Homeಮುಖಪುಟಭಾರತ ತಲುಪಿದ ಇಥಿಯೋಪಿಯಾದ ಜ್ವಾಲಾಮುಖಿ ಬೂದಿ : ವಿಮಾನ ಸಂಚಾರ ವ್ಯತ್ಯಯ

ಭಾರತ ತಲುಪಿದ ಇಥಿಯೋಪಿಯಾದ ಜ್ವಾಲಾಮುಖಿ ಬೂದಿ : ವಿಮಾನ ಸಂಚಾರ ವ್ಯತ್ಯಯ

- Advertisement -
- Advertisement -

ಸುಮಾರು 10 ರಿಂದ 12 ಸಾವಿರ ವರ್ಷಗಳ ನಂತರ ಮೊದಲ ಬಾರಿಗೆ, 2025 ನವೆಂಬರ್ 23ರಂದು ಇಥಿಯೋಪಿಯಾದ ಅಫಾರ್ ಪ್ರದೇಶದಲ್ಲಿರುವ ಹಯ್ಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟಗೊಂಡಿದೆ.

ಪರಿಣಾಮ ಭೂಮಿಯಿಂದ 15 ಕಿಲೋಮೀಟರ್ ಎತ್ತರಕ್ಕೆ ಆಕಾಶದತ್ತ ಭಾರೀ ಪ್ರಮಾಣದ ಜ್ವಾಲಾಮುಖಿ ಬೂದಿ, ಸಲ್ಫರ್ ಡೈಆಕ್ಸೈಡ್ ಮತ್ತು ಸಣ್ಣ ಗಾಜಿನಂತಹ ಕಣಗಳು ಚಿಮ್ಮಿವೆ.

ಜ್ವಾಲಾಮುಖಿ ಬೂದಿಯ ಮೋಡ ಈಗ ಸಾವಿರಾರು ಕಿಲೋಮೀಟರ್ ದೂರ ಪ್ರಯಾಣಿಸಿ, ಕೆಂಪು ಸಮುದ್ರ ಮತ್ತು ಅರೇಬಿಯನ್ ಸಮುದ್ರವನ್ನು ದಾಟಿ ಭಾರತದ ಆಕಾಶಕ್ಕೆ ಬಂದಿದೆ. ನವೆಂಬರ್ 24ರ ಸಂಜೆ 6:30ರ ನಂತರ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಆಕಾಶದಲ್ಲಿ ತೆಳುವಾದ ಮಂಜಿನಂತಹ ಪದರ ರಚನೆಯಾಗಿದೆ. ಆಕಾಶ ಸ್ವಲ್ಪ ಕಪ್ಪಗೆ ಗೋಚರಿಸಿದೆ.

ದೆಹಲಿಯ ಗಾಳಿಯ ಗುಣಮಟ್ಟ (ಎಕ್ಯೂಐ) ಈಗಾಗಲೇ 363 ರಿಂದ 435ರಷ್ಟು ‘ತೀವ್ರ’ ಮಟ್ಟದಲ್ಲಿದೆ. ಜ್ವಾಲಾಮುಖಿ ಬೂದಿ ಬಹಳ ಎತ್ತರದಲ್ಲಿ (25 ರಿಂದ 45 ಸಾವಿರ ಅಡಿ) ಇರುವುದರಿಂದ ಭೂಮಿಯ ಮೇಲಿನ ಮಾಲಿನ್ಯ ಹೆಚ್ಚಳವಾಗುವ ಸಾಧ್ಯತೆ ಕಡಿಮೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.

ಆದರೆ, ಸ್ವಲ್ಪ ಬೂದಿ ಕೆಳಗೆ ಬಂದರೆ ಕಣ್ಣು, ಗಂಟಲು, ಶ್ವಾಸಕೋಶಕ್ಕೆ ತೊಂದರೆ ಆಗಬಹುದು. ಆಸ್ತಮಾ, ಹೃದ್ರೋಗ ಇರುವವರು ಎಚ್ಚರ ವಹಿಸಬೇಕು ಎಂದು ಐಎಂಡಿ ಮುನ್ನೆಚ್ಚರಿಕೆ ನೀಡಿದೆ.

ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

ಜ್ವಾಲಾಮುಖಿ ಬೂದಿ ವಿಮಾನದ ಇಂಜಿನ್‌ಗೆ ತುಂಬಾ ಅಪಾಯಕಾರಿ. ಹಾಗಾಗಿ, ದೆಹಲಿ, ಮುಂಬೈ, ಹೈದರಾಬಾದ್, ಕೊಚ್ಚಿ ಸೇರಿದಂತೆ ಭಾರತದ ಹಲವು ವಿಮಾನ ನಿಲ್ದಾಣಗಳಿಂದ ಕೆಲ ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ. ಇನ್ನೂ ಕೆಲವು ತಡವಾಗಿ ಹಾರಾಟ ನಡೆಸಿವೆ.

ಮಧ್ಯಪ್ರಾಚ್ಯ ಮತ್ತು ಯೂರೋಪ್‌ನಿಂದ ಭಾರತಕ್ಕೆ ಬರುವ ವಿಮಾನಗಳು ಬೇರೆ ದಾರಿಯಲ್ಲಿ ಬಂದಿವೆ. ಇಂದು (ನ.25) ಸಂಜೆ 7:30ರ ನಂತರ ಬೂದಿಯ ಮೋಡ ಭಾರತದಿಂದ ಹೊರಹೋಗುತ್ತದೆ ಎಂದು ಐಎಂಡಿ ಹೇಳಿದೆ.

ಜ್ವಾಲಾಮುಖಿಯ ಬೂದಿ ಮುಖ್ಯವಾಗಿ ದೆಹಲಿಯಲ್ಲಿ ಕಾಣಿಸಿಕೊಂಡಿದೆ. ದೆಹಲಿಯಲ್ಲಿ ಈಗಾಗಲೇ ವಿಪರೀತ ವಾಯುಮಾಲಿನ್ಯ ಇರುವುದರಿಂದ ಜನರು ಹೊರಗಡೆ ಹೋಗುವಾಗ N95 ಮಾಸ್ಕ್ ಧರಿಸುವಂತೆ ಆಡಳಿತ ಸಲಹೆ ನೀಡಿದೆ.

ಮಕ್ಕಳು, ಹಿರಿಯರು, ಶ್ವಾಸಕೋಶ ಸಮಸ್ಯೆ ಇರುವವರು ಹೆಚ್ಚು ಎಚ್ಚರಿಕೆ ವಹಿಸಬೇಕು. ವಿಮಾನ ಪ್ರಯಾಣ ಮಾಡುತ್ತಿದ್ದರೆ ಫ್ಲೈಟ್ ಸ್ಟೇಟಸ್ ಚೆಕ್ ಮಾಡಿಕೊಳ್ಳಿ, ಎಕ್ಯೂಐ ಆಪ್‌ನಲ್ಲಿ (ಸಮೀರ್ ಆಪ್) ಗಾಳಿಯ ಸ್ಥಿತಿ ನೋಡುತ್ತಿರಿ ಎಂದು ನಿರ್ದೇಶಿಸಿದೆ.

ಜ್ವಾಲಾಮುಖಿಯ ಬೂದಿಯ ಮೋಡ ನಾಳೆ (ನ.26) ಭಾರತದ ಆಕಾಶದಿಂದ ಪೂರ್ತಿಯಾಗಿ ಹೊರಟು ಚೀನಾ ಕಡೆಗೆ ಸಾಗುತ್ತದೆ ಎಂದು ಐಎಂಡಿ ತಿಳಿಸಿದೆ. ನಾಳೆ ಸಂಜೆಯ ನಂತರ ದೆಹಲಿ-ಉತ್ತರ ಭಾರತದ ಆಕಾಶ ಸ್ವಲ್ಪ ಸ್ಪಷ್ಟವಾಗುವ ಸಾಧ್ಯತೆ ಇದೆ (ಆದರೂ ಸಾಮಾನ್ಯ ಮಾಲಿನ್ಯ ಇರುತ್ತದೆ).

ಜ್ವಾಲಾಮುಖಿ ಸ್ಪೋಟಿಸಿದ ಜಾಗ ಭಾರತದಿಂದ ಎಷ್ಟು ದೂರದಲ್ಲಿದೆ?

ಹಯ್ಲಿ ಗುಬ್ಬಿ ಜ್ವಾಲಾಮುಖಿ ಇಥಿಯೋಪಿಯಾದ ಅಫಾರ್ ಪ್ರದೇಶದಲ್ಲಿದೆ. ಇದರ ಅಂದಾಜು ಸ್ಥಾನ : 14° 15′ ಉತ್ತರ ಅಕ್ಷಾಂಶ, 40° 40′ ಪೂರ್ವ ರೇಖಾಂಶ (ಎರ್ಟಾ ಅಲೆ ಜ್ವಾಲಾಮುಖಿಯ ಸಮೀಪದಲ್ಲಿ). ಭಾರತದ ದೆಹಲಿಗೆ (ಸುಮಾರು 28° 36′ ಉತ್ತರ, 77° 12′ ಪೂರ್ವ) ಈ ಜ್ವಾಲಾಮುಖಿಯಿಂದ ನೇರ ಗಾಳಿಪಥದ ದೂರ ಸುಮಾರು 3,800 ಕಿಲೋಮೀಟರ್ (2,360 ಮೈಲ್) ಎಂದು ವರದಿಗಳು ಹೇಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...