Homeಮುಖಪುಟನೈತಿಕ ಸಮಿತಿಯ ಕರಡು ಗೌಪ್ಯ ವರದಿ NDTVಯಿಂದ ಸೋರಿಕೆ: ಸ್ಪೀಕರ್‌ಗೆ ಮೊಯಿತ್ರಾ ಪತ್ರ

ನೈತಿಕ ಸಮಿತಿಯ ಕರಡು ಗೌಪ್ಯ ವರದಿ NDTVಯಿಂದ ಸೋರಿಕೆ: ಸ್ಪೀಕರ್‌ಗೆ ಮೊಯಿತ್ರಾ ಪತ್ರ

- Advertisement -
- Advertisement -

ಲೋಕಸಭೆಯ ನೈತಿಕ ಸಮಿತಿಯ ಗೌಪ್ಯ ಕರಡು ವರದಿಯು ಅದಾನಿ ಗ್ರೂಪ್ ಒಡೆತನದ ಮಾಧ್ಯಮ ಚಾನೆಲ್ NDTVಯಿಂದ ಸೋರಿಕೆಯಾಗಿದ್ದು, ಇದು ಸವಲತ್ತುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಸ್ಪೀಕರ್ ಓಂ ಬಿರ್ಲಾ ಅವರಿಗೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಪತ್ರ ಬರೆದಿದ್ದಾರೆ.

”ಲೋಕಸಭೆಯಲ್ಲಿನ ನಿಯಮಾವಳಿಗಳ ಕಾರ್ಯವಿಧಾನ ಮತ್ತು ವ್ಯವಹಾರದ ನಡವಳಿಕೆಯಲ್ಲಿ ಒಳಗೊಂಡಿರುವ ನಿಯಮ 275(2)ರ ಅತ್ಯಂತ ಗಂಭೀರ ಉಲ್ಲಂಘನೆಯಾಗಿದೆ. ನೈತಿಕ ಸಮಿತಿಯ ಕರಡು ವರದಿಯನ್ನು ಸಮಿತಿಯ ಮುಂದೆ ಇಡುವ ಹಿಂದಿನ ದಿನ ಅಂದರೆ 8.11.2023 ರಂದು NTDV ಮಾಧ್ಯಮ ಚಾನೆಲ್‌ ಪ್ರಸಾರ ಮಾಡಿದೆ” ಎಂದು ಮೊಯಿತ್ರಾ ಪತ್ರದಲ್ಲಿ ತಿಳಿಸಿದ್ದಾರೆ.

”ಇದು ಇನ್ನಷ್ಟು ಆಘಾತಕಾರಿಯಾಗಿದೆ ಏಕೆಂದರೆ ಈ ಮಾಧ್ಯಮ ಚಾನೆಲ್ ಬಹುಪಾಲು ಅದಾನಿ ಗ್ರೂಪ್‌ನ  ಒಡೆತನದಲ್ಲಿದೆ, ಅವರ ವಿರುದ್ಧ ನಾನು ಕಾರ್ಪೊರೇಟ್ ವಂಚನೆ ಮತ್ತು ಹಣಕಾಸು ಮತ್ತು ಸೆಕ್ಯುರಿಟೀಸ್ ನಿಯಮಗಳ ಉಲ್ಲಂಘನೆಯ ಗಂಭೀರ ಸಮಸ್ಯೆಗಳನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿದ್ದೇನೆ” ಎನ್ನುವುದನ್ನು ಒತ್ತಿ ಹೇಳಿದ್ದಾರೆ.

”ಅದಾನಿ ಗ್ರೂಪ್‌ನ ಪ್ರಸ್ತುತ INR 13,000 ಕೋಟಿ ಕಲ್ಲಿದ್ದಲು ಹಗರಣದ ಆರೋಪ ಎದುರಿಸುತ್ತಿದೆ. ಶಕ್ತಿ ಮತ್ತು ಅನಿಲ, ಮೂಲಸೌಕರ್ಯ ಇತ್ಯಾದಿ ಕ್ಷೇತ್ರಗಳಲ್ಲಿ ಕಾರ್ಪೊರೇಟ್ ವಂಚನೆಯ ಗಂಭೀರ ಆರೋಪಗಳಲ್ಲಿ ಅದಾನಿ ಗ್ರೂಪ್ ಸಿಲುಕಿದೆ. ಈ ಗ್ರೂಪ್‌ನ ಷೇರುದಾರರ ಮಾದರಿಯು ಅತ್ಯಂತ ಶಂಕಿತವಾಗಿದೆ. ಭಾರತೀಯ ಸೆಕ್ಯುರಿಟೀಸ್ ನಿಯಮಾವಳಿಗಳನ್ನು ಉಲ್ಲಂಘಿಸಿ ಹಿಂಬಾಗಿಲಿನ ಮೂಲಕ ಸಂಶಯಾಸ್ಪದ FP ನ ಮಾಲೀಕತ್ವದ ಸ್ಟಾಕ್ ಹೊಂದಿದೆ” ಎಂದು ಆರೋಪ ಮಾಡಿದ್ದಾರೆ.

”ಈ ಕಾರ್ಪೊರೇಟ್ ದೈತ್ಯನ ವಿರುದ್ಧ ಮಾತನಾಡಿದ್ದಕ್ಕಾಗಿ ನನ್ನನ್ನು ಗುರಿ ಮಾಡಲಾಗಿದೆ ಮತ್ತು ಈ ಗುಂಪಿನ ಒಡೆತನದ ಚಾನಲ್ ನನ್ನ ಆಪಾದಿತ ಅನೈತಿಕ ನಡವಳಿಕೆಯ ವಿಷಯವಾದ ಗೌಪ್ಯ ಸಮಿತಿಯ ವರದಿಯನ್ನು ಹೇಗೆ ಸೋರಿಕೆ ಮಾಡಿತು ಎಂಬುದು ಸಂಪೂರ್ಣವಾಗಿ ಆಘಾತಕಾರಿಯಾಗಿದೆ” ಎಂದಿದ್ದಾರೆ.

”ಲೋಕಸಭೆಯ ಎಲ್ಲಾ ಪ್ರಕ್ರಿಯೆಗಳು ಮತ್ತು ನಿಯಮಗಳ ಸಂಪೂರ್ಣ ಸ್ಥಗಿತವು ಸ್ಪಷ್ಟವಾಗಿ ಇದೆ. ನಿಮ್ಮ ನಿಷ್ಕ್ರಿಯತೆ ಮತ್ತು ನನ್ನ ದೂರುಗಳಿಗೆ ನೀವು ಪ್ರತಿಕ್ರಿಯೆ ಕೊಡದಿರುವುದು ದುರದೃಷ್ಟಕರವಾಗಿದೆ” ಎಂದು ಹೇಳಿದ್ದಾರೆ.

”ಆದಾಗ್ಯೂ, ದಾಖಲೆಯ ವಿಷಯವಾಗಿ ನಾನು ಈ ಭೀಕರ ಉಲ್ಲಂಘನೆಯನ್ನು ನಿಮ್ಮ ತುರ್ತು ಗಮನಕ್ಕೆ ತರಲು ಬಯಸುತ್ತೇನೆ” ಎಂದು ಸ್ಪೀಕರ್ ಬಿರ್ಲಾ ಅವರಿಗೆ ಮಹುವಾ ಮೊಯಿತ್ರಾ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಮಹುವಾ ಮೊಯಿತ್ರಾ ರಾಜಕೀಯದ ಬಲಿಪಶು: ಅಭಿಷೇಕ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...