Homeಅಂತರಾಷ್ಟ್ರೀಯಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

ಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

- Advertisement -
- Advertisement -

ಯುರೋಪ್ ದೇಶಗಳಲ್ಲಿ ಕಳೆದ ಒಂದು ತಿಂಗಳಿನಿಂದ ಫುಟ್ಬಾಲ್ ಕಲರವ ಆರಂಭವಾಗಿದೆ. ಕಳೆದ 1 ವರ್ಷದಿಂದ ಖಾಲಿ ಮೈದಾನಗಳಲ್ಲಿ ನಡೆಯುತ್ತಿದ್ದ ಫುಟ್ಬಾಲ್ ಪಂದ್ಯಗಳು ಈಗ ತುಂಬಿ ತುಳುಕಾಡುತ್ತಿವೆ. ಮೈದಾನಗಳ ಹೊರಗೆ, ವಿಮಾನ ನಿಲ್ಧಾಣ, ರೈಲ್ವೆ ಸ್ಟೇಷನ್, ಮಾರ್ಕೆಟ್ ಎಲ್ಲೆಡೆಯೂ ಈಗ ಫುಟ್ಬಾಲ್ ಗುಂಗು ಗುನುಗುತ್ತಿದೆ. ಜೂನ್ 11 ರಿಂದ ಜುಲೈ 11ರ ವರೆಗೆ ನಡೆಯುತ್ತಿರುವ ಯುರೋ ಕಪ್ 2020 ಫುಟ್ಬಾಲ್ ಟೂರ್ನಿ ಯುರೋಪಿನ ನಗರಗಳಲ್ಲಿ ಅಪಾರ ಜನಸಂದಣಿಗೆ ಕಾರಣವಾಗುತ್ತಿದೆ. ಸಾವಿರಾರು ಫುಟ್ಬಾಲ್ ಪ್ರಿಯರು ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಪ್ರಯಾಣ ಬೆಳೆಸುತ್ತಿದ್ದಾರೆ. ಯುರೋಪಿನಲ್ಲಿ ವರ್ಷಗಳ ಕಾಲ ರೂಡಿಸಿಕೊಂಡು ಬಂದಿದ್ದ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವ ಶಿಸ್ತು ಫುಟ್ಬಾಲ್ ಟೂರ್ನಿಯ ವೇಳೆ ಎಲ್ಲೂ ಕಾಣಿಸುತ್ತಿಲ್ಲ. ಈ ಜನಸಂದಣಿಯು ಬ್ರಿಟನ್, ರಷ್ಯಾ ದೇಶಗಳ ಅಡಳಿತ ವ್ಯವಸ್ಥೆಗೆ ತೀವ್ರ ತಲೆ ನೋವಾಗಿ ಪರಿಣಮಿಸಿದ್ದು ಕೊರೊನಾ ಮೂರನೇ ಅಲೆಯ ಸಾಧ್ಯತೆಯನ್ನು ಹುಟ್ಟು ಹಾಕಿದೆ.

ಬ್ರಿಟನ್ ರಾಜಧಾನಿ ಲಂಡನ್ ಮತ್ತು ರಷ್ಯಾದ ಸೇಂಟ್‌ ಪೀಟರ್ಸ್‌ ಬರ್ಗ್‌ ದೇಶಗಳಲ್ಲಿ ಡೆಲ್ಟಾ ಮತ್ತು ಡೆಲ್ಟಾ ಪ್ಲಸ್‌ ರೂಪಾಂತರಿ ವೈರಸ್‌ಗಳು ವೇಗವಾಗಿ ಹರಡುತ್ತಿರುವುದರಿಂದ ಅಲ್ಲಿನ ಸರ್ಕಾರಗಳು ಸಾಕಷ್ಟು ಅತಂಕಕ್ಕೆ ಒಳಗಾಗಿವೆ. ತಮ್ಮ ದೇಶದ ಬಹುತೇಕ ನಾಗರಿಕರಿಗೆ ವ್ಯಾಕ್ಸಿನ್ ನೀಡಿರುವ ಯುರೋಪಿಯನ್‌ ದೇಶಗಳಿಗೆ ಡೆಲ್ಟಾ ಪ್ಲಸ್‌ ರೂಪಾಂತರಿಯ ಮೇಲೆ ವ್ಯಾಕ್ಸಿನ್‌ಗಳು ಹೆಚ್ಚು ಪರಿಣಾಮ ಬೀರುವುದಿಲ್ಲ ಎಂಬ ವೈದ್ಯಕೀಯ ವರದಿಗಳು ನಿದ್ದೆಗೆಡಿಸಿದ್ದು ಜನ ಸಂದಣಿಯನ್ನು ನಿಯಂತ್ರಿಸಲು ಅಲ್ಲಿನ ಸರ್ಕಾರಗಳು ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿವೆ.

ನಾವು ಡೆಲ್ಟಾ ಮತ್ತು ಡೆಲ್ಟಾ ಪ್ಲಸ್ ರೂಪಾಂತರಿಯನ್ನು ಹರಡಲೇಬೇಕೆಂದು ಹೊರಟರೆ ಇದೇ ಸರಿಯಾದ ಉಪಾಯ ಎಂದು ಲಂಡನ್‌ನ ಸಾಂಕ್ರಾಮಿಕ ರೋಗ ತಜ್ಞ ಅಂಟೋನಿ ಫ್ಲಾಹಾಲ್ಟ್‌ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಅಂಟಾರ್ಟಿಕದಲ್ಲೂ ಏರಿದ ತಾಪಮಾನ: ಕರಗುತ್ತಿವೆ ನೀರ್ಗಲ್ಲುಗಳು

ಮುಖ್ಯವಾಗಿ ಮುಂದೆ ನಡೆಯಲಿರುವ ಎರಡು ಸೆಮಿಫೈನಲ್ ಪಂದ್ಯಗಳಲ್ಲಿ ಒಂದು ಲಂಡನ್‌ನಲ್ಲಿಯೂ ಮತ್ತೊಂದು ರಷ್ಯಾದ ರಾಜಧಾನಿ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿಯೂ ನಡೆಯಲಿದೆ. ಈ ಪಂದ್ಯಗಳಿಗೆ ಅತಿಹೆಚ್ಚಿನ ಪ್ರೇಕ್ಷಕರು ಆಗಮಿಸುವ ಸಾಧ್ಯತೆ ಇದೆ. ಮತ್ತೊಂದೆಡೆ ಲಂಡನ್ ಮತ್ತು ಸೇಂಟ್‌ಪೀಟರ್ಸ್‌ಬರ್ಗ್‌ ಎರಡೂ ನಗರಗಳಲ್ಲಿ ದಿನನಿತ್ಯದ ಸೋಂಕಿನ ಪ್ರಮಾಣಗಳಲ್ಲಿ ಹೆಚ್ಚಳವಾಗಿದ್ದು ಡೆಲ್ಟಾ ರೂಪಾಂತರಿಯ ಸಾಕಷ್ಟು ಪ್ರಕರಣಗಳು ವರದಿಯಾಗುತ್ತಿದೆ. ಸೆಮಿಫೈನಲ್ ಪಂದ್ಯಗಳಿಗೆ 60,000 ಜನ ಪ್ರೇಕ್ಷಕರಿಗೆ ಪಂದ್ಯ ವೀಕ್ಷಿಸಲು ಅವಕಾಶ ಮಾಡಿಕೊಡಲಾಗಿದ್ದು, ಮೈದಾನದ ಹೊರಗೆ ವ್ಯಾಪಾರಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳಲ್ಲಿ ಸಾಮಾಜಿಕ ಅಂತರದ ಪಾಲನೆ ದುಸ್ತರವಾಗಲಿದೆ ಎಂದು ಬ್ರಿಟನ್ ಮಾಧ್ಯಮಗಳು ವರದಿ ಮಾಡಿವೆ.

ಮೊನ್ನೆ ಇಂಗ್ಲೆಂಡ್ ತಂಡವು ಫ್ರಿಕ್ವಾರ್ಟರ್‌ ಫೈನಲ್ ಪಂದ್ಯವನ್ನು ಗೆಲ್ಲುತ್ತಿದ್ದಂತೆ ಲಂಡನ್‌ನ ವೆಂಬ್ಲೆ ಫುಟ್ಬಾಲ್ ಮೈದಾನದಲ್ಲಿ ನೆರೆದಿದ್ದ 42,000 ಜನ ಪ್ರೇಕ್ಷಕರು ಮಾಸ್ಕ್‌ ಧರಿಸದೇ, ಸಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಮೈದಾನದ ಹೊರಗೆ ಸಂಭ್ರಮಿಸಿದ ರೀತಿ ಬ್ರಿಟನ್ ಮತ್ತು ಅಂತರಾಷ್ಟ್ರೀಯ ಮಾಧ್ಯಮದಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ವೆಂಬ್ಲೆ ಮೈದಾನದ ಹೊರಗೆ ಸಾಗರೊಪಾದಿಯಲ್ಲಿ ನೆರೆದ ಜನ ಪ್ರವಾಹದ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ವಿರೋಧಕ್ಕೆ ಗುರಿಯಾಗಿತ್ತು. ಇಂಗ್ಲೆಂಡ್ ತಂಡ ಅಂತಿಮ 8 ರ ಘಟ್ಟಕ್ಕೆ ಪ್ರವೇಶಿಸಿದ್ದು ಮುಂದಿನ ಪಂದ್ಯಗಳಲ್ಲಿ ಇನ್ನೂ ಹೆಚ್ಚಿನ ಪ್ರೇಕ್ಷಕರು ಮೈದಾನದಲ್ಲಿ ಸೇರಲಿದ್ದಾರೆ. ಜೊತೆಗೆ ಯುರೋಪ್‌ನಲ್ಲಿ ಬೇಸಿಗೆ ರಜೆ ಕೂಡ ಅರಂಭವಾಗಿರುವುದು ಜನ ದಟ್ಟಣೆಗೆ ಇನ್ನೊಂದು ಕಾರಣವಾಗಿದೆ.

ಫುಟ್ಬಾಲ್ ಪಂದ್ಯಗಳನ್ನು ಬ್ರಿಟನ್‌ ದೇಶದ ಆಚಗೆ ಸ್ಥಳಾಂತರಿಸಬೇಕು ಎಂದು ಸಾಂಕ್ರಾಮಿಕ ರೋಗ ತಜ್ಞ ಅಂಟೋನಿ ಫ್ಲಾಹೆಟ್‌ ಆಗ್ರಹಿಸಿದ್ದಾರೆ. ಪಂದ್ಯಗಳನ್ನು ಕೊರೊನಾ ಅಪಾಯ ಕಡಿಮೆ ಇರುವ ದೇಶಗಳಿಗೆ ಸ್ಥಳಾಂತರಿಸುವುದು ಕಷ್ಟದ ಕೆಲಸವೇನಲ್ಲ ಎಂದು ಅಂತರಾಷ್ಟ್ರೀಯ ಆರೋಗ್ಯ ಸಂಸ್ಥೆಯ ನಿರ್ದೇಶಕರೂ ಆಗಿರುವ ಅಂಟೋನಿ ಫ್ಲಾಹೆಂಟ್ ಬ್ರಿಟನ್ ಸರ್ಕಾರ ಮತ್ತು ಫುಟ್ಬಾಲ್ ಟೂರ್ನಿಯನ್ನು ಆಯೋಜಿಸುರುವ UEFA ಸಂಸ್ಥೆಗೆ ಸೂಚನೆಯನ್ನೂ ನೀಡಿದ್ದಾರೆ.

ಕೊರೊನಾ ಸೋಂಕಿನ ಆತಂಕದ ನಡುವೆಯೂ ಪಂದ್ಯಗಳನ್ನು ಸುರಕ್ಷಿತ ವಾತಾವರಣದಲ್ಲಿ ನಡೆಸಲಾಗುತ್ತಿದೆ. ಎಲ್ಲಾ ಪಂದ್ಯಗಳು ನಿಗದಿತ ದಿನದಂದು ನಿಗದಿತ ಸ್ಥಳದಲ್ಲಿಯೇ ನಡೆಯಲಿವೆ. ಸಾಕಷ್ಟು ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು UEFA ಸಂಸ್ಥೆ ಹೇಳಿದೆ.

ಕಳೆದ ಒಂದು ವಾರದಲ್ಲಿ ಯುರೋಪ್‌ನಾದ್ಯಂತ ಕೊರೋನಾ ಸೋಂಕಿತರ ಪ್ರಮಾಣದಲ್ಲಿ 10% ಹೆಚ್ಚಳವಾಗಿದೆ ಎಂದು ವಿಶ್ವಆರೋಗ್ಯ ಸಂಸ್ಥೆ (WHO) ಹೇಳಿದ್ದು, 11 ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುರೋ ಫುಟ್‌ಬಾಲ್ ಕಪ್ ಟೂರ್ನಿ ಕೊರೊನಾ ಸೋಂಕಿನ ಹೆಚ್ಚಳಕ್ಕೆ ಕಾರಣವಾಗುವ ಸಾಧ್ಯವಿದ್ದು ಆತಿಥೇಯ ನಗರಗಳು ಹೆಚ್ಚು ಎಚ್ಚರಿಕೆ ವಹಿಸಬೇಕೆಂದು ಎಚ್ಚರಿಸಿದೆ.

ಹಂಗೇರಿ ರಾಜಧಾನಿ ಬುಡಾಪೆಸ್ಟ್‌ ನಗರದ ಕ್ರೀಡಾಂಗಣದಲ್ಲಿ ಕಿಕ್ಕಿರಿದು ನೆರೆದ ಫುಟ್ಬಾಲ್ ಅಭಿಮಾನಿಗಳು

ಡೆನ್ಮಾರ್ಕ್ ಮತ್ತು ಬೆಲ್ಜಿಯಮ್ ನಡುವಿನ ಪಂದ್ಯ ವೀಕ್ಷಿಸಲು ತೆರಳಿದ 4000 ಜನರಲ್ಲಿ ಡೆಲ್ಟಾ ರೂಪಾಂತರಿ ವೈರಸ್‌ ಕಂಡುಬಂದಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಗೇ ಸ್ಕಾಟ್ಲೆಂಡ್‌ನಲ್ಲೂ ಇದೇ ಪರಿಸ್ಥಿತಿಯಿದ್ದು  ಫುಟ್ಬಾಲ್ ಪಂದ್ಯವನ್ನು ವೀಕ್ಷಿಸಲು ಲಂಡನ್‌ಗೆ ತೆರಳಿದ 2,000 ಜನರಲ್ಲಿ ಹೊಸ ರೂಪಾಂತರಿ ವೈರಸ್‌ ಪತ್ತೆಯಾಗಿದೆ ಎಂದು ಸ್ಕಾಟ್ಲೆಂಡ್ ಆರೋಗ್ಯ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಫಿನ್ಲೆಂಡ್‌ ದೇಶದ ಹೊರಗೆ ಪಂದ್ಯವನ್ನು ವೀಕ್ಷಿಸಲು ತೆರಳಿದ ದೇಶದ ನಾಗರಿಕರಲ್ಲಿ ಕೂಡ ಡೆಲ್ಟಾ ರೂಪಾಂತರಿ ವೈರಸ್ ಕಂಡು ಬಂದಿದ್ದು ಸರಿ ಸುಮಾರು 100 ಹೊಸ ಡೆಲ್ಟಾ ಪ್ರಕರಣಗಳು ವರದಿಯಾಗಿವೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಸಮುದಾಯಕ ಚಟುವಟಿಕೆಗಳಿಂದ ಕೊರೊನಾ ಸೋಂಕು ಹರಡಲು ಸಾಧ್ಯವಿಲ್ಲವೆಂದು ಹೇಳಲು ಆಗುವುದಿಲ್ಲ. ಆದರೆ ಫುಟ್ಬಾಲ್ ಒಂದರಿಂದಲೇ ಸೋಂಕು ಹರಡುತ್ತಿದೆ ಎಂಬುದನ್ನು ನಾನು ಒಪ್ಪುವುದಿಲ್ಲ. ಸ್ಥಳೀಯ ಆಡಳಿತಗಳು ಮತ್ತು ಸರ್ಕಾರಗಳು ನಿರ್ಬಂಧಗಳನ್ನು ಸಡಿಲಿಸರುವುದರಿಂದ ಈ ಚಟುವಟಿಕೆಗಳು ನಡೆಯುತ್ತಿವೆ. ಕಠಿಣ ನಿಯಮಗಳನ್ನು ತೆರವುಗೊಳಿಸುವ ಮೊದಲೇ ಸರ್ಕಾರಗಳು ಸೋಂಕಿನ ನಿಯಂತ್ರಣಕ್ಕೆ ಸೂಕ್ತಕ್ರಮ ಕೈಗೊಳ್ಳಬೇಕಿತ್ತು ಎಂದು ಯುರೋಪಿಯನ್‌ ಫುಟ್ಬಾಲ್‌ ಸಂಘಟನೆ (UEFA)  ವೈದ್ಯಕೀಯ ಸಲಹೆಗಾರ ಡಾ. ಡೇನಿಯಲ್‌ ಕೋಚ್ ಅಭಿಪ್ರಾಯಪಟ್ಟಿದ್ದಾರೆ.

ವ್ಯಾಕ್ಸೀನ್ ಪಡೆಯದ ನಾಗರಿಕರು ಲಂಡನ್ ಮತ್ತು ರಷ್ಯಾದ ಸೇಂಟ್‌ ಪೀಟರ್ಸ್‌ಬರ್ಗ್‌ ನಗರಗಳಿಗೆ ಪಂದ್ಯವನ್ನು ವೀಕ್ಷಿಸಲು ತೆರಳದೇ ಇರುವುದು ಉತ್ತಮ ಎಂದು ಡಾ. ಅಂಟೋನಿ ಫ್ಲಾಹಾಲ್ಟ್‌ ಯುರೋಪ್‌ನ ನಾಗರಿಕರಲ್ಲಿ ಮನವಿ ಮಾಡಿದ್ದಾರೆ.

-ರಾಜೇಶ್ ಹೆಬ್ಬಾರ್


ಇದನ್ನೂ ಓದಿ: ಸರ್ಕಾರದ ತಪ್ಪುಗಳಿಂದಾಗಿ ವೈದ್ಯರು ಶಿಕ್ಷೆ ಅನುಭವಿಸುತ್ತಿದ್ದಾರೆ: CJI ಎನ್‌.ವಿ. ರಮಣ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....