Homeಮುಖಪುಟಭಾರತ ತಲುಪಿದ ಇಥಿಯೋಪಿಯಾದ ಜ್ವಾಲಾಮುಖಿ ಬೂದಿ : ವಿಮಾನ ಸಂಚಾರ ವ್ಯತ್ಯಯ

ಭಾರತ ತಲುಪಿದ ಇಥಿಯೋಪಿಯಾದ ಜ್ವಾಲಾಮುಖಿ ಬೂದಿ : ವಿಮಾನ ಸಂಚಾರ ವ್ಯತ್ಯಯ

- Advertisement -
- Advertisement -

ಸುಮಾರು 10 ರಿಂದ 12 ಸಾವಿರ ವರ್ಷಗಳ ನಂತರ ಮೊದಲ ಬಾರಿಗೆ, 2025 ನವೆಂಬರ್ 23ರಂದು ಇಥಿಯೋಪಿಯಾದ ಅಫಾರ್ ಪ್ರದೇಶದಲ್ಲಿರುವ ಹಯ್ಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟಗೊಂಡಿದೆ.

ಪರಿಣಾಮ ಭೂಮಿಯಿಂದ 15 ಕಿಲೋಮೀಟರ್ ಎತ್ತರಕ್ಕೆ ಆಕಾಶದತ್ತ ಭಾರೀ ಪ್ರಮಾಣದ ಜ್ವಾಲಾಮುಖಿ ಬೂದಿ, ಸಲ್ಫರ್ ಡೈಆಕ್ಸೈಡ್ ಮತ್ತು ಸಣ್ಣ ಗಾಜಿನಂತಹ ಕಣಗಳು ಚಿಮ್ಮಿವೆ.

ಜ್ವಾಲಾಮುಖಿ ಬೂದಿಯ ಮೋಡ ಈಗ ಸಾವಿರಾರು ಕಿಲೋಮೀಟರ್ ದೂರ ಪ್ರಯಾಣಿಸಿ, ಕೆಂಪು ಸಮುದ್ರ ಮತ್ತು ಅರೇಬಿಯನ್ ಸಮುದ್ರವನ್ನು ದಾಟಿ ಭಾರತದ ಆಕಾಶಕ್ಕೆ ಬಂದಿದೆ. ನವೆಂಬರ್ 24ರ ಸಂಜೆ 6:30ರ ನಂತರ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಆಕಾಶದಲ್ಲಿ ತೆಳುವಾದ ಮಂಜಿನಂತಹ ಪದರ ರಚನೆಯಾಗಿದೆ. ಆಕಾಶ ಸ್ವಲ್ಪ ಕಪ್ಪಗೆ ಗೋಚರಿಸಿದೆ.

ದೆಹಲಿಯ ಗಾಳಿಯ ಗುಣಮಟ್ಟ (ಎಕ್ಯೂಐ) ಈಗಾಗಲೇ 363 ರಿಂದ 435ರಷ್ಟು ‘ತೀವ್ರ’ ಮಟ್ಟದಲ್ಲಿದೆ. ಜ್ವಾಲಾಮುಖಿ ಬೂದಿ ಬಹಳ ಎತ್ತರದಲ್ಲಿ (25 ರಿಂದ 45 ಸಾವಿರ ಅಡಿ) ಇರುವುದರಿಂದ ಭೂಮಿಯ ಮೇಲಿನ ಮಾಲಿನ್ಯ ಹೆಚ್ಚಳವಾಗುವ ಸಾಧ್ಯತೆ ಕಡಿಮೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.

ಆದರೆ, ಸ್ವಲ್ಪ ಬೂದಿ ಕೆಳಗೆ ಬಂದರೆ ಕಣ್ಣು, ಗಂಟಲು, ಶ್ವಾಸಕೋಶಕ್ಕೆ ತೊಂದರೆ ಆಗಬಹುದು. ಆಸ್ತಮಾ, ಹೃದ್ರೋಗ ಇರುವವರು ಎಚ್ಚರ ವಹಿಸಬೇಕು ಎಂದು ಐಎಂಡಿ ಮುನ್ನೆಚ್ಚರಿಕೆ ನೀಡಿದೆ.

ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

ಜ್ವಾಲಾಮುಖಿ ಬೂದಿ ವಿಮಾನದ ಇಂಜಿನ್‌ಗೆ ತುಂಬಾ ಅಪಾಯಕಾರಿ. ಹಾಗಾಗಿ, ದೆಹಲಿ, ಮುಂಬೈ, ಹೈದರಾಬಾದ್, ಕೊಚ್ಚಿ ಸೇರಿದಂತೆ ಭಾರತದ ಹಲವು ವಿಮಾನ ನಿಲ್ದಾಣಗಳಿಂದ ಕೆಲ ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ. ಇನ್ನೂ ಕೆಲವು ತಡವಾಗಿ ಹಾರಾಟ ನಡೆಸಿವೆ.

ಮಧ್ಯಪ್ರಾಚ್ಯ ಮತ್ತು ಯೂರೋಪ್‌ನಿಂದ ಭಾರತಕ್ಕೆ ಬರುವ ವಿಮಾನಗಳು ಬೇರೆ ದಾರಿಯಲ್ಲಿ ಬಂದಿವೆ. ಇಂದು (ನ.25) ಸಂಜೆ 7:30ರ ನಂತರ ಬೂದಿಯ ಮೋಡ ಭಾರತದಿಂದ ಹೊರಹೋಗುತ್ತದೆ ಎಂದು ಐಎಂಡಿ ಹೇಳಿದೆ.

ಜ್ವಾಲಾಮುಖಿಯ ಬೂದಿ ಮುಖ್ಯವಾಗಿ ದೆಹಲಿಯಲ್ಲಿ ಕಾಣಿಸಿಕೊಂಡಿದೆ. ದೆಹಲಿಯಲ್ಲಿ ಈಗಾಗಲೇ ವಿಪರೀತ ವಾಯುಮಾಲಿನ್ಯ ಇರುವುದರಿಂದ ಜನರು ಹೊರಗಡೆ ಹೋಗುವಾಗ N95 ಮಾಸ್ಕ್ ಧರಿಸುವಂತೆ ಆಡಳಿತ ಸಲಹೆ ನೀಡಿದೆ.

ಮಕ್ಕಳು, ಹಿರಿಯರು, ಶ್ವಾಸಕೋಶ ಸಮಸ್ಯೆ ಇರುವವರು ಹೆಚ್ಚು ಎಚ್ಚರಿಕೆ ವಹಿಸಬೇಕು. ವಿಮಾನ ಪ್ರಯಾಣ ಮಾಡುತ್ತಿದ್ದರೆ ಫ್ಲೈಟ್ ಸ್ಟೇಟಸ್ ಚೆಕ್ ಮಾಡಿಕೊಳ್ಳಿ, ಎಕ್ಯೂಐ ಆಪ್‌ನಲ್ಲಿ (ಸಮೀರ್ ಆಪ್) ಗಾಳಿಯ ಸ್ಥಿತಿ ನೋಡುತ್ತಿರಿ ಎಂದು ನಿರ್ದೇಶಿಸಿದೆ.

ಜ್ವಾಲಾಮುಖಿಯ ಬೂದಿಯ ಮೋಡ ನಾಳೆ (ನ.26) ಭಾರತದ ಆಕಾಶದಿಂದ ಪೂರ್ತಿಯಾಗಿ ಹೊರಟು ಚೀನಾ ಕಡೆಗೆ ಸಾಗುತ್ತದೆ ಎಂದು ಐಎಂಡಿ ತಿಳಿಸಿದೆ. ನಾಳೆ ಸಂಜೆಯ ನಂತರ ದೆಹಲಿ-ಉತ್ತರ ಭಾರತದ ಆಕಾಶ ಸ್ವಲ್ಪ ಸ್ಪಷ್ಟವಾಗುವ ಸಾಧ್ಯತೆ ಇದೆ (ಆದರೂ ಸಾಮಾನ್ಯ ಮಾಲಿನ್ಯ ಇರುತ್ತದೆ).

ಜ್ವಾಲಾಮುಖಿ ಸ್ಪೋಟಿಸಿದ ಜಾಗ ಭಾರತದಿಂದ ಎಷ್ಟು ದೂರದಲ್ಲಿದೆ?

ಹಯ್ಲಿ ಗುಬ್ಬಿ ಜ್ವಾಲಾಮುಖಿ ಇಥಿಯೋಪಿಯಾದ ಅಫಾರ್ ಪ್ರದೇಶದಲ್ಲಿದೆ. ಇದರ ಅಂದಾಜು ಸ್ಥಾನ : 14° 15′ ಉತ್ತರ ಅಕ್ಷಾಂಶ, 40° 40′ ಪೂರ್ವ ರೇಖಾಂಶ (ಎರ್ಟಾ ಅಲೆ ಜ್ವಾಲಾಮುಖಿಯ ಸಮೀಪದಲ್ಲಿ). ಭಾರತದ ದೆಹಲಿಗೆ (ಸುಮಾರು 28° 36′ ಉತ್ತರ, 77° 12′ ಪೂರ್ವ) ಈ ಜ್ವಾಲಾಮುಖಿಯಿಂದ ನೇರ ಗಾಳಿಪಥದ ದೂರ ಸುಮಾರು 3,800 ಕಿಲೋಮೀಟರ್ (2,360 ಮೈಲ್) ಎಂದು ವರದಿಗಳು ಹೇಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...