Homeಕರ್ನಾಟಕಐಫೋನ್ ಘಟಕ ಸ್ಥಾಪನೆ- ಸುಳ್ಳು ಹೇಳಿ, ರಾಜ್ಯದ ಜನರ ಕಿವಿಗೆ ಹೂ ಇಟ್ಟ ಸಿಎಂ ಬೊಮ್ಮಾಯಿ:...

ಐಫೋನ್ ಘಟಕ ಸ್ಥಾಪನೆ- ಸುಳ್ಳು ಹೇಳಿ, ರಾಜ್ಯದ ಜನರ ಕಿವಿಗೆ ಹೂ ಇಟ್ಟ ಸಿಎಂ ಬೊಮ್ಮಾಯಿ: ಡಿಕೆ ಶಿವಕುಮಾರ್

- Advertisement -
- Advertisement -

”ಬಿಜೆಪಿಯವರು ರಾಜ್ಯದ ಜನರಿಗೆ ಸುಳ್ಳು ಹೇಳುತ್ತಿರುವುದು ಗೊತ್ತಾಗಿದೆ. ಒಂದು ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆಯನ್ನು ನೀಡಿದರು, ಅವರು ಯಾವ ಆಧಾರದ ಮೇಲೆ ಹೇಳಿದರೋ ಗೊತ್ತಿಲ್ಲ” ಎಂದು ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಅವರು ಭಾನುವಾರ ಹೇಳಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆ ಶಿವಕುಮಾರ್, ”BJP ಬಡಾಯಿ ಬ್ಯಾಂಕ್ ಬ್ಯಾಲೆನ್ಸ್ ನಲ್ಲಿ ಬರೀ ಸುಳ್ಳುಗಳೇ ತುಂಬಿವೆ. ಬೆಂಗಳೂರಲ್ಲಿ iPhone ತಯಾರಿಕಾ ಘಟಕ ಆರಂಭವಾಗಿ, 1 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಪುಂಗಿದ್ದ BJP, ರಾಜ್ಯದ ಮರ್ಯಾದೆಯನ್ನು ನಡುಬೀದಿಯಲ್ಲಿ ಹರಾಜು ಹಾಕಿದೆ. ಎಷ್ಟು ದಿನ ಅಂತಾ ಜನರ ಕಿವಿಗೆ ಹೂ ಇಡ್ತೀರಾ ಸಿಎಂ ಬಸವರಾಜ ಬೊಮ್ಮಾಯಿ ಅವರೇ? ಅಧಿಕಾರ ಹೋಗುವಾಗಲಾದರೂ ಸತ್ಯ ಹೇಳಬಾರದೇ?” ಎಂದು ಕೇಳಿದ್ದಾರೆ.

ರಾಜ್ಯದಲ್ಲಿ ಐಫೋನ್ ಉತ್ಪಾದನ ಘಟಕ ಆಗತ್ತದೆ, ಈ ಬಗ್ಗೆ ಫಾಕ್ಸ್‌ಕಾನ್‌ನೊಂದಿಗೆ ಒಪ್ಪಂದ ಆಗಿದೆ ಎಂದು ಸಿಎಂ ಹೇಳಿದ್ದರು. ಆ ಬಗ್ಗೆ ಫಾಕ್ಸ್‌ಕಾನ್ ಸ್ಪಷ್ಟನೆ ನೀಡಿದ್ದು, ನಾವು ಭಾರತದಲ್ಲಿ ಹೊಸ ಹೂಡಿಕೆಗೆ ಸಂಬಂಧಿಸಿದಂತೆ ”ಯಾವುದೇ ಖಚಿತ, ನಿರ್ಣಾಯಕ ಒಪ್ಪಂದಗಳನ್ನು ಮಾಡಿಕೊಂಡಿಲ್ಲ” ಎಂದು ಹೇಳಿದೆ. ಇದೀಗ ಬೊಮ್ಮಾಯಿ ಸುಳ್ಳು ಹೇಳಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ.

”ಬೆಂಗಳೂರಿನ ಐಫೋನ್ ಉತ್ಪಾದನಾ ಘಟಕ ತೆರೆಯಲಾಗುತ್ತದೆ ಎಂಬ ಸಿಎಂ ಹೇಳಿಕೆಯನ್ನು ಫಾಕ್ಸ್‌ಕಾನ್ ನಿರಾಕರಿಸಿದೆ. ಸುಳ್ಳೇ ಬಿಜೆಪಿಯ ಮನೆದೇವ್ರು ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಸ್ವತಃ ಸಿಎಂ ಸುಳ್ಳು ಹೇಳಿದ್ದು ನಾಚಿಕೆಗೇಡಿನ ಸಂಗತಿ. ಬಸವರಾಜ ಬೊಮ್ಮಾಯಿ ಅವರೇ, ತಾವು ಬಲು ಶಾಣ್ಯ ಇದಿರ್ರಿ.. ಬಾಳ್ ಚೆನ್ನಾಗಿ ಕಿವಿ ಮೇಲೆ ಹೂ ಇಡ್ತಿರ್ರಿ!!” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಭಾರತದಲ್ಲಿ ಯಾವುದೇ ಹೊಸ ಹೂಡಿಕೆ ಒಪ್ಪಂದವಾಗಿಲ್ಲ: ಬೊಮ್ಮಾಯಿ ಹೇಳಿಕೆ ತಳ್ಳಿಹಾಕಿದ ಫಾಕ್ಸ್‌ಕಾನ್

”ಫಾಕ್ಸ್‌ಕಾನ್ ಕಂಪೆನಿಯೊಂದಿಗೆ ಒಪ್ಪಂದಕ್ಕೆ ಸಹಿ ಮಾಡಲಾಯ್ತು ಎಂದಿರುವ ಬಸವರಾಜ ಬೊಮ್ಮಾಯಿ  ಅವರೇ, ನಿಮ್ಮ ಹೇಳಿಕೆಯನ್ನು ಕಂಪೆನಿ ನಿರಾಕರಿಸಿದೆ. ◆ರಾಜ್ಯಕ್ಕೆ ಸುಳ್ಳು ಹೇಳಿದ್ದೇಕೆ? ◆ಸಿಎಂ ಹುದ್ದೆಯ ಜವಾಬ್ದಾರಿ ಮರೆತು ‘ಫೇಕ್‌ನ್ಯೂಸ್’ ಹರಿಬಿಟ್ಟಿದ್ದೇಕೆ? ◆ಉದ್ಯೋಗ ಬಯಸುತ್ತಿರುವ ಯುವಕರಿಗೆ ಕಿವಿ ಮೇಲೆ ಹೂ ಇಟ್ಟಿದ್ದೇಕೆ?” ಎಂದು ಪ್ರಶ್ನೆ ಮಾಡಿದೆ.

”ಒಪ್ಪಂದವೇ ಆಗದೆ ಐಫೋನ್ ತಯಾರಿಕಾ ಘಟಕ ಸ್ಥಾಪನೆ ಆಗಿಯೇ ಬಿಡುತ್ತದೆ ಎಂದು ಕಿವಿ ಮೇಲೆ ಹೂ ಇಡುವ ಮೂಲಕ ಸುಳ್ಳೇ ಬಿಜೆಪಿಯ ಮನೆದೇವ್ರು ಎಂಬುದಕ್ಕೆ ಬಸವರಾಜ ಬೊಮ್ಮಾಯಿ ಅವರು ಮತ್ತೊಂದು ಪುರಾವೆ ಒದಗಿಸಿದ್ದಾರೆ! ಸುಳ್ಳು ಹೇಳುವ ಮೂಲಕ ಸಿಎಂ ಹುದ್ದೆಯ ಘನತೆಯನ್ನು, ಕರ್ನಾಟಕದ ಮರ್ಯಾದೆಯನ್ನು ಜಾಗತಿಕ ಮಟ್ಟದಲ್ಲಿ ಹರಾಜು ಹಾಕಿದ್ದಾರೆ” ಎಂದು ಕಾಂಗ್ರೆಸ್ ಟೀಕಿಸಿದೆ.

ಆತುರಗಾರನಿಗೆ ಬುದ್ದಿ ಮಂದ ಎನ್ನುತ್ತಾರೆ, ಬಸವರಾಜ ಬೊಮ್ಮಾಯಿ ಅವರದ್ದೂ ಹಾಗೇನಾ? ಅಂತಿಮ ಒಪ್ಪಂದವಾಗದೆ ಐಫೋನ್ ಘಟಕ ಸ್ಥಾಪನೆ ಆಗಿಯೇಬಿಟ್ಟಿತು ಎಂದು ಆತುರದಲ್ಲಿ ಘೋಷಿಸಿದ್ದೇಕೆ? ಕರ್ನಾಟಕದಲ್ಲಿ ಹೂಡಿಕೆ ಮಾಡಲು ಹೂಡಿಕೆದಾರರು ಹಿಂಜರಿಯುತ್ತಿರುವುದೇಕೆ? ರಾಜ್ಯದ ಜನರ ಕಿವಿ ಮೇಲೆ ಹೂ ಇಟ್ಟಿದ್ದೇಕೆ? ಫಾಕ್ಸ್‌ಕಾನ್ ಸಂಸ್ಥೆ ನಿರಾಕರಿಸಿದ್ದೇಕೆ? ಎಂದು ಕಾಂಗ್ರೆಸ್ ಘಟಕ ಪ್ರಶ್ನಿಸಿ ಟ್ವೀಟ್ ಮಾಡಿದೆ.

ಒಟ್ಟಾರೆ ಇಲ್ಲಿ ಬಸವರಾಜ ಬೊಮ್ಮಾಯಿ ಅವರು ನಗೆಪಾಟಲಿಗೆ ಈಡಾಗಿರುವುದು ಸುಳ್ಳಲ್ಲ. ಏಕೆಂದರೆ ಐ ಫೋನ್ ಘಟಕ ಸ್ಥಾಪನೆಯ ಒಪ್ಪಂದವೇ ಆಗದೇ ಅದಕ್ಕಾಗಿ ದೊಡ್ಡಬಳ್ಳಾಪುರ ಮತ್ತು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 300 ಎಕರೆ ಭೂಮಿಯನ್ನು ಗುರುತಿಸಿದ್ದಾರೆ.

ಎಲೆಕ್ಟ್ರಾನಿಕ್ಸ್ ಉತ್ಪಾದನಾ ಯೋಜನೆಯು ಮುಂದಿನ 10 ವರ್ಷಗಳಲ್ಲಿ ರಾಜ್ಯದೊಳಗಿನ 1,00,000 ಕ್ಕೂ ಹೆಚ್ಚು ಉದ್ಯೋಗಾವಕಾಶಗಳನ್ನು ಗಳಿಸುವ ನಿರೀಕ್ಷೆಯಿದೆ ಎಂದು ಸಿಎಂ ತಿಳಿಸಿದ್ದರು.

ಫಾಕ್ಸ್‌ಕಾನ್:- ಇದು ವಿಶ್ವದ ಅತಿದೊಡ್ಡ ಎಲೆಕ್ಟ್ರಾನಿಕ್ಸ್ ತಯಾರಕ ಕಂಪನಿಯಾಗಿದ್ದು, 2022 ರಲ್ಲಿ ಒಟ್ಟು ಆದಾಯವು ಹೊಸ ತೈವಾನ್ ಡಾಲರ್ 6 ಟ್ರಿಲಿಯನ್ ಅನ್ನು ಮೀರಿದೆ. ಕಳೆದ ವರ್ಷದಂತೆ, ಇದು ಫಾರ್ಚೂನ್ ಗ್ಲೋಬಲ್ 500ರಲ್ಲಿ 20 ನೇ ಸ್ಥಾನದಲ್ಲಿದೆ.

ಕಂಪನಿಯು ವಿಶ್ವದ 24 ದೇಶಗಳು ಅಥವಾ ಪ್ರದೇಶಗಳಲ್ಲಿ 173 ಕ್ಯಾಂಪಸ್‌ಗಳು ಮತ್ತು ಕಚೇರಿಗಳನ್ನು ಹೊಂದಿದೆ. ಕಂಪನಿಯ ಪ್ರಾಥಮಿಕ ಉತ್ಪನ್ನ ವಿಭಾಗಗಳಲ್ಲಿ ಸ್ಮಾರ್ಟ್ ಗ್ರಾಹಕ ಎಲೆಕ್ಟ್ರಾನಿಕ್ಸ್, ಉದಾಹರಣೆಗೆ ಸ್ಮಾರ್ಟ್‌ಫೋನ್‌ಗಳು, ಟಿವಿಗಳು, ಗೇಮ್ ಕನ್ಸೋಲ್‌ಗಳು, ಸರ್ವರ್‌ಗಳು ಮತ್ತು ಸಂವಹನ ನೆಟ್‌ವರ್ಕ್ ಅನ್ನು ಒಳಗೊಂಡಿರುವ ಕ್ಲೌಡ್ ಮತ್ತು ನೆಟ್‌ವರ್ಕಿಂಗ್ ಉತ್ಪನ್ನಗಳು ಸೇರಿವೆ; ಕಂಪ್ಯೂಟರ್, ಟ್ಯಾಬ್ಲೆಟ್‌ಗಳು ಮತ್ತು ಘಟಕಗಳಂತಹ ಕಂಪ್ಯೂಟಿಂಗ್ ಉತ್ಪನ್ನಗಳು ಮತ್ತು ಕನೆಕ್ಟರ್‌ಗಳು, ಯಾಂತ್ರಿಕ ಭಾಗಗಳು, ಸೇವೆಗಳು ಮುಂತಾದವುಗಳು(ಎಎನ್‌ಐ).

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...