Homeಮುಖಪುಟಭಾರತ ತಲುಪಿದ ಇಥಿಯೋಪಿಯಾದ ಜ್ವಾಲಾಮುಖಿ ಬೂದಿ : ವಿಮಾನ ಸಂಚಾರ ವ್ಯತ್ಯಯ

ಭಾರತ ತಲುಪಿದ ಇಥಿಯೋಪಿಯಾದ ಜ್ವಾಲಾಮುಖಿ ಬೂದಿ : ವಿಮಾನ ಸಂಚಾರ ವ್ಯತ್ಯಯ

- Advertisement -
- Advertisement -

ಸುಮಾರು 10 ರಿಂದ 12 ಸಾವಿರ ವರ್ಷಗಳ ನಂತರ ಮೊದಲ ಬಾರಿಗೆ, 2025 ನವೆಂಬರ್ 23ರಂದು ಇಥಿಯೋಪಿಯಾದ ಅಫಾರ್ ಪ್ರದೇಶದಲ್ಲಿರುವ ಹಯ್ಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟಗೊಂಡಿದೆ.

ಪರಿಣಾಮ ಭೂಮಿಯಿಂದ 15 ಕಿಲೋಮೀಟರ್ ಎತ್ತರಕ್ಕೆ ಆಕಾಶದತ್ತ ಭಾರೀ ಪ್ರಮಾಣದ ಜ್ವಾಲಾಮುಖಿ ಬೂದಿ, ಸಲ್ಫರ್ ಡೈಆಕ್ಸೈಡ್ ಮತ್ತು ಸಣ್ಣ ಗಾಜಿನಂತಹ ಕಣಗಳು ಚಿಮ್ಮಿವೆ.

ಜ್ವಾಲಾಮುಖಿ ಬೂದಿಯ ಮೋಡ ಈಗ ಸಾವಿರಾರು ಕಿಲೋಮೀಟರ್ ದೂರ ಪ್ರಯಾಣಿಸಿ, ಕೆಂಪು ಸಮುದ್ರ ಮತ್ತು ಅರೇಬಿಯನ್ ಸಮುದ್ರವನ್ನು ದಾಟಿ ಭಾರತದ ಆಕಾಶಕ್ಕೆ ಬಂದಿದೆ. ನವೆಂಬರ್ 24ರ ಸಂಜೆ 6:30ರ ನಂತರ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಆಕಾಶದಲ್ಲಿ ತೆಳುವಾದ ಮಂಜಿನಂತಹ ಪದರ ರಚನೆಯಾಗಿದೆ. ಆಕಾಶ ಸ್ವಲ್ಪ ಕಪ್ಪಗೆ ಗೋಚರಿಸಿದೆ.

ದೆಹಲಿಯ ಗಾಳಿಯ ಗುಣಮಟ್ಟ (ಎಕ್ಯೂಐ) ಈಗಾಗಲೇ 363 ರಿಂದ 435ರಷ್ಟು ‘ತೀವ್ರ’ ಮಟ್ಟದಲ್ಲಿದೆ. ಜ್ವಾಲಾಮುಖಿ ಬೂದಿ ಬಹಳ ಎತ್ತರದಲ್ಲಿ (25 ರಿಂದ 45 ಸಾವಿರ ಅಡಿ) ಇರುವುದರಿಂದ ಭೂಮಿಯ ಮೇಲಿನ ಮಾಲಿನ್ಯ ಹೆಚ್ಚಳವಾಗುವ ಸಾಧ್ಯತೆ ಕಡಿಮೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.

ಆದರೆ, ಸ್ವಲ್ಪ ಬೂದಿ ಕೆಳಗೆ ಬಂದರೆ ಕಣ್ಣು, ಗಂಟಲು, ಶ್ವಾಸಕೋಶಕ್ಕೆ ತೊಂದರೆ ಆಗಬಹುದು. ಆಸ್ತಮಾ, ಹೃದ್ರೋಗ ಇರುವವರು ಎಚ್ಚರ ವಹಿಸಬೇಕು ಎಂದು ಐಎಂಡಿ ಮುನ್ನೆಚ್ಚರಿಕೆ ನೀಡಿದೆ.

ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

ಜ್ವಾಲಾಮುಖಿ ಬೂದಿ ವಿಮಾನದ ಇಂಜಿನ್‌ಗೆ ತುಂಬಾ ಅಪಾಯಕಾರಿ. ಹಾಗಾಗಿ, ದೆಹಲಿ, ಮುಂಬೈ, ಹೈದರಾಬಾದ್, ಕೊಚ್ಚಿ ಸೇರಿದಂತೆ ಭಾರತದ ಹಲವು ವಿಮಾನ ನಿಲ್ದಾಣಗಳಿಂದ ಕೆಲ ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ. ಇನ್ನೂ ಕೆಲವು ತಡವಾಗಿ ಹಾರಾಟ ನಡೆಸಿವೆ.

ಮಧ್ಯಪ್ರಾಚ್ಯ ಮತ್ತು ಯೂರೋಪ್‌ನಿಂದ ಭಾರತಕ್ಕೆ ಬರುವ ವಿಮಾನಗಳು ಬೇರೆ ದಾರಿಯಲ್ಲಿ ಬಂದಿವೆ. ಇಂದು (ನ.25) ಸಂಜೆ 7:30ರ ನಂತರ ಬೂದಿಯ ಮೋಡ ಭಾರತದಿಂದ ಹೊರಹೋಗುತ್ತದೆ ಎಂದು ಐಎಂಡಿ ಹೇಳಿದೆ.

ಜ್ವಾಲಾಮುಖಿಯ ಬೂದಿ ಮುಖ್ಯವಾಗಿ ದೆಹಲಿಯಲ್ಲಿ ಕಾಣಿಸಿಕೊಂಡಿದೆ. ದೆಹಲಿಯಲ್ಲಿ ಈಗಾಗಲೇ ವಿಪರೀತ ವಾಯುಮಾಲಿನ್ಯ ಇರುವುದರಿಂದ ಜನರು ಹೊರಗಡೆ ಹೋಗುವಾಗ N95 ಮಾಸ್ಕ್ ಧರಿಸುವಂತೆ ಆಡಳಿತ ಸಲಹೆ ನೀಡಿದೆ.

ಮಕ್ಕಳು, ಹಿರಿಯರು, ಶ್ವಾಸಕೋಶ ಸಮಸ್ಯೆ ಇರುವವರು ಹೆಚ್ಚು ಎಚ್ಚರಿಕೆ ವಹಿಸಬೇಕು. ವಿಮಾನ ಪ್ರಯಾಣ ಮಾಡುತ್ತಿದ್ದರೆ ಫ್ಲೈಟ್ ಸ್ಟೇಟಸ್ ಚೆಕ್ ಮಾಡಿಕೊಳ್ಳಿ, ಎಕ್ಯೂಐ ಆಪ್‌ನಲ್ಲಿ (ಸಮೀರ್ ಆಪ್) ಗಾಳಿಯ ಸ್ಥಿತಿ ನೋಡುತ್ತಿರಿ ಎಂದು ನಿರ್ದೇಶಿಸಿದೆ.

ಜ್ವಾಲಾಮುಖಿಯ ಬೂದಿಯ ಮೋಡ ನಾಳೆ (ನ.26) ಭಾರತದ ಆಕಾಶದಿಂದ ಪೂರ್ತಿಯಾಗಿ ಹೊರಟು ಚೀನಾ ಕಡೆಗೆ ಸಾಗುತ್ತದೆ ಎಂದು ಐಎಂಡಿ ತಿಳಿಸಿದೆ. ನಾಳೆ ಸಂಜೆಯ ನಂತರ ದೆಹಲಿ-ಉತ್ತರ ಭಾರತದ ಆಕಾಶ ಸ್ವಲ್ಪ ಸ್ಪಷ್ಟವಾಗುವ ಸಾಧ್ಯತೆ ಇದೆ (ಆದರೂ ಸಾಮಾನ್ಯ ಮಾಲಿನ್ಯ ಇರುತ್ತದೆ).

ಜ್ವಾಲಾಮುಖಿ ಸ್ಪೋಟಿಸಿದ ಜಾಗ ಭಾರತದಿಂದ ಎಷ್ಟು ದೂರದಲ್ಲಿದೆ?

ಹಯ್ಲಿ ಗುಬ್ಬಿ ಜ್ವಾಲಾಮುಖಿ ಇಥಿಯೋಪಿಯಾದ ಅಫಾರ್ ಪ್ರದೇಶದಲ್ಲಿದೆ. ಇದರ ಅಂದಾಜು ಸ್ಥಾನ : 14° 15′ ಉತ್ತರ ಅಕ್ಷಾಂಶ, 40° 40′ ಪೂರ್ವ ರೇಖಾಂಶ (ಎರ್ಟಾ ಅಲೆ ಜ್ವಾಲಾಮುಖಿಯ ಸಮೀಪದಲ್ಲಿ). ಭಾರತದ ದೆಹಲಿಗೆ (ಸುಮಾರು 28° 36′ ಉತ್ತರ, 77° 12′ ಪೂರ್ವ) ಈ ಜ್ವಾಲಾಮುಖಿಯಿಂದ ನೇರ ಗಾಳಿಪಥದ ದೂರ ಸುಮಾರು 3,800 ಕಿಲೋಮೀಟರ್ (2,360 ಮೈಲ್) ಎಂದು ವರದಿಗಳು ಹೇಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...