Homeಅಂತರಾಷ್ಟ್ರೀಯಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

ಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

- Advertisement -
- Advertisement -

ಯುರೋಪ್ ದೇಶಗಳಲ್ಲಿ ಕಳೆದ ಒಂದು ತಿಂಗಳಿನಿಂದ ಫುಟ್ಬಾಲ್ ಕಲರವ ಆರಂಭವಾಗಿದೆ. ಕಳೆದ 1 ವರ್ಷದಿಂದ ಖಾಲಿ ಮೈದಾನಗಳಲ್ಲಿ ನಡೆಯುತ್ತಿದ್ದ ಫುಟ್ಬಾಲ್ ಪಂದ್ಯಗಳು ಈಗ ತುಂಬಿ ತುಳುಕಾಡುತ್ತಿವೆ. ಮೈದಾನಗಳ ಹೊರಗೆ, ವಿಮಾನ ನಿಲ್ಧಾಣ, ರೈಲ್ವೆ ಸ್ಟೇಷನ್, ಮಾರ್ಕೆಟ್ ಎಲ್ಲೆಡೆಯೂ ಈಗ ಫುಟ್ಬಾಲ್ ಗುಂಗು ಗುನುಗುತ್ತಿದೆ. ಜೂನ್ 11 ರಿಂದ ಜುಲೈ 11ರ ವರೆಗೆ ನಡೆಯುತ್ತಿರುವ ಯುರೋ ಕಪ್ 2020 ಫುಟ್ಬಾಲ್ ಟೂರ್ನಿ ಯುರೋಪಿನ ನಗರಗಳಲ್ಲಿ ಅಪಾರ ಜನಸಂದಣಿಗೆ ಕಾರಣವಾಗುತ್ತಿದೆ. ಸಾವಿರಾರು ಫುಟ್ಬಾಲ್ ಪ್ರಿಯರು ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಪ್ರಯಾಣ ಬೆಳೆಸುತ್ತಿದ್ದಾರೆ. ಯುರೋಪಿನಲ್ಲಿ ವರ್ಷಗಳ ಕಾಲ ರೂಡಿಸಿಕೊಂಡು ಬಂದಿದ್ದ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವ ಶಿಸ್ತು ಫುಟ್ಬಾಲ್ ಟೂರ್ನಿಯ ವೇಳೆ ಎಲ್ಲೂ ಕಾಣಿಸುತ್ತಿಲ್ಲ. ಈ ಜನಸಂದಣಿಯು ಬ್ರಿಟನ್, ರಷ್ಯಾ ದೇಶಗಳ ಅಡಳಿತ ವ್ಯವಸ್ಥೆಗೆ ತೀವ್ರ ತಲೆ ನೋವಾಗಿ ಪರಿಣಮಿಸಿದ್ದು ಕೊರೊನಾ ಮೂರನೇ ಅಲೆಯ ಸಾಧ್ಯತೆಯನ್ನು ಹುಟ್ಟು ಹಾಕಿದೆ.

ಬ್ರಿಟನ್ ರಾಜಧಾನಿ ಲಂಡನ್ ಮತ್ತು ರಷ್ಯಾದ ಸೇಂಟ್‌ ಪೀಟರ್ಸ್‌ ಬರ್ಗ್‌ ದೇಶಗಳಲ್ಲಿ ಡೆಲ್ಟಾ ಮತ್ತು ಡೆಲ್ಟಾ ಪ್ಲಸ್‌ ರೂಪಾಂತರಿ ವೈರಸ್‌ಗಳು ವೇಗವಾಗಿ ಹರಡುತ್ತಿರುವುದರಿಂದ ಅಲ್ಲಿನ ಸರ್ಕಾರಗಳು ಸಾಕಷ್ಟು ಅತಂಕಕ್ಕೆ ಒಳಗಾಗಿವೆ. ತಮ್ಮ ದೇಶದ ಬಹುತೇಕ ನಾಗರಿಕರಿಗೆ ವ್ಯಾಕ್ಸಿನ್ ನೀಡಿರುವ ಯುರೋಪಿಯನ್‌ ದೇಶಗಳಿಗೆ ಡೆಲ್ಟಾ ಪ್ಲಸ್‌ ರೂಪಾಂತರಿಯ ಮೇಲೆ ವ್ಯಾಕ್ಸಿನ್‌ಗಳು ಹೆಚ್ಚು ಪರಿಣಾಮ ಬೀರುವುದಿಲ್ಲ ಎಂಬ ವೈದ್ಯಕೀಯ ವರದಿಗಳು ನಿದ್ದೆಗೆಡಿಸಿದ್ದು ಜನ ಸಂದಣಿಯನ್ನು ನಿಯಂತ್ರಿಸಲು ಅಲ್ಲಿನ ಸರ್ಕಾರಗಳು ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿವೆ.

ನಾವು ಡೆಲ್ಟಾ ಮತ್ತು ಡೆಲ್ಟಾ ಪ್ಲಸ್ ರೂಪಾಂತರಿಯನ್ನು ಹರಡಲೇಬೇಕೆಂದು ಹೊರಟರೆ ಇದೇ ಸರಿಯಾದ ಉಪಾಯ ಎಂದು ಲಂಡನ್‌ನ ಸಾಂಕ್ರಾಮಿಕ ರೋಗ ತಜ್ಞ ಅಂಟೋನಿ ಫ್ಲಾಹಾಲ್ಟ್‌ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಅಂಟಾರ್ಟಿಕದಲ್ಲೂ ಏರಿದ ತಾಪಮಾನ: ಕರಗುತ್ತಿವೆ ನೀರ್ಗಲ್ಲುಗಳು

ಮುಖ್ಯವಾಗಿ ಮುಂದೆ ನಡೆಯಲಿರುವ ಎರಡು ಸೆಮಿಫೈನಲ್ ಪಂದ್ಯಗಳಲ್ಲಿ ಒಂದು ಲಂಡನ್‌ನಲ್ಲಿಯೂ ಮತ್ತೊಂದು ರಷ್ಯಾದ ರಾಜಧಾನಿ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿಯೂ ನಡೆಯಲಿದೆ. ಈ ಪಂದ್ಯಗಳಿಗೆ ಅತಿಹೆಚ್ಚಿನ ಪ್ರೇಕ್ಷಕರು ಆಗಮಿಸುವ ಸಾಧ್ಯತೆ ಇದೆ. ಮತ್ತೊಂದೆಡೆ ಲಂಡನ್ ಮತ್ತು ಸೇಂಟ್‌ಪೀಟರ್ಸ್‌ಬರ್ಗ್‌ ಎರಡೂ ನಗರಗಳಲ್ಲಿ ದಿನನಿತ್ಯದ ಸೋಂಕಿನ ಪ್ರಮಾಣಗಳಲ್ಲಿ ಹೆಚ್ಚಳವಾಗಿದ್ದು ಡೆಲ್ಟಾ ರೂಪಾಂತರಿಯ ಸಾಕಷ್ಟು ಪ್ರಕರಣಗಳು ವರದಿಯಾಗುತ್ತಿದೆ. ಸೆಮಿಫೈನಲ್ ಪಂದ್ಯಗಳಿಗೆ 60,000 ಜನ ಪ್ರೇಕ್ಷಕರಿಗೆ ಪಂದ್ಯ ವೀಕ್ಷಿಸಲು ಅವಕಾಶ ಮಾಡಿಕೊಡಲಾಗಿದ್ದು, ಮೈದಾನದ ಹೊರಗೆ ವ್ಯಾಪಾರಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳಲ್ಲಿ ಸಾಮಾಜಿಕ ಅಂತರದ ಪಾಲನೆ ದುಸ್ತರವಾಗಲಿದೆ ಎಂದು ಬ್ರಿಟನ್ ಮಾಧ್ಯಮಗಳು ವರದಿ ಮಾಡಿವೆ.

ಮೊನ್ನೆ ಇಂಗ್ಲೆಂಡ್ ತಂಡವು ಫ್ರಿಕ್ವಾರ್ಟರ್‌ ಫೈನಲ್ ಪಂದ್ಯವನ್ನು ಗೆಲ್ಲುತ್ತಿದ್ದಂತೆ ಲಂಡನ್‌ನ ವೆಂಬ್ಲೆ ಫುಟ್ಬಾಲ್ ಮೈದಾನದಲ್ಲಿ ನೆರೆದಿದ್ದ 42,000 ಜನ ಪ್ರೇಕ್ಷಕರು ಮಾಸ್ಕ್‌ ಧರಿಸದೇ, ಸಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಮೈದಾನದ ಹೊರಗೆ ಸಂಭ್ರಮಿಸಿದ ರೀತಿ ಬ್ರಿಟನ್ ಮತ್ತು ಅಂತರಾಷ್ಟ್ರೀಯ ಮಾಧ್ಯಮದಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ವೆಂಬ್ಲೆ ಮೈದಾನದ ಹೊರಗೆ ಸಾಗರೊಪಾದಿಯಲ್ಲಿ ನೆರೆದ ಜನ ಪ್ರವಾಹದ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ವಿರೋಧಕ್ಕೆ ಗುರಿಯಾಗಿತ್ತು. ಇಂಗ್ಲೆಂಡ್ ತಂಡ ಅಂತಿಮ 8 ರ ಘಟ್ಟಕ್ಕೆ ಪ್ರವೇಶಿಸಿದ್ದು ಮುಂದಿನ ಪಂದ್ಯಗಳಲ್ಲಿ ಇನ್ನೂ ಹೆಚ್ಚಿನ ಪ್ರೇಕ್ಷಕರು ಮೈದಾನದಲ್ಲಿ ಸೇರಲಿದ್ದಾರೆ. ಜೊತೆಗೆ ಯುರೋಪ್‌ನಲ್ಲಿ ಬೇಸಿಗೆ ರಜೆ ಕೂಡ ಅರಂಭವಾಗಿರುವುದು ಜನ ದಟ್ಟಣೆಗೆ ಇನ್ನೊಂದು ಕಾರಣವಾಗಿದೆ.

ಫುಟ್ಬಾಲ್ ಪಂದ್ಯಗಳನ್ನು ಬ್ರಿಟನ್‌ ದೇಶದ ಆಚಗೆ ಸ್ಥಳಾಂತರಿಸಬೇಕು ಎಂದು ಸಾಂಕ್ರಾಮಿಕ ರೋಗ ತಜ್ಞ ಅಂಟೋನಿ ಫ್ಲಾಹೆಟ್‌ ಆಗ್ರಹಿಸಿದ್ದಾರೆ. ಪಂದ್ಯಗಳನ್ನು ಕೊರೊನಾ ಅಪಾಯ ಕಡಿಮೆ ಇರುವ ದೇಶಗಳಿಗೆ ಸ್ಥಳಾಂತರಿಸುವುದು ಕಷ್ಟದ ಕೆಲಸವೇನಲ್ಲ ಎಂದು ಅಂತರಾಷ್ಟ್ರೀಯ ಆರೋಗ್ಯ ಸಂಸ್ಥೆಯ ನಿರ್ದೇಶಕರೂ ಆಗಿರುವ ಅಂಟೋನಿ ಫ್ಲಾಹೆಂಟ್ ಬ್ರಿಟನ್ ಸರ್ಕಾರ ಮತ್ತು ಫುಟ್ಬಾಲ್ ಟೂರ್ನಿಯನ್ನು ಆಯೋಜಿಸುರುವ UEFA ಸಂಸ್ಥೆಗೆ ಸೂಚನೆಯನ್ನೂ ನೀಡಿದ್ದಾರೆ.

ಕೊರೊನಾ ಸೋಂಕಿನ ಆತಂಕದ ನಡುವೆಯೂ ಪಂದ್ಯಗಳನ್ನು ಸುರಕ್ಷಿತ ವಾತಾವರಣದಲ್ಲಿ ನಡೆಸಲಾಗುತ್ತಿದೆ. ಎಲ್ಲಾ ಪಂದ್ಯಗಳು ನಿಗದಿತ ದಿನದಂದು ನಿಗದಿತ ಸ್ಥಳದಲ್ಲಿಯೇ ನಡೆಯಲಿವೆ. ಸಾಕಷ್ಟು ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು UEFA ಸಂಸ್ಥೆ ಹೇಳಿದೆ.

ಕಳೆದ ಒಂದು ವಾರದಲ್ಲಿ ಯುರೋಪ್‌ನಾದ್ಯಂತ ಕೊರೋನಾ ಸೋಂಕಿತರ ಪ್ರಮಾಣದಲ್ಲಿ 10% ಹೆಚ್ಚಳವಾಗಿದೆ ಎಂದು ವಿಶ್ವಆರೋಗ್ಯ ಸಂಸ್ಥೆ (WHO) ಹೇಳಿದ್ದು, 11 ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುರೋ ಫುಟ್‌ಬಾಲ್ ಕಪ್ ಟೂರ್ನಿ ಕೊರೊನಾ ಸೋಂಕಿನ ಹೆಚ್ಚಳಕ್ಕೆ ಕಾರಣವಾಗುವ ಸಾಧ್ಯವಿದ್ದು ಆತಿಥೇಯ ನಗರಗಳು ಹೆಚ್ಚು ಎಚ್ಚರಿಕೆ ವಹಿಸಬೇಕೆಂದು ಎಚ್ಚರಿಸಿದೆ.

ಹಂಗೇರಿ ರಾಜಧಾನಿ ಬುಡಾಪೆಸ್ಟ್‌ ನಗರದ ಕ್ರೀಡಾಂಗಣದಲ್ಲಿ ಕಿಕ್ಕಿರಿದು ನೆರೆದ ಫುಟ್ಬಾಲ್ ಅಭಿಮಾನಿಗಳು

ಡೆನ್ಮಾರ್ಕ್ ಮತ್ತು ಬೆಲ್ಜಿಯಮ್ ನಡುವಿನ ಪಂದ್ಯ ವೀಕ್ಷಿಸಲು ತೆರಳಿದ 4000 ಜನರಲ್ಲಿ ಡೆಲ್ಟಾ ರೂಪಾಂತರಿ ವೈರಸ್‌ ಕಂಡುಬಂದಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಗೇ ಸ್ಕಾಟ್ಲೆಂಡ್‌ನಲ್ಲೂ ಇದೇ ಪರಿಸ್ಥಿತಿಯಿದ್ದು  ಫುಟ್ಬಾಲ್ ಪಂದ್ಯವನ್ನು ವೀಕ್ಷಿಸಲು ಲಂಡನ್‌ಗೆ ತೆರಳಿದ 2,000 ಜನರಲ್ಲಿ ಹೊಸ ರೂಪಾಂತರಿ ವೈರಸ್‌ ಪತ್ತೆಯಾಗಿದೆ ಎಂದು ಸ್ಕಾಟ್ಲೆಂಡ್ ಆರೋಗ್ಯ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಫಿನ್ಲೆಂಡ್‌ ದೇಶದ ಹೊರಗೆ ಪಂದ್ಯವನ್ನು ವೀಕ್ಷಿಸಲು ತೆರಳಿದ ದೇಶದ ನಾಗರಿಕರಲ್ಲಿ ಕೂಡ ಡೆಲ್ಟಾ ರೂಪಾಂತರಿ ವೈರಸ್ ಕಂಡು ಬಂದಿದ್ದು ಸರಿ ಸುಮಾರು 100 ಹೊಸ ಡೆಲ್ಟಾ ಪ್ರಕರಣಗಳು ವರದಿಯಾಗಿವೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಸಮುದಾಯಕ ಚಟುವಟಿಕೆಗಳಿಂದ ಕೊರೊನಾ ಸೋಂಕು ಹರಡಲು ಸಾಧ್ಯವಿಲ್ಲವೆಂದು ಹೇಳಲು ಆಗುವುದಿಲ್ಲ. ಆದರೆ ಫುಟ್ಬಾಲ್ ಒಂದರಿಂದಲೇ ಸೋಂಕು ಹರಡುತ್ತಿದೆ ಎಂಬುದನ್ನು ನಾನು ಒಪ್ಪುವುದಿಲ್ಲ. ಸ್ಥಳೀಯ ಆಡಳಿತಗಳು ಮತ್ತು ಸರ್ಕಾರಗಳು ನಿರ್ಬಂಧಗಳನ್ನು ಸಡಿಲಿಸರುವುದರಿಂದ ಈ ಚಟುವಟಿಕೆಗಳು ನಡೆಯುತ್ತಿವೆ. ಕಠಿಣ ನಿಯಮಗಳನ್ನು ತೆರವುಗೊಳಿಸುವ ಮೊದಲೇ ಸರ್ಕಾರಗಳು ಸೋಂಕಿನ ನಿಯಂತ್ರಣಕ್ಕೆ ಸೂಕ್ತಕ್ರಮ ಕೈಗೊಳ್ಳಬೇಕಿತ್ತು ಎಂದು ಯುರೋಪಿಯನ್‌ ಫುಟ್ಬಾಲ್‌ ಸಂಘಟನೆ (UEFA)  ವೈದ್ಯಕೀಯ ಸಲಹೆಗಾರ ಡಾ. ಡೇನಿಯಲ್‌ ಕೋಚ್ ಅಭಿಪ್ರಾಯಪಟ್ಟಿದ್ದಾರೆ.

ವ್ಯಾಕ್ಸೀನ್ ಪಡೆಯದ ನಾಗರಿಕರು ಲಂಡನ್ ಮತ್ತು ರಷ್ಯಾದ ಸೇಂಟ್‌ ಪೀಟರ್ಸ್‌ಬರ್ಗ್‌ ನಗರಗಳಿಗೆ ಪಂದ್ಯವನ್ನು ವೀಕ್ಷಿಸಲು ತೆರಳದೇ ಇರುವುದು ಉತ್ತಮ ಎಂದು ಡಾ. ಅಂಟೋನಿ ಫ್ಲಾಹಾಲ್ಟ್‌ ಯುರೋಪ್‌ನ ನಾಗರಿಕರಲ್ಲಿ ಮನವಿ ಮಾಡಿದ್ದಾರೆ.

-ರಾಜೇಶ್ ಹೆಬ್ಬಾರ್


ಇದನ್ನೂ ಓದಿ: ಸರ್ಕಾರದ ತಪ್ಪುಗಳಿಂದಾಗಿ ವೈದ್ಯರು ಶಿಕ್ಷೆ ಅನುಭವಿಸುತ್ತಿದ್ದಾರೆ: CJI ಎನ್‌.ವಿ. ರಮಣ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...