Homeಮುಖಪುಟಕಾಶ್ಮೀರ ಭೇಟಿಗೆ ಐರೋಪ್ಯ ಒಕ್ಕೂಟ ನಿಯೋಗಕ್ಕೆ ಅನುಮತಿ: ಕೇಂದ್ರದ ನಿಲುವಿಗೆ ವಿಪಕ್ಷಗಳ ತರಾಟೆ

ಕಾಶ್ಮೀರ ಭೇಟಿಗೆ ಐರೋಪ್ಯ ಒಕ್ಕೂಟ ನಿಯೋಗಕ್ಕೆ ಅನುಮತಿ: ಕೇಂದ್ರದ ನಿಲುವಿಗೆ ವಿಪಕ್ಷಗಳ ತರಾಟೆ

- Advertisement -
- Advertisement -

ಜಮ್ಮುಕಾಶ್ಮೀರದಲ್ಲಿ 370 ಆರ್ಟಿಕಲ್ ರದ್ದಾಗಿ ಮೂರು ತಿಂಗಳು ಕಳೆಯುತ್ತಿರುವ ಬೆನ್ನಲ್ಲೇ, ವಸ್ತುಸ್ಥಿತಿ ಅಧ್ಯಯನಕ್ಕೆ ಐರೋಪ್ಯ ಒಕ್ಕೂಟ ರಾಷ್ಟ್ರಗಳ ೨೮ ಮಂದಿಯ ತಂಡ ಮಂಗಳವಾರ ಭೇಟಿ ನೀಡಲಿದೆ. ಕಾಶ್ಮೀರದಲ್ಲಿ ಈಗಿನ ಪರಿಸ್ಥಿತಿ ಹೇಗಿದೆ..? ಗಡಿಯಲ್ಲಿ ಎಲ್ಲವೂ ಸರಿಯಾಗಿದೆಯಾ..? ಎಂಬ ಬಗ್ಗೆ ಸತ್ಯಾಸತ್ಯತೆ ತಿಳಿಯಲು ತಂಡ ಭೇಟಿ ನೀಡುತ್ತಿದೆ ಎಂದು ಪ್ರಧಾನಮಂತ್ರಿ ಸಚಿವಾಲಯ ಮಾಹಿತಿ ನೀಡಿದೆ.

 

 

ದೆಹಲಿ ಮತ್ತು ಶ್ರೀನಗರ ಮೂಲಗಳ ಮಾಹಿತಿ ಪ್ರಕಾರ ೨೮ ಮಂದಿಯ ಐರೋಪ್ಯ ಒಕ್ಕೂಟ ನಿಯೋಗ ಕಾಶ್ಮೀರಕ್ಕೆ ಭೇಟಿ ನೀಡಲಿದೆ. ಇಟಲಿ, ಬ್ರಿಟನ್, ಫ್ರಾನ್ಸ್, ಜರ್ಮನಿ ಮತ್ತು ಪೋಲ್ಯಾಂಡ್ ರಾಷ್ಟ್ರಗಳ ಪ್ರಮುಖರು ಬರಲಿದ್ದಾರೆ. ವಸ್ತುಸ್ಥಿತಿಯ ಅಧ್ಯಯನ ಮಾಡಲಿದ್ದಾರೆ. ವಾಣಿಜ್ಯ, ವ್ಯಾಪಾರ-ವಹಿವಾಟು, ಹೂಡಿಕೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಅಂತಾ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಐರೋಪ್ಯ ಒಕ್ಕೂಟ ನಿಯೋಗಕ್ಕೆ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದ್ದು, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಿದ್ದಾರೆ. ನಿಯೋಗ ಕೆಲ ಕಾಶ್ಮೀರಿ ಜನತೆಯನ್ನು ಭೇಟಿ ಮಾಡಿ ಚರ್ಚೆ ನಡೆಸಲಿದೆ. ಪಿಡಿಪಿ ಪಕ್ಷದ ಮಾಜಿ ಸಚಿವ ಮುಜಫ್ಫರ್‌ ಬೇಗ್, ಜಮ್ಮುಕಾಶ್ಮೀರ ಬಿಡಿಸಿ ಚುನಾವಣೆಯಲ್ಲಿ ವಿಜೇತರಾದ ನಾಯಕರನ್ನೂ ಸಹ ನಿಯೋಗ ಭೇಟಿ ಮಾಡಲಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಕಾಶ್ಮೀರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಲಿರುವ ಐರೋಪ್ಯ ಒಕ್ಕೂಟ ನಿಯೋಗದ ಅಧ್ಯಯನ ಫಲಪ್ರದವಾಗಿರಲಿದೆ. ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನಲ್ಲಿನ ಸಂಪ್ರದಾಯ, ಸಂಸ್ಕೃತಿ, ಧಾರ್ಮಿಕ ವೈವಿಧ್ಯತೆಯ ಅಧ್ಯಯನಕ್ಕೂ ಸಹಕಾರಿಯಾಗಲಿದೆ. ಪ್ರಾದೇಶಿಕವಾಗಿ ಕಾಶ್ಮೀರದ ಹಲವು ಭಾಗಗಳ ಅಭಿವೃದ್ಧಿಗೆ ಒತ್ತು ನೀಡುತ್ತಿರುವ ಬಗ್ಗೆಯೂ ನಿಯೋಗ ಮಾಹಿತಿ ಪಡೆದುಕೊಳ್ಳಲಿದೆ ಎಂದು ಹೇಳಿದರು.

ಇನ್ನು ಕಾಶ್ಮೀರಕ್ಕೆ ಭೇಟಿ ನೀಡಲು ಐರೋಪ್ಯ ಒಕ್ಕೂಟ ನಿಯೋಗಕ್ಕೆ ಅನುಮತಿ ನೀಡಿರುವ ಪ್ರಧಾನಮಂತ್ರಿ ಸಚಿವಾಲಯ ವಿಪಕ್ಷ ನಾಯಕರ ಭೇಟಿಗೆ ಅನುಮತಿ ನೀಡುತ್ತಿಲ್ಲ ಏಕೆ..? ಎಂದು ವಿಪಕ್ಷಗಳು ತರಾಟೆ ತೆಗೆದುಕೊಂಡಿವೆ.

ಕಾಂಗ್ರೆಸ್‌ನ ಹಿರಿಯ ನಾಯಕ ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ. ವಿಪಕ್ಷ ನಾಯಕರು ಕಾಶ್ಮೀರಕ್ಕೆ ಭೇಟಿ ನೀಡುವ ಪ್ರಸ್ತಾಪಕ್ಕೆ ಅನುಮತಿ ನೀಡದ ಕೇಂದ್ರ ಸರ್ಕಾರ, ಐರೋಪ್ಯ ಒಕ್ಕೂಟ ನಿಯೋಗದ ವಸ್ತುಸ್ಥಿತಿ ಅಧ್ಯಯನಕ್ಕೆ ಅನುಮತಿ ನೀಡುತ್ತಿದೆ. ಈ ಮೂಲಕ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ದ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.

’ರಾಷ್ಟ್ರೀಯ ನಾಯಕನೆಂದು ಎದೆ ತಟ್ಟಿಕೊಂಡು ಹೇಳುವ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ನಾಯಕರಿಗೆ ಕಾಶ್ಮೀರ ಭೇಟಿಗೆ ಅವಕಾಶ ನೀಡದೆ, ವಿದೇಶಿ ನಾಯಕರಿಗೆ ಅನುಮತಿ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು. ಕಾಂಗ್ರೆಸ್‌ ಯುವ ನಾಯಕ ಜೈವೀರ್‍ ಶೇರ್‌ಗಿಲ್‌ ಮಾತನಾಡಿ, ವಿಪಕ್ಷಗಳ ನಿಯೋಗಕ್ಕೆ ಭೇಟಿಗೆ ಅವಕಾಶ ನೀಡದಿರುವ ಕ್ರಮ ಎಷ್ಟು ಸರಿ..?, ಜಮ್ಮುಕಾಶ್ಮೀರಕ್ಕೆ ಮೂಲ ಸೌಲಭ್ಯಗಳ ಅಗತ್ಯತೆ ಇದೆ. ಜನರಿಗೆ ಇಂಟರ್ನೆಟ್‌ ಅವಶ್ಯಕತೆಯಿದೆ. ಆದರೆ ಅದನ್ನೇ ಅಲ್ಲಿಯ ಜನತೆಗೆ ನೀಡುತ್ತಿಲ್ಲ ಎಂದು ವಿಪಕ್ಷದ ಪ್ರಮುಖರು ಕೇಂದ್ರದ ನಿಲುವನ್ನು ಖಂಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...