕಂಪನಿಯು ವಿಶ್ವದ 24 ದೇಶಗಳು ಅಥವಾ ಪ್ರದೇಶಗಳಲ್ಲಿ 173 ಕ್ಯಾಂಪಸ್‌ಗಳು ಮತ್ತು ಕಚೇರಿಗಳನ್ನು ಹೊಂದಿದೆ. ಕಂಪನಿಯ ಪ್ರಾಥಮಿಕ ಉತ್ಪನ್ನ ವಿಭಾಗಗಳಲ್ಲಿ ಸ್ಮಾರ್ಟ್ ಗ್ರಾಹಕ ಎಲೆಕ್ಟ್ರಾನಿಕ್ಸ್, ಉದಾಹರಣೆಗೆ ಸ್ಮಾರ್ಟ್‌ಫೋನ್‌ಗಳು, ಟಿವಿಗಳು, ಗೇಮ್ ಕನ್ಸೋಲ್‌ಗಳು, ಸರ್ವರ್‌ಗಳು ಮತ್ತು ಸಂವಹನ ನೆಟ್‌ವರ್ಕ್ ಅನ್ನು ಒಳಗೊಂಡಿರುವ ಕ್ಲೌಡ್ ಮತ್ತು ನೆಟ್‌ವರ್ಕಿಂಗ್ ಉತ್ಪನ್ನಗಳು ಸೇರಿವೆ; ಕಂಪ್ಯೂಟರ್, ಟ್ಯಾಬ್ಲೆಟ್‌ಗಳು ಮತ್ತು ಘಟಕಗಳಂತಹ ಕಂಪ್ಯೂಟಿಂಗ್ ಉತ್ಪನ್ನಗಳು ಮತ್ತು ಕನೆಕ್ಟರ್‌ಗಳು, ಯಾಂತ್ರಿಕ ಭಾಗಗಳು, ಸೇವೆಗಳು ಮುಂತಾದವುಗಳು(ಎಎನ್‌ಐ).

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...