Homeಕರ್ನಾಟಕಎತ್ತಿನಹೊಳೆ ಯೋಜನೆಯಿಂದ ಪರಿಸರಕ್ಕೆ ಹಾನಿಯಾಗಲ್ಲ: ಕೇಂದ್ರ ಸರ್ಕಾರ

ಎತ್ತಿನಹೊಳೆ ಯೋಜನೆಯಿಂದ ಪರಿಸರಕ್ಕೆ ಹಾನಿಯಾಗಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

ಎತ್ತಿನಹೊಳೆ ಯೋಜನೆಯಿಂದ ಪರಿಸರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿರುವುದಾಗಿ ‘ಡೆಕ್ಕನ್‌ ಹೆರಾಲ್ಡ್‌’ ವರದಿ ಮಾಡಿದೆ. ಹಾಸನ ಜಿಲ್ಲೆಯ ಸಕಲೇಶಪುರ ಬಳಿಯ ಎತ್ತಿನಹೊಳೆ ಮೂಲಕ ನೀರನ್ನು ಮೇಲೆತ್ತುವ ಯೋಜನೆ ಇದಾಗಿದೆ.

ಎತ್ತಿನಹೊಳೆ ಯೋಜನೆಗೆ ಕೇವಲ 13.93 ಹೆಕ್ಟೇರ್ ಅರಣ್ಯ ಭೂಮಿಯನ್ನು ಬಳಸಲಾಗುತ್ತಿದೆ. ಇದರಿಂದ ಪರಿಸರದ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

“ಇದು ಕುಡಿಯುವ ನೀರು ಸರಬರಾಜು ಯೋಜನೆಯಾಗಿದೆ. ಹೀಗಾಗಿ ಇದು ಪರಿಸರ ಪ್ರಭಾವ ಮೌಲ್ಯಮಾಪನ (EIA) ಅಧಿಸೂಚನೆ 2006 ಮತ್ತು ಅದರ 2009ರ ತಿದ್ದುಪಡಿಯ ನಿಬಂಧನೆಯನ್ನು ಕಡೆಗಣಿಸುವುದಿಲ್ಲ” ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ.

ಹಾಗಾಗಿ ಪರಿಸರ ಸಂಬಂಧಿತ ಅನುಮತಿಯಿಂದ ವಿನಾಯಿತಿ ನೀಡಲಾಗಿದೆ ಎಂದು ಜಲಶಕ್ತಿ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ರಾಜ್ಯಸಭೆಯಲ್ಲಿ ಇತ್ತೀಚಿನ ಅಧಿವೇಶನದಲ್ಲಿ ಪ್ರತಿಕ್ರಿಯಿಸಿದ್ದಾರೆ. ಜೆಡಿಯುನ ಅನೀಲ್ ಪ್ರಸಾದ್ ಹೆಗ್ಡೆ ಅವರ ಪ್ರಶ್ನೆಗೆ ಉತ್ತರಿಸುತ್ತಾ ಸಚಿವರು ಈ ಮಾತುಗಳನ್ನಾಡಿದ್ದಾರೆ.

ಮೊದಲ ಹಂತಕ್ಕೆ ಅಗತ್ಯವಿರುವ 13.93 ಹೆಕ್ಟೇರ್ ಅರಣ್ಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಹಂತ-1ಕ್ಕೆ ಅನುಮತಿಯನ್ನು ಪರಿಸರ ಮತ್ತು ಅರಣ್ಯ ಸಚಿವಾಲಯದಿಂದ ಕೆಲವು ಷರತ್ತುಗಳೊಂದಿಗೆ ಜನವರಿ 29, 2016ರಂದು ಪಡೆಯಲಾಗಿದೆ. ಹಂತ-2ಕ್ಕೆ ಕೆಲವು ಷರತ್ತುಗಳೊಂದಿಗೆ ಸೆಪ್ಟೆಂಬರ್ 15, 2016ರಂದು ಕ್ಲಿಯರೆನ್ಸ್ ಪಡೆಯಲಾಗಿದೆ. ಎತ್ತಿನಹೊಳೆ ನೀರಾವರಿ ಯೋಜನೆಯು ರಾಜ್ಯ ಸರ್ಕಾರ ಹಣದಿಂದ ನಡೆಯುತ್ತಿದೆ.

ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ಹಾಸನ, ತುಮಕೂರು, ರಾಮನಗರ ಮತ್ತು ಬೆಂಗಳೂರು ಸೇರಿದಂತೆ ಏಳು ಬರಪೀಡಿತ ಜಿಲ್ಲೆಗಳ 29 ತಾಲ್ಲೂಕುಗಳ 6,557 ಗ್ರಾಮಗಳಿಗೆ ಮತ್ತು 38 ಪಟ್ಟಣಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆ ಇದೆಂದು ಸರ್ಕಾರ ಹೇಳುತ್ತದೆ. ಅದಕ್ಕಾಗಿ ಪಶ್ಚಿಮ ಘಟ್ಟಗಳಲ್ಲಿ ಹರಿಯುವ ತೊರೆಗಳಿಂದ 24.01 ಟಿಎಂಸಿ ಅಡಿ ಹೆಚ್ಚುವರಿ ನೀರನ್ನು ಈ ಭಾಗಕ್ಕೆ ತರುವುದಾಗಿ ತಿಳಿಸಿದೆ.

ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷರಾದ ಆಂಜನೇಯ ರೆಡ್ಡಿ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿದರು. “ಡೆಕ್ಕನ್‌ ಹೆರಾಲ್ಡ್‌ನಲ್ಲಿ ಮಾಡಲಾಗಿರುವ ವರದಿಯು ಅನಗತ್ಯವಾಗಿತ್ತು ಅನಿಸುತ್ತದೆ. ಎತ್ತಿನಹೊಳೆ ವಿಚಾರ ಸದ್ಯ ಚರ್ಚೆಯಲ್ಲಿಲ್ಲ. ಕರ್ನಾಟಕ ಸಲ್ಲಿಸಿರುವ ವರದಿಯನ್ನು ಆಧಾರಿಸಿ ಯಾವುದೇ ಅರಣ್ಯನಾಶವಾಗಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೆ ಈ ಕುರಿತು ಯಾವುದೇ ಅಧ್ಯಯನ ನಡೆದಿಲ್ಲ. ಕುಡಿಯುವ ನೀರಿನ ಯೋಜನೆ ಎಂದು ಹೇಳಿ ವಿನಾಯಿತಿ ಪಡೆದಿದ್ದಾರೆ. ರಾಜ್ಯ ಸರ್ಕಾರದ ಸಂಪೂರ್ಣ ಹಣ ವಿನಿಯೋಗಿಸುತ್ತಿರುವುದರಿಂದ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸುವುದಿಲ್ಲ” ಎಂದು ವಿವರಿಸಿದರು.

“ಈವರೆಗೆ ಒಂದೇ ಒಂದು ಊರಿಗೆ ಎತ್ತಿನಹೊಳೆ ಮೂಲಕ ನೀರು ಹರಿದುಬಂದಿಲ್ಲ. ಆದರೆ 13,000 ಕೋಟಿ ರೂ. ಖರ್ಚಾಗಿದೆ. 24,000 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ವಿನಿಯೋಗಿಸುತ್ತಿದ್ದಾರೆ. ಈ ಯೋಜನೆ ಆರಂಭವಾದಾಗಿನಿಂದಲೂ ವೈಜ್ಞಾನಿಕ ಸಂಸ್ಥೆಗಳು ವಿರೋಧಿಸುತ್ತಾ ಬಂದಿವೆ. ಗುತ್ತಿಗೆದಾರರ ಜೇಬು ತುಂಬಿಸುವ ಯೋಜನೆ ಇದಾಗಿದೆ. ಅನಗತ್ಯ ಕೆಲಸಗಳನ್ನು ಕೈಗೊಂಡು ಹಣವನ್ನು ಲೂಟಿ ಮಾಡಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರದ ನೀರಿನಲ್ಲಿ ಪ್ಲೋರೈಡ್, ನೈಟ್ರೇಡ್ ಇದೆ, ಹೀಗಾಗಿ ತಕ್ಷಣ ಎತ್ತಿನಹೊಳೆಯ ನೀರು ಹರಿಸಬೇಕೆಂದು ಹೇಳುತ್ತಿದ್ದರು. ಹತ್ತು ವರ್ಷವಾದರೂ ನೀರು ಬಂದಿಲ್ಲ. ಹೀಗಿರುವ 24,000 ಕೋಟಿ ರೂ.ಗಳನ್ನು ಹೆಚ್ಚಿಸಿಕೊಂಡು ಮುಂದಿನ ಚುನಾವಣೆಗಾಗಿ ಹಣ ಮಾಡಿಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿದರು.

“ಕಳೆದ ಕೆಲವು ವರ್ಷಗಳಿಂದ ಉತ್ತಮ ಮಳೆಯಾಗುತ್ತಿದೆ. ಕೃಷಿ ಭೂಮಿ ಹಾಗೂ ಕುಡಿಯುವ ನೀರಿನ ಮುಂದಾಲೋಚನೆಯಲ್ಲಿ ಕೆರೆ ಕುಂಟೆಗಳನ್ನು ಪಾರಂಪರಿಕವಾಗಿ ನಿರ್ಮಾಣ ಮಾಡಲಾಗಿದೆ. ನಂದಿ ಬೆಟ್ಟವನ್ನು ಕೇಂದ್ರವಾಗಿಟ್ಟುಕೊಂಡು ಒಂದು ಕೆರೆಯಿಂದ ಮತ್ತೊಂದು ಕೆರೆಗೆ ನೀರು ಹರಿದು ಹೋಗುವಂತೆ ವೈಜ್ಞಾನಿಕ ಕ್ರಮ ಅನುಸರಿಸಿರುವುದನ್ನು ಕಾಣಬಹುದು. ಉತ್ತರ ಪಿನಾಕಿನಿ, ದಕ್ಷಿಣಿ ಪಿನಾಕಿನಿ, ಅರ್ಕಾವತಿ, ಚಿತ್ರಾವತಿ, ಪಾಲಾರ್‌ ನದಿ ಪಾತ್ರದಲ್ಲಿ ಕೆರೆಗಳನ್ನು ನಿರ್ಮಿಸಲಾಗಿತ್ತು. ಇಂತಹ ಅದ್ಭುತವಾದ ಕೆರೆಗಳ ಜಾಲ ಇಂದು ಕಣ್ಮರೆಯಾಗುತ್ತಿದೆ. ಇವುಗಳನ್ನು ನಿರ್ವಹಣೆ ಮಾಡುವಲ್ಲಿ ವಿಫಲರಾಗಿದ್ದೇವೆ. ಕಳೆದ ಮೂರು ವರ್ಷಗಳಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರಾಸರಿಗಿಂತ ದುಪ್ಪಟ್ಟು ಮಳೆಯಾಗಿದೆ. ದುರಾದೃಷ್ಟವಶಾತ್‌ ನೀರನ್ನು ತಮಿಳುನಾಡು, ಆಂಧ್ರಪ್ರದೇಶಕ್ಕೆ ಹರಿಬಿಟ್ಟಿದ್ದೇವೆಯೇ ಹೊರತು, ಕರೆಗಳಲ್ಲಿ ಹಿಡಿದಿಟ್ಟಲು ಯೋಚಿಸಲಿಲ್ಲ. ರಾಜಕಾಲುವೆ, ಕೆರೆಗಳು ಒತ್ತುಯಾಗಿವೆ. ಕೆಲವು ಕಡೆ ಮಾಯವಾಗಿವೆ, ಕೆಲವು ಕಡೆ ಹೂಳು ತುಂಬಿಕೊಂಡಿವೆ. ಈ ಜಲಮೂಲಗಳನ್ನು ಪುನರುಜ್ಜೀವನ ಮಾಡಿಕೊಂಡರೆ ನೀರಿನ ಅಭಾವವಾಗದು” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...