Homeಕರ್ನಾಟಕಎತ್ತಿನಹೊಳೆ ಯೋಜನೆಯಿಂದ ಪರಿಸರಕ್ಕೆ ಹಾನಿಯಾಗಲ್ಲ: ಕೇಂದ್ರ ಸರ್ಕಾರ

ಎತ್ತಿನಹೊಳೆ ಯೋಜನೆಯಿಂದ ಪರಿಸರಕ್ಕೆ ಹಾನಿಯಾಗಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

ಎತ್ತಿನಹೊಳೆ ಯೋಜನೆಯಿಂದ ಪರಿಸರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿರುವುದಾಗಿ ‘ಡೆಕ್ಕನ್‌ ಹೆರಾಲ್ಡ್‌’ ವರದಿ ಮಾಡಿದೆ. ಹಾಸನ ಜಿಲ್ಲೆಯ ಸಕಲೇಶಪುರ ಬಳಿಯ ಎತ್ತಿನಹೊಳೆ ಮೂಲಕ ನೀರನ್ನು ಮೇಲೆತ್ತುವ ಯೋಜನೆ ಇದಾಗಿದೆ.

ಎತ್ತಿನಹೊಳೆ ಯೋಜನೆಗೆ ಕೇವಲ 13.93 ಹೆಕ್ಟೇರ್ ಅರಣ್ಯ ಭೂಮಿಯನ್ನು ಬಳಸಲಾಗುತ್ತಿದೆ. ಇದರಿಂದ ಪರಿಸರದ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

“ಇದು ಕುಡಿಯುವ ನೀರು ಸರಬರಾಜು ಯೋಜನೆಯಾಗಿದೆ. ಹೀಗಾಗಿ ಇದು ಪರಿಸರ ಪ್ರಭಾವ ಮೌಲ್ಯಮಾಪನ (EIA) ಅಧಿಸೂಚನೆ 2006 ಮತ್ತು ಅದರ 2009ರ ತಿದ್ದುಪಡಿಯ ನಿಬಂಧನೆಯನ್ನು ಕಡೆಗಣಿಸುವುದಿಲ್ಲ” ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ.

ಹಾಗಾಗಿ ಪರಿಸರ ಸಂಬಂಧಿತ ಅನುಮತಿಯಿಂದ ವಿನಾಯಿತಿ ನೀಡಲಾಗಿದೆ ಎಂದು ಜಲಶಕ್ತಿ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ರಾಜ್ಯಸಭೆಯಲ್ಲಿ ಇತ್ತೀಚಿನ ಅಧಿವೇಶನದಲ್ಲಿ ಪ್ರತಿಕ್ರಿಯಿಸಿದ್ದಾರೆ. ಜೆಡಿಯುನ ಅನೀಲ್ ಪ್ರಸಾದ್ ಹೆಗ್ಡೆ ಅವರ ಪ್ರಶ್ನೆಗೆ ಉತ್ತರಿಸುತ್ತಾ ಸಚಿವರು ಈ ಮಾತುಗಳನ್ನಾಡಿದ್ದಾರೆ.

ಮೊದಲ ಹಂತಕ್ಕೆ ಅಗತ್ಯವಿರುವ 13.93 ಹೆಕ್ಟೇರ್ ಅರಣ್ಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಹಂತ-1ಕ್ಕೆ ಅನುಮತಿಯನ್ನು ಪರಿಸರ ಮತ್ತು ಅರಣ್ಯ ಸಚಿವಾಲಯದಿಂದ ಕೆಲವು ಷರತ್ತುಗಳೊಂದಿಗೆ ಜನವರಿ 29, 2016ರಂದು ಪಡೆಯಲಾಗಿದೆ. ಹಂತ-2ಕ್ಕೆ ಕೆಲವು ಷರತ್ತುಗಳೊಂದಿಗೆ ಸೆಪ್ಟೆಂಬರ್ 15, 2016ರಂದು ಕ್ಲಿಯರೆನ್ಸ್ ಪಡೆಯಲಾಗಿದೆ. ಎತ್ತಿನಹೊಳೆ ನೀರಾವರಿ ಯೋಜನೆಯು ರಾಜ್ಯ ಸರ್ಕಾರ ಹಣದಿಂದ ನಡೆಯುತ್ತಿದೆ.

ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ಹಾಸನ, ತುಮಕೂರು, ರಾಮನಗರ ಮತ್ತು ಬೆಂಗಳೂರು ಸೇರಿದಂತೆ ಏಳು ಬರಪೀಡಿತ ಜಿಲ್ಲೆಗಳ 29 ತಾಲ್ಲೂಕುಗಳ 6,557 ಗ್ರಾಮಗಳಿಗೆ ಮತ್ತು 38 ಪಟ್ಟಣಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆ ಇದೆಂದು ಸರ್ಕಾರ ಹೇಳುತ್ತದೆ. ಅದಕ್ಕಾಗಿ ಪಶ್ಚಿಮ ಘಟ್ಟಗಳಲ್ಲಿ ಹರಿಯುವ ತೊರೆಗಳಿಂದ 24.01 ಟಿಎಂಸಿ ಅಡಿ ಹೆಚ್ಚುವರಿ ನೀರನ್ನು ಈ ಭಾಗಕ್ಕೆ ತರುವುದಾಗಿ ತಿಳಿಸಿದೆ.

ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷರಾದ ಆಂಜನೇಯ ರೆಡ್ಡಿ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿದರು. “ಡೆಕ್ಕನ್‌ ಹೆರಾಲ್ಡ್‌ನಲ್ಲಿ ಮಾಡಲಾಗಿರುವ ವರದಿಯು ಅನಗತ್ಯವಾಗಿತ್ತು ಅನಿಸುತ್ತದೆ. ಎತ್ತಿನಹೊಳೆ ವಿಚಾರ ಸದ್ಯ ಚರ್ಚೆಯಲ್ಲಿಲ್ಲ. ಕರ್ನಾಟಕ ಸಲ್ಲಿಸಿರುವ ವರದಿಯನ್ನು ಆಧಾರಿಸಿ ಯಾವುದೇ ಅರಣ್ಯನಾಶವಾಗಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೆ ಈ ಕುರಿತು ಯಾವುದೇ ಅಧ್ಯಯನ ನಡೆದಿಲ್ಲ. ಕುಡಿಯುವ ನೀರಿನ ಯೋಜನೆ ಎಂದು ಹೇಳಿ ವಿನಾಯಿತಿ ಪಡೆದಿದ್ದಾರೆ. ರಾಜ್ಯ ಸರ್ಕಾರದ ಸಂಪೂರ್ಣ ಹಣ ವಿನಿಯೋಗಿಸುತ್ತಿರುವುದರಿಂದ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸುವುದಿಲ್ಲ” ಎಂದು ವಿವರಿಸಿದರು.

“ಈವರೆಗೆ ಒಂದೇ ಒಂದು ಊರಿಗೆ ಎತ್ತಿನಹೊಳೆ ಮೂಲಕ ನೀರು ಹರಿದುಬಂದಿಲ್ಲ. ಆದರೆ 13,000 ಕೋಟಿ ರೂ. ಖರ್ಚಾಗಿದೆ. 24,000 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ವಿನಿಯೋಗಿಸುತ್ತಿದ್ದಾರೆ. ಈ ಯೋಜನೆ ಆರಂಭವಾದಾಗಿನಿಂದಲೂ ವೈಜ್ಞಾನಿಕ ಸಂಸ್ಥೆಗಳು ವಿರೋಧಿಸುತ್ತಾ ಬಂದಿವೆ. ಗುತ್ತಿಗೆದಾರರ ಜೇಬು ತುಂಬಿಸುವ ಯೋಜನೆ ಇದಾಗಿದೆ. ಅನಗತ್ಯ ಕೆಲಸಗಳನ್ನು ಕೈಗೊಂಡು ಹಣವನ್ನು ಲೂಟಿ ಮಾಡಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರದ ನೀರಿನಲ್ಲಿ ಪ್ಲೋರೈಡ್, ನೈಟ್ರೇಡ್ ಇದೆ, ಹೀಗಾಗಿ ತಕ್ಷಣ ಎತ್ತಿನಹೊಳೆಯ ನೀರು ಹರಿಸಬೇಕೆಂದು ಹೇಳುತ್ತಿದ್ದರು. ಹತ್ತು ವರ್ಷವಾದರೂ ನೀರು ಬಂದಿಲ್ಲ. ಹೀಗಿರುವ 24,000 ಕೋಟಿ ರೂ.ಗಳನ್ನು ಹೆಚ್ಚಿಸಿಕೊಂಡು ಮುಂದಿನ ಚುನಾವಣೆಗಾಗಿ ಹಣ ಮಾಡಿಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿದರು.

“ಕಳೆದ ಕೆಲವು ವರ್ಷಗಳಿಂದ ಉತ್ತಮ ಮಳೆಯಾಗುತ್ತಿದೆ. ಕೃಷಿ ಭೂಮಿ ಹಾಗೂ ಕುಡಿಯುವ ನೀರಿನ ಮುಂದಾಲೋಚನೆಯಲ್ಲಿ ಕೆರೆ ಕುಂಟೆಗಳನ್ನು ಪಾರಂಪರಿಕವಾಗಿ ನಿರ್ಮಾಣ ಮಾಡಲಾಗಿದೆ. ನಂದಿ ಬೆಟ್ಟವನ್ನು ಕೇಂದ್ರವಾಗಿಟ್ಟುಕೊಂಡು ಒಂದು ಕೆರೆಯಿಂದ ಮತ್ತೊಂದು ಕೆರೆಗೆ ನೀರು ಹರಿದು ಹೋಗುವಂತೆ ವೈಜ್ಞಾನಿಕ ಕ್ರಮ ಅನುಸರಿಸಿರುವುದನ್ನು ಕಾಣಬಹುದು. ಉತ್ತರ ಪಿನಾಕಿನಿ, ದಕ್ಷಿಣಿ ಪಿನಾಕಿನಿ, ಅರ್ಕಾವತಿ, ಚಿತ್ರಾವತಿ, ಪಾಲಾರ್‌ ನದಿ ಪಾತ್ರದಲ್ಲಿ ಕೆರೆಗಳನ್ನು ನಿರ್ಮಿಸಲಾಗಿತ್ತು. ಇಂತಹ ಅದ್ಭುತವಾದ ಕೆರೆಗಳ ಜಾಲ ಇಂದು ಕಣ್ಮರೆಯಾಗುತ್ತಿದೆ. ಇವುಗಳನ್ನು ನಿರ್ವಹಣೆ ಮಾಡುವಲ್ಲಿ ವಿಫಲರಾಗಿದ್ದೇವೆ. ಕಳೆದ ಮೂರು ವರ್ಷಗಳಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರಾಸರಿಗಿಂತ ದುಪ್ಪಟ್ಟು ಮಳೆಯಾಗಿದೆ. ದುರಾದೃಷ್ಟವಶಾತ್‌ ನೀರನ್ನು ತಮಿಳುನಾಡು, ಆಂಧ್ರಪ್ರದೇಶಕ್ಕೆ ಹರಿಬಿಟ್ಟಿದ್ದೇವೆಯೇ ಹೊರತು, ಕರೆಗಳಲ್ಲಿ ಹಿಡಿದಿಟ್ಟಲು ಯೋಚಿಸಲಿಲ್ಲ. ರಾಜಕಾಲುವೆ, ಕೆರೆಗಳು ಒತ್ತುಯಾಗಿವೆ. ಕೆಲವು ಕಡೆ ಮಾಯವಾಗಿವೆ, ಕೆಲವು ಕಡೆ ಹೂಳು ತುಂಬಿಕೊಂಡಿವೆ. ಈ ಜಲಮೂಲಗಳನ್ನು ಪುನರುಜ್ಜೀವನ ಮಾಡಿಕೊಂಡರೆ ನೀರಿನ ಅಭಾವವಾಗದು” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...