Homeಅಂತರಾಷ್ಟ್ರೀಯಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

ಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

- Advertisement -
- Advertisement -

ಯುರೋಪ್ ದೇಶಗಳಲ್ಲಿ ಕಳೆದ ಒಂದು ತಿಂಗಳಿನಿಂದ ಫುಟ್ಬಾಲ್ ಕಲರವ ಆರಂಭವಾಗಿದೆ. ಕಳೆದ 1 ವರ್ಷದಿಂದ ಖಾಲಿ ಮೈದಾನಗಳಲ್ಲಿ ನಡೆಯುತ್ತಿದ್ದ ಫುಟ್ಬಾಲ್ ಪಂದ್ಯಗಳು ಈಗ ತುಂಬಿ ತುಳುಕಾಡುತ್ತಿವೆ. ಮೈದಾನಗಳ ಹೊರಗೆ, ವಿಮಾನ ನಿಲ್ಧಾಣ, ರೈಲ್ವೆ ಸ್ಟೇಷನ್, ಮಾರ್ಕೆಟ್ ಎಲ್ಲೆಡೆಯೂ ಈಗ ಫುಟ್ಬಾಲ್ ಗುಂಗು ಗುನುಗುತ್ತಿದೆ. ಜೂನ್ 11 ರಿಂದ ಜುಲೈ 11ರ ವರೆಗೆ ನಡೆಯುತ್ತಿರುವ ಯುರೋ ಕಪ್ 2020 ಫುಟ್ಬಾಲ್ ಟೂರ್ನಿ ಯುರೋಪಿನ ನಗರಗಳಲ್ಲಿ ಅಪಾರ ಜನಸಂದಣಿಗೆ ಕಾರಣವಾಗುತ್ತಿದೆ. ಸಾವಿರಾರು ಫುಟ್ಬಾಲ್ ಪ್ರಿಯರು ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಪ್ರಯಾಣ ಬೆಳೆಸುತ್ತಿದ್ದಾರೆ. ಯುರೋಪಿನಲ್ಲಿ ವರ್ಷಗಳ ಕಾಲ ರೂಡಿಸಿಕೊಂಡು ಬಂದಿದ್ದ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವ ಶಿಸ್ತು ಫುಟ್ಬಾಲ್ ಟೂರ್ನಿಯ ವೇಳೆ ಎಲ್ಲೂ ಕಾಣಿಸುತ್ತಿಲ್ಲ. ಈ ಜನಸಂದಣಿಯು ಬ್ರಿಟನ್, ರಷ್ಯಾ ದೇಶಗಳ ಅಡಳಿತ ವ್ಯವಸ್ಥೆಗೆ ತೀವ್ರ ತಲೆ ನೋವಾಗಿ ಪರಿಣಮಿಸಿದ್ದು ಕೊರೊನಾ ಮೂರನೇ ಅಲೆಯ ಸಾಧ್ಯತೆಯನ್ನು ಹುಟ್ಟು ಹಾಕಿದೆ.

ಬ್ರಿಟನ್ ರಾಜಧಾನಿ ಲಂಡನ್ ಮತ್ತು ರಷ್ಯಾದ ಸೇಂಟ್‌ ಪೀಟರ್ಸ್‌ ಬರ್ಗ್‌ ದೇಶಗಳಲ್ಲಿ ಡೆಲ್ಟಾ ಮತ್ತು ಡೆಲ್ಟಾ ಪ್ಲಸ್‌ ರೂಪಾಂತರಿ ವೈರಸ್‌ಗಳು ವೇಗವಾಗಿ ಹರಡುತ್ತಿರುವುದರಿಂದ ಅಲ್ಲಿನ ಸರ್ಕಾರಗಳು ಸಾಕಷ್ಟು ಅತಂಕಕ್ಕೆ ಒಳಗಾಗಿವೆ. ತಮ್ಮ ದೇಶದ ಬಹುತೇಕ ನಾಗರಿಕರಿಗೆ ವ್ಯಾಕ್ಸಿನ್ ನೀಡಿರುವ ಯುರೋಪಿಯನ್‌ ದೇಶಗಳಿಗೆ ಡೆಲ್ಟಾ ಪ್ಲಸ್‌ ರೂಪಾಂತರಿಯ ಮೇಲೆ ವ್ಯಾಕ್ಸಿನ್‌ಗಳು ಹೆಚ್ಚು ಪರಿಣಾಮ ಬೀರುವುದಿಲ್ಲ ಎಂಬ ವೈದ್ಯಕೀಯ ವರದಿಗಳು ನಿದ್ದೆಗೆಡಿಸಿದ್ದು ಜನ ಸಂದಣಿಯನ್ನು ನಿಯಂತ್ರಿಸಲು ಅಲ್ಲಿನ ಸರ್ಕಾರಗಳು ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿವೆ.

ನಾವು ಡೆಲ್ಟಾ ಮತ್ತು ಡೆಲ್ಟಾ ಪ್ಲಸ್ ರೂಪಾಂತರಿಯನ್ನು ಹರಡಲೇಬೇಕೆಂದು ಹೊರಟರೆ ಇದೇ ಸರಿಯಾದ ಉಪಾಯ ಎಂದು ಲಂಡನ್‌ನ ಸಾಂಕ್ರಾಮಿಕ ರೋಗ ತಜ್ಞ ಅಂಟೋನಿ ಫ್ಲಾಹಾಲ್ಟ್‌ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಅಂಟಾರ್ಟಿಕದಲ್ಲೂ ಏರಿದ ತಾಪಮಾನ: ಕರಗುತ್ತಿವೆ ನೀರ್ಗಲ್ಲುಗಳು

ಮುಖ್ಯವಾಗಿ ಮುಂದೆ ನಡೆಯಲಿರುವ ಎರಡು ಸೆಮಿಫೈನಲ್ ಪಂದ್ಯಗಳಲ್ಲಿ ಒಂದು ಲಂಡನ್‌ನಲ್ಲಿಯೂ ಮತ್ತೊಂದು ರಷ್ಯಾದ ರಾಜಧಾನಿ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿಯೂ ನಡೆಯಲಿದೆ. ಈ ಪಂದ್ಯಗಳಿಗೆ ಅತಿಹೆಚ್ಚಿನ ಪ್ರೇಕ್ಷಕರು ಆಗಮಿಸುವ ಸಾಧ್ಯತೆ ಇದೆ. ಮತ್ತೊಂದೆಡೆ ಲಂಡನ್ ಮತ್ತು ಸೇಂಟ್‌ಪೀಟರ್ಸ್‌ಬರ್ಗ್‌ ಎರಡೂ ನಗರಗಳಲ್ಲಿ ದಿನನಿತ್ಯದ ಸೋಂಕಿನ ಪ್ರಮಾಣಗಳಲ್ಲಿ ಹೆಚ್ಚಳವಾಗಿದ್ದು ಡೆಲ್ಟಾ ರೂಪಾಂತರಿಯ ಸಾಕಷ್ಟು ಪ್ರಕರಣಗಳು ವರದಿಯಾಗುತ್ತಿದೆ. ಸೆಮಿಫೈನಲ್ ಪಂದ್ಯಗಳಿಗೆ 60,000 ಜನ ಪ್ರೇಕ್ಷಕರಿಗೆ ಪಂದ್ಯ ವೀಕ್ಷಿಸಲು ಅವಕಾಶ ಮಾಡಿಕೊಡಲಾಗಿದ್ದು, ಮೈದಾನದ ಹೊರಗೆ ವ್ಯಾಪಾರಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳಲ್ಲಿ ಸಾಮಾಜಿಕ ಅಂತರದ ಪಾಲನೆ ದುಸ್ತರವಾಗಲಿದೆ ಎಂದು ಬ್ರಿಟನ್ ಮಾಧ್ಯಮಗಳು ವರದಿ ಮಾಡಿವೆ.

ಮೊನ್ನೆ ಇಂಗ್ಲೆಂಡ್ ತಂಡವು ಫ್ರಿಕ್ವಾರ್ಟರ್‌ ಫೈನಲ್ ಪಂದ್ಯವನ್ನು ಗೆಲ್ಲುತ್ತಿದ್ದಂತೆ ಲಂಡನ್‌ನ ವೆಂಬ್ಲೆ ಫುಟ್ಬಾಲ್ ಮೈದಾನದಲ್ಲಿ ನೆರೆದಿದ್ದ 42,000 ಜನ ಪ್ರೇಕ್ಷಕರು ಮಾಸ್ಕ್‌ ಧರಿಸದೇ, ಸಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಮೈದಾನದ ಹೊರಗೆ ಸಂಭ್ರಮಿಸಿದ ರೀತಿ ಬ್ರಿಟನ್ ಮತ್ತು ಅಂತರಾಷ್ಟ್ರೀಯ ಮಾಧ್ಯಮದಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ವೆಂಬ್ಲೆ ಮೈದಾನದ ಹೊರಗೆ ಸಾಗರೊಪಾದಿಯಲ್ಲಿ ನೆರೆದ ಜನ ಪ್ರವಾಹದ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ವಿರೋಧಕ್ಕೆ ಗುರಿಯಾಗಿತ್ತು. ಇಂಗ್ಲೆಂಡ್ ತಂಡ ಅಂತಿಮ 8 ರ ಘಟ್ಟಕ್ಕೆ ಪ್ರವೇಶಿಸಿದ್ದು ಮುಂದಿನ ಪಂದ್ಯಗಳಲ್ಲಿ ಇನ್ನೂ ಹೆಚ್ಚಿನ ಪ್ರೇಕ್ಷಕರು ಮೈದಾನದಲ್ಲಿ ಸೇರಲಿದ್ದಾರೆ. ಜೊತೆಗೆ ಯುರೋಪ್‌ನಲ್ಲಿ ಬೇಸಿಗೆ ರಜೆ ಕೂಡ ಅರಂಭವಾಗಿರುವುದು ಜನ ದಟ್ಟಣೆಗೆ ಇನ್ನೊಂದು ಕಾರಣವಾಗಿದೆ.

ಫುಟ್ಬಾಲ್ ಪಂದ್ಯಗಳನ್ನು ಬ್ರಿಟನ್‌ ದೇಶದ ಆಚಗೆ ಸ್ಥಳಾಂತರಿಸಬೇಕು ಎಂದು ಸಾಂಕ್ರಾಮಿಕ ರೋಗ ತಜ್ಞ ಅಂಟೋನಿ ಫ್ಲಾಹೆಟ್‌ ಆಗ್ರಹಿಸಿದ್ದಾರೆ. ಪಂದ್ಯಗಳನ್ನು ಕೊರೊನಾ ಅಪಾಯ ಕಡಿಮೆ ಇರುವ ದೇಶಗಳಿಗೆ ಸ್ಥಳಾಂತರಿಸುವುದು ಕಷ್ಟದ ಕೆಲಸವೇನಲ್ಲ ಎಂದು ಅಂತರಾಷ್ಟ್ರೀಯ ಆರೋಗ್ಯ ಸಂಸ್ಥೆಯ ನಿರ್ದೇಶಕರೂ ಆಗಿರುವ ಅಂಟೋನಿ ಫ್ಲಾಹೆಂಟ್ ಬ್ರಿಟನ್ ಸರ್ಕಾರ ಮತ್ತು ಫುಟ್ಬಾಲ್ ಟೂರ್ನಿಯನ್ನು ಆಯೋಜಿಸುರುವ UEFA ಸಂಸ್ಥೆಗೆ ಸೂಚನೆಯನ್ನೂ ನೀಡಿದ್ದಾರೆ.

ಕೊರೊನಾ ಸೋಂಕಿನ ಆತಂಕದ ನಡುವೆಯೂ ಪಂದ್ಯಗಳನ್ನು ಸುರಕ್ಷಿತ ವಾತಾವರಣದಲ್ಲಿ ನಡೆಸಲಾಗುತ್ತಿದೆ. ಎಲ್ಲಾ ಪಂದ್ಯಗಳು ನಿಗದಿತ ದಿನದಂದು ನಿಗದಿತ ಸ್ಥಳದಲ್ಲಿಯೇ ನಡೆಯಲಿವೆ. ಸಾಕಷ್ಟು ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು UEFA ಸಂಸ್ಥೆ ಹೇಳಿದೆ.

ಕಳೆದ ಒಂದು ವಾರದಲ್ಲಿ ಯುರೋಪ್‌ನಾದ್ಯಂತ ಕೊರೋನಾ ಸೋಂಕಿತರ ಪ್ರಮಾಣದಲ್ಲಿ 10% ಹೆಚ್ಚಳವಾಗಿದೆ ಎಂದು ವಿಶ್ವಆರೋಗ್ಯ ಸಂಸ್ಥೆ (WHO) ಹೇಳಿದ್ದು, 11 ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುರೋ ಫುಟ್‌ಬಾಲ್ ಕಪ್ ಟೂರ್ನಿ ಕೊರೊನಾ ಸೋಂಕಿನ ಹೆಚ್ಚಳಕ್ಕೆ ಕಾರಣವಾಗುವ ಸಾಧ್ಯವಿದ್ದು ಆತಿಥೇಯ ನಗರಗಳು ಹೆಚ್ಚು ಎಚ್ಚರಿಕೆ ವಹಿಸಬೇಕೆಂದು ಎಚ್ಚರಿಸಿದೆ.

ಹಂಗೇರಿ ರಾಜಧಾನಿ ಬುಡಾಪೆಸ್ಟ್‌ ನಗರದ ಕ್ರೀಡಾಂಗಣದಲ್ಲಿ ಕಿಕ್ಕಿರಿದು ನೆರೆದ ಫುಟ್ಬಾಲ್ ಅಭಿಮಾನಿಗಳು

ಡೆನ್ಮಾರ್ಕ್ ಮತ್ತು ಬೆಲ್ಜಿಯಮ್ ನಡುವಿನ ಪಂದ್ಯ ವೀಕ್ಷಿಸಲು ತೆರಳಿದ 4000 ಜನರಲ್ಲಿ ಡೆಲ್ಟಾ ರೂಪಾಂತರಿ ವೈರಸ್‌ ಕಂಡುಬಂದಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಗೇ ಸ್ಕಾಟ್ಲೆಂಡ್‌ನಲ್ಲೂ ಇದೇ ಪರಿಸ್ಥಿತಿಯಿದ್ದು  ಫುಟ್ಬಾಲ್ ಪಂದ್ಯವನ್ನು ವೀಕ್ಷಿಸಲು ಲಂಡನ್‌ಗೆ ತೆರಳಿದ 2,000 ಜನರಲ್ಲಿ ಹೊಸ ರೂಪಾಂತರಿ ವೈರಸ್‌ ಪತ್ತೆಯಾಗಿದೆ ಎಂದು ಸ್ಕಾಟ್ಲೆಂಡ್ ಆರೋಗ್ಯ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಫಿನ್ಲೆಂಡ್‌ ದೇಶದ ಹೊರಗೆ ಪಂದ್ಯವನ್ನು ವೀಕ್ಷಿಸಲು ತೆರಳಿದ ದೇಶದ ನಾಗರಿಕರಲ್ಲಿ ಕೂಡ ಡೆಲ್ಟಾ ರೂಪಾಂತರಿ ವೈರಸ್ ಕಂಡು ಬಂದಿದ್ದು ಸರಿ ಸುಮಾರು 100 ಹೊಸ ಡೆಲ್ಟಾ ಪ್ರಕರಣಗಳು ವರದಿಯಾಗಿವೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಸಮುದಾಯಕ ಚಟುವಟಿಕೆಗಳಿಂದ ಕೊರೊನಾ ಸೋಂಕು ಹರಡಲು ಸಾಧ್ಯವಿಲ್ಲವೆಂದು ಹೇಳಲು ಆಗುವುದಿಲ್ಲ. ಆದರೆ ಫುಟ್ಬಾಲ್ ಒಂದರಿಂದಲೇ ಸೋಂಕು ಹರಡುತ್ತಿದೆ ಎಂಬುದನ್ನು ನಾನು ಒಪ್ಪುವುದಿಲ್ಲ. ಸ್ಥಳೀಯ ಆಡಳಿತಗಳು ಮತ್ತು ಸರ್ಕಾರಗಳು ನಿರ್ಬಂಧಗಳನ್ನು ಸಡಿಲಿಸರುವುದರಿಂದ ಈ ಚಟುವಟಿಕೆಗಳು ನಡೆಯುತ್ತಿವೆ. ಕಠಿಣ ನಿಯಮಗಳನ್ನು ತೆರವುಗೊಳಿಸುವ ಮೊದಲೇ ಸರ್ಕಾರಗಳು ಸೋಂಕಿನ ನಿಯಂತ್ರಣಕ್ಕೆ ಸೂಕ್ತಕ್ರಮ ಕೈಗೊಳ್ಳಬೇಕಿತ್ತು ಎಂದು ಯುರೋಪಿಯನ್‌ ಫುಟ್ಬಾಲ್‌ ಸಂಘಟನೆ (UEFA)  ವೈದ್ಯಕೀಯ ಸಲಹೆಗಾರ ಡಾ. ಡೇನಿಯಲ್‌ ಕೋಚ್ ಅಭಿಪ್ರಾಯಪಟ್ಟಿದ್ದಾರೆ.

ವ್ಯಾಕ್ಸೀನ್ ಪಡೆಯದ ನಾಗರಿಕರು ಲಂಡನ್ ಮತ್ತು ರಷ್ಯಾದ ಸೇಂಟ್‌ ಪೀಟರ್ಸ್‌ಬರ್ಗ್‌ ನಗರಗಳಿಗೆ ಪಂದ್ಯವನ್ನು ವೀಕ್ಷಿಸಲು ತೆರಳದೇ ಇರುವುದು ಉತ್ತಮ ಎಂದು ಡಾ. ಅಂಟೋನಿ ಫ್ಲಾಹಾಲ್ಟ್‌ ಯುರೋಪ್‌ನ ನಾಗರಿಕರಲ್ಲಿ ಮನವಿ ಮಾಡಿದ್ದಾರೆ.

-ರಾಜೇಶ್ ಹೆಬ್ಬಾರ್


ಇದನ್ನೂ ಓದಿ: ಸರ್ಕಾರದ ತಪ್ಪುಗಳಿಂದಾಗಿ ವೈದ್ಯರು ಶಿಕ್ಷೆ ಅನುಭವಿಸುತ್ತಿದ್ದಾರೆ: CJI ಎನ್‌.ವಿ. ರಮಣ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...