Homeಅಂತರಾಷ್ಟ್ರೀಯಯೂರೋಪಿಯನ್‌ ನಿಯೋಗದ ಕಾಶ್ಮೀರ ಭೇಟಿ: ಪ್ರಾಯೋಜಿಸಿದ್ದು ’ಫೇಕ್‌ ನ್ಯೂಸ್‌’ ಜಾಲವೇ..!?

ಯೂರೋಪಿಯನ್‌ ನಿಯೋಗದ ಕಾಶ್ಮೀರ ಭೇಟಿ: ಪ್ರಾಯೋಜಿಸಿದ್ದು ’ಫೇಕ್‌ ನ್ಯೂಸ್‌’ ಜಾಲವೇ..!?

- Advertisement -
- Advertisement -

ಜಮ್ಮುಕಾಶ್ಮೀರದಲ್ಲಿ ವಿಶೇಷಾಧಿಕಾರ ರದ್ದಾದ ನಂತರ ಮೊದಲ ಬಾರಿಗೆ ಅಲ್ಲಿನ ವಸ್ತುಸ್ಥಿತಿ ಅಧ್ಯಯನ ನಡೆಸಿ, ವರದಿ ನೀಡಲು ಯೂರೋಪಿಯನ್‌ ಒಕ್ಕೂಟ ಸಂಸದರು ಭೇಟಿ ನೀಡಿದ್ದರು. ಕಾಶ್ಮೀರದಲ್ಲಿ ಎಲ್ಲವೂ ಚೆನ್ನಾಗಿದೆ. ಇಲ್ಲಿನ ರಾಜಕೀಯ ನಮಗೆ ಬೇಡ, ವಾಸ್ತವ ಸ್ಥಿತಿಯನ್ನು ಅರಿತು ಭಯೋತ್ಪಾದನೆ ನಿರ್ಮೂಲನೆಯಲ್ಲಿ ಭಾರತಕ್ಕೆ ಬೆಂಬಲ ನೀಡುತ್ತೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು. ಆದರೆ ಈಗ ಅಂತಹದ್ದೊಂದು ಯೂರೋಪಿಯನ್‌ ಒಕ್ಕೂಟದ ಪ್ರಾಯೋಜಕತ್ವದ ಹಿಂದೆ ಫೇಕ್‌ (ಸುಳ್ಳಿನ) ನ್ಯೂಸ್‌ ಜಾಲವೇ ಇದೆ ಎಂಬುದು ಬೆಳಕಿಗೆ ಬಂದಿದೆ.

ಹಾಗಿದ್ದರೆ ಕಾಶ್ಮೀರಕ್ಕೆ ಭೇಟಿ ನೀಡಿದ್ದ ಯೂರೋಪಿಯನ್‌ ಒಕ್ಕೂಟದ ಹಿಂದೆ ಫೇಕ್‌ ನ್ಯೂಸ್‌ ಜಾಲದ ಕೈವಾಡವಿದೆಯಾ..? ಇದೆಲ್ಲಾ ಬಿಜೆಪಿ ಪರ ಸರ್ಕಾರವನ್ನು ಬೆಂಬಲಿಸಲು, ಫೇಕ್‌ ನೆಟ್‌ವರ್ಕ್‌‌ನ್ನು ಬಳಸಿಕೊಳ್ಳಲಾಗಿತ್ತಾ..? ಎಂಬ ಪ್ರಶ್ನೆಗಳಿಗೆ ಸಿಕ್ಕಿರುವ ಉತ್ತರ ಹೌದು… ಸುಳ್ಳು ಜಾಲದ ಪ್ರಾಯೋಜಕತ್ವದಲ್ಲಿ ನಿಯೋಗ ಕಾಶ್ಮೀರಕ್ಕೆ ಭೇಟಿ ನೀಡಿತ್ತು ಅಂತಾ ಯೂರೋಪ್ ಮೂಲದ ಸರ್ಕಾರೇತರ, ಸುಳ್ಳುಸುದ್ದಿಗಳ ಮೂಲ ಪತ್ತೆ ಹಚ್ಚುವ ಡಿಸಿನ್ಫೋಲ್ಯಾಬ್‌ ಹೇಳಿರುವುದಾಗಿ ಸ್ಕ್ರೋಲ್.ಇನ್ ಆನ್ ಲೈನ್ ಪತ್ರಿಕೆ ವರದಿ ಮಾಡಿದೆ.

ಕಳೆದ ತಿಂಗಳು ಯುರೋಪಿಯನ್ ಯೂನಿಯನ್ ನಿಯೋಗ ಕಾಶ್ಮೀರ ಭೇಟಿ ನೀಡಿ, ವಸ್ತುಸ್ಥಿತಿ ಅಧ್ಯಯನ ನಡೆಸಿತ್ತು. ನಂತರ ಸುದ್ದಿಗೋಷ್ಠಿ ನಡೆಸಿ, ಕಾಶ್ಮೀರದಲ್ಲಿ ಎಲ್ಲವೂ ಚೆನ್ನಾಗಿದೆ ಎಂದು ಹೇಳಿತ್ತು. ಆದರೆ ಇದೊಂದು ಪ್ರಾಯೋಜಕತ್ವದ ಭೇಟಿಯಾಗಿತ್ತು. ವಿಶ್ವಸಂಸ್ಥೆಯಾಗಲಿ ಅಥವಾ ಸ್ವತಃ ಭಾರತ ಸರ್ಕಾರವಾಗಲಿ ಇದನ್ನು ಪ್ರಾಯೋಜಿಸಿರಲಿಲ್ಲ. ಹಾಗಾದರೆ ಪ್ರಾಯೋಜಿಸಿದ್ದು ಯಾರು? ಎಂಬ ಪ್ರಶ್ನೆಯನ್ನು ಮುಂದಿಟ್ಟುಕೊಂಡು ತನಿಖೆ ನಡೆಸಿರುವ ಡಿಸ್-ಇನ್ಫೋಲ್ಯಾಬ್ ಸಂಸ್ಥೆಯು ಅಚ್ಚರಿಯ ಸತ್ಯಗಳನ್ನು ಹೊರಗೆಡವಿದೆ. ಅಧಿಕೃತ ದಾಖಲೆಗಳ ಪ್ರಕಾರ ಇದನ್ನು ಪ್ರಾಯೋಜಿಸಿದ್ದು ನವದೆಹಲಿ ಮೂಲದ International Institute for Non-Aligned Studies ಎಂಬ ಥಿಂಕ್ ಟ್ಯಾಂಕ್ ಸಂಸ್ಥೆ. ಈ ಥಿಂಕ್ ಟ್ಯಾಂಕ್ ಸಂಸ್ಥೆಗೆ ಫಂಡ್ ಮಾಡುತ್ತಿರೋದು ಶ್ರೀವಾಸ್ತವ್ ಹೆಸರಿನ ಕಂಪನಿ. ಇದೇ ಶ್ರೀವಾಸ್ತವ್ ಕಂಪನಿಯ ಮುಖ್ಯ ಸ್ಟೇಕ್ ಹೋಲ್ಡರುಗಳು ಒಂದು ಅಂತರ್ಜಾಲ ಪತ್ರಿಕೆಯನ್ನೂ ಸಲಹುತ್ತಿದ್ದಾರೆ. ಅದರ ಹೆಸರು ಇಪಿ ಟುಡೇ. ಈ ಇಪಿ ಟುಡೆ ಅಂತರ್ಜಾಲ ಪತ್ರಿಕೆ ಸರ್ವರ್ ನ ಮೂಲ ಹಿಡಿದು ಹೊರಟ ಡಿಸ್-ಇನ್ಫೋಲ್ಯಾಬ್ ಸಂಸ್ಥೆ `65ಕ್ಕೂ ಹೆಚ್ಚು ದೇಶಗಳಲ್ಲಿ ವ್ಯಾಪಿಸಿರುವ ಸುಮಾರು 265ಕ್ಕೂ ಹೆಚ್ಚು ಫೇಕ್ ನ್ಯೂಸ್ ಸುದ್ದಿಗಳನ್ನು ಪ್ರಸಾರ ಮಾಡುವ ವೆಬ್ಸೈಟ್‌ಗಳ ನಂಟು ಇರುವುದು’ ಪತ್ತೆಯಾಗಿದೆ ಎಂದು ಹೇಳಿಕೊಂಡಿದೆ.

ಚುನಾಯಿತ ಪ್ರತಿನಿಧಿಗಳ ಮೇಲೆ ಪ್ರಭಾವ ಬೀರಲು, ಪಾಕಿಸ್ತಾನದ ವಿರುದ್ಧ ಸಾರ್ವಜನಿಕರು ರೊಚ್ಚಿಗೇಳುವಂತೆ ಮಾಡಲು ಸ್ಥಳೀಯ ಪತ್ರಿಕೆ ಅಥವಾ ನೈಜ ಮಾಧ್ಯಮಗಳ ಹೆಸರುಗಳನ್ನು ಹೊಂದಿರುವ ನಕಲಿ ವೆಬ್ಸೈಟ್‌ಗಳನ್ನು ರನ್‌ ಮಾಡುವುದೇ ಈ ಫೇಕ್ ನ್ಯೂಸ್ ಜಾಲಗಳ ಪ್ರಧಾನ ಕಸುಬು ಎನ್ನಲಾಗಿದೆ. ಇಂಥಾ ನಕಲಿ ವೆಬ್ಸೈಟ್‌ಗಳು ನೈಜ ಮಾಧ್ಯಮಗಳಲ್ಲಿ ಬಂದಿರುವ ಸುದ್ದಿಗಳನ್ನು ಯಥಾವತ್ತಾಗಿ ಪ್ರಕಟಿಸುತ್ತಿರುವುದನ್ನು ಡಿಸಿನ್ಫೋಲ್ಯಾಬ್‌ ಕಂಡು ಹಿಡಿದಿದೆ. ವಿವಿಧ ದೇಶಗಳಲ್ಲಿನ ಬಲಪಂಥೀಯ ರಾಜಕಾರಣವನ್ನು ಉದ್ದೀಪಿಸುವ ಕೆಲಸ ಮಾಡುತ್ತಲೇ ಪಾಕಿಸ್ತಾನದ ವಿರುದ್ಧ ಅಭಿಪ್ರಾಯ ರೂಪಿಸುವ ನೆಪದಲ್ಲಿ ನವದೆಹಲಿಯಲ್ಲಿರುವ ಅಧಿಕಾರದಲ್ಲಿರುವ ಸರ್ಕಾರಕ್ಕೆ ಜಾಗತಿಕ ಒಲವು ಸಿಗುವಂತೆ ಈ ನ್ಯೂಸ್ ವೆಬ್ಸೈಟ್ ಗಳ ಮೂಲಕ ಮಾಡಲಾಗುತ್ತಿದೆ.

ಕಳೆದ ಕೆಲ ವಾರಗಳ ಹಿಂದೆ ಇಪಿ ಟುಡೇ (EP Today) ವೆಬ್ಸೈಟ್‌ `ರಷ್ಯಾ ಟುಡೇ' ಮತ್ತು `ವಾಯ್ಸ್‌ ಆಫ್‌ ಅಮೆರಿಕ’ ಎಂಬ ಸುದ್ದಿಸಂಸ್ಥೆಗಳಲ್ಲಿ ಪ್ರಕಟಗೊಂಡಿರುವ ಲೇಖನಗಳನ್ನು ಕೃಪೆ ಕೂಡಾ ದಾಖಲಿಸದೆ ಯಥಾವತ್ತು ಪ್ರಕಟಿಸಿತ್ತು. ಡಿಸ್-ಇನ್ಫೋಲ್ಯಾಬ್ ಸಂಸ್ಥೆ ಈ ಸಂಗತಿಯನ್ನು ಬಯಲು ಮಾಡಿದ ತರುವಾಯ ಇಪಿ ಟುಡೆ ಕ್ಷಮಾಪಣೆಯನ್ನೂ ಕೇಳಿತ್ತು. ಆದರೂ ಸಂಶಯ ಕಡಿಮೆಯಾಗದ ಕಾರಣ ಡಿಸ್-ಇನ್ಫೋಲ್ಯಾಬ್ ಸಂಸ್ಥೆ, ಇಪಿ ಟುಡೆ ಸುದ್ದಿಜಾಲದ ಆರ್ಕೈವ್ ಗಳನ್ನು ಶೋಧಿಸಿದಾಗ ಒಂದು ನಿರ್ದಿಷ್ಟ ದೇಶದ ವಿರುದ್ಧ ಜನಾಭಿಪ್ರಾಯ ರೂಪಿಸುವಂತ ಒಂದೇ ಬಗೆಯ ನ್ಯೂಸ್ ಗಳು ಇದ್ದವೇ ಹೊರತು ಸುದ್ದಿ ಸಂಸ್ಥೆಯೊಂದು ಕಾಯ್ದುಕೊಳ್ಳಬೇಕಾದ ವೈವಿಧ್ಯಮಯ ಶೇಖರಣೆ ಅಲ್ಲಿರಲಿಲ್ಲ. ಪಾಕಿಸ್ತಾನವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ದೋಷಿ ಎಂದು ಬಿಂಬಿಸುವ ಮತ್ತು ಪಾಕಿಸ್ತಾನದಲ್ಲಿನ ಭಯೋತ್ಪಾದಕತೆ, ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುವ ದೌರ್ಜನ್ಯ, ಭಾರತ ಮತ್ತು ಪಾಕ್‌ ನಡುವಿನ ಹಳಸಲು ಸಂಬಂಧ, ಕಾಶ್ಮೀರದಲ್ಲಿ ಪಾಕಿಸ್ತಾನ ಭಯೋತ್ಪಾದಕರಿಂದ ದಾಳಿ ಹೀಗೆ ಭಾರತ ಮತ್ತು ಪಾಕಿಸ್ತಾನಕ್ಕೆ ಸಂಬಂಧಿಸಿದ ವಿಷಯಾಧಾರಿತ ಲೇಖನಗಳೇ ಹೆಚ್ಚು ಪಬ್ಲಿಶ್‌ ಆಗಿರುವುದು ಕಂಡು ಬಂದಿದೆ ಎಂದು ಡಿಸ್-ಇನ್ಫೋಲ್ಯಾಬ್ ಸಂಸ್ಥೆ ಹೇಳಿಕೊಂಡಿದೆ.

ಇದೆಲ್ಲವನ್ನೂ ನೋಡಿದ ಮೇಲೆ, ಈ ಇಪಿ ಟುಡೇ ಹೇಗೆ ನಡೆಯುತ್ತಿದೆ..? ಇದರ ಹಿಂದಿರುವವರು ಯಾರು ಎಂದು ಕೆದಕುತ್ತಾ ಹೋದಂತೆ ಸಿಕ್ಕ ಉತ್ತರ ನಿಜಕ್ಕೂ ಬೆಚ್ಚಿ ಬೀಳಿಸುತ್ತೆ. ಯಾಕಂದ್ರೆ ಇಪಿ ಟುಡೇ ಎಂಬ ದೈತ್ಯ ನಕಲಿ ವೆಬ್ಸೈಟ್‌ ಹಿಂದಿರುವವರು ಭಾರತೀಯ ಮೂಲದ ಹೂಡಿಕೆದಾರರು. ಎನ್‌ಜಿಒ, ಇಪಿ ಟುಡೇ ವೆಬ್ಸೈಟ್‌, ಇತರೆ ಕಂಪನಿಗಳ ನಕಲಿ ಜಾಲದ ಲಿಂಕ್‌ ಬಂದು ತಲುಪುವುದು ಶ್ರೀವಾಸ್ತವ್‌ ಎಂಬ ಗ್ರೂಪ್‌ನ್ನು. ಏನಿದು ಶ್ರೀವಾಸ್ತವ್‌ ಗ್ರೂಪ್‌ ಎಂದು ನೋಡಿದಾಗ, ಇದೊಂದು ನವದೆಹಲಿ ಮೂಲದ ಸಂಸ್ಥೆ ಎಂದು ಗೊತ್ತಾಯಿತು. ಶ್ರೀವಾಸ್ತವ್‌ ಗ್ರೂಪ್‌ಗೆ ಸೇರಿದ ಪ್ರಮುಖ ಆಸ್ತಿಯೆಂದರೆ ನವದೆಹಲಿ ಟೈಮ್ಸ್‌ ಮತ್ತು International Institute for Non-Aligned Studies ಥಿಂಕ್‌ಟ್ಯಾಂಕ್.

ಅಕ್ಟೋಬರ್‌ 30ರಂದು ಕಾಶ್ಮೀರಕ್ಕೆ ಭೇಟಿ ನೀಡಿದ್ದ ಅನಧಿಕೃತ ಯೂರೋಪಿಯನ್‌ ನಿಯೋಗದ 23 ಸದಸ್ಯರ ತಂಡಕ್ಕೆ ಪ್ರಾಯೋಜಕತ್ವ ( sponsor) ನೀಡಿದ್ದೇ ಈ ಥಿಂಕ್‌ಥ್ಯಾಂಕ್‌. ನಿಯೋಗ ಭೇಟಿಯ ಎಲ್ಲಾ ವ್ಯವಸ್ಥೆ ಮಾಡಿಕೊಟ್ಟಿದ್ದು ಅಂತಾರಾಷ್ಟ್ರೀಯ ವ್ಯಾಪಾರ ದಲ್ಲಾಳಿ ಮದಿ ಶರ್ಮಾ.

ಇಪಿ ಟುಡೇ ಆನ್ಲೈನ್ ಪತ್ರಿಕೆಯ ಬೆನ್ನುಬಿದ್ದಿದ್ದ ಡಿಸ್-ಇನ್ಫೋಲ್ಯಾಬ್ ಸಂಸ್ಥೆಗೆ ಕೆಲ ದಿನಗಳಿಂದ ಇಪಿ ಟುಡೇ ಪತ್ರಿಕೆಯಲ್ಲಿ ಪ್ರಕಟವಾಗಿದ್ದ ಲೇಖನಗಳೇ  `ಟೈಮ್ಸ್‌ ಆಫ್‌ ಜಿನಿವಾ’ ಎಂಬ ಮತ್ತೊಂದು ಆನ್‌ಲೈನ್‌ ಪತ್ರಿಕೆಯಲ್ಲೂ ಮರು ಪ್ರಕಟವಾಗುತ್ತಿರೋದು ಗಮನಕ್ಕೆ ಬಂದಿತ್ತು. ಶೋಧಿಸಿ ನೋಡಿದಾಗ ಈ ಟೈಮ್ಸ್ ಆಫ್ ಜಿನೇವಾ ಕೂಡಾ ಇದೇ ಜಾಲದ ಭಾಗವೆಂಬುದು ಪತ್ತೆಯಾಗಿದೆ. ‘ವೆಬ್ಸೈಟಿನ ನೋಂದಣಿ ವಿಳಾಸ, ಇಮೇಲ್ ವಿಳಾಸ, ಇಂಟರ್ನೆಟ್ ಡೊಮೈನ್ ಗಳನ್ನು ಪರಿಶೀಲಿಸಿದಾಗ ಇವುಗಳ ಹಿಂದೆ ಎರಡು ಪ್ರಭಾವಿ ಜಾಲಗಳು ಇರುವುದು ತಿಳಿದು ಬಂದಿದೆ’ ಎಂದು ಸಂಸ್ಥೆ ತನ್ನ ತನಿಖಾ ವರದಿಯಲ್ಲಿ ಉಲ್ಲೇಖಿಸಿದೆ.

 

ಇಪಿ ಟುಡೇ ಮತ್ತು ಟೈಮ್ಸ್‌ ಆಫ್‌ ಜಿನಿವಾ ಸುದ್ದಿ ಸಂಸ್ಥೆಗಳು ಸುದ್ದಿ ಮೂಲಕ್ಕಾಗಿ ಯಾವುದನ್ನು ಅವಲಂಬಿಸಿವೆ ಎಂದು ಹುಡುಕಿ ಹೊರಟರೆ 4newsagency.com  ಎಂಬ ನ್ಯೂಸ್ ಏಜೆನ್ಸಿ ಬೆಳಕಿಗೆ ಬರುತ್ತದೆ. ತಾನೇ ಹೇಳಿಕೊಂಡಿರುವಂತೆ ಇದೊಂದು independent not-for-profit news cooperative ಸಂಸ್ಥೆ. ಇದರ ಪ್ರಧಾನ ಕಚೇರಿ ಸ್ವಿಡ್ಜ್‌ರ್ಲ್ಯಾಂಡ್‌ನಲ್ಲಿದೆ. ಈ ಸುದ್ದಿ ಸಂಸ್ಥೆ ಪ್ರಕಟಿಸಿರುವ ಎಲ್ಲಾ ಟ್ವೀಟ್‌, ಯೂ ಟ್ಯೂಬ್‌ ವಿಡಿಯೋಗಳು, ಸುದ್ದಿಗಳು, ಪ್ರಮುಖ ವಿಷಯಗಳು ಕೇವಲ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಸ್ಥಿತಿಗತಿ ಮತ್ತು ಪಾಕ್‌ ವಿರೋಧಿ ಚಟುವಟಿಕೆಗಳಿಗೇ ಸಂಬಂಧಿಸಿದ್ದಾಗಿವೆ!

ಡಿಸ್-ಇನ್ಫೋಲ್ಯಾಬ್ ಸಂಸ್ಥೆಯ ತನಿಖೆಯಿಂದ ಈ ತೀರ್ಮಾನಕ್ಕೆ ಬರಬಹುದು. ವಿಶ್ವಸಂಸ್ಥೆಯಾಗಲಿ, ಯುರೋಪ್ ಒಕ್ಕೂಟದ ಸಂಸತ್ತಾಗಲಿ ಅಥವಾ ಭಾರತ ಸರ್ಕಾರವಾಗಲಿ ಅಧಿಕೃತವಾಗಿ ಪ್ರಾಯೋಜಿಸದ; ಕೇವಲ `ಬಲಪಂಥೀಯ’ ವಿಚಾರಧಾರೆಯ ಚುನಾಯಿತ ಪ್ರತಿನಿಧಿಗಳನ್ನಷ್ಟೇ ಒಳಗೊಂಡಿದ್ದ ನಿಯೋಗವೊಂದರ ಭೇಟಿಯನ್ನು ಆಯೋಜಿಸಿದ್ದು International Institute for Non-Aligned Studies ಎಂಬ ಥಿಂಕ್‌ಟ್ಯಾಂಕ್. ಈ ಥಿಂಕ್‌ಟ್ಯಾಂಕ್ ಸಂಸ್ಥೆಗೆ ಫಂಡ್ ಮಾಡುತ್ತಿರೋದು ಶ್ರೀವಾಸ್ತವ್‌ ಗ್ರೂಪ್‌. ಇದೇ ಗ್ರೂಪಿನ ಪ್ರಧಾನ ಸ್ಟೇಕ್ ಹೋಲ್ಡರುಗಳು `ಇಪಿ ಟುಡೇ’ ಎಂಬ ಅಂತರ್ಜಾಲ ಪತ್ರಿಕೆಗೂ ಫಂಡ್ ಮಾಡುತ್ತಿದೆ. ಈ ಪತ್ರಿಕೆ ಒಂದು ನಿರ್ದಿಷ್ಟ ಐಡಿಯಾಲಜಿಕಲ್ ಅಜೆಂಡಾ ಇಟ್ಟುಕೊಂಡ ಸುದ್ದಿಗಳನ್ನಷ್ಟೇ ಪ್ರಕಟಿಸುತ್ತಿದೆ. ಇದೇ ಇಪಿ ಟುಡೇ ಪತ್ರಿಕೆಯ ಸರ್ವರ್ ನಲ್ಲೇ ಸುಮಾರು 265 ವೆಬ್ಸೈಟ್ಗಳು 65 ದೇಶಗಳಲ್ಲಿ ವ್ಯಾಪಿಸಿವೆ. ಹೆಚ್ಚೂ ಕಮ್ಮಿ ಇವೆಲ್ಲವೂ ಒಂದೇ ತೆರನಾದ ಸುದ್ದಿಯನ್ನು ಬಿತ್ತರಿಸುತ್ತಿವೆ, ಮತ್ತು ಅವೇ ಲೇಖನಗಳು ಮರು ಪ್ರಕಟವಾಗುತ್ತಿವೆ. ಅವುಗಳಲ್ಲಿ ಫೇಕ್ ನ್ಯೂಸ್ ಗಳೂ ಇರುತ್ತವೆ. ಜಾಗತಿಕ ಮಟ್ಟದಲ್ಲಿ ಹರಿದಾಡುವ ಇಂಥಾ ನ್ಯೂಸ್ ಗಳಿಂದ ಭಾರತದ ಪ್ರಧಾನಿ ಮೋದಿಯವರಿಗೆ ವಿದೇಶಿ ನೆಲದಲ್ಲಿ ಪ್ರಚಾರ ಸಿಗುತ್ತಾ ಬಂದಿದೆ. ಕಾಶ್ಮೀರಕ್ಕೆ ಭೇಟಿ ನೀಡಿದ್ದ ಯುರೋಪಿಯನ್ ಒಕ್ಕೂಟದ ನಿಯೋಗದಿಂದಲೂ ಅನುಕೂಲ ಆದದ್ದು ಮೋದಿಯವರಿಗೆ. ಕಾಶ್ಮೀರಕ್ಕಿದ್ದ ವಿಶೇಷಾಧಿಕಾರವನ್ನು ರದ್ದು ಪಡಿಸುವಾಗ ಅಲ್ಲಿನ ಜನರಿಗೆ ಮೊಬೈಲ್ ನೆಟ್ವರ್ಕ್, ಇಂಟರ್ನೆಟ್ ಗಳು ಕೂಡಾ ಲಭಿಸದಂತೆ ನಿರ್ಬಂಧ ಹೇರಿ, ಅಲ್ಲಿನ ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿರಿಸಿದ್ದ ಮೋದಿ ಸರ್ಕಾರದ ವಿರುದ್ಧ ಜಾಗತಿಕ ವೇದಿಕೆಗಳಲ್ಲಿ ಮಾನವಹಕ್ಕು ಉಲ್ಲಂಘನೆಯ ಮಾತುಗಳು ಕೇಳಿಬಂದಿದ್ದವು. ಆ ಆರೋಪದಿಂದ ಮೋದಿಯವರನ್ನು ವಿಮುಕ್ತಿಗೊಳಿಸಲೆಂದೇ ಈ ಪ್ರಚಾರ ಜಾಲಗಳು ಈ ವ್ಯವಸ್ಥಿತ ಭೇಟಿಯನ್ನು ಆಯೋಜಿಸಿದ್ದವೇ ಎಂಬ ಅನುಮಾನ  ಡಿಸ್-ಇನ್ಫೋಲ್ಯಾಬ್ ಸಂಸ್ಥೆಯ ತನಿಖಾ ವರದಿಯಿಂದ ದಟ್ಟವಾಗುತ್ತಿದೆ.

ಕೃಪೆ: ಸ್ಕ್ರಾಲ್‌.ಇನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...