Homeಕರ್ನಾಟಕಐಫೋನ್ ಘಟಕ ಸ್ಥಾಪನೆ- ಸುಳ್ಳು ಹೇಳಿ, ರಾಜ್ಯದ ಜನರ ಕಿವಿಗೆ ಹೂ ಇಟ್ಟ ಸಿಎಂ ಬೊಮ್ಮಾಯಿ:...

ಐಫೋನ್ ಘಟಕ ಸ್ಥಾಪನೆ- ಸುಳ್ಳು ಹೇಳಿ, ರಾಜ್ಯದ ಜನರ ಕಿವಿಗೆ ಹೂ ಇಟ್ಟ ಸಿಎಂ ಬೊಮ್ಮಾಯಿ: ಡಿಕೆ ಶಿವಕುಮಾರ್

- Advertisement -
- Advertisement -

”ಬಿಜೆಪಿಯವರು ರಾಜ್ಯದ ಜನರಿಗೆ ಸುಳ್ಳು ಹೇಳುತ್ತಿರುವುದು ಗೊತ್ತಾಗಿದೆ. ಒಂದು ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆಯನ್ನು ನೀಡಿದರು, ಅವರು ಯಾವ ಆಧಾರದ ಮೇಲೆ ಹೇಳಿದರೋ ಗೊತ್ತಿಲ್ಲ” ಎಂದು ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಅವರು ಭಾನುವಾರ ಹೇಳಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆ ಶಿವಕುಮಾರ್, ”BJP ಬಡಾಯಿ ಬ್ಯಾಂಕ್ ಬ್ಯಾಲೆನ್ಸ್ ನಲ್ಲಿ ಬರೀ ಸುಳ್ಳುಗಳೇ ತುಂಬಿವೆ. ಬೆಂಗಳೂರಲ್ಲಿ iPhone ತಯಾರಿಕಾ ಘಟಕ ಆರಂಭವಾಗಿ, 1 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಪುಂಗಿದ್ದ BJP, ರಾಜ್ಯದ ಮರ್ಯಾದೆಯನ್ನು ನಡುಬೀದಿಯಲ್ಲಿ ಹರಾಜು ಹಾಕಿದೆ. ಎಷ್ಟು ದಿನ ಅಂತಾ ಜನರ ಕಿವಿಗೆ ಹೂ ಇಡ್ತೀರಾ ಸಿಎಂ ಬಸವರಾಜ ಬೊಮ್ಮಾಯಿ ಅವರೇ? ಅಧಿಕಾರ ಹೋಗುವಾಗಲಾದರೂ ಸತ್ಯ ಹೇಳಬಾರದೇ?” ಎಂದು ಕೇಳಿದ್ದಾರೆ.

ರಾಜ್ಯದಲ್ಲಿ ಐಫೋನ್ ಉತ್ಪಾದನ ಘಟಕ ಆಗತ್ತದೆ, ಈ ಬಗ್ಗೆ ಫಾಕ್ಸ್‌ಕಾನ್‌ನೊಂದಿಗೆ ಒಪ್ಪಂದ ಆಗಿದೆ ಎಂದು ಸಿಎಂ ಹೇಳಿದ್ದರು. ಆ ಬಗ್ಗೆ ಫಾಕ್ಸ್‌ಕಾನ್ ಸ್ಪಷ್ಟನೆ ನೀಡಿದ್ದು, ನಾವು ಭಾರತದಲ್ಲಿ ಹೊಸ ಹೂಡಿಕೆಗೆ ಸಂಬಂಧಿಸಿದಂತೆ ”ಯಾವುದೇ ಖಚಿತ, ನಿರ್ಣಾಯಕ ಒಪ್ಪಂದಗಳನ್ನು ಮಾಡಿಕೊಂಡಿಲ್ಲ” ಎಂದು ಹೇಳಿದೆ. ಇದೀಗ ಬೊಮ್ಮಾಯಿ ಸುಳ್ಳು ಹೇಳಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ.

”ಬೆಂಗಳೂರಿನ ಐಫೋನ್ ಉತ್ಪಾದನಾ ಘಟಕ ತೆರೆಯಲಾಗುತ್ತದೆ ಎಂಬ ಸಿಎಂ ಹೇಳಿಕೆಯನ್ನು ಫಾಕ್ಸ್‌ಕಾನ್ ನಿರಾಕರಿಸಿದೆ. ಸುಳ್ಳೇ ಬಿಜೆಪಿಯ ಮನೆದೇವ್ರು ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಸ್ವತಃ ಸಿಎಂ ಸುಳ್ಳು ಹೇಳಿದ್ದು ನಾಚಿಕೆಗೇಡಿನ ಸಂಗತಿ. ಬಸವರಾಜ ಬೊಮ್ಮಾಯಿ ಅವರೇ, ತಾವು ಬಲು ಶಾಣ್ಯ ಇದಿರ್ರಿ.. ಬಾಳ್ ಚೆನ್ನಾಗಿ ಕಿವಿ ಮೇಲೆ ಹೂ ಇಡ್ತಿರ್ರಿ!!” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಭಾರತದಲ್ಲಿ ಯಾವುದೇ ಹೊಸ ಹೂಡಿಕೆ ಒಪ್ಪಂದವಾಗಿಲ್ಲ: ಬೊಮ್ಮಾಯಿ ಹೇಳಿಕೆ ತಳ್ಳಿಹಾಕಿದ ಫಾಕ್ಸ್‌ಕಾನ್

”ಫಾಕ್ಸ್‌ಕಾನ್ ಕಂಪೆನಿಯೊಂದಿಗೆ ಒಪ್ಪಂದಕ್ಕೆ ಸಹಿ ಮಾಡಲಾಯ್ತು ಎಂದಿರುವ ಬಸವರಾಜ ಬೊಮ್ಮಾಯಿ  ಅವರೇ, ನಿಮ್ಮ ಹೇಳಿಕೆಯನ್ನು ಕಂಪೆನಿ ನಿರಾಕರಿಸಿದೆ. ◆ರಾಜ್ಯಕ್ಕೆ ಸುಳ್ಳು ಹೇಳಿದ್ದೇಕೆ? ◆ಸಿಎಂ ಹುದ್ದೆಯ ಜವಾಬ್ದಾರಿ ಮರೆತು ‘ಫೇಕ್‌ನ್ಯೂಸ್’ ಹರಿಬಿಟ್ಟಿದ್ದೇಕೆ? ◆ಉದ್ಯೋಗ ಬಯಸುತ್ತಿರುವ ಯುವಕರಿಗೆ ಕಿವಿ ಮೇಲೆ ಹೂ ಇಟ್ಟಿದ್ದೇಕೆ?” ಎಂದು ಪ್ರಶ್ನೆ ಮಾಡಿದೆ.

”ಒಪ್ಪಂದವೇ ಆಗದೆ ಐಫೋನ್ ತಯಾರಿಕಾ ಘಟಕ ಸ್ಥಾಪನೆ ಆಗಿಯೇ ಬಿಡುತ್ತದೆ ಎಂದು ಕಿವಿ ಮೇಲೆ ಹೂ ಇಡುವ ಮೂಲಕ ಸುಳ್ಳೇ ಬಿಜೆಪಿಯ ಮನೆದೇವ್ರು ಎಂಬುದಕ್ಕೆ ಬಸವರಾಜ ಬೊಮ್ಮಾಯಿ ಅವರು ಮತ್ತೊಂದು ಪುರಾವೆ ಒದಗಿಸಿದ್ದಾರೆ! ಸುಳ್ಳು ಹೇಳುವ ಮೂಲಕ ಸಿಎಂ ಹುದ್ದೆಯ ಘನತೆಯನ್ನು, ಕರ್ನಾಟಕದ ಮರ್ಯಾದೆಯನ್ನು ಜಾಗತಿಕ ಮಟ್ಟದಲ್ಲಿ ಹರಾಜು ಹಾಕಿದ್ದಾರೆ” ಎಂದು ಕಾಂಗ್ರೆಸ್ ಟೀಕಿಸಿದೆ.

ಆತುರಗಾರನಿಗೆ ಬುದ್ದಿ ಮಂದ ಎನ್ನುತ್ತಾರೆ, ಬಸವರಾಜ ಬೊಮ್ಮಾಯಿ ಅವರದ್ದೂ ಹಾಗೇನಾ? ಅಂತಿಮ ಒಪ್ಪಂದವಾಗದೆ ಐಫೋನ್ ಘಟಕ ಸ್ಥಾಪನೆ ಆಗಿಯೇಬಿಟ್ಟಿತು ಎಂದು ಆತುರದಲ್ಲಿ ಘೋಷಿಸಿದ್ದೇಕೆ? ಕರ್ನಾಟಕದಲ್ಲಿ ಹೂಡಿಕೆ ಮಾಡಲು ಹೂಡಿಕೆದಾರರು ಹಿಂಜರಿಯುತ್ತಿರುವುದೇಕೆ? ರಾಜ್ಯದ ಜನರ ಕಿವಿ ಮೇಲೆ ಹೂ ಇಟ್ಟಿದ್ದೇಕೆ? ಫಾಕ್ಸ್‌ಕಾನ್ ಸಂಸ್ಥೆ ನಿರಾಕರಿಸಿದ್ದೇಕೆ? ಎಂದು ಕಾಂಗ್ರೆಸ್ ಘಟಕ ಪ್ರಶ್ನಿಸಿ ಟ್ವೀಟ್ ಮಾಡಿದೆ.

ಒಟ್ಟಾರೆ ಇಲ್ಲಿ ಬಸವರಾಜ ಬೊಮ್ಮಾಯಿ ಅವರು ನಗೆಪಾಟಲಿಗೆ ಈಡಾಗಿರುವುದು ಸುಳ್ಳಲ್ಲ. ಏಕೆಂದರೆ ಐ ಫೋನ್ ಘಟಕ ಸ್ಥಾಪನೆಯ ಒಪ್ಪಂದವೇ ಆಗದೇ ಅದಕ್ಕಾಗಿ ದೊಡ್ಡಬಳ್ಳಾಪುರ ಮತ್ತು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 300 ಎಕರೆ ಭೂಮಿಯನ್ನು ಗುರುತಿಸಿದ್ದಾರೆ.

ಎಲೆಕ್ಟ್ರಾನಿಕ್ಸ್ ಉತ್ಪಾದನಾ ಯೋಜನೆಯು ಮುಂದಿನ 10 ವರ್ಷಗಳಲ್ಲಿ ರಾಜ್ಯದೊಳಗಿನ 1,00,000 ಕ್ಕೂ ಹೆಚ್ಚು ಉದ್ಯೋಗಾವಕಾಶಗಳನ್ನು ಗಳಿಸುವ ನಿರೀಕ್ಷೆಯಿದೆ ಎಂದು ಸಿಎಂ ತಿಳಿಸಿದ್ದರು.

ಫಾಕ್ಸ್‌ಕಾನ್:- ಇದು ವಿಶ್ವದ ಅತಿದೊಡ್ಡ ಎಲೆಕ್ಟ್ರಾನಿಕ್ಸ್ ತಯಾರಕ ಕಂಪನಿಯಾಗಿದ್ದು, 2022 ರಲ್ಲಿ ಒಟ್ಟು ಆದಾಯವು ಹೊಸ ತೈವಾನ್ ಡಾಲರ್ 6 ಟ್ರಿಲಿಯನ್ ಅನ್ನು ಮೀರಿದೆ. ಕಳೆದ ವರ್ಷದಂತೆ, ಇದು ಫಾರ್ಚೂನ್ ಗ್ಲೋಬಲ್ 500ರಲ್ಲಿ 20 ನೇ ಸ್ಥಾನದಲ್ಲಿದೆ.

ಕಂಪನಿಯು ವಿಶ್ವದ 24 ದೇಶಗಳು ಅಥವಾ ಪ್ರದೇಶಗಳಲ್ಲಿ 173 ಕ್ಯಾಂಪಸ್‌ಗಳು ಮತ್ತು ಕಚೇರಿಗಳನ್ನು ಹೊಂದಿದೆ. ಕಂಪನಿಯ ಪ್ರಾಥಮಿಕ ಉತ್ಪನ್ನ ವಿಭಾಗಗಳಲ್ಲಿ ಸ್ಮಾರ್ಟ್ ಗ್ರಾಹಕ ಎಲೆಕ್ಟ್ರಾನಿಕ್ಸ್, ಉದಾಹರಣೆಗೆ ಸ್ಮಾರ್ಟ್‌ಫೋನ್‌ಗಳು, ಟಿವಿಗಳು, ಗೇಮ್ ಕನ್ಸೋಲ್‌ಗಳು, ಸರ್ವರ್‌ಗಳು ಮತ್ತು ಸಂವಹನ ನೆಟ್‌ವರ್ಕ್ ಅನ್ನು ಒಳಗೊಂಡಿರುವ ಕ್ಲೌಡ್ ಮತ್ತು ನೆಟ್‌ವರ್ಕಿಂಗ್ ಉತ್ಪನ್ನಗಳು ಸೇರಿವೆ; ಕಂಪ್ಯೂಟರ್, ಟ್ಯಾಬ್ಲೆಟ್‌ಗಳು ಮತ್ತು ಘಟಕಗಳಂತಹ ಕಂಪ್ಯೂಟಿಂಗ್ ಉತ್ಪನ್ನಗಳು ಮತ್ತು ಕನೆಕ್ಟರ್‌ಗಳು, ಯಾಂತ್ರಿಕ ಭಾಗಗಳು, ಸೇವೆಗಳು ಮುಂತಾದವುಗಳು(ಎಎನ್‌ಐ).

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...