Homeಮುಖಪುಟಭಾರತ ತಲುಪಿದ ಇಥಿಯೋಪಿಯಾದ ಜ್ವಾಲಾಮುಖಿ ಬೂದಿ : ವಿಮಾನ ಸಂಚಾರ ವ್ಯತ್ಯಯ

ಭಾರತ ತಲುಪಿದ ಇಥಿಯೋಪಿಯಾದ ಜ್ವಾಲಾಮುಖಿ ಬೂದಿ : ವಿಮಾನ ಸಂಚಾರ ವ್ಯತ್ಯಯ

- Advertisement -
- Advertisement -

ಸುಮಾರು 10 ರಿಂದ 12 ಸಾವಿರ ವರ್ಷಗಳ ನಂತರ ಮೊದಲ ಬಾರಿಗೆ, 2025 ನವೆಂಬರ್ 23ರಂದು ಇಥಿಯೋಪಿಯಾದ ಅಫಾರ್ ಪ್ರದೇಶದಲ್ಲಿರುವ ಹಯ್ಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟಗೊಂಡಿದೆ.

ಪರಿಣಾಮ ಭೂಮಿಯಿಂದ 15 ಕಿಲೋಮೀಟರ್ ಎತ್ತರಕ್ಕೆ ಆಕಾಶದತ್ತ ಭಾರೀ ಪ್ರಮಾಣದ ಜ್ವಾಲಾಮುಖಿ ಬೂದಿ, ಸಲ್ಫರ್ ಡೈಆಕ್ಸೈಡ್ ಮತ್ತು ಸಣ್ಣ ಗಾಜಿನಂತಹ ಕಣಗಳು ಚಿಮ್ಮಿವೆ.

ಜ್ವಾಲಾಮುಖಿ ಬೂದಿಯ ಮೋಡ ಈಗ ಸಾವಿರಾರು ಕಿಲೋಮೀಟರ್ ದೂರ ಪ್ರಯಾಣಿಸಿ, ಕೆಂಪು ಸಮುದ್ರ ಮತ್ತು ಅರೇಬಿಯನ್ ಸಮುದ್ರವನ್ನು ದಾಟಿ ಭಾರತದ ಆಕಾಶಕ್ಕೆ ಬಂದಿದೆ. ನವೆಂಬರ್ 24ರ ಸಂಜೆ 6:30ರ ನಂತರ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಆಕಾಶದಲ್ಲಿ ತೆಳುವಾದ ಮಂಜಿನಂತಹ ಪದರ ರಚನೆಯಾಗಿದೆ. ಆಕಾಶ ಸ್ವಲ್ಪ ಕಪ್ಪಗೆ ಗೋಚರಿಸಿದೆ.

ದೆಹಲಿಯ ಗಾಳಿಯ ಗುಣಮಟ್ಟ (ಎಕ್ಯೂಐ) ಈಗಾಗಲೇ 363 ರಿಂದ 435ರಷ್ಟು ‘ತೀವ್ರ’ ಮಟ್ಟದಲ್ಲಿದೆ. ಜ್ವಾಲಾಮುಖಿ ಬೂದಿ ಬಹಳ ಎತ್ತರದಲ್ಲಿ (25 ರಿಂದ 45 ಸಾವಿರ ಅಡಿ) ಇರುವುದರಿಂದ ಭೂಮಿಯ ಮೇಲಿನ ಮಾಲಿನ್ಯ ಹೆಚ್ಚಳವಾಗುವ ಸಾಧ್ಯತೆ ಕಡಿಮೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.

ಆದರೆ, ಸ್ವಲ್ಪ ಬೂದಿ ಕೆಳಗೆ ಬಂದರೆ ಕಣ್ಣು, ಗಂಟಲು, ಶ್ವಾಸಕೋಶಕ್ಕೆ ತೊಂದರೆ ಆಗಬಹುದು. ಆಸ್ತಮಾ, ಹೃದ್ರೋಗ ಇರುವವರು ಎಚ್ಚರ ವಹಿಸಬೇಕು ಎಂದು ಐಎಂಡಿ ಮುನ್ನೆಚ್ಚರಿಕೆ ನೀಡಿದೆ.

ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

ಜ್ವಾಲಾಮುಖಿ ಬೂದಿ ವಿಮಾನದ ಇಂಜಿನ್‌ಗೆ ತುಂಬಾ ಅಪಾಯಕಾರಿ. ಹಾಗಾಗಿ, ದೆಹಲಿ, ಮುಂಬೈ, ಹೈದರಾಬಾದ್, ಕೊಚ್ಚಿ ಸೇರಿದಂತೆ ಭಾರತದ ಹಲವು ವಿಮಾನ ನಿಲ್ದಾಣಗಳಿಂದ ಕೆಲ ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ. ಇನ್ನೂ ಕೆಲವು ತಡವಾಗಿ ಹಾರಾಟ ನಡೆಸಿವೆ.

ಮಧ್ಯಪ್ರಾಚ್ಯ ಮತ್ತು ಯೂರೋಪ್‌ನಿಂದ ಭಾರತಕ್ಕೆ ಬರುವ ವಿಮಾನಗಳು ಬೇರೆ ದಾರಿಯಲ್ಲಿ ಬಂದಿವೆ. ಇಂದು (ನ.25) ಸಂಜೆ 7:30ರ ನಂತರ ಬೂದಿಯ ಮೋಡ ಭಾರತದಿಂದ ಹೊರಹೋಗುತ್ತದೆ ಎಂದು ಐಎಂಡಿ ಹೇಳಿದೆ.

ಜ್ವಾಲಾಮುಖಿಯ ಬೂದಿ ಮುಖ್ಯವಾಗಿ ದೆಹಲಿಯಲ್ಲಿ ಕಾಣಿಸಿಕೊಂಡಿದೆ. ದೆಹಲಿಯಲ್ಲಿ ಈಗಾಗಲೇ ವಿಪರೀತ ವಾಯುಮಾಲಿನ್ಯ ಇರುವುದರಿಂದ ಜನರು ಹೊರಗಡೆ ಹೋಗುವಾಗ N95 ಮಾಸ್ಕ್ ಧರಿಸುವಂತೆ ಆಡಳಿತ ಸಲಹೆ ನೀಡಿದೆ.

ಮಕ್ಕಳು, ಹಿರಿಯರು, ಶ್ವಾಸಕೋಶ ಸಮಸ್ಯೆ ಇರುವವರು ಹೆಚ್ಚು ಎಚ್ಚರಿಕೆ ವಹಿಸಬೇಕು. ವಿಮಾನ ಪ್ರಯಾಣ ಮಾಡುತ್ತಿದ್ದರೆ ಫ್ಲೈಟ್ ಸ್ಟೇಟಸ್ ಚೆಕ್ ಮಾಡಿಕೊಳ್ಳಿ, ಎಕ್ಯೂಐ ಆಪ್‌ನಲ್ಲಿ (ಸಮೀರ್ ಆಪ್) ಗಾಳಿಯ ಸ್ಥಿತಿ ನೋಡುತ್ತಿರಿ ಎಂದು ನಿರ್ದೇಶಿಸಿದೆ.

ಜ್ವಾಲಾಮುಖಿಯ ಬೂದಿಯ ಮೋಡ ನಾಳೆ (ನ.26) ಭಾರತದ ಆಕಾಶದಿಂದ ಪೂರ್ತಿಯಾಗಿ ಹೊರಟು ಚೀನಾ ಕಡೆಗೆ ಸಾಗುತ್ತದೆ ಎಂದು ಐಎಂಡಿ ತಿಳಿಸಿದೆ. ನಾಳೆ ಸಂಜೆಯ ನಂತರ ದೆಹಲಿ-ಉತ್ತರ ಭಾರತದ ಆಕಾಶ ಸ್ವಲ್ಪ ಸ್ಪಷ್ಟವಾಗುವ ಸಾಧ್ಯತೆ ಇದೆ (ಆದರೂ ಸಾಮಾನ್ಯ ಮಾಲಿನ್ಯ ಇರುತ್ತದೆ).

ಜ್ವಾಲಾಮುಖಿ ಸ್ಪೋಟಿಸಿದ ಜಾಗ ಭಾರತದಿಂದ ಎಷ್ಟು ದೂರದಲ್ಲಿದೆ?

ಹಯ್ಲಿ ಗುಬ್ಬಿ ಜ್ವಾಲಾಮುಖಿ ಇಥಿಯೋಪಿಯಾದ ಅಫಾರ್ ಪ್ರದೇಶದಲ್ಲಿದೆ. ಇದರ ಅಂದಾಜು ಸ್ಥಾನ : 14° 15′ ಉತ್ತರ ಅಕ್ಷಾಂಶ, 40° 40′ ಪೂರ್ವ ರೇಖಾಂಶ (ಎರ್ಟಾ ಅಲೆ ಜ್ವಾಲಾಮುಖಿಯ ಸಮೀಪದಲ್ಲಿ). ಭಾರತದ ದೆಹಲಿಗೆ (ಸುಮಾರು 28° 36′ ಉತ್ತರ, 77° 12′ ಪೂರ್ವ) ಈ ಜ್ವಾಲಾಮುಖಿಯಿಂದ ನೇರ ಗಾಳಿಪಥದ ದೂರ ಸುಮಾರು 3,800 ಕಿಲೋಮೀಟರ್ (2,360 ಮೈಲ್) ಎಂದು ವರದಿಗಳು ಹೇಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...