Homeಮುಖಪುಟಭಾರತ ತಲುಪಿದ ಇಥಿಯೋಪಿಯಾದ ಜ್ವಾಲಾಮುಖಿ ಬೂದಿ : ವಿಮಾನ ಸಂಚಾರ ವ್ಯತ್ಯಯ

ಭಾರತ ತಲುಪಿದ ಇಥಿಯೋಪಿಯಾದ ಜ್ವಾಲಾಮುಖಿ ಬೂದಿ : ವಿಮಾನ ಸಂಚಾರ ವ್ಯತ್ಯಯ

- Advertisement -
- Advertisement -

ಸುಮಾರು 10 ರಿಂದ 12 ಸಾವಿರ ವರ್ಷಗಳ ನಂತರ ಮೊದಲ ಬಾರಿಗೆ, 2025 ನವೆಂಬರ್ 23ರಂದು ಇಥಿಯೋಪಿಯಾದ ಅಫಾರ್ ಪ್ರದೇಶದಲ್ಲಿರುವ ಹಯ್ಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟಗೊಂಡಿದೆ.

ಪರಿಣಾಮ ಭೂಮಿಯಿಂದ 15 ಕಿಲೋಮೀಟರ್ ಎತ್ತರಕ್ಕೆ ಆಕಾಶದತ್ತ ಭಾರೀ ಪ್ರಮಾಣದ ಜ್ವಾಲಾಮುಖಿ ಬೂದಿ, ಸಲ್ಫರ್ ಡೈಆಕ್ಸೈಡ್ ಮತ್ತು ಸಣ್ಣ ಗಾಜಿನಂತಹ ಕಣಗಳು ಚಿಮ್ಮಿವೆ.

ಜ್ವಾಲಾಮುಖಿ ಬೂದಿಯ ಮೋಡ ಈಗ ಸಾವಿರಾರು ಕಿಲೋಮೀಟರ್ ದೂರ ಪ್ರಯಾಣಿಸಿ, ಕೆಂಪು ಸಮುದ್ರ ಮತ್ತು ಅರೇಬಿಯನ್ ಸಮುದ್ರವನ್ನು ದಾಟಿ ಭಾರತದ ಆಕಾಶಕ್ಕೆ ಬಂದಿದೆ. ನವೆಂಬರ್ 24ರ ಸಂಜೆ 6:30ರ ನಂತರ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಆಕಾಶದಲ್ಲಿ ತೆಳುವಾದ ಮಂಜಿನಂತಹ ಪದರ ರಚನೆಯಾಗಿದೆ. ಆಕಾಶ ಸ್ವಲ್ಪ ಕಪ್ಪಗೆ ಗೋಚರಿಸಿದೆ.

ದೆಹಲಿಯ ಗಾಳಿಯ ಗುಣಮಟ್ಟ (ಎಕ್ಯೂಐ) ಈಗಾಗಲೇ 363 ರಿಂದ 435ರಷ್ಟು ‘ತೀವ್ರ’ ಮಟ್ಟದಲ್ಲಿದೆ. ಜ್ವಾಲಾಮುಖಿ ಬೂದಿ ಬಹಳ ಎತ್ತರದಲ್ಲಿ (25 ರಿಂದ 45 ಸಾವಿರ ಅಡಿ) ಇರುವುದರಿಂದ ಭೂಮಿಯ ಮೇಲಿನ ಮಾಲಿನ್ಯ ಹೆಚ್ಚಳವಾಗುವ ಸಾಧ್ಯತೆ ಕಡಿಮೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.

ಆದರೆ, ಸ್ವಲ್ಪ ಬೂದಿ ಕೆಳಗೆ ಬಂದರೆ ಕಣ್ಣು, ಗಂಟಲು, ಶ್ವಾಸಕೋಶಕ್ಕೆ ತೊಂದರೆ ಆಗಬಹುದು. ಆಸ್ತಮಾ, ಹೃದ್ರೋಗ ಇರುವವರು ಎಚ್ಚರ ವಹಿಸಬೇಕು ಎಂದು ಐಎಂಡಿ ಮುನ್ನೆಚ್ಚರಿಕೆ ನೀಡಿದೆ.

ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

ಜ್ವಾಲಾಮುಖಿ ಬೂದಿ ವಿಮಾನದ ಇಂಜಿನ್‌ಗೆ ತುಂಬಾ ಅಪಾಯಕಾರಿ. ಹಾಗಾಗಿ, ದೆಹಲಿ, ಮುಂಬೈ, ಹೈದರಾಬಾದ್, ಕೊಚ್ಚಿ ಸೇರಿದಂತೆ ಭಾರತದ ಹಲವು ವಿಮಾನ ನಿಲ್ದಾಣಗಳಿಂದ ಕೆಲ ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ. ಇನ್ನೂ ಕೆಲವು ತಡವಾಗಿ ಹಾರಾಟ ನಡೆಸಿವೆ.

ಮಧ್ಯಪ್ರಾಚ್ಯ ಮತ್ತು ಯೂರೋಪ್‌ನಿಂದ ಭಾರತಕ್ಕೆ ಬರುವ ವಿಮಾನಗಳು ಬೇರೆ ದಾರಿಯಲ್ಲಿ ಬಂದಿವೆ. ಇಂದು (ನ.25) ಸಂಜೆ 7:30ರ ನಂತರ ಬೂದಿಯ ಮೋಡ ಭಾರತದಿಂದ ಹೊರಹೋಗುತ್ತದೆ ಎಂದು ಐಎಂಡಿ ಹೇಳಿದೆ.

ಜ್ವಾಲಾಮುಖಿಯ ಬೂದಿ ಮುಖ್ಯವಾಗಿ ದೆಹಲಿಯಲ್ಲಿ ಕಾಣಿಸಿಕೊಂಡಿದೆ. ದೆಹಲಿಯಲ್ಲಿ ಈಗಾಗಲೇ ವಿಪರೀತ ವಾಯುಮಾಲಿನ್ಯ ಇರುವುದರಿಂದ ಜನರು ಹೊರಗಡೆ ಹೋಗುವಾಗ N95 ಮಾಸ್ಕ್ ಧರಿಸುವಂತೆ ಆಡಳಿತ ಸಲಹೆ ನೀಡಿದೆ.

ಮಕ್ಕಳು, ಹಿರಿಯರು, ಶ್ವಾಸಕೋಶ ಸಮಸ್ಯೆ ಇರುವವರು ಹೆಚ್ಚು ಎಚ್ಚರಿಕೆ ವಹಿಸಬೇಕು. ವಿಮಾನ ಪ್ರಯಾಣ ಮಾಡುತ್ತಿದ್ದರೆ ಫ್ಲೈಟ್ ಸ್ಟೇಟಸ್ ಚೆಕ್ ಮಾಡಿಕೊಳ್ಳಿ, ಎಕ್ಯೂಐ ಆಪ್‌ನಲ್ಲಿ (ಸಮೀರ್ ಆಪ್) ಗಾಳಿಯ ಸ್ಥಿತಿ ನೋಡುತ್ತಿರಿ ಎಂದು ನಿರ್ದೇಶಿಸಿದೆ.

ಜ್ವಾಲಾಮುಖಿಯ ಬೂದಿಯ ಮೋಡ ನಾಳೆ (ನ.26) ಭಾರತದ ಆಕಾಶದಿಂದ ಪೂರ್ತಿಯಾಗಿ ಹೊರಟು ಚೀನಾ ಕಡೆಗೆ ಸಾಗುತ್ತದೆ ಎಂದು ಐಎಂಡಿ ತಿಳಿಸಿದೆ. ನಾಳೆ ಸಂಜೆಯ ನಂತರ ದೆಹಲಿ-ಉತ್ತರ ಭಾರತದ ಆಕಾಶ ಸ್ವಲ್ಪ ಸ್ಪಷ್ಟವಾಗುವ ಸಾಧ್ಯತೆ ಇದೆ (ಆದರೂ ಸಾಮಾನ್ಯ ಮಾಲಿನ್ಯ ಇರುತ್ತದೆ).

ಜ್ವಾಲಾಮುಖಿ ಸ್ಪೋಟಿಸಿದ ಜಾಗ ಭಾರತದಿಂದ ಎಷ್ಟು ದೂರದಲ್ಲಿದೆ?

ಹಯ್ಲಿ ಗುಬ್ಬಿ ಜ್ವಾಲಾಮುಖಿ ಇಥಿಯೋಪಿಯಾದ ಅಫಾರ್ ಪ್ರದೇಶದಲ್ಲಿದೆ. ಇದರ ಅಂದಾಜು ಸ್ಥಾನ : 14° 15′ ಉತ್ತರ ಅಕ್ಷಾಂಶ, 40° 40′ ಪೂರ್ವ ರೇಖಾಂಶ (ಎರ್ಟಾ ಅಲೆ ಜ್ವಾಲಾಮುಖಿಯ ಸಮೀಪದಲ್ಲಿ). ಭಾರತದ ದೆಹಲಿಗೆ (ಸುಮಾರು 28° 36′ ಉತ್ತರ, 77° 12′ ಪೂರ್ವ) ಈ ಜ್ವಾಲಾಮುಖಿಯಿಂದ ನೇರ ಗಾಳಿಪಥದ ದೂರ ಸುಮಾರು 3,800 ಕಿಲೋಮೀಟರ್ (2,360 ಮೈಲ್) ಎಂದು ವರದಿಗಳು ಹೇಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...