Homeಕರ್ನಾಟಕಎತ್ತಿನಹೊಳೆ ಯೋಜನೆಯಿಂದ ಪರಿಸರಕ್ಕೆ ಹಾನಿಯಾಗಲ್ಲ: ಕೇಂದ್ರ ಸರ್ಕಾರ

ಎತ್ತಿನಹೊಳೆ ಯೋಜನೆಯಿಂದ ಪರಿಸರಕ್ಕೆ ಹಾನಿಯಾಗಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

ಎತ್ತಿನಹೊಳೆ ಯೋಜನೆಯಿಂದ ಪರಿಸರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿರುವುದಾಗಿ ‘ಡೆಕ್ಕನ್‌ ಹೆರಾಲ್ಡ್‌’ ವರದಿ ಮಾಡಿದೆ. ಹಾಸನ ಜಿಲ್ಲೆಯ ಸಕಲೇಶಪುರ ಬಳಿಯ ಎತ್ತಿನಹೊಳೆ ಮೂಲಕ ನೀರನ್ನು ಮೇಲೆತ್ತುವ ಯೋಜನೆ ಇದಾಗಿದೆ.

ಎತ್ತಿನಹೊಳೆ ಯೋಜನೆಗೆ ಕೇವಲ 13.93 ಹೆಕ್ಟೇರ್ ಅರಣ್ಯ ಭೂಮಿಯನ್ನು ಬಳಸಲಾಗುತ್ತಿದೆ. ಇದರಿಂದ ಪರಿಸರದ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

“ಇದು ಕುಡಿಯುವ ನೀರು ಸರಬರಾಜು ಯೋಜನೆಯಾಗಿದೆ. ಹೀಗಾಗಿ ಇದು ಪರಿಸರ ಪ್ರಭಾವ ಮೌಲ್ಯಮಾಪನ (EIA) ಅಧಿಸೂಚನೆ 2006 ಮತ್ತು ಅದರ 2009ರ ತಿದ್ದುಪಡಿಯ ನಿಬಂಧನೆಯನ್ನು ಕಡೆಗಣಿಸುವುದಿಲ್ಲ” ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ.

ಹಾಗಾಗಿ ಪರಿಸರ ಸಂಬಂಧಿತ ಅನುಮತಿಯಿಂದ ವಿನಾಯಿತಿ ನೀಡಲಾಗಿದೆ ಎಂದು ಜಲಶಕ್ತಿ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ರಾಜ್ಯಸಭೆಯಲ್ಲಿ ಇತ್ತೀಚಿನ ಅಧಿವೇಶನದಲ್ಲಿ ಪ್ರತಿಕ್ರಿಯಿಸಿದ್ದಾರೆ. ಜೆಡಿಯುನ ಅನೀಲ್ ಪ್ರಸಾದ್ ಹೆಗ್ಡೆ ಅವರ ಪ್ರಶ್ನೆಗೆ ಉತ್ತರಿಸುತ್ತಾ ಸಚಿವರು ಈ ಮಾತುಗಳನ್ನಾಡಿದ್ದಾರೆ.

ಮೊದಲ ಹಂತಕ್ಕೆ ಅಗತ್ಯವಿರುವ 13.93 ಹೆಕ್ಟೇರ್ ಅರಣ್ಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಹಂತ-1ಕ್ಕೆ ಅನುಮತಿಯನ್ನು ಪರಿಸರ ಮತ್ತು ಅರಣ್ಯ ಸಚಿವಾಲಯದಿಂದ ಕೆಲವು ಷರತ್ತುಗಳೊಂದಿಗೆ ಜನವರಿ 29, 2016ರಂದು ಪಡೆಯಲಾಗಿದೆ. ಹಂತ-2ಕ್ಕೆ ಕೆಲವು ಷರತ್ತುಗಳೊಂದಿಗೆ ಸೆಪ್ಟೆಂಬರ್ 15, 2016ರಂದು ಕ್ಲಿಯರೆನ್ಸ್ ಪಡೆಯಲಾಗಿದೆ. ಎತ್ತಿನಹೊಳೆ ನೀರಾವರಿ ಯೋಜನೆಯು ರಾಜ್ಯ ಸರ್ಕಾರ ಹಣದಿಂದ ನಡೆಯುತ್ತಿದೆ.

ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ಹಾಸನ, ತುಮಕೂರು, ರಾಮನಗರ ಮತ್ತು ಬೆಂಗಳೂರು ಸೇರಿದಂತೆ ಏಳು ಬರಪೀಡಿತ ಜಿಲ್ಲೆಗಳ 29 ತಾಲ್ಲೂಕುಗಳ 6,557 ಗ್ರಾಮಗಳಿಗೆ ಮತ್ತು 38 ಪಟ್ಟಣಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆ ಇದೆಂದು ಸರ್ಕಾರ ಹೇಳುತ್ತದೆ. ಅದಕ್ಕಾಗಿ ಪಶ್ಚಿಮ ಘಟ್ಟಗಳಲ್ಲಿ ಹರಿಯುವ ತೊರೆಗಳಿಂದ 24.01 ಟಿಎಂಸಿ ಅಡಿ ಹೆಚ್ಚುವರಿ ನೀರನ್ನು ಈ ಭಾಗಕ್ಕೆ ತರುವುದಾಗಿ ತಿಳಿಸಿದೆ.

ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷರಾದ ಆಂಜನೇಯ ರೆಡ್ಡಿ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿದರು. “ಡೆಕ್ಕನ್‌ ಹೆರಾಲ್ಡ್‌ನಲ್ಲಿ ಮಾಡಲಾಗಿರುವ ವರದಿಯು ಅನಗತ್ಯವಾಗಿತ್ತು ಅನಿಸುತ್ತದೆ. ಎತ್ತಿನಹೊಳೆ ವಿಚಾರ ಸದ್ಯ ಚರ್ಚೆಯಲ್ಲಿಲ್ಲ. ಕರ್ನಾಟಕ ಸಲ್ಲಿಸಿರುವ ವರದಿಯನ್ನು ಆಧಾರಿಸಿ ಯಾವುದೇ ಅರಣ್ಯನಾಶವಾಗಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೆ ಈ ಕುರಿತು ಯಾವುದೇ ಅಧ್ಯಯನ ನಡೆದಿಲ್ಲ. ಕುಡಿಯುವ ನೀರಿನ ಯೋಜನೆ ಎಂದು ಹೇಳಿ ವಿನಾಯಿತಿ ಪಡೆದಿದ್ದಾರೆ. ರಾಜ್ಯ ಸರ್ಕಾರದ ಸಂಪೂರ್ಣ ಹಣ ವಿನಿಯೋಗಿಸುತ್ತಿರುವುದರಿಂದ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸುವುದಿಲ್ಲ” ಎಂದು ವಿವರಿಸಿದರು.

“ಈವರೆಗೆ ಒಂದೇ ಒಂದು ಊರಿಗೆ ಎತ್ತಿನಹೊಳೆ ಮೂಲಕ ನೀರು ಹರಿದುಬಂದಿಲ್ಲ. ಆದರೆ 13,000 ಕೋಟಿ ರೂ. ಖರ್ಚಾಗಿದೆ. 24,000 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ವಿನಿಯೋಗಿಸುತ್ತಿದ್ದಾರೆ. ಈ ಯೋಜನೆ ಆರಂಭವಾದಾಗಿನಿಂದಲೂ ವೈಜ್ಞಾನಿಕ ಸಂಸ್ಥೆಗಳು ವಿರೋಧಿಸುತ್ತಾ ಬಂದಿವೆ. ಗುತ್ತಿಗೆದಾರರ ಜೇಬು ತುಂಬಿಸುವ ಯೋಜನೆ ಇದಾಗಿದೆ. ಅನಗತ್ಯ ಕೆಲಸಗಳನ್ನು ಕೈಗೊಂಡು ಹಣವನ್ನು ಲೂಟಿ ಮಾಡಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರದ ನೀರಿನಲ್ಲಿ ಪ್ಲೋರೈಡ್, ನೈಟ್ರೇಡ್ ಇದೆ, ಹೀಗಾಗಿ ತಕ್ಷಣ ಎತ್ತಿನಹೊಳೆಯ ನೀರು ಹರಿಸಬೇಕೆಂದು ಹೇಳುತ್ತಿದ್ದರು. ಹತ್ತು ವರ್ಷವಾದರೂ ನೀರು ಬಂದಿಲ್ಲ. ಹೀಗಿರುವ 24,000 ಕೋಟಿ ರೂ.ಗಳನ್ನು ಹೆಚ್ಚಿಸಿಕೊಂಡು ಮುಂದಿನ ಚುನಾವಣೆಗಾಗಿ ಹಣ ಮಾಡಿಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿದರು.

“ಕಳೆದ ಕೆಲವು ವರ್ಷಗಳಿಂದ ಉತ್ತಮ ಮಳೆಯಾಗುತ್ತಿದೆ. ಕೃಷಿ ಭೂಮಿ ಹಾಗೂ ಕುಡಿಯುವ ನೀರಿನ ಮುಂದಾಲೋಚನೆಯಲ್ಲಿ ಕೆರೆ ಕುಂಟೆಗಳನ್ನು ಪಾರಂಪರಿಕವಾಗಿ ನಿರ್ಮಾಣ ಮಾಡಲಾಗಿದೆ. ನಂದಿ ಬೆಟ್ಟವನ್ನು ಕೇಂದ್ರವಾಗಿಟ್ಟುಕೊಂಡು ಒಂದು ಕೆರೆಯಿಂದ ಮತ್ತೊಂದು ಕೆರೆಗೆ ನೀರು ಹರಿದು ಹೋಗುವಂತೆ ವೈಜ್ಞಾನಿಕ ಕ್ರಮ ಅನುಸರಿಸಿರುವುದನ್ನು ಕಾಣಬಹುದು. ಉತ್ತರ ಪಿನಾಕಿನಿ, ದಕ್ಷಿಣಿ ಪಿನಾಕಿನಿ, ಅರ್ಕಾವತಿ, ಚಿತ್ರಾವತಿ, ಪಾಲಾರ್‌ ನದಿ ಪಾತ್ರದಲ್ಲಿ ಕೆರೆಗಳನ್ನು ನಿರ್ಮಿಸಲಾಗಿತ್ತು. ಇಂತಹ ಅದ್ಭುತವಾದ ಕೆರೆಗಳ ಜಾಲ ಇಂದು ಕಣ್ಮರೆಯಾಗುತ್ತಿದೆ. ಇವುಗಳನ್ನು ನಿರ್ವಹಣೆ ಮಾಡುವಲ್ಲಿ ವಿಫಲರಾಗಿದ್ದೇವೆ. ಕಳೆದ ಮೂರು ವರ್ಷಗಳಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರಾಸರಿಗಿಂತ ದುಪ್ಪಟ್ಟು ಮಳೆಯಾಗಿದೆ. ದುರಾದೃಷ್ಟವಶಾತ್‌ ನೀರನ್ನು ತಮಿಳುನಾಡು, ಆಂಧ್ರಪ್ರದೇಶಕ್ಕೆ ಹರಿಬಿಟ್ಟಿದ್ದೇವೆಯೇ ಹೊರತು, ಕರೆಗಳಲ್ಲಿ ಹಿಡಿದಿಟ್ಟಲು ಯೋಚಿಸಲಿಲ್ಲ. ರಾಜಕಾಲುವೆ, ಕೆರೆಗಳು ಒತ್ತುಯಾಗಿವೆ. ಕೆಲವು ಕಡೆ ಮಾಯವಾಗಿವೆ, ಕೆಲವು ಕಡೆ ಹೂಳು ತುಂಬಿಕೊಂಡಿವೆ. ಈ ಜಲಮೂಲಗಳನ್ನು ಪುನರುಜ್ಜೀವನ ಮಾಡಿಕೊಂಡರೆ ನೀರಿನ ಅಭಾವವಾಗದು” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...