Homeಅಂತರಾಷ್ಟ್ರೀಯಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

ಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

- Advertisement -
- Advertisement -

ಯುರೋಪ್ ದೇಶಗಳಲ್ಲಿ ಕಳೆದ ಒಂದು ತಿಂಗಳಿನಿಂದ ಫುಟ್ಬಾಲ್ ಕಲರವ ಆರಂಭವಾಗಿದೆ. ಕಳೆದ 1 ವರ್ಷದಿಂದ ಖಾಲಿ ಮೈದಾನಗಳಲ್ಲಿ ನಡೆಯುತ್ತಿದ್ದ ಫುಟ್ಬಾಲ್ ಪಂದ್ಯಗಳು ಈಗ ತುಂಬಿ ತುಳುಕಾಡುತ್ತಿವೆ. ಮೈದಾನಗಳ ಹೊರಗೆ, ವಿಮಾನ ನಿಲ್ಧಾಣ, ರೈಲ್ವೆ ಸ್ಟೇಷನ್, ಮಾರ್ಕೆಟ್ ಎಲ್ಲೆಡೆಯೂ ಈಗ ಫುಟ್ಬಾಲ್ ಗುಂಗು ಗುನುಗುತ್ತಿದೆ. ಜೂನ್ 11 ರಿಂದ ಜುಲೈ 11ರ ವರೆಗೆ ನಡೆಯುತ್ತಿರುವ ಯುರೋ ಕಪ್ 2020 ಫುಟ್ಬಾಲ್ ಟೂರ್ನಿ ಯುರೋಪಿನ ನಗರಗಳಲ್ಲಿ ಅಪಾರ ಜನಸಂದಣಿಗೆ ಕಾರಣವಾಗುತ್ತಿದೆ. ಸಾವಿರಾರು ಫುಟ್ಬಾಲ್ ಪ್ರಿಯರು ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಪ್ರಯಾಣ ಬೆಳೆಸುತ್ತಿದ್ದಾರೆ. ಯುರೋಪಿನಲ್ಲಿ ವರ್ಷಗಳ ಕಾಲ ರೂಡಿಸಿಕೊಂಡು ಬಂದಿದ್ದ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವ ಶಿಸ್ತು ಫುಟ್ಬಾಲ್ ಟೂರ್ನಿಯ ವೇಳೆ ಎಲ್ಲೂ ಕಾಣಿಸುತ್ತಿಲ್ಲ. ಈ ಜನಸಂದಣಿಯು ಬ್ರಿಟನ್, ರಷ್ಯಾ ದೇಶಗಳ ಅಡಳಿತ ವ್ಯವಸ್ಥೆಗೆ ತೀವ್ರ ತಲೆ ನೋವಾಗಿ ಪರಿಣಮಿಸಿದ್ದು ಕೊರೊನಾ ಮೂರನೇ ಅಲೆಯ ಸಾಧ್ಯತೆಯನ್ನು ಹುಟ್ಟು ಹಾಕಿದೆ.

ಬ್ರಿಟನ್ ರಾಜಧಾನಿ ಲಂಡನ್ ಮತ್ತು ರಷ್ಯಾದ ಸೇಂಟ್‌ ಪೀಟರ್ಸ್‌ ಬರ್ಗ್‌ ದೇಶಗಳಲ್ಲಿ ಡೆಲ್ಟಾ ಮತ್ತು ಡೆಲ್ಟಾ ಪ್ಲಸ್‌ ರೂಪಾಂತರಿ ವೈರಸ್‌ಗಳು ವೇಗವಾಗಿ ಹರಡುತ್ತಿರುವುದರಿಂದ ಅಲ್ಲಿನ ಸರ್ಕಾರಗಳು ಸಾಕಷ್ಟು ಅತಂಕಕ್ಕೆ ಒಳಗಾಗಿವೆ. ತಮ್ಮ ದೇಶದ ಬಹುತೇಕ ನಾಗರಿಕರಿಗೆ ವ್ಯಾಕ್ಸಿನ್ ನೀಡಿರುವ ಯುರೋಪಿಯನ್‌ ದೇಶಗಳಿಗೆ ಡೆಲ್ಟಾ ಪ್ಲಸ್‌ ರೂಪಾಂತರಿಯ ಮೇಲೆ ವ್ಯಾಕ್ಸಿನ್‌ಗಳು ಹೆಚ್ಚು ಪರಿಣಾಮ ಬೀರುವುದಿಲ್ಲ ಎಂಬ ವೈದ್ಯಕೀಯ ವರದಿಗಳು ನಿದ್ದೆಗೆಡಿಸಿದ್ದು ಜನ ಸಂದಣಿಯನ್ನು ನಿಯಂತ್ರಿಸಲು ಅಲ್ಲಿನ ಸರ್ಕಾರಗಳು ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿವೆ.

ನಾವು ಡೆಲ್ಟಾ ಮತ್ತು ಡೆಲ್ಟಾ ಪ್ಲಸ್ ರೂಪಾಂತರಿಯನ್ನು ಹರಡಲೇಬೇಕೆಂದು ಹೊರಟರೆ ಇದೇ ಸರಿಯಾದ ಉಪಾಯ ಎಂದು ಲಂಡನ್‌ನ ಸಾಂಕ್ರಾಮಿಕ ರೋಗ ತಜ್ಞ ಅಂಟೋನಿ ಫ್ಲಾಹಾಲ್ಟ್‌ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಅಂಟಾರ್ಟಿಕದಲ್ಲೂ ಏರಿದ ತಾಪಮಾನ: ಕರಗುತ್ತಿವೆ ನೀರ್ಗಲ್ಲುಗಳು

ಮುಖ್ಯವಾಗಿ ಮುಂದೆ ನಡೆಯಲಿರುವ ಎರಡು ಸೆಮಿಫೈನಲ್ ಪಂದ್ಯಗಳಲ್ಲಿ ಒಂದು ಲಂಡನ್‌ನಲ್ಲಿಯೂ ಮತ್ತೊಂದು ರಷ್ಯಾದ ರಾಜಧಾನಿ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿಯೂ ನಡೆಯಲಿದೆ. ಈ ಪಂದ್ಯಗಳಿಗೆ ಅತಿಹೆಚ್ಚಿನ ಪ್ರೇಕ್ಷಕರು ಆಗಮಿಸುವ ಸಾಧ್ಯತೆ ಇದೆ. ಮತ್ತೊಂದೆಡೆ ಲಂಡನ್ ಮತ್ತು ಸೇಂಟ್‌ಪೀಟರ್ಸ್‌ಬರ್ಗ್‌ ಎರಡೂ ನಗರಗಳಲ್ಲಿ ದಿನನಿತ್ಯದ ಸೋಂಕಿನ ಪ್ರಮಾಣಗಳಲ್ಲಿ ಹೆಚ್ಚಳವಾಗಿದ್ದು ಡೆಲ್ಟಾ ರೂಪಾಂತರಿಯ ಸಾಕಷ್ಟು ಪ್ರಕರಣಗಳು ವರದಿಯಾಗುತ್ತಿದೆ. ಸೆಮಿಫೈನಲ್ ಪಂದ್ಯಗಳಿಗೆ 60,000 ಜನ ಪ್ರೇಕ್ಷಕರಿಗೆ ಪಂದ್ಯ ವೀಕ್ಷಿಸಲು ಅವಕಾಶ ಮಾಡಿಕೊಡಲಾಗಿದ್ದು, ಮೈದಾನದ ಹೊರಗೆ ವ್ಯಾಪಾರಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳಲ್ಲಿ ಸಾಮಾಜಿಕ ಅಂತರದ ಪಾಲನೆ ದುಸ್ತರವಾಗಲಿದೆ ಎಂದು ಬ್ರಿಟನ್ ಮಾಧ್ಯಮಗಳು ವರದಿ ಮಾಡಿವೆ.

ಮೊನ್ನೆ ಇಂಗ್ಲೆಂಡ್ ತಂಡವು ಫ್ರಿಕ್ವಾರ್ಟರ್‌ ಫೈನಲ್ ಪಂದ್ಯವನ್ನು ಗೆಲ್ಲುತ್ತಿದ್ದಂತೆ ಲಂಡನ್‌ನ ವೆಂಬ್ಲೆ ಫುಟ್ಬಾಲ್ ಮೈದಾನದಲ್ಲಿ ನೆರೆದಿದ್ದ 42,000 ಜನ ಪ್ರೇಕ್ಷಕರು ಮಾಸ್ಕ್‌ ಧರಿಸದೇ, ಸಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಮೈದಾನದ ಹೊರಗೆ ಸಂಭ್ರಮಿಸಿದ ರೀತಿ ಬ್ರಿಟನ್ ಮತ್ತು ಅಂತರಾಷ್ಟ್ರೀಯ ಮಾಧ್ಯಮದಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ವೆಂಬ್ಲೆ ಮೈದಾನದ ಹೊರಗೆ ಸಾಗರೊಪಾದಿಯಲ್ಲಿ ನೆರೆದ ಜನ ಪ್ರವಾಹದ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ವಿರೋಧಕ್ಕೆ ಗುರಿಯಾಗಿತ್ತು. ಇಂಗ್ಲೆಂಡ್ ತಂಡ ಅಂತಿಮ 8 ರ ಘಟ್ಟಕ್ಕೆ ಪ್ರವೇಶಿಸಿದ್ದು ಮುಂದಿನ ಪಂದ್ಯಗಳಲ್ಲಿ ಇನ್ನೂ ಹೆಚ್ಚಿನ ಪ್ರೇಕ್ಷಕರು ಮೈದಾನದಲ್ಲಿ ಸೇರಲಿದ್ದಾರೆ. ಜೊತೆಗೆ ಯುರೋಪ್‌ನಲ್ಲಿ ಬೇಸಿಗೆ ರಜೆ ಕೂಡ ಅರಂಭವಾಗಿರುವುದು ಜನ ದಟ್ಟಣೆಗೆ ಇನ್ನೊಂದು ಕಾರಣವಾಗಿದೆ.

ಫುಟ್ಬಾಲ್ ಪಂದ್ಯಗಳನ್ನು ಬ್ರಿಟನ್‌ ದೇಶದ ಆಚಗೆ ಸ್ಥಳಾಂತರಿಸಬೇಕು ಎಂದು ಸಾಂಕ್ರಾಮಿಕ ರೋಗ ತಜ್ಞ ಅಂಟೋನಿ ಫ್ಲಾಹೆಟ್‌ ಆಗ್ರಹಿಸಿದ್ದಾರೆ. ಪಂದ್ಯಗಳನ್ನು ಕೊರೊನಾ ಅಪಾಯ ಕಡಿಮೆ ಇರುವ ದೇಶಗಳಿಗೆ ಸ್ಥಳಾಂತರಿಸುವುದು ಕಷ್ಟದ ಕೆಲಸವೇನಲ್ಲ ಎಂದು ಅಂತರಾಷ್ಟ್ರೀಯ ಆರೋಗ್ಯ ಸಂಸ್ಥೆಯ ನಿರ್ದೇಶಕರೂ ಆಗಿರುವ ಅಂಟೋನಿ ಫ್ಲಾಹೆಂಟ್ ಬ್ರಿಟನ್ ಸರ್ಕಾರ ಮತ್ತು ಫುಟ್ಬಾಲ್ ಟೂರ್ನಿಯನ್ನು ಆಯೋಜಿಸುರುವ UEFA ಸಂಸ್ಥೆಗೆ ಸೂಚನೆಯನ್ನೂ ನೀಡಿದ್ದಾರೆ.

ಕೊರೊನಾ ಸೋಂಕಿನ ಆತಂಕದ ನಡುವೆಯೂ ಪಂದ್ಯಗಳನ್ನು ಸುರಕ್ಷಿತ ವಾತಾವರಣದಲ್ಲಿ ನಡೆಸಲಾಗುತ್ತಿದೆ. ಎಲ್ಲಾ ಪಂದ್ಯಗಳು ನಿಗದಿತ ದಿನದಂದು ನಿಗದಿತ ಸ್ಥಳದಲ್ಲಿಯೇ ನಡೆಯಲಿವೆ. ಸಾಕಷ್ಟು ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು UEFA ಸಂಸ್ಥೆ ಹೇಳಿದೆ.

ಕಳೆದ ಒಂದು ವಾರದಲ್ಲಿ ಯುರೋಪ್‌ನಾದ್ಯಂತ ಕೊರೋನಾ ಸೋಂಕಿತರ ಪ್ರಮಾಣದಲ್ಲಿ 10% ಹೆಚ್ಚಳವಾಗಿದೆ ಎಂದು ವಿಶ್ವಆರೋಗ್ಯ ಸಂಸ್ಥೆ (WHO) ಹೇಳಿದ್ದು, 11 ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುರೋ ಫುಟ್‌ಬಾಲ್ ಕಪ್ ಟೂರ್ನಿ ಕೊರೊನಾ ಸೋಂಕಿನ ಹೆಚ್ಚಳಕ್ಕೆ ಕಾರಣವಾಗುವ ಸಾಧ್ಯವಿದ್ದು ಆತಿಥೇಯ ನಗರಗಳು ಹೆಚ್ಚು ಎಚ್ಚರಿಕೆ ವಹಿಸಬೇಕೆಂದು ಎಚ್ಚರಿಸಿದೆ.

ಹಂಗೇರಿ ರಾಜಧಾನಿ ಬುಡಾಪೆಸ್ಟ್‌ ನಗರದ ಕ್ರೀಡಾಂಗಣದಲ್ಲಿ ಕಿಕ್ಕಿರಿದು ನೆರೆದ ಫುಟ್ಬಾಲ್ ಅಭಿಮಾನಿಗಳು

ಡೆನ್ಮಾರ್ಕ್ ಮತ್ತು ಬೆಲ್ಜಿಯಮ್ ನಡುವಿನ ಪಂದ್ಯ ವೀಕ್ಷಿಸಲು ತೆರಳಿದ 4000 ಜನರಲ್ಲಿ ಡೆಲ್ಟಾ ರೂಪಾಂತರಿ ವೈರಸ್‌ ಕಂಡುಬಂದಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಗೇ ಸ್ಕಾಟ್ಲೆಂಡ್‌ನಲ್ಲೂ ಇದೇ ಪರಿಸ್ಥಿತಿಯಿದ್ದು  ಫುಟ್ಬಾಲ್ ಪಂದ್ಯವನ್ನು ವೀಕ್ಷಿಸಲು ಲಂಡನ್‌ಗೆ ತೆರಳಿದ 2,000 ಜನರಲ್ಲಿ ಹೊಸ ರೂಪಾಂತರಿ ವೈರಸ್‌ ಪತ್ತೆಯಾಗಿದೆ ಎಂದು ಸ್ಕಾಟ್ಲೆಂಡ್ ಆರೋಗ್ಯ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಫಿನ್ಲೆಂಡ್‌ ದೇಶದ ಹೊರಗೆ ಪಂದ್ಯವನ್ನು ವೀಕ್ಷಿಸಲು ತೆರಳಿದ ದೇಶದ ನಾಗರಿಕರಲ್ಲಿ ಕೂಡ ಡೆಲ್ಟಾ ರೂಪಾಂತರಿ ವೈರಸ್ ಕಂಡು ಬಂದಿದ್ದು ಸರಿ ಸುಮಾರು 100 ಹೊಸ ಡೆಲ್ಟಾ ಪ್ರಕರಣಗಳು ವರದಿಯಾಗಿವೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಸಮುದಾಯಕ ಚಟುವಟಿಕೆಗಳಿಂದ ಕೊರೊನಾ ಸೋಂಕು ಹರಡಲು ಸಾಧ್ಯವಿಲ್ಲವೆಂದು ಹೇಳಲು ಆಗುವುದಿಲ್ಲ. ಆದರೆ ಫುಟ್ಬಾಲ್ ಒಂದರಿಂದಲೇ ಸೋಂಕು ಹರಡುತ್ತಿದೆ ಎಂಬುದನ್ನು ನಾನು ಒಪ್ಪುವುದಿಲ್ಲ. ಸ್ಥಳೀಯ ಆಡಳಿತಗಳು ಮತ್ತು ಸರ್ಕಾರಗಳು ನಿರ್ಬಂಧಗಳನ್ನು ಸಡಿಲಿಸರುವುದರಿಂದ ಈ ಚಟುವಟಿಕೆಗಳು ನಡೆಯುತ್ತಿವೆ. ಕಠಿಣ ನಿಯಮಗಳನ್ನು ತೆರವುಗೊಳಿಸುವ ಮೊದಲೇ ಸರ್ಕಾರಗಳು ಸೋಂಕಿನ ನಿಯಂತ್ರಣಕ್ಕೆ ಸೂಕ್ತಕ್ರಮ ಕೈಗೊಳ್ಳಬೇಕಿತ್ತು ಎಂದು ಯುರೋಪಿಯನ್‌ ಫುಟ್ಬಾಲ್‌ ಸಂಘಟನೆ (UEFA)  ವೈದ್ಯಕೀಯ ಸಲಹೆಗಾರ ಡಾ. ಡೇನಿಯಲ್‌ ಕೋಚ್ ಅಭಿಪ್ರಾಯಪಟ್ಟಿದ್ದಾರೆ.

ವ್ಯಾಕ್ಸೀನ್ ಪಡೆಯದ ನಾಗರಿಕರು ಲಂಡನ್ ಮತ್ತು ರಷ್ಯಾದ ಸೇಂಟ್‌ ಪೀಟರ್ಸ್‌ಬರ್ಗ್‌ ನಗರಗಳಿಗೆ ಪಂದ್ಯವನ್ನು ವೀಕ್ಷಿಸಲು ತೆರಳದೇ ಇರುವುದು ಉತ್ತಮ ಎಂದು ಡಾ. ಅಂಟೋನಿ ಫ್ಲಾಹಾಲ್ಟ್‌ ಯುರೋಪ್‌ನ ನಾಗರಿಕರಲ್ಲಿ ಮನವಿ ಮಾಡಿದ್ದಾರೆ.

-ರಾಜೇಶ್ ಹೆಬ್ಬಾರ್


ಇದನ್ನೂ ಓದಿ: ಸರ್ಕಾರದ ತಪ್ಪುಗಳಿಂದಾಗಿ ವೈದ್ಯರು ಶಿಕ್ಷೆ ಅನುಭವಿಸುತ್ತಿದ್ದಾರೆ: CJI ಎನ್‌.ವಿ. ರಮಣ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...