Homeಮುಖಪುಟಕಾಶ್ಮೀರ ಭೇಟಿಗೆ ಐರೋಪ್ಯ ಒಕ್ಕೂಟ ನಿಯೋಗಕ್ಕೆ ಅನುಮತಿ: ಕೇಂದ್ರದ ನಿಲುವಿಗೆ ವಿಪಕ್ಷಗಳ ತರಾಟೆ

ಕಾಶ್ಮೀರ ಭೇಟಿಗೆ ಐರೋಪ್ಯ ಒಕ್ಕೂಟ ನಿಯೋಗಕ್ಕೆ ಅನುಮತಿ: ಕೇಂದ್ರದ ನಿಲುವಿಗೆ ವಿಪಕ್ಷಗಳ ತರಾಟೆ

- Advertisement -
- Advertisement -

ಜಮ್ಮುಕಾಶ್ಮೀರದಲ್ಲಿ 370 ಆರ್ಟಿಕಲ್ ರದ್ದಾಗಿ ಮೂರು ತಿಂಗಳು ಕಳೆಯುತ್ತಿರುವ ಬೆನ್ನಲ್ಲೇ, ವಸ್ತುಸ್ಥಿತಿ ಅಧ್ಯಯನಕ್ಕೆ ಐರೋಪ್ಯ ಒಕ್ಕೂಟ ರಾಷ್ಟ್ರಗಳ ೨೮ ಮಂದಿಯ ತಂಡ ಮಂಗಳವಾರ ಭೇಟಿ ನೀಡಲಿದೆ. ಕಾಶ್ಮೀರದಲ್ಲಿ ಈಗಿನ ಪರಿಸ್ಥಿತಿ ಹೇಗಿದೆ..? ಗಡಿಯಲ್ಲಿ ಎಲ್ಲವೂ ಸರಿಯಾಗಿದೆಯಾ..? ಎಂಬ ಬಗ್ಗೆ ಸತ್ಯಾಸತ್ಯತೆ ತಿಳಿಯಲು ತಂಡ ಭೇಟಿ ನೀಡುತ್ತಿದೆ ಎಂದು ಪ್ರಧಾನಮಂತ್ರಿ ಸಚಿವಾಲಯ ಮಾಹಿತಿ ನೀಡಿದೆ.

 

 

ದೆಹಲಿ ಮತ್ತು ಶ್ರೀನಗರ ಮೂಲಗಳ ಮಾಹಿತಿ ಪ್ರಕಾರ ೨೮ ಮಂದಿಯ ಐರೋಪ್ಯ ಒಕ್ಕೂಟ ನಿಯೋಗ ಕಾಶ್ಮೀರಕ್ಕೆ ಭೇಟಿ ನೀಡಲಿದೆ. ಇಟಲಿ, ಬ್ರಿಟನ್, ಫ್ರಾನ್ಸ್, ಜರ್ಮನಿ ಮತ್ತು ಪೋಲ್ಯಾಂಡ್ ರಾಷ್ಟ್ರಗಳ ಪ್ರಮುಖರು ಬರಲಿದ್ದಾರೆ. ವಸ್ತುಸ್ಥಿತಿಯ ಅಧ್ಯಯನ ಮಾಡಲಿದ್ದಾರೆ. ವಾಣಿಜ್ಯ, ವ್ಯಾಪಾರ-ವಹಿವಾಟು, ಹೂಡಿಕೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಅಂತಾ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಐರೋಪ್ಯ ಒಕ್ಕೂಟ ನಿಯೋಗಕ್ಕೆ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದ್ದು, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಿದ್ದಾರೆ. ನಿಯೋಗ ಕೆಲ ಕಾಶ್ಮೀರಿ ಜನತೆಯನ್ನು ಭೇಟಿ ಮಾಡಿ ಚರ್ಚೆ ನಡೆಸಲಿದೆ. ಪಿಡಿಪಿ ಪಕ್ಷದ ಮಾಜಿ ಸಚಿವ ಮುಜಫ್ಫರ್‌ ಬೇಗ್, ಜಮ್ಮುಕಾಶ್ಮೀರ ಬಿಡಿಸಿ ಚುನಾವಣೆಯಲ್ಲಿ ವಿಜೇತರಾದ ನಾಯಕರನ್ನೂ ಸಹ ನಿಯೋಗ ಭೇಟಿ ಮಾಡಲಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಕಾಶ್ಮೀರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಲಿರುವ ಐರೋಪ್ಯ ಒಕ್ಕೂಟ ನಿಯೋಗದ ಅಧ್ಯಯನ ಫಲಪ್ರದವಾಗಿರಲಿದೆ. ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನಲ್ಲಿನ ಸಂಪ್ರದಾಯ, ಸಂಸ್ಕೃತಿ, ಧಾರ್ಮಿಕ ವೈವಿಧ್ಯತೆಯ ಅಧ್ಯಯನಕ್ಕೂ ಸಹಕಾರಿಯಾಗಲಿದೆ. ಪ್ರಾದೇಶಿಕವಾಗಿ ಕಾಶ್ಮೀರದ ಹಲವು ಭಾಗಗಳ ಅಭಿವೃದ್ಧಿಗೆ ಒತ್ತು ನೀಡುತ್ತಿರುವ ಬಗ್ಗೆಯೂ ನಿಯೋಗ ಮಾಹಿತಿ ಪಡೆದುಕೊಳ್ಳಲಿದೆ ಎಂದು ಹೇಳಿದರು.

ಇನ್ನು ಕಾಶ್ಮೀರಕ್ಕೆ ಭೇಟಿ ನೀಡಲು ಐರೋಪ್ಯ ಒಕ್ಕೂಟ ನಿಯೋಗಕ್ಕೆ ಅನುಮತಿ ನೀಡಿರುವ ಪ್ರಧಾನಮಂತ್ರಿ ಸಚಿವಾಲಯ ವಿಪಕ್ಷ ನಾಯಕರ ಭೇಟಿಗೆ ಅನುಮತಿ ನೀಡುತ್ತಿಲ್ಲ ಏಕೆ..? ಎಂದು ವಿಪಕ್ಷಗಳು ತರಾಟೆ ತೆಗೆದುಕೊಂಡಿವೆ.

ಕಾಂಗ್ರೆಸ್‌ನ ಹಿರಿಯ ನಾಯಕ ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ. ವಿಪಕ್ಷ ನಾಯಕರು ಕಾಶ್ಮೀರಕ್ಕೆ ಭೇಟಿ ನೀಡುವ ಪ್ರಸ್ತಾಪಕ್ಕೆ ಅನುಮತಿ ನೀಡದ ಕೇಂದ್ರ ಸರ್ಕಾರ, ಐರೋಪ್ಯ ಒಕ್ಕೂಟ ನಿಯೋಗದ ವಸ್ತುಸ್ಥಿತಿ ಅಧ್ಯಯನಕ್ಕೆ ಅನುಮತಿ ನೀಡುತ್ತಿದೆ. ಈ ಮೂಲಕ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ದ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.

’ರಾಷ್ಟ್ರೀಯ ನಾಯಕನೆಂದು ಎದೆ ತಟ್ಟಿಕೊಂಡು ಹೇಳುವ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ನಾಯಕರಿಗೆ ಕಾಶ್ಮೀರ ಭೇಟಿಗೆ ಅವಕಾಶ ನೀಡದೆ, ವಿದೇಶಿ ನಾಯಕರಿಗೆ ಅನುಮತಿ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು. ಕಾಂಗ್ರೆಸ್‌ ಯುವ ನಾಯಕ ಜೈವೀರ್‍ ಶೇರ್‌ಗಿಲ್‌ ಮಾತನಾಡಿ, ವಿಪಕ್ಷಗಳ ನಿಯೋಗಕ್ಕೆ ಭೇಟಿಗೆ ಅವಕಾಶ ನೀಡದಿರುವ ಕ್ರಮ ಎಷ್ಟು ಸರಿ..?, ಜಮ್ಮುಕಾಶ್ಮೀರಕ್ಕೆ ಮೂಲ ಸೌಲಭ್ಯಗಳ ಅಗತ್ಯತೆ ಇದೆ. ಜನರಿಗೆ ಇಂಟರ್ನೆಟ್‌ ಅವಶ್ಯಕತೆಯಿದೆ. ಆದರೆ ಅದನ್ನೇ ಅಲ್ಲಿಯ ಜನತೆಗೆ ನೀಡುತ್ತಿಲ್ಲ ಎಂದು ವಿಪಕ್ಷದ ಪ್ರಮುಖರು ಕೇಂದ್ರದ ನಿಲುವನ್ನು ಖಂಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...