Homeಮುಖಪುಟಭಾರತ ತಲುಪಿದ ಇಥಿಯೋಪಿಯಾದ ಜ್ವಾಲಾಮುಖಿ ಬೂದಿ : ವಿಮಾನ ಸಂಚಾರ ವ್ಯತ್ಯಯ

ಭಾರತ ತಲುಪಿದ ಇಥಿಯೋಪಿಯಾದ ಜ್ವಾಲಾಮುಖಿ ಬೂದಿ : ವಿಮಾನ ಸಂಚಾರ ವ್ಯತ್ಯಯ

- Advertisement -
- Advertisement -

ಸುಮಾರು 10 ರಿಂದ 12 ಸಾವಿರ ವರ್ಷಗಳ ನಂತರ ಮೊದಲ ಬಾರಿಗೆ, 2025 ನವೆಂಬರ್ 23ರಂದು ಇಥಿಯೋಪಿಯಾದ ಅಫಾರ್ ಪ್ರದೇಶದಲ್ಲಿರುವ ಹಯ್ಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟಗೊಂಡಿದೆ.

ಪರಿಣಾಮ ಭೂಮಿಯಿಂದ 15 ಕಿಲೋಮೀಟರ್ ಎತ್ತರಕ್ಕೆ ಆಕಾಶದತ್ತ ಭಾರೀ ಪ್ರಮಾಣದ ಜ್ವಾಲಾಮುಖಿ ಬೂದಿ, ಸಲ್ಫರ್ ಡೈಆಕ್ಸೈಡ್ ಮತ್ತು ಸಣ್ಣ ಗಾಜಿನಂತಹ ಕಣಗಳು ಚಿಮ್ಮಿವೆ.

ಜ್ವಾಲಾಮುಖಿ ಬೂದಿಯ ಮೋಡ ಈಗ ಸಾವಿರಾರು ಕಿಲೋಮೀಟರ್ ದೂರ ಪ್ರಯಾಣಿಸಿ, ಕೆಂಪು ಸಮುದ್ರ ಮತ್ತು ಅರೇಬಿಯನ್ ಸಮುದ್ರವನ್ನು ದಾಟಿ ಭಾರತದ ಆಕಾಶಕ್ಕೆ ಬಂದಿದೆ. ನವೆಂಬರ್ 24ರ ಸಂಜೆ 6:30ರ ನಂತರ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಆಕಾಶದಲ್ಲಿ ತೆಳುವಾದ ಮಂಜಿನಂತಹ ಪದರ ರಚನೆಯಾಗಿದೆ. ಆಕಾಶ ಸ್ವಲ್ಪ ಕಪ್ಪಗೆ ಗೋಚರಿಸಿದೆ.

ದೆಹಲಿಯ ಗಾಳಿಯ ಗುಣಮಟ್ಟ (ಎಕ್ಯೂಐ) ಈಗಾಗಲೇ 363 ರಿಂದ 435ರಷ್ಟು ‘ತೀವ್ರ’ ಮಟ್ಟದಲ್ಲಿದೆ. ಜ್ವಾಲಾಮುಖಿ ಬೂದಿ ಬಹಳ ಎತ್ತರದಲ್ಲಿ (25 ರಿಂದ 45 ಸಾವಿರ ಅಡಿ) ಇರುವುದರಿಂದ ಭೂಮಿಯ ಮೇಲಿನ ಮಾಲಿನ್ಯ ಹೆಚ್ಚಳವಾಗುವ ಸಾಧ್ಯತೆ ಕಡಿಮೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.

ಆದರೆ, ಸ್ವಲ್ಪ ಬೂದಿ ಕೆಳಗೆ ಬಂದರೆ ಕಣ್ಣು, ಗಂಟಲು, ಶ್ವಾಸಕೋಶಕ್ಕೆ ತೊಂದರೆ ಆಗಬಹುದು. ಆಸ್ತಮಾ, ಹೃದ್ರೋಗ ಇರುವವರು ಎಚ್ಚರ ವಹಿಸಬೇಕು ಎಂದು ಐಎಂಡಿ ಮುನ್ನೆಚ್ಚರಿಕೆ ನೀಡಿದೆ.

ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

ಜ್ವಾಲಾಮುಖಿ ಬೂದಿ ವಿಮಾನದ ಇಂಜಿನ್‌ಗೆ ತುಂಬಾ ಅಪಾಯಕಾರಿ. ಹಾಗಾಗಿ, ದೆಹಲಿ, ಮುಂಬೈ, ಹೈದರಾಬಾದ್, ಕೊಚ್ಚಿ ಸೇರಿದಂತೆ ಭಾರತದ ಹಲವು ವಿಮಾನ ನಿಲ್ದಾಣಗಳಿಂದ ಕೆಲ ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ. ಇನ್ನೂ ಕೆಲವು ತಡವಾಗಿ ಹಾರಾಟ ನಡೆಸಿವೆ.

ಮಧ್ಯಪ್ರಾಚ್ಯ ಮತ್ತು ಯೂರೋಪ್‌ನಿಂದ ಭಾರತಕ್ಕೆ ಬರುವ ವಿಮಾನಗಳು ಬೇರೆ ದಾರಿಯಲ್ಲಿ ಬಂದಿವೆ. ಇಂದು (ನ.25) ಸಂಜೆ 7:30ರ ನಂತರ ಬೂದಿಯ ಮೋಡ ಭಾರತದಿಂದ ಹೊರಹೋಗುತ್ತದೆ ಎಂದು ಐಎಂಡಿ ಹೇಳಿದೆ.

ಜ್ವಾಲಾಮುಖಿಯ ಬೂದಿ ಮುಖ್ಯವಾಗಿ ದೆಹಲಿಯಲ್ಲಿ ಕಾಣಿಸಿಕೊಂಡಿದೆ. ದೆಹಲಿಯಲ್ಲಿ ಈಗಾಗಲೇ ವಿಪರೀತ ವಾಯುಮಾಲಿನ್ಯ ಇರುವುದರಿಂದ ಜನರು ಹೊರಗಡೆ ಹೋಗುವಾಗ N95 ಮಾಸ್ಕ್ ಧರಿಸುವಂತೆ ಆಡಳಿತ ಸಲಹೆ ನೀಡಿದೆ.

ಮಕ್ಕಳು, ಹಿರಿಯರು, ಶ್ವಾಸಕೋಶ ಸಮಸ್ಯೆ ಇರುವವರು ಹೆಚ್ಚು ಎಚ್ಚರಿಕೆ ವಹಿಸಬೇಕು. ವಿಮಾನ ಪ್ರಯಾಣ ಮಾಡುತ್ತಿದ್ದರೆ ಫ್ಲೈಟ್ ಸ್ಟೇಟಸ್ ಚೆಕ್ ಮಾಡಿಕೊಳ್ಳಿ, ಎಕ್ಯೂಐ ಆಪ್‌ನಲ್ಲಿ (ಸಮೀರ್ ಆಪ್) ಗಾಳಿಯ ಸ್ಥಿತಿ ನೋಡುತ್ತಿರಿ ಎಂದು ನಿರ್ದೇಶಿಸಿದೆ.

ಜ್ವಾಲಾಮುಖಿಯ ಬೂದಿಯ ಮೋಡ ನಾಳೆ (ನ.26) ಭಾರತದ ಆಕಾಶದಿಂದ ಪೂರ್ತಿಯಾಗಿ ಹೊರಟು ಚೀನಾ ಕಡೆಗೆ ಸಾಗುತ್ತದೆ ಎಂದು ಐಎಂಡಿ ತಿಳಿಸಿದೆ. ನಾಳೆ ಸಂಜೆಯ ನಂತರ ದೆಹಲಿ-ಉತ್ತರ ಭಾರತದ ಆಕಾಶ ಸ್ವಲ್ಪ ಸ್ಪಷ್ಟವಾಗುವ ಸಾಧ್ಯತೆ ಇದೆ (ಆದರೂ ಸಾಮಾನ್ಯ ಮಾಲಿನ್ಯ ಇರುತ್ತದೆ).

ಜ್ವಾಲಾಮುಖಿ ಸ್ಪೋಟಿಸಿದ ಜಾಗ ಭಾರತದಿಂದ ಎಷ್ಟು ದೂರದಲ್ಲಿದೆ?

ಹಯ್ಲಿ ಗುಬ್ಬಿ ಜ್ವಾಲಾಮುಖಿ ಇಥಿಯೋಪಿಯಾದ ಅಫಾರ್ ಪ್ರದೇಶದಲ್ಲಿದೆ. ಇದರ ಅಂದಾಜು ಸ್ಥಾನ : 14° 15′ ಉತ್ತರ ಅಕ್ಷಾಂಶ, 40° 40′ ಪೂರ್ವ ರೇಖಾಂಶ (ಎರ್ಟಾ ಅಲೆ ಜ್ವಾಲಾಮುಖಿಯ ಸಮೀಪದಲ್ಲಿ). ಭಾರತದ ದೆಹಲಿಗೆ (ಸುಮಾರು 28° 36′ ಉತ್ತರ, 77° 12′ ಪೂರ್ವ) ಈ ಜ್ವಾಲಾಮುಖಿಯಿಂದ ನೇರ ಗಾಳಿಪಥದ ದೂರ ಸುಮಾರು 3,800 ಕಿಲೋಮೀಟರ್ (2,360 ಮೈಲ್) ಎಂದು ವರದಿಗಳು ಹೇಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...