Homeಅಂತರಾಷ್ಟ್ರೀಯಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

ಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

- Advertisement -
- Advertisement -

ಯುರೋಪ್ ದೇಶಗಳಲ್ಲಿ ಕಳೆದ ಒಂದು ತಿಂಗಳಿನಿಂದ ಫುಟ್ಬಾಲ್ ಕಲರವ ಆರಂಭವಾಗಿದೆ. ಕಳೆದ 1 ವರ್ಷದಿಂದ ಖಾಲಿ ಮೈದಾನಗಳಲ್ಲಿ ನಡೆಯುತ್ತಿದ್ದ ಫುಟ್ಬಾಲ್ ಪಂದ್ಯಗಳು ಈಗ ತುಂಬಿ ತುಳುಕಾಡುತ್ತಿವೆ. ಮೈದಾನಗಳ ಹೊರಗೆ, ವಿಮಾನ ನಿಲ್ಧಾಣ, ರೈಲ್ವೆ ಸ್ಟೇಷನ್, ಮಾರ್ಕೆಟ್ ಎಲ್ಲೆಡೆಯೂ ಈಗ ಫುಟ್ಬಾಲ್ ಗುಂಗು ಗುನುಗುತ್ತಿದೆ. ಜೂನ್ 11 ರಿಂದ ಜುಲೈ 11ರ ವರೆಗೆ ನಡೆಯುತ್ತಿರುವ ಯುರೋ ಕಪ್ 2020 ಫುಟ್ಬಾಲ್ ಟೂರ್ನಿ ಯುರೋಪಿನ ನಗರಗಳಲ್ಲಿ ಅಪಾರ ಜನಸಂದಣಿಗೆ ಕಾರಣವಾಗುತ್ತಿದೆ. ಸಾವಿರಾರು ಫುಟ್ಬಾಲ್ ಪ್ರಿಯರು ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಪ್ರಯಾಣ ಬೆಳೆಸುತ್ತಿದ್ದಾರೆ. ಯುರೋಪಿನಲ್ಲಿ ವರ್ಷಗಳ ಕಾಲ ರೂಡಿಸಿಕೊಂಡು ಬಂದಿದ್ದ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವ ಶಿಸ್ತು ಫುಟ್ಬಾಲ್ ಟೂರ್ನಿಯ ವೇಳೆ ಎಲ್ಲೂ ಕಾಣಿಸುತ್ತಿಲ್ಲ. ಈ ಜನಸಂದಣಿಯು ಬ್ರಿಟನ್, ರಷ್ಯಾ ದೇಶಗಳ ಅಡಳಿತ ವ್ಯವಸ್ಥೆಗೆ ತೀವ್ರ ತಲೆ ನೋವಾಗಿ ಪರಿಣಮಿಸಿದ್ದು ಕೊರೊನಾ ಮೂರನೇ ಅಲೆಯ ಸಾಧ್ಯತೆಯನ್ನು ಹುಟ್ಟು ಹಾಕಿದೆ.

ಬ್ರಿಟನ್ ರಾಜಧಾನಿ ಲಂಡನ್ ಮತ್ತು ರಷ್ಯಾದ ಸೇಂಟ್‌ ಪೀಟರ್ಸ್‌ ಬರ್ಗ್‌ ದೇಶಗಳಲ್ಲಿ ಡೆಲ್ಟಾ ಮತ್ತು ಡೆಲ್ಟಾ ಪ್ಲಸ್‌ ರೂಪಾಂತರಿ ವೈರಸ್‌ಗಳು ವೇಗವಾಗಿ ಹರಡುತ್ತಿರುವುದರಿಂದ ಅಲ್ಲಿನ ಸರ್ಕಾರಗಳು ಸಾಕಷ್ಟು ಅತಂಕಕ್ಕೆ ಒಳಗಾಗಿವೆ. ತಮ್ಮ ದೇಶದ ಬಹುತೇಕ ನಾಗರಿಕರಿಗೆ ವ್ಯಾಕ್ಸಿನ್ ನೀಡಿರುವ ಯುರೋಪಿಯನ್‌ ದೇಶಗಳಿಗೆ ಡೆಲ್ಟಾ ಪ್ಲಸ್‌ ರೂಪಾಂತರಿಯ ಮೇಲೆ ವ್ಯಾಕ್ಸಿನ್‌ಗಳು ಹೆಚ್ಚು ಪರಿಣಾಮ ಬೀರುವುದಿಲ್ಲ ಎಂಬ ವೈದ್ಯಕೀಯ ವರದಿಗಳು ನಿದ್ದೆಗೆಡಿಸಿದ್ದು ಜನ ಸಂದಣಿಯನ್ನು ನಿಯಂತ್ರಿಸಲು ಅಲ್ಲಿನ ಸರ್ಕಾರಗಳು ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿವೆ.

ನಾವು ಡೆಲ್ಟಾ ಮತ್ತು ಡೆಲ್ಟಾ ಪ್ಲಸ್ ರೂಪಾಂತರಿಯನ್ನು ಹರಡಲೇಬೇಕೆಂದು ಹೊರಟರೆ ಇದೇ ಸರಿಯಾದ ಉಪಾಯ ಎಂದು ಲಂಡನ್‌ನ ಸಾಂಕ್ರಾಮಿಕ ರೋಗ ತಜ್ಞ ಅಂಟೋನಿ ಫ್ಲಾಹಾಲ್ಟ್‌ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಅಂಟಾರ್ಟಿಕದಲ್ಲೂ ಏರಿದ ತಾಪಮಾನ: ಕರಗುತ್ತಿವೆ ನೀರ್ಗಲ್ಲುಗಳು

ಮುಖ್ಯವಾಗಿ ಮುಂದೆ ನಡೆಯಲಿರುವ ಎರಡು ಸೆಮಿಫೈನಲ್ ಪಂದ್ಯಗಳಲ್ಲಿ ಒಂದು ಲಂಡನ್‌ನಲ್ಲಿಯೂ ಮತ್ತೊಂದು ರಷ್ಯಾದ ರಾಜಧಾನಿ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿಯೂ ನಡೆಯಲಿದೆ. ಈ ಪಂದ್ಯಗಳಿಗೆ ಅತಿಹೆಚ್ಚಿನ ಪ್ರೇಕ್ಷಕರು ಆಗಮಿಸುವ ಸಾಧ್ಯತೆ ಇದೆ. ಮತ್ತೊಂದೆಡೆ ಲಂಡನ್ ಮತ್ತು ಸೇಂಟ್‌ಪೀಟರ್ಸ್‌ಬರ್ಗ್‌ ಎರಡೂ ನಗರಗಳಲ್ಲಿ ದಿನನಿತ್ಯದ ಸೋಂಕಿನ ಪ್ರಮಾಣಗಳಲ್ಲಿ ಹೆಚ್ಚಳವಾಗಿದ್ದು ಡೆಲ್ಟಾ ರೂಪಾಂತರಿಯ ಸಾಕಷ್ಟು ಪ್ರಕರಣಗಳು ವರದಿಯಾಗುತ್ತಿದೆ. ಸೆಮಿಫೈನಲ್ ಪಂದ್ಯಗಳಿಗೆ 60,000 ಜನ ಪ್ರೇಕ್ಷಕರಿಗೆ ಪಂದ್ಯ ವೀಕ್ಷಿಸಲು ಅವಕಾಶ ಮಾಡಿಕೊಡಲಾಗಿದ್ದು, ಮೈದಾನದ ಹೊರಗೆ ವ್ಯಾಪಾರಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳಲ್ಲಿ ಸಾಮಾಜಿಕ ಅಂತರದ ಪಾಲನೆ ದುಸ್ತರವಾಗಲಿದೆ ಎಂದು ಬ್ರಿಟನ್ ಮಾಧ್ಯಮಗಳು ವರದಿ ಮಾಡಿವೆ.

ಮೊನ್ನೆ ಇಂಗ್ಲೆಂಡ್ ತಂಡವು ಫ್ರಿಕ್ವಾರ್ಟರ್‌ ಫೈನಲ್ ಪಂದ್ಯವನ್ನು ಗೆಲ್ಲುತ್ತಿದ್ದಂತೆ ಲಂಡನ್‌ನ ವೆಂಬ್ಲೆ ಫುಟ್ಬಾಲ್ ಮೈದಾನದಲ್ಲಿ ನೆರೆದಿದ್ದ 42,000 ಜನ ಪ್ರೇಕ್ಷಕರು ಮಾಸ್ಕ್‌ ಧರಿಸದೇ, ಸಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಮೈದಾನದ ಹೊರಗೆ ಸಂಭ್ರಮಿಸಿದ ರೀತಿ ಬ್ರಿಟನ್ ಮತ್ತು ಅಂತರಾಷ್ಟ್ರೀಯ ಮಾಧ್ಯಮದಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ವೆಂಬ್ಲೆ ಮೈದಾನದ ಹೊರಗೆ ಸಾಗರೊಪಾದಿಯಲ್ಲಿ ನೆರೆದ ಜನ ಪ್ರವಾಹದ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ವಿರೋಧಕ್ಕೆ ಗುರಿಯಾಗಿತ್ತು. ಇಂಗ್ಲೆಂಡ್ ತಂಡ ಅಂತಿಮ 8 ರ ಘಟ್ಟಕ್ಕೆ ಪ್ರವೇಶಿಸಿದ್ದು ಮುಂದಿನ ಪಂದ್ಯಗಳಲ್ಲಿ ಇನ್ನೂ ಹೆಚ್ಚಿನ ಪ್ರೇಕ್ಷಕರು ಮೈದಾನದಲ್ಲಿ ಸೇರಲಿದ್ದಾರೆ. ಜೊತೆಗೆ ಯುರೋಪ್‌ನಲ್ಲಿ ಬೇಸಿಗೆ ರಜೆ ಕೂಡ ಅರಂಭವಾಗಿರುವುದು ಜನ ದಟ್ಟಣೆಗೆ ಇನ್ನೊಂದು ಕಾರಣವಾಗಿದೆ.

ಫುಟ್ಬಾಲ್ ಪಂದ್ಯಗಳನ್ನು ಬ್ರಿಟನ್‌ ದೇಶದ ಆಚಗೆ ಸ್ಥಳಾಂತರಿಸಬೇಕು ಎಂದು ಸಾಂಕ್ರಾಮಿಕ ರೋಗ ತಜ್ಞ ಅಂಟೋನಿ ಫ್ಲಾಹೆಟ್‌ ಆಗ್ರಹಿಸಿದ್ದಾರೆ. ಪಂದ್ಯಗಳನ್ನು ಕೊರೊನಾ ಅಪಾಯ ಕಡಿಮೆ ಇರುವ ದೇಶಗಳಿಗೆ ಸ್ಥಳಾಂತರಿಸುವುದು ಕಷ್ಟದ ಕೆಲಸವೇನಲ್ಲ ಎಂದು ಅಂತರಾಷ್ಟ್ರೀಯ ಆರೋಗ್ಯ ಸಂಸ್ಥೆಯ ನಿರ್ದೇಶಕರೂ ಆಗಿರುವ ಅಂಟೋನಿ ಫ್ಲಾಹೆಂಟ್ ಬ್ರಿಟನ್ ಸರ್ಕಾರ ಮತ್ತು ಫುಟ್ಬಾಲ್ ಟೂರ್ನಿಯನ್ನು ಆಯೋಜಿಸುರುವ UEFA ಸಂಸ್ಥೆಗೆ ಸೂಚನೆಯನ್ನೂ ನೀಡಿದ್ದಾರೆ.

ಕೊರೊನಾ ಸೋಂಕಿನ ಆತಂಕದ ನಡುವೆಯೂ ಪಂದ್ಯಗಳನ್ನು ಸುರಕ್ಷಿತ ವಾತಾವರಣದಲ್ಲಿ ನಡೆಸಲಾಗುತ್ತಿದೆ. ಎಲ್ಲಾ ಪಂದ್ಯಗಳು ನಿಗದಿತ ದಿನದಂದು ನಿಗದಿತ ಸ್ಥಳದಲ್ಲಿಯೇ ನಡೆಯಲಿವೆ. ಸಾಕಷ್ಟು ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು UEFA ಸಂಸ್ಥೆ ಹೇಳಿದೆ.

ಕಳೆದ ಒಂದು ವಾರದಲ್ಲಿ ಯುರೋಪ್‌ನಾದ್ಯಂತ ಕೊರೋನಾ ಸೋಂಕಿತರ ಪ್ರಮಾಣದಲ್ಲಿ 10% ಹೆಚ್ಚಳವಾಗಿದೆ ಎಂದು ವಿಶ್ವಆರೋಗ್ಯ ಸಂಸ್ಥೆ (WHO) ಹೇಳಿದ್ದು, 11 ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುರೋ ಫುಟ್‌ಬಾಲ್ ಕಪ್ ಟೂರ್ನಿ ಕೊರೊನಾ ಸೋಂಕಿನ ಹೆಚ್ಚಳಕ್ಕೆ ಕಾರಣವಾಗುವ ಸಾಧ್ಯವಿದ್ದು ಆತಿಥೇಯ ನಗರಗಳು ಹೆಚ್ಚು ಎಚ್ಚರಿಕೆ ವಹಿಸಬೇಕೆಂದು ಎಚ್ಚರಿಸಿದೆ.

ಹಂಗೇರಿ ರಾಜಧಾನಿ ಬುಡಾಪೆಸ್ಟ್‌ ನಗರದ ಕ್ರೀಡಾಂಗಣದಲ್ಲಿ ಕಿಕ್ಕಿರಿದು ನೆರೆದ ಫುಟ್ಬಾಲ್ ಅಭಿಮಾನಿಗಳು

ಡೆನ್ಮಾರ್ಕ್ ಮತ್ತು ಬೆಲ್ಜಿಯಮ್ ನಡುವಿನ ಪಂದ್ಯ ವೀಕ್ಷಿಸಲು ತೆರಳಿದ 4000 ಜನರಲ್ಲಿ ಡೆಲ್ಟಾ ರೂಪಾಂತರಿ ವೈರಸ್‌ ಕಂಡುಬಂದಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಗೇ ಸ್ಕಾಟ್ಲೆಂಡ್‌ನಲ್ಲೂ ಇದೇ ಪರಿಸ್ಥಿತಿಯಿದ್ದು  ಫುಟ್ಬಾಲ್ ಪಂದ್ಯವನ್ನು ವೀಕ್ಷಿಸಲು ಲಂಡನ್‌ಗೆ ತೆರಳಿದ 2,000 ಜನರಲ್ಲಿ ಹೊಸ ರೂಪಾಂತರಿ ವೈರಸ್‌ ಪತ್ತೆಯಾಗಿದೆ ಎಂದು ಸ್ಕಾಟ್ಲೆಂಡ್ ಆರೋಗ್ಯ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಫಿನ್ಲೆಂಡ್‌ ದೇಶದ ಹೊರಗೆ ಪಂದ್ಯವನ್ನು ವೀಕ್ಷಿಸಲು ತೆರಳಿದ ದೇಶದ ನಾಗರಿಕರಲ್ಲಿ ಕೂಡ ಡೆಲ್ಟಾ ರೂಪಾಂತರಿ ವೈರಸ್ ಕಂಡು ಬಂದಿದ್ದು ಸರಿ ಸುಮಾರು 100 ಹೊಸ ಡೆಲ್ಟಾ ಪ್ರಕರಣಗಳು ವರದಿಯಾಗಿವೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಸಮುದಾಯಕ ಚಟುವಟಿಕೆಗಳಿಂದ ಕೊರೊನಾ ಸೋಂಕು ಹರಡಲು ಸಾಧ್ಯವಿಲ್ಲವೆಂದು ಹೇಳಲು ಆಗುವುದಿಲ್ಲ. ಆದರೆ ಫುಟ್ಬಾಲ್ ಒಂದರಿಂದಲೇ ಸೋಂಕು ಹರಡುತ್ತಿದೆ ಎಂಬುದನ್ನು ನಾನು ಒಪ್ಪುವುದಿಲ್ಲ. ಸ್ಥಳೀಯ ಆಡಳಿತಗಳು ಮತ್ತು ಸರ್ಕಾರಗಳು ನಿರ್ಬಂಧಗಳನ್ನು ಸಡಿಲಿಸರುವುದರಿಂದ ಈ ಚಟುವಟಿಕೆಗಳು ನಡೆಯುತ್ತಿವೆ. ಕಠಿಣ ನಿಯಮಗಳನ್ನು ತೆರವುಗೊಳಿಸುವ ಮೊದಲೇ ಸರ್ಕಾರಗಳು ಸೋಂಕಿನ ನಿಯಂತ್ರಣಕ್ಕೆ ಸೂಕ್ತಕ್ರಮ ಕೈಗೊಳ್ಳಬೇಕಿತ್ತು ಎಂದು ಯುರೋಪಿಯನ್‌ ಫುಟ್ಬಾಲ್‌ ಸಂಘಟನೆ (UEFA)  ವೈದ್ಯಕೀಯ ಸಲಹೆಗಾರ ಡಾ. ಡೇನಿಯಲ್‌ ಕೋಚ್ ಅಭಿಪ್ರಾಯಪಟ್ಟಿದ್ದಾರೆ.

ವ್ಯಾಕ್ಸೀನ್ ಪಡೆಯದ ನಾಗರಿಕರು ಲಂಡನ್ ಮತ್ತು ರಷ್ಯಾದ ಸೇಂಟ್‌ ಪೀಟರ್ಸ್‌ಬರ್ಗ್‌ ನಗರಗಳಿಗೆ ಪಂದ್ಯವನ್ನು ವೀಕ್ಷಿಸಲು ತೆರಳದೇ ಇರುವುದು ಉತ್ತಮ ಎಂದು ಡಾ. ಅಂಟೋನಿ ಫ್ಲಾಹಾಲ್ಟ್‌ ಯುರೋಪ್‌ನ ನಾಗರಿಕರಲ್ಲಿ ಮನವಿ ಮಾಡಿದ್ದಾರೆ.

-ರಾಜೇಶ್ ಹೆಬ್ಬಾರ್


ಇದನ್ನೂ ಓದಿ: ಸರ್ಕಾರದ ತಪ್ಪುಗಳಿಂದಾಗಿ ವೈದ್ಯರು ಶಿಕ್ಷೆ ಅನುಭವಿಸುತ್ತಿದ್ದಾರೆ: CJI ಎನ್‌.ವಿ. ರಮಣ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...