Homeಕರ್ನಾಟಕಎತ್ತಿನಹೊಳೆ ಯೋಜನೆಯಿಂದ ಪರಿಸರಕ್ಕೆ ಹಾನಿಯಾಗಲ್ಲ: ಕೇಂದ್ರ ಸರ್ಕಾರ

ಎತ್ತಿನಹೊಳೆ ಯೋಜನೆಯಿಂದ ಪರಿಸರಕ್ಕೆ ಹಾನಿಯಾಗಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

ಎತ್ತಿನಹೊಳೆ ಯೋಜನೆಯಿಂದ ಪರಿಸರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿರುವುದಾಗಿ ‘ಡೆಕ್ಕನ್‌ ಹೆರಾಲ್ಡ್‌’ ವರದಿ ಮಾಡಿದೆ. ಹಾಸನ ಜಿಲ್ಲೆಯ ಸಕಲೇಶಪುರ ಬಳಿಯ ಎತ್ತಿನಹೊಳೆ ಮೂಲಕ ನೀರನ್ನು ಮೇಲೆತ್ತುವ ಯೋಜನೆ ಇದಾಗಿದೆ.

ಎತ್ತಿನಹೊಳೆ ಯೋಜನೆಗೆ ಕೇವಲ 13.93 ಹೆಕ್ಟೇರ್ ಅರಣ್ಯ ಭೂಮಿಯನ್ನು ಬಳಸಲಾಗುತ್ತಿದೆ. ಇದರಿಂದ ಪರಿಸರದ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

“ಇದು ಕುಡಿಯುವ ನೀರು ಸರಬರಾಜು ಯೋಜನೆಯಾಗಿದೆ. ಹೀಗಾಗಿ ಇದು ಪರಿಸರ ಪ್ರಭಾವ ಮೌಲ್ಯಮಾಪನ (EIA) ಅಧಿಸೂಚನೆ 2006 ಮತ್ತು ಅದರ 2009ರ ತಿದ್ದುಪಡಿಯ ನಿಬಂಧನೆಯನ್ನು ಕಡೆಗಣಿಸುವುದಿಲ್ಲ” ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ.

ಹಾಗಾಗಿ ಪರಿಸರ ಸಂಬಂಧಿತ ಅನುಮತಿಯಿಂದ ವಿನಾಯಿತಿ ನೀಡಲಾಗಿದೆ ಎಂದು ಜಲಶಕ್ತಿ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ರಾಜ್ಯಸಭೆಯಲ್ಲಿ ಇತ್ತೀಚಿನ ಅಧಿವೇಶನದಲ್ಲಿ ಪ್ರತಿಕ್ರಿಯಿಸಿದ್ದಾರೆ. ಜೆಡಿಯುನ ಅನೀಲ್ ಪ್ರಸಾದ್ ಹೆಗ್ಡೆ ಅವರ ಪ್ರಶ್ನೆಗೆ ಉತ್ತರಿಸುತ್ತಾ ಸಚಿವರು ಈ ಮಾತುಗಳನ್ನಾಡಿದ್ದಾರೆ.

ಮೊದಲ ಹಂತಕ್ಕೆ ಅಗತ್ಯವಿರುವ 13.93 ಹೆಕ್ಟೇರ್ ಅರಣ್ಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಹಂತ-1ಕ್ಕೆ ಅನುಮತಿಯನ್ನು ಪರಿಸರ ಮತ್ತು ಅರಣ್ಯ ಸಚಿವಾಲಯದಿಂದ ಕೆಲವು ಷರತ್ತುಗಳೊಂದಿಗೆ ಜನವರಿ 29, 2016ರಂದು ಪಡೆಯಲಾಗಿದೆ. ಹಂತ-2ಕ್ಕೆ ಕೆಲವು ಷರತ್ತುಗಳೊಂದಿಗೆ ಸೆಪ್ಟೆಂಬರ್ 15, 2016ರಂದು ಕ್ಲಿಯರೆನ್ಸ್ ಪಡೆಯಲಾಗಿದೆ. ಎತ್ತಿನಹೊಳೆ ನೀರಾವರಿ ಯೋಜನೆಯು ರಾಜ್ಯ ಸರ್ಕಾರ ಹಣದಿಂದ ನಡೆಯುತ್ತಿದೆ.

ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ಹಾಸನ, ತುಮಕೂರು, ರಾಮನಗರ ಮತ್ತು ಬೆಂಗಳೂರು ಸೇರಿದಂತೆ ಏಳು ಬರಪೀಡಿತ ಜಿಲ್ಲೆಗಳ 29 ತಾಲ್ಲೂಕುಗಳ 6,557 ಗ್ರಾಮಗಳಿಗೆ ಮತ್ತು 38 ಪಟ್ಟಣಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆ ಇದೆಂದು ಸರ್ಕಾರ ಹೇಳುತ್ತದೆ. ಅದಕ್ಕಾಗಿ ಪಶ್ಚಿಮ ಘಟ್ಟಗಳಲ್ಲಿ ಹರಿಯುವ ತೊರೆಗಳಿಂದ 24.01 ಟಿಎಂಸಿ ಅಡಿ ಹೆಚ್ಚುವರಿ ನೀರನ್ನು ಈ ಭಾಗಕ್ಕೆ ತರುವುದಾಗಿ ತಿಳಿಸಿದೆ.

ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷರಾದ ಆಂಜನೇಯ ರೆಡ್ಡಿ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿದರು. “ಡೆಕ್ಕನ್‌ ಹೆರಾಲ್ಡ್‌ನಲ್ಲಿ ಮಾಡಲಾಗಿರುವ ವರದಿಯು ಅನಗತ್ಯವಾಗಿತ್ತು ಅನಿಸುತ್ತದೆ. ಎತ್ತಿನಹೊಳೆ ವಿಚಾರ ಸದ್ಯ ಚರ್ಚೆಯಲ್ಲಿಲ್ಲ. ಕರ್ನಾಟಕ ಸಲ್ಲಿಸಿರುವ ವರದಿಯನ್ನು ಆಧಾರಿಸಿ ಯಾವುದೇ ಅರಣ್ಯನಾಶವಾಗಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೆ ಈ ಕುರಿತು ಯಾವುದೇ ಅಧ್ಯಯನ ನಡೆದಿಲ್ಲ. ಕುಡಿಯುವ ನೀರಿನ ಯೋಜನೆ ಎಂದು ಹೇಳಿ ವಿನಾಯಿತಿ ಪಡೆದಿದ್ದಾರೆ. ರಾಜ್ಯ ಸರ್ಕಾರದ ಸಂಪೂರ್ಣ ಹಣ ವಿನಿಯೋಗಿಸುತ್ತಿರುವುದರಿಂದ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸುವುದಿಲ್ಲ” ಎಂದು ವಿವರಿಸಿದರು.

“ಈವರೆಗೆ ಒಂದೇ ಒಂದು ಊರಿಗೆ ಎತ್ತಿನಹೊಳೆ ಮೂಲಕ ನೀರು ಹರಿದುಬಂದಿಲ್ಲ. ಆದರೆ 13,000 ಕೋಟಿ ರೂ. ಖರ್ಚಾಗಿದೆ. 24,000 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ವಿನಿಯೋಗಿಸುತ್ತಿದ್ದಾರೆ. ಈ ಯೋಜನೆ ಆರಂಭವಾದಾಗಿನಿಂದಲೂ ವೈಜ್ಞಾನಿಕ ಸಂಸ್ಥೆಗಳು ವಿರೋಧಿಸುತ್ತಾ ಬಂದಿವೆ. ಗುತ್ತಿಗೆದಾರರ ಜೇಬು ತುಂಬಿಸುವ ಯೋಜನೆ ಇದಾಗಿದೆ. ಅನಗತ್ಯ ಕೆಲಸಗಳನ್ನು ಕೈಗೊಂಡು ಹಣವನ್ನು ಲೂಟಿ ಮಾಡಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರದ ನೀರಿನಲ್ಲಿ ಪ್ಲೋರೈಡ್, ನೈಟ್ರೇಡ್ ಇದೆ, ಹೀಗಾಗಿ ತಕ್ಷಣ ಎತ್ತಿನಹೊಳೆಯ ನೀರು ಹರಿಸಬೇಕೆಂದು ಹೇಳುತ್ತಿದ್ದರು. ಹತ್ತು ವರ್ಷವಾದರೂ ನೀರು ಬಂದಿಲ್ಲ. ಹೀಗಿರುವ 24,000 ಕೋಟಿ ರೂ.ಗಳನ್ನು ಹೆಚ್ಚಿಸಿಕೊಂಡು ಮುಂದಿನ ಚುನಾವಣೆಗಾಗಿ ಹಣ ಮಾಡಿಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿದರು.

“ಕಳೆದ ಕೆಲವು ವರ್ಷಗಳಿಂದ ಉತ್ತಮ ಮಳೆಯಾಗುತ್ತಿದೆ. ಕೃಷಿ ಭೂಮಿ ಹಾಗೂ ಕುಡಿಯುವ ನೀರಿನ ಮುಂದಾಲೋಚನೆಯಲ್ಲಿ ಕೆರೆ ಕುಂಟೆಗಳನ್ನು ಪಾರಂಪರಿಕವಾಗಿ ನಿರ್ಮಾಣ ಮಾಡಲಾಗಿದೆ. ನಂದಿ ಬೆಟ್ಟವನ್ನು ಕೇಂದ್ರವಾಗಿಟ್ಟುಕೊಂಡು ಒಂದು ಕೆರೆಯಿಂದ ಮತ್ತೊಂದು ಕೆರೆಗೆ ನೀರು ಹರಿದು ಹೋಗುವಂತೆ ವೈಜ್ಞಾನಿಕ ಕ್ರಮ ಅನುಸರಿಸಿರುವುದನ್ನು ಕಾಣಬಹುದು. ಉತ್ತರ ಪಿನಾಕಿನಿ, ದಕ್ಷಿಣಿ ಪಿನಾಕಿನಿ, ಅರ್ಕಾವತಿ, ಚಿತ್ರಾವತಿ, ಪಾಲಾರ್‌ ನದಿ ಪಾತ್ರದಲ್ಲಿ ಕೆರೆಗಳನ್ನು ನಿರ್ಮಿಸಲಾಗಿತ್ತು. ಇಂತಹ ಅದ್ಭುತವಾದ ಕೆರೆಗಳ ಜಾಲ ಇಂದು ಕಣ್ಮರೆಯಾಗುತ್ತಿದೆ. ಇವುಗಳನ್ನು ನಿರ್ವಹಣೆ ಮಾಡುವಲ್ಲಿ ವಿಫಲರಾಗಿದ್ದೇವೆ. ಕಳೆದ ಮೂರು ವರ್ಷಗಳಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರಾಸರಿಗಿಂತ ದುಪ್ಪಟ್ಟು ಮಳೆಯಾಗಿದೆ. ದುರಾದೃಷ್ಟವಶಾತ್‌ ನೀರನ್ನು ತಮಿಳುನಾಡು, ಆಂಧ್ರಪ್ರದೇಶಕ್ಕೆ ಹರಿಬಿಟ್ಟಿದ್ದೇವೆಯೇ ಹೊರತು, ಕರೆಗಳಲ್ಲಿ ಹಿಡಿದಿಟ್ಟಲು ಯೋಚಿಸಲಿಲ್ಲ. ರಾಜಕಾಲುವೆ, ಕೆರೆಗಳು ಒತ್ತುಯಾಗಿವೆ. ಕೆಲವು ಕಡೆ ಮಾಯವಾಗಿವೆ, ಕೆಲವು ಕಡೆ ಹೂಳು ತುಂಬಿಕೊಂಡಿವೆ. ಈ ಜಲಮೂಲಗಳನ್ನು ಪುನರುಜ್ಜೀವನ ಮಾಡಿಕೊಂಡರೆ ನೀರಿನ ಅಭಾವವಾಗದು” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...