Homeಮುಖಪುಟನೈತಿಕ ಸಮಿತಿಯ ಅಧ್ಯಕ್ಷರು 'ವಸ್ತ್ರಾಪಹರಣ'ಕ್ಕೆ ಒಳಗಾಗಿದ್ದಾರೆ: ಸ್ಪೀಕರ್‌ಗೆ ಮೊಯಿತ್ರಾ ಪತ್ರ

ನೈತಿಕ ಸಮಿತಿಯ ಅಧ್ಯಕ್ಷರು ‘ವಸ್ತ್ರಾಪಹರಣ’ಕ್ಕೆ ಒಳಗಾಗಿದ್ದಾರೆ: ಸ್ಪೀಕರ್‌ಗೆ ಮೊಯಿತ್ರಾ ಪತ್ರ

- Advertisement -
- Advertisement -

ನಗದು-ಪ್ರಶ್ನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಲೋಕಸಭೆಯ ನೈತಿಕತೆ ಸಮಿತಿ ಮುಂದೆ ಹಾಜರಾಗಿದ್ದರು. ತಮಗೆ ಅನೈತಿಕ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಆರೋಪಿಸಿ ಸಭೆಯಿಂದ ಹೊರ ನಡೆದಿದ್ದರು. ನೈತಿಕ ಸಮಿತಿಯ ಅಧ್ಯಕ್ಷರು “ವಸ್ತ್ರಾಹರಣ” ಅಥವಾ ವಸ್ತ್ರಾಪಹರಣಕ್ಕೆ ಒಳಗಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿ ದರ್ಶನ್ ಹಿರಾನಂದಾನಿಯಿಂದ ಮೊಯಿತ್ರಾ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ಸುಪ್ರೀಂ ಕೋರ್ಟ್ ವಕೀಲ ಜೈ ಅನಂತ್ ದೇಹದ್ರಾಯ್ ಅವರು ದೂರು ನೀಡಿದ್ದಾರೆ.

ನೈತಿಕ ಸಮಿತಿಯು ಅಕ್ಟೋಬರ್‌ನಲ್ಲಿ ಈ ವಿಷಯದ ಬಗ್ಗೆ ತನ್ನ ತನಿಖೆಯನ್ನು ಪ್ರಾರಂಭಿಸಿತು. ಮೊಯಿತ್ರಾ ಅವರು ಗುರುವಾರ ಸಮಿತಿಯ ಮುಂದೆ ಹಾಜರಾದರು ಆದರೆ ಸಮಿತಿಯ ವಿರೋಧ ಪಕ್ಷದ ಸದಸ್ಯರೊಂದಿಗೆ ಸಭೆಯಿಂದ ಹೊರನಡೆದರು. ಸಮಿತಿಯ ಅಧ್ಯಕ್ಷ ವಿನೋದ್ ಸೋಂಕರ್ ಅವರು ತಮ್ಮ ವೈಯಕ್ತಿಕ ಮತ್ತು ಅನೈತಿಕ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಮೊಯಿತ್ರಾ ಆರೋಪಿಸಿದರು.

ಸಭೆಯ ನಂತರ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದ ಮೊಯಿತ್ರಾ, ”ಸಮಿತಿಯು ಯಾವುದೇ ನೈತಿಕತೆ ಉಳಿಸಿಕೊಂಡಿಲ್ಲ” ಎಂದು ಹೇಳಿದರು.

”ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳುವ ಬದಲು, ಅಧ್ಯಕ್ಷರು ಮಾನಹಾನಿಕರ ರೀತಿಯಲ್ಲಿ ನನ್ನನ್ನು ಪ್ರಶ್ನಿಸುವ ಮೂಲಕ ದುರುದ್ದೇಶಪೂರಿತವಾಗಿ ಮತ್ತು ಸ್ಪಷ್ಟವಾಗಿ ಪೂರ್ವಾಗ್ರಹ ಪೀಡಿತ ಪಕ್ಷಪಾತವನ್ನು ಪ್ರದರ್ಶಿಸಿದರು, 11 ಸದಸ್ಯರಲ್ಲಿ ಐದು ಸದಸ್ಯರು ಹೊರನಡೆದರು ಮತ್ತು ಅವರ ಅವಮಾನಕರ ನಡವಳಿಕೆಯನ್ನು ಪ್ರತಿಭಟಿಸಿ  ಸಭೆಯನ್ನೇ ಬಹಿಷ್ಕರಿಸಿದರು” ಎಂದು ಆರೋಪಿಸಿದ್ದಾರೆ.

”ಸಮಿತಿಯ ಅಧ್ಯಕ್ಷ ವಿನೋದ್ ಸೋಂಕರ್ ತನ್ನ ವಿವರವಾದ ಮತ್ತು ವೈಯಕ್ತಿಕ ಪ್ರಶ್ನೆಗಳನ್ನು ಕೇಳುವ ಸ್ಕ್ರಿಪ್ಟ್ ಸಿದ್ಧಪಡಿಸಿಕೊಂಡರು. ಅದನ್ನು ಓದುವಾಗ ಪ್ರಶ್ನೆಗಳು ಅತ್ಯಂತ ಅಸಹ್ಯವಾದ ಸಾಲುಗಳಿಂದ ಕೂಡಿದ್ದವು. ಈ ಕೊಳಕು ಪ್ರಶ್ನೆಗಳಿಂದ ದೂರವಿರಲು ಸಮಿತಿಯ ಇತರ ಸದಸ್ಯರು ಹಲವು ಬಾರಿ ಎಚ್ಚರಿಕೆ ನೀಡಿದ ನಂತರವೂ ಅವರು ಮುಂದುವರೆದರು” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ತನ್ನ ವಿರುದ್ಧದ ಆರೋಪಗಳ ಕುರಿತು, ಮೊಯಿತ್ರಾ ಅವರು ಕಟುವಾದ ಭಾಷೆ ಬಳಸಿ ಸರ್ಕಾರವನ್ನು ಪ್ರಶ್ನಿಸುವ ವಿರೋಧ ಪಕ್ಷದ ಸದಸ್ಯರು ಕಿರುಕುಳಕ್ಕೆ ಒಳಗಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನೈತಿಕ ಸಮಿತಿ ಸಭೆಯಲ್ಲಿ ಅನೈತಿಕ, ವೈಯಕ್ತಿಕ ಪ್ರಶ್ನೆ ಕೇಳಿದರು: ಮಹುವಾ ಮೊಯಿತ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...