Homeಅಂತರಾಷ್ಟ್ರೀಯಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

ಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

- Advertisement -
- Advertisement -

ಯುರೋಪ್ ದೇಶಗಳಲ್ಲಿ ಕಳೆದ ಒಂದು ತಿಂಗಳಿನಿಂದ ಫುಟ್ಬಾಲ್ ಕಲರವ ಆರಂಭವಾಗಿದೆ. ಕಳೆದ 1 ವರ್ಷದಿಂದ ಖಾಲಿ ಮೈದಾನಗಳಲ್ಲಿ ನಡೆಯುತ್ತಿದ್ದ ಫುಟ್ಬಾಲ್ ಪಂದ್ಯಗಳು ಈಗ ತುಂಬಿ ತುಳುಕಾಡುತ್ತಿವೆ. ಮೈದಾನಗಳ ಹೊರಗೆ, ವಿಮಾನ ನಿಲ್ಧಾಣ, ರೈಲ್ವೆ ಸ್ಟೇಷನ್, ಮಾರ್ಕೆಟ್ ಎಲ್ಲೆಡೆಯೂ ಈಗ ಫುಟ್ಬಾಲ್ ಗುಂಗು ಗುನುಗುತ್ತಿದೆ. ಜೂನ್ 11 ರಿಂದ ಜುಲೈ 11ರ ವರೆಗೆ ನಡೆಯುತ್ತಿರುವ ಯುರೋ ಕಪ್ 2020 ಫುಟ್ಬಾಲ್ ಟೂರ್ನಿ ಯುರೋಪಿನ ನಗರಗಳಲ್ಲಿ ಅಪಾರ ಜನಸಂದಣಿಗೆ ಕಾರಣವಾಗುತ್ತಿದೆ. ಸಾವಿರಾರು ಫುಟ್ಬಾಲ್ ಪ್ರಿಯರು ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಪ್ರಯಾಣ ಬೆಳೆಸುತ್ತಿದ್ದಾರೆ. ಯುರೋಪಿನಲ್ಲಿ ವರ್ಷಗಳ ಕಾಲ ರೂಡಿಸಿಕೊಂಡು ಬಂದಿದ್ದ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವ ಶಿಸ್ತು ಫುಟ್ಬಾಲ್ ಟೂರ್ನಿಯ ವೇಳೆ ಎಲ್ಲೂ ಕಾಣಿಸುತ್ತಿಲ್ಲ. ಈ ಜನಸಂದಣಿಯು ಬ್ರಿಟನ್, ರಷ್ಯಾ ದೇಶಗಳ ಅಡಳಿತ ವ್ಯವಸ್ಥೆಗೆ ತೀವ್ರ ತಲೆ ನೋವಾಗಿ ಪರಿಣಮಿಸಿದ್ದು ಕೊರೊನಾ ಮೂರನೇ ಅಲೆಯ ಸಾಧ್ಯತೆಯನ್ನು ಹುಟ್ಟು ಹಾಕಿದೆ.

ಬ್ರಿಟನ್ ರಾಜಧಾನಿ ಲಂಡನ್ ಮತ್ತು ರಷ್ಯಾದ ಸೇಂಟ್‌ ಪೀಟರ್ಸ್‌ ಬರ್ಗ್‌ ದೇಶಗಳಲ್ಲಿ ಡೆಲ್ಟಾ ಮತ್ತು ಡೆಲ್ಟಾ ಪ್ಲಸ್‌ ರೂಪಾಂತರಿ ವೈರಸ್‌ಗಳು ವೇಗವಾಗಿ ಹರಡುತ್ತಿರುವುದರಿಂದ ಅಲ್ಲಿನ ಸರ್ಕಾರಗಳು ಸಾಕಷ್ಟು ಅತಂಕಕ್ಕೆ ಒಳಗಾಗಿವೆ. ತಮ್ಮ ದೇಶದ ಬಹುತೇಕ ನಾಗರಿಕರಿಗೆ ವ್ಯಾಕ್ಸಿನ್ ನೀಡಿರುವ ಯುರೋಪಿಯನ್‌ ದೇಶಗಳಿಗೆ ಡೆಲ್ಟಾ ಪ್ಲಸ್‌ ರೂಪಾಂತರಿಯ ಮೇಲೆ ವ್ಯಾಕ್ಸಿನ್‌ಗಳು ಹೆಚ್ಚು ಪರಿಣಾಮ ಬೀರುವುದಿಲ್ಲ ಎಂಬ ವೈದ್ಯಕೀಯ ವರದಿಗಳು ನಿದ್ದೆಗೆಡಿಸಿದ್ದು ಜನ ಸಂದಣಿಯನ್ನು ನಿಯಂತ್ರಿಸಲು ಅಲ್ಲಿನ ಸರ್ಕಾರಗಳು ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿವೆ.

ನಾವು ಡೆಲ್ಟಾ ಮತ್ತು ಡೆಲ್ಟಾ ಪ್ಲಸ್ ರೂಪಾಂತರಿಯನ್ನು ಹರಡಲೇಬೇಕೆಂದು ಹೊರಟರೆ ಇದೇ ಸರಿಯಾದ ಉಪಾಯ ಎಂದು ಲಂಡನ್‌ನ ಸಾಂಕ್ರಾಮಿಕ ರೋಗ ತಜ್ಞ ಅಂಟೋನಿ ಫ್ಲಾಹಾಲ್ಟ್‌ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಅಂಟಾರ್ಟಿಕದಲ್ಲೂ ಏರಿದ ತಾಪಮಾನ: ಕರಗುತ್ತಿವೆ ನೀರ್ಗಲ್ಲುಗಳು

ಮುಖ್ಯವಾಗಿ ಮುಂದೆ ನಡೆಯಲಿರುವ ಎರಡು ಸೆಮಿಫೈನಲ್ ಪಂದ್ಯಗಳಲ್ಲಿ ಒಂದು ಲಂಡನ್‌ನಲ್ಲಿಯೂ ಮತ್ತೊಂದು ರಷ್ಯಾದ ರಾಜಧಾನಿ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿಯೂ ನಡೆಯಲಿದೆ. ಈ ಪಂದ್ಯಗಳಿಗೆ ಅತಿಹೆಚ್ಚಿನ ಪ್ರೇಕ್ಷಕರು ಆಗಮಿಸುವ ಸಾಧ್ಯತೆ ಇದೆ. ಮತ್ತೊಂದೆಡೆ ಲಂಡನ್ ಮತ್ತು ಸೇಂಟ್‌ಪೀಟರ್ಸ್‌ಬರ್ಗ್‌ ಎರಡೂ ನಗರಗಳಲ್ಲಿ ದಿನನಿತ್ಯದ ಸೋಂಕಿನ ಪ್ರಮಾಣಗಳಲ್ಲಿ ಹೆಚ್ಚಳವಾಗಿದ್ದು ಡೆಲ್ಟಾ ರೂಪಾಂತರಿಯ ಸಾಕಷ್ಟು ಪ್ರಕರಣಗಳು ವರದಿಯಾಗುತ್ತಿದೆ. ಸೆಮಿಫೈನಲ್ ಪಂದ್ಯಗಳಿಗೆ 60,000 ಜನ ಪ್ರೇಕ್ಷಕರಿಗೆ ಪಂದ್ಯ ವೀಕ್ಷಿಸಲು ಅವಕಾಶ ಮಾಡಿಕೊಡಲಾಗಿದ್ದು, ಮೈದಾನದ ಹೊರಗೆ ವ್ಯಾಪಾರಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳಲ್ಲಿ ಸಾಮಾಜಿಕ ಅಂತರದ ಪಾಲನೆ ದುಸ್ತರವಾಗಲಿದೆ ಎಂದು ಬ್ರಿಟನ್ ಮಾಧ್ಯಮಗಳು ವರದಿ ಮಾಡಿವೆ.

ಮೊನ್ನೆ ಇಂಗ್ಲೆಂಡ್ ತಂಡವು ಫ್ರಿಕ್ವಾರ್ಟರ್‌ ಫೈನಲ್ ಪಂದ್ಯವನ್ನು ಗೆಲ್ಲುತ್ತಿದ್ದಂತೆ ಲಂಡನ್‌ನ ವೆಂಬ್ಲೆ ಫುಟ್ಬಾಲ್ ಮೈದಾನದಲ್ಲಿ ನೆರೆದಿದ್ದ 42,000 ಜನ ಪ್ರೇಕ್ಷಕರು ಮಾಸ್ಕ್‌ ಧರಿಸದೇ, ಸಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಮೈದಾನದ ಹೊರಗೆ ಸಂಭ್ರಮಿಸಿದ ರೀತಿ ಬ್ರಿಟನ್ ಮತ್ತು ಅಂತರಾಷ್ಟ್ರೀಯ ಮಾಧ್ಯಮದಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ವೆಂಬ್ಲೆ ಮೈದಾನದ ಹೊರಗೆ ಸಾಗರೊಪಾದಿಯಲ್ಲಿ ನೆರೆದ ಜನ ಪ್ರವಾಹದ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ವಿರೋಧಕ್ಕೆ ಗುರಿಯಾಗಿತ್ತು. ಇಂಗ್ಲೆಂಡ್ ತಂಡ ಅಂತಿಮ 8 ರ ಘಟ್ಟಕ್ಕೆ ಪ್ರವೇಶಿಸಿದ್ದು ಮುಂದಿನ ಪಂದ್ಯಗಳಲ್ಲಿ ಇನ್ನೂ ಹೆಚ್ಚಿನ ಪ್ರೇಕ್ಷಕರು ಮೈದಾನದಲ್ಲಿ ಸೇರಲಿದ್ದಾರೆ. ಜೊತೆಗೆ ಯುರೋಪ್‌ನಲ್ಲಿ ಬೇಸಿಗೆ ರಜೆ ಕೂಡ ಅರಂಭವಾಗಿರುವುದು ಜನ ದಟ್ಟಣೆಗೆ ಇನ್ನೊಂದು ಕಾರಣವಾಗಿದೆ.

ಫುಟ್ಬಾಲ್ ಪಂದ್ಯಗಳನ್ನು ಬ್ರಿಟನ್‌ ದೇಶದ ಆಚಗೆ ಸ್ಥಳಾಂತರಿಸಬೇಕು ಎಂದು ಸಾಂಕ್ರಾಮಿಕ ರೋಗ ತಜ್ಞ ಅಂಟೋನಿ ಫ್ಲಾಹೆಟ್‌ ಆಗ್ರಹಿಸಿದ್ದಾರೆ. ಪಂದ್ಯಗಳನ್ನು ಕೊರೊನಾ ಅಪಾಯ ಕಡಿಮೆ ಇರುವ ದೇಶಗಳಿಗೆ ಸ್ಥಳಾಂತರಿಸುವುದು ಕಷ್ಟದ ಕೆಲಸವೇನಲ್ಲ ಎಂದು ಅಂತರಾಷ್ಟ್ರೀಯ ಆರೋಗ್ಯ ಸಂಸ್ಥೆಯ ನಿರ್ದೇಶಕರೂ ಆಗಿರುವ ಅಂಟೋನಿ ಫ್ಲಾಹೆಂಟ್ ಬ್ರಿಟನ್ ಸರ್ಕಾರ ಮತ್ತು ಫುಟ್ಬಾಲ್ ಟೂರ್ನಿಯನ್ನು ಆಯೋಜಿಸುರುವ UEFA ಸಂಸ್ಥೆಗೆ ಸೂಚನೆಯನ್ನೂ ನೀಡಿದ್ದಾರೆ.

ಕೊರೊನಾ ಸೋಂಕಿನ ಆತಂಕದ ನಡುವೆಯೂ ಪಂದ್ಯಗಳನ್ನು ಸುರಕ್ಷಿತ ವಾತಾವರಣದಲ್ಲಿ ನಡೆಸಲಾಗುತ್ತಿದೆ. ಎಲ್ಲಾ ಪಂದ್ಯಗಳು ನಿಗದಿತ ದಿನದಂದು ನಿಗದಿತ ಸ್ಥಳದಲ್ಲಿಯೇ ನಡೆಯಲಿವೆ. ಸಾಕಷ್ಟು ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು UEFA ಸಂಸ್ಥೆ ಹೇಳಿದೆ.

ಕಳೆದ ಒಂದು ವಾರದಲ್ಲಿ ಯುರೋಪ್‌ನಾದ್ಯಂತ ಕೊರೋನಾ ಸೋಂಕಿತರ ಪ್ರಮಾಣದಲ್ಲಿ 10% ಹೆಚ್ಚಳವಾಗಿದೆ ಎಂದು ವಿಶ್ವಆರೋಗ್ಯ ಸಂಸ್ಥೆ (WHO) ಹೇಳಿದ್ದು, 11 ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುರೋ ಫುಟ್‌ಬಾಲ್ ಕಪ್ ಟೂರ್ನಿ ಕೊರೊನಾ ಸೋಂಕಿನ ಹೆಚ್ಚಳಕ್ಕೆ ಕಾರಣವಾಗುವ ಸಾಧ್ಯವಿದ್ದು ಆತಿಥೇಯ ನಗರಗಳು ಹೆಚ್ಚು ಎಚ್ಚರಿಕೆ ವಹಿಸಬೇಕೆಂದು ಎಚ್ಚರಿಸಿದೆ.

ಹಂಗೇರಿ ರಾಜಧಾನಿ ಬುಡಾಪೆಸ್ಟ್‌ ನಗರದ ಕ್ರೀಡಾಂಗಣದಲ್ಲಿ ಕಿಕ್ಕಿರಿದು ನೆರೆದ ಫುಟ್ಬಾಲ್ ಅಭಿಮಾನಿಗಳು

ಡೆನ್ಮಾರ್ಕ್ ಮತ್ತು ಬೆಲ್ಜಿಯಮ್ ನಡುವಿನ ಪಂದ್ಯ ವೀಕ್ಷಿಸಲು ತೆರಳಿದ 4000 ಜನರಲ್ಲಿ ಡೆಲ್ಟಾ ರೂಪಾಂತರಿ ವೈರಸ್‌ ಕಂಡುಬಂದಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಗೇ ಸ್ಕಾಟ್ಲೆಂಡ್‌ನಲ್ಲೂ ಇದೇ ಪರಿಸ್ಥಿತಿಯಿದ್ದು  ಫುಟ್ಬಾಲ್ ಪಂದ್ಯವನ್ನು ವೀಕ್ಷಿಸಲು ಲಂಡನ್‌ಗೆ ತೆರಳಿದ 2,000 ಜನರಲ್ಲಿ ಹೊಸ ರೂಪಾಂತರಿ ವೈರಸ್‌ ಪತ್ತೆಯಾಗಿದೆ ಎಂದು ಸ್ಕಾಟ್ಲೆಂಡ್ ಆರೋಗ್ಯ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಫಿನ್ಲೆಂಡ್‌ ದೇಶದ ಹೊರಗೆ ಪಂದ್ಯವನ್ನು ವೀಕ್ಷಿಸಲು ತೆರಳಿದ ದೇಶದ ನಾಗರಿಕರಲ್ಲಿ ಕೂಡ ಡೆಲ್ಟಾ ರೂಪಾಂತರಿ ವೈರಸ್ ಕಂಡು ಬಂದಿದ್ದು ಸರಿ ಸುಮಾರು 100 ಹೊಸ ಡೆಲ್ಟಾ ಪ್ರಕರಣಗಳು ವರದಿಯಾಗಿವೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಸಮುದಾಯಕ ಚಟುವಟಿಕೆಗಳಿಂದ ಕೊರೊನಾ ಸೋಂಕು ಹರಡಲು ಸಾಧ್ಯವಿಲ್ಲವೆಂದು ಹೇಳಲು ಆಗುವುದಿಲ್ಲ. ಆದರೆ ಫುಟ್ಬಾಲ್ ಒಂದರಿಂದಲೇ ಸೋಂಕು ಹರಡುತ್ತಿದೆ ಎಂಬುದನ್ನು ನಾನು ಒಪ್ಪುವುದಿಲ್ಲ. ಸ್ಥಳೀಯ ಆಡಳಿತಗಳು ಮತ್ತು ಸರ್ಕಾರಗಳು ನಿರ್ಬಂಧಗಳನ್ನು ಸಡಿಲಿಸರುವುದರಿಂದ ಈ ಚಟುವಟಿಕೆಗಳು ನಡೆಯುತ್ತಿವೆ. ಕಠಿಣ ನಿಯಮಗಳನ್ನು ತೆರವುಗೊಳಿಸುವ ಮೊದಲೇ ಸರ್ಕಾರಗಳು ಸೋಂಕಿನ ನಿಯಂತ್ರಣಕ್ಕೆ ಸೂಕ್ತಕ್ರಮ ಕೈಗೊಳ್ಳಬೇಕಿತ್ತು ಎಂದು ಯುರೋಪಿಯನ್‌ ಫುಟ್ಬಾಲ್‌ ಸಂಘಟನೆ (UEFA)  ವೈದ್ಯಕೀಯ ಸಲಹೆಗಾರ ಡಾ. ಡೇನಿಯಲ್‌ ಕೋಚ್ ಅಭಿಪ್ರಾಯಪಟ್ಟಿದ್ದಾರೆ.

ವ್ಯಾಕ್ಸೀನ್ ಪಡೆಯದ ನಾಗರಿಕರು ಲಂಡನ್ ಮತ್ತು ರಷ್ಯಾದ ಸೇಂಟ್‌ ಪೀಟರ್ಸ್‌ಬರ್ಗ್‌ ನಗರಗಳಿಗೆ ಪಂದ್ಯವನ್ನು ವೀಕ್ಷಿಸಲು ತೆರಳದೇ ಇರುವುದು ಉತ್ತಮ ಎಂದು ಡಾ. ಅಂಟೋನಿ ಫ್ಲಾಹಾಲ್ಟ್‌ ಯುರೋಪ್‌ನ ನಾಗರಿಕರಲ್ಲಿ ಮನವಿ ಮಾಡಿದ್ದಾರೆ.

-ರಾಜೇಶ್ ಹೆಬ್ಬಾರ್


ಇದನ್ನೂ ಓದಿ: ಸರ್ಕಾರದ ತಪ್ಪುಗಳಿಂದಾಗಿ ವೈದ್ಯರು ಶಿಕ್ಷೆ ಅನುಭವಿಸುತ್ತಿದ್ದಾರೆ: CJI ಎನ್‌.ವಿ. ರಮಣ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...