Homeಕರ್ನಾಟಕಎತ್ತಿನಹೊಳೆ ಯೋಜನೆಯಿಂದ ಪರಿಸರಕ್ಕೆ ಹಾನಿಯಾಗಲ್ಲ: ಕೇಂದ್ರ ಸರ್ಕಾರ

ಎತ್ತಿನಹೊಳೆ ಯೋಜನೆಯಿಂದ ಪರಿಸರಕ್ಕೆ ಹಾನಿಯಾಗಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

ಎತ್ತಿನಹೊಳೆ ಯೋಜನೆಯಿಂದ ಪರಿಸರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿರುವುದಾಗಿ ‘ಡೆಕ್ಕನ್‌ ಹೆರಾಲ್ಡ್‌’ ವರದಿ ಮಾಡಿದೆ. ಹಾಸನ ಜಿಲ್ಲೆಯ ಸಕಲೇಶಪುರ ಬಳಿಯ ಎತ್ತಿನಹೊಳೆ ಮೂಲಕ ನೀರನ್ನು ಮೇಲೆತ್ತುವ ಯೋಜನೆ ಇದಾಗಿದೆ.

ಎತ್ತಿನಹೊಳೆ ಯೋಜನೆಗೆ ಕೇವಲ 13.93 ಹೆಕ್ಟೇರ್ ಅರಣ್ಯ ಭೂಮಿಯನ್ನು ಬಳಸಲಾಗುತ್ತಿದೆ. ಇದರಿಂದ ಪರಿಸರದ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

“ಇದು ಕುಡಿಯುವ ನೀರು ಸರಬರಾಜು ಯೋಜನೆಯಾಗಿದೆ. ಹೀಗಾಗಿ ಇದು ಪರಿಸರ ಪ್ರಭಾವ ಮೌಲ್ಯಮಾಪನ (EIA) ಅಧಿಸೂಚನೆ 2006 ಮತ್ತು ಅದರ 2009ರ ತಿದ್ದುಪಡಿಯ ನಿಬಂಧನೆಯನ್ನು ಕಡೆಗಣಿಸುವುದಿಲ್ಲ” ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ.

ಹಾಗಾಗಿ ಪರಿಸರ ಸಂಬಂಧಿತ ಅನುಮತಿಯಿಂದ ವಿನಾಯಿತಿ ನೀಡಲಾಗಿದೆ ಎಂದು ಜಲಶಕ್ತಿ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ರಾಜ್ಯಸಭೆಯಲ್ಲಿ ಇತ್ತೀಚಿನ ಅಧಿವೇಶನದಲ್ಲಿ ಪ್ರತಿಕ್ರಿಯಿಸಿದ್ದಾರೆ. ಜೆಡಿಯುನ ಅನೀಲ್ ಪ್ರಸಾದ್ ಹೆಗ್ಡೆ ಅವರ ಪ್ರಶ್ನೆಗೆ ಉತ್ತರಿಸುತ್ತಾ ಸಚಿವರು ಈ ಮಾತುಗಳನ್ನಾಡಿದ್ದಾರೆ.

ಮೊದಲ ಹಂತಕ್ಕೆ ಅಗತ್ಯವಿರುವ 13.93 ಹೆಕ್ಟೇರ್ ಅರಣ್ಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಹಂತ-1ಕ್ಕೆ ಅನುಮತಿಯನ್ನು ಪರಿಸರ ಮತ್ತು ಅರಣ್ಯ ಸಚಿವಾಲಯದಿಂದ ಕೆಲವು ಷರತ್ತುಗಳೊಂದಿಗೆ ಜನವರಿ 29, 2016ರಂದು ಪಡೆಯಲಾಗಿದೆ. ಹಂತ-2ಕ್ಕೆ ಕೆಲವು ಷರತ್ತುಗಳೊಂದಿಗೆ ಸೆಪ್ಟೆಂಬರ್ 15, 2016ರಂದು ಕ್ಲಿಯರೆನ್ಸ್ ಪಡೆಯಲಾಗಿದೆ. ಎತ್ತಿನಹೊಳೆ ನೀರಾವರಿ ಯೋಜನೆಯು ರಾಜ್ಯ ಸರ್ಕಾರ ಹಣದಿಂದ ನಡೆಯುತ್ತಿದೆ.

ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ಹಾಸನ, ತುಮಕೂರು, ರಾಮನಗರ ಮತ್ತು ಬೆಂಗಳೂರು ಸೇರಿದಂತೆ ಏಳು ಬರಪೀಡಿತ ಜಿಲ್ಲೆಗಳ 29 ತಾಲ್ಲೂಕುಗಳ 6,557 ಗ್ರಾಮಗಳಿಗೆ ಮತ್ತು 38 ಪಟ್ಟಣಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆ ಇದೆಂದು ಸರ್ಕಾರ ಹೇಳುತ್ತದೆ. ಅದಕ್ಕಾಗಿ ಪಶ್ಚಿಮ ಘಟ್ಟಗಳಲ್ಲಿ ಹರಿಯುವ ತೊರೆಗಳಿಂದ 24.01 ಟಿಎಂಸಿ ಅಡಿ ಹೆಚ್ಚುವರಿ ನೀರನ್ನು ಈ ಭಾಗಕ್ಕೆ ತರುವುದಾಗಿ ತಿಳಿಸಿದೆ.

ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷರಾದ ಆಂಜನೇಯ ರೆಡ್ಡಿ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿದರು. “ಡೆಕ್ಕನ್‌ ಹೆರಾಲ್ಡ್‌ನಲ್ಲಿ ಮಾಡಲಾಗಿರುವ ವರದಿಯು ಅನಗತ್ಯವಾಗಿತ್ತು ಅನಿಸುತ್ತದೆ. ಎತ್ತಿನಹೊಳೆ ವಿಚಾರ ಸದ್ಯ ಚರ್ಚೆಯಲ್ಲಿಲ್ಲ. ಕರ್ನಾಟಕ ಸಲ್ಲಿಸಿರುವ ವರದಿಯನ್ನು ಆಧಾರಿಸಿ ಯಾವುದೇ ಅರಣ್ಯನಾಶವಾಗಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೆ ಈ ಕುರಿತು ಯಾವುದೇ ಅಧ್ಯಯನ ನಡೆದಿಲ್ಲ. ಕುಡಿಯುವ ನೀರಿನ ಯೋಜನೆ ಎಂದು ಹೇಳಿ ವಿನಾಯಿತಿ ಪಡೆದಿದ್ದಾರೆ. ರಾಜ್ಯ ಸರ್ಕಾರದ ಸಂಪೂರ್ಣ ಹಣ ವಿನಿಯೋಗಿಸುತ್ತಿರುವುದರಿಂದ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸುವುದಿಲ್ಲ” ಎಂದು ವಿವರಿಸಿದರು.

“ಈವರೆಗೆ ಒಂದೇ ಒಂದು ಊರಿಗೆ ಎತ್ತಿನಹೊಳೆ ಮೂಲಕ ನೀರು ಹರಿದುಬಂದಿಲ್ಲ. ಆದರೆ 13,000 ಕೋಟಿ ರೂ. ಖರ್ಚಾಗಿದೆ. 24,000 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ವಿನಿಯೋಗಿಸುತ್ತಿದ್ದಾರೆ. ಈ ಯೋಜನೆ ಆರಂಭವಾದಾಗಿನಿಂದಲೂ ವೈಜ್ಞಾನಿಕ ಸಂಸ್ಥೆಗಳು ವಿರೋಧಿಸುತ್ತಾ ಬಂದಿವೆ. ಗುತ್ತಿಗೆದಾರರ ಜೇಬು ತುಂಬಿಸುವ ಯೋಜನೆ ಇದಾಗಿದೆ. ಅನಗತ್ಯ ಕೆಲಸಗಳನ್ನು ಕೈಗೊಂಡು ಹಣವನ್ನು ಲೂಟಿ ಮಾಡಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರದ ನೀರಿನಲ್ಲಿ ಪ್ಲೋರೈಡ್, ನೈಟ್ರೇಡ್ ಇದೆ, ಹೀಗಾಗಿ ತಕ್ಷಣ ಎತ್ತಿನಹೊಳೆಯ ನೀರು ಹರಿಸಬೇಕೆಂದು ಹೇಳುತ್ತಿದ್ದರು. ಹತ್ತು ವರ್ಷವಾದರೂ ನೀರು ಬಂದಿಲ್ಲ. ಹೀಗಿರುವ 24,000 ಕೋಟಿ ರೂ.ಗಳನ್ನು ಹೆಚ್ಚಿಸಿಕೊಂಡು ಮುಂದಿನ ಚುನಾವಣೆಗಾಗಿ ಹಣ ಮಾಡಿಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿದರು.

“ಕಳೆದ ಕೆಲವು ವರ್ಷಗಳಿಂದ ಉತ್ತಮ ಮಳೆಯಾಗುತ್ತಿದೆ. ಕೃಷಿ ಭೂಮಿ ಹಾಗೂ ಕುಡಿಯುವ ನೀರಿನ ಮುಂದಾಲೋಚನೆಯಲ್ಲಿ ಕೆರೆ ಕುಂಟೆಗಳನ್ನು ಪಾರಂಪರಿಕವಾಗಿ ನಿರ್ಮಾಣ ಮಾಡಲಾಗಿದೆ. ನಂದಿ ಬೆಟ್ಟವನ್ನು ಕೇಂದ್ರವಾಗಿಟ್ಟುಕೊಂಡು ಒಂದು ಕೆರೆಯಿಂದ ಮತ್ತೊಂದು ಕೆರೆಗೆ ನೀರು ಹರಿದು ಹೋಗುವಂತೆ ವೈಜ್ಞಾನಿಕ ಕ್ರಮ ಅನುಸರಿಸಿರುವುದನ್ನು ಕಾಣಬಹುದು. ಉತ್ತರ ಪಿನಾಕಿನಿ, ದಕ್ಷಿಣಿ ಪಿನಾಕಿನಿ, ಅರ್ಕಾವತಿ, ಚಿತ್ರಾವತಿ, ಪಾಲಾರ್‌ ನದಿ ಪಾತ್ರದಲ್ಲಿ ಕೆರೆಗಳನ್ನು ನಿರ್ಮಿಸಲಾಗಿತ್ತು. ಇಂತಹ ಅದ್ಭುತವಾದ ಕೆರೆಗಳ ಜಾಲ ಇಂದು ಕಣ್ಮರೆಯಾಗುತ್ತಿದೆ. ಇವುಗಳನ್ನು ನಿರ್ವಹಣೆ ಮಾಡುವಲ್ಲಿ ವಿಫಲರಾಗಿದ್ದೇವೆ. ಕಳೆದ ಮೂರು ವರ್ಷಗಳಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರಾಸರಿಗಿಂತ ದುಪ್ಪಟ್ಟು ಮಳೆಯಾಗಿದೆ. ದುರಾದೃಷ್ಟವಶಾತ್‌ ನೀರನ್ನು ತಮಿಳುನಾಡು, ಆಂಧ್ರಪ್ರದೇಶಕ್ಕೆ ಹರಿಬಿಟ್ಟಿದ್ದೇವೆಯೇ ಹೊರತು, ಕರೆಗಳಲ್ಲಿ ಹಿಡಿದಿಟ್ಟಲು ಯೋಚಿಸಲಿಲ್ಲ. ರಾಜಕಾಲುವೆ, ಕೆರೆಗಳು ಒತ್ತುಯಾಗಿವೆ. ಕೆಲವು ಕಡೆ ಮಾಯವಾಗಿವೆ, ಕೆಲವು ಕಡೆ ಹೂಳು ತುಂಬಿಕೊಂಡಿವೆ. ಈ ಜಲಮೂಲಗಳನ್ನು ಪುನರುಜ್ಜೀವನ ಮಾಡಿಕೊಂಡರೆ ನೀರಿನ ಅಭಾವವಾಗದು” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...