Homeಮುಖಪುಟಕಾಶ್ಮೀರ ಭೇಟಿಗೆ ಐರೋಪ್ಯ ಒಕ್ಕೂಟ ನಿಯೋಗಕ್ಕೆ ಅನುಮತಿ: ಕೇಂದ್ರದ ನಿಲುವಿಗೆ ವಿಪಕ್ಷಗಳ ತರಾಟೆ

ಕಾಶ್ಮೀರ ಭೇಟಿಗೆ ಐರೋಪ್ಯ ಒಕ್ಕೂಟ ನಿಯೋಗಕ್ಕೆ ಅನುಮತಿ: ಕೇಂದ್ರದ ನಿಲುವಿಗೆ ವಿಪಕ್ಷಗಳ ತರಾಟೆ

- Advertisement -
- Advertisement -

ಜಮ್ಮುಕಾಶ್ಮೀರದಲ್ಲಿ 370 ಆರ್ಟಿಕಲ್ ರದ್ದಾಗಿ ಮೂರು ತಿಂಗಳು ಕಳೆಯುತ್ತಿರುವ ಬೆನ್ನಲ್ಲೇ, ವಸ್ತುಸ್ಥಿತಿ ಅಧ್ಯಯನಕ್ಕೆ ಐರೋಪ್ಯ ಒಕ್ಕೂಟ ರಾಷ್ಟ್ರಗಳ ೨೮ ಮಂದಿಯ ತಂಡ ಮಂಗಳವಾರ ಭೇಟಿ ನೀಡಲಿದೆ. ಕಾಶ್ಮೀರದಲ್ಲಿ ಈಗಿನ ಪರಿಸ್ಥಿತಿ ಹೇಗಿದೆ..? ಗಡಿಯಲ್ಲಿ ಎಲ್ಲವೂ ಸರಿಯಾಗಿದೆಯಾ..? ಎಂಬ ಬಗ್ಗೆ ಸತ್ಯಾಸತ್ಯತೆ ತಿಳಿಯಲು ತಂಡ ಭೇಟಿ ನೀಡುತ್ತಿದೆ ಎಂದು ಪ್ರಧಾನಮಂತ್ರಿ ಸಚಿವಾಲಯ ಮಾಹಿತಿ ನೀಡಿದೆ.

 

 

ದೆಹಲಿ ಮತ್ತು ಶ್ರೀನಗರ ಮೂಲಗಳ ಮಾಹಿತಿ ಪ್ರಕಾರ ೨೮ ಮಂದಿಯ ಐರೋಪ್ಯ ಒಕ್ಕೂಟ ನಿಯೋಗ ಕಾಶ್ಮೀರಕ್ಕೆ ಭೇಟಿ ನೀಡಲಿದೆ. ಇಟಲಿ, ಬ್ರಿಟನ್, ಫ್ರಾನ್ಸ್, ಜರ್ಮನಿ ಮತ್ತು ಪೋಲ್ಯಾಂಡ್ ರಾಷ್ಟ್ರಗಳ ಪ್ರಮುಖರು ಬರಲಿದ್ದಾರೆ. ವಸ್ತುಸ್ಥಿತಿಯ ಅಧ್ಯಯನ ಮಾಡಲಿದ್ದಾರೆ. ವಾಣಿಜ್ಯ, ವ್ಯಾಪಾರ-ವಹಿವಾಟು, ಹೂಡಿಕೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಅಂತಾ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಐರೋಪ್ಯ ಒಕ್ಕೂಟ ನಿಯೋಗಕ್ಕೆ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದ್ದು, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಿದ್ದಾರೆ. ನಿಯೋಗ ಕೆಲ ಕಾಶ್ಮೀರಿ ಜನತೆಯನ್ನು ಭೇಟಿ ಮಾಡಿ ಚರ್ಚೆ ನಡೆಸಲಿದೆ. ಪಿಡಿಪಿ ಪಕ್ಷದ ಮಾಜಿ ಸಚಿವ ಮುಜಫ್ಫರ್‌ ಬೇಗ್, ಜಮ್ಮುಕಾಶ್ಮೀರ ಬಿಡಿಸಿ ಚುನಾವಣೆಯಲ್ಲಿ ವಿಜೇತರಾದ ನಾಯಕರನ್ನೂ ಸಹ ನಿಯೋಗ ಭೇಟಿ ಮಾಡಲಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಕಾಶ್ಮೀರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಲಿರುವ ಐರೋಪ್ಯ ಒಕ್ಕೂಟ ನಿಯೋಗದ ಅಧ್ಯಯನ ಫಲಪ್ರದವಾಗಿರಲಿದೆ. ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನಲ್ಲಿನ ಸಂಪ್ರದಾಯ, ಸಂಸ್ಕೃತಿ, ಧಾರ್ಮಿಕ ವೈವಿಧ್ಯತೆಯ ಅಧ್ಯಯನಕ್ಕೂ ಸಹಕಾರಿಯಾಗಲಿದೆ. ಪ್ರಾದೇಶಿಕವಾಗಿ ಕಾಶ್ಮೀರದ ಹಲವು ಭಾಗಗಳ ಅಭಿವೃದ್ಧಿಗೆ ಒತ್ತು ನೀಡುತ್ತಿರುವ ಬಗ್ಗೆಯೂ ನಿಯೋಗ ಮಾಹಿತಿ ಪಡೆದುಕೊಳ್ಳಲಿದೆ ಎಂದು ಹೇಳಿದರು.

ಇನ್ನು ಕಾಶ್ಮೀರಕ್ಕೆ ಭೇಟಿ ನೀಡಲು ಐರೋಪ್ಯ ಒಕ್ಕೂಟ ನಿಯೋಗಕ್ಕೆ ಅನುಮತಿ ನೀಡಿರುವ ಪ್ರಧಾನಮಂತ್ರಿ ಸಚಿವಾಲಯ ವಿಪಕ್ಷ ನಾಯಕರ ಭೇಟಿಗೆ ಅನುಮತಿ ನೀಡುತ್ತಿಲ್ಲ ಏಕೆ..? ಎಂದು ವಿಪಕ್ಷಗಳು ತರಾಟೆ ತೆಗೆದುಕೊಂಡಿವೆ.

ಕಾಂಗ್ರೆಸ್‌ನ ಹಿರಿಯ ನಾಯಕ ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ. ವಿಪಕ್ಷ ನಾಯಕರು ಕಾಶ್ಮೀರಕ್ಕೆ ಭೇಟಿ ನೀಡುವ ಪ್ರಸ್ತಾಪಕ್ಕೆ ಅನುಮತಿ ನೀಡದ ಕೇಂದ್ರ ಸರ್ಕಾರ, ಐರೋಪ್ಯ ಒಕ್ಕೂಟ ನಿಯೋಗದ ವಸ್ತುಸ್ಥಿತಿ ಅಧ್ಯಯನಕ್ಕೆ ಅನುಮತಿ ನೀಡುತ್ತಿದೆ. ಈ ಮೂಲಕ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ದ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.

’ರಾಷ್ಟ್ರೀಯ ನಾಯಕನೆಂದು ಎದೆ ತಟ್ಟಿಕೊಂಡು ಹೇಳುವ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ನಾಯಕರಿಗೆ ಕಾಶ್ಮೀರ ಭೇಟಿಗೆ ಅವಕಾಶ ನೀಡದೆ, ವಿದೇಶಿ ನಾಯಕರಿಗೆ ಅನುಮತಿ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು. ಕಾಂಗ್ರೆಸ್‌ ಯುವ ನಾಯಕ ಜೈವೀರ್‍ ಶೇರ್‌ಗಿಲ್‌ ಮಾತನಾಡಿ, ವಿಪಕ್ಷಗಳ ನಿಯೋಗಕ್ಕೆ ಭೇಟಿಗೆ ಅವಕಾಶ ನೀಡದಿರುವ ಕ್ರಮ ಎಷ್ಟು ಸರಿ..?, ಜಮ್ಮುಕಾಶ್ಮೀರಕ್ಕೆ ಮೂಲ ಸೌಲಭ್ಯಗಳ ಅಗತ್ಯತೆ ಇದೆ. ಜನರಿಗೆ ಇಂಟರ್ನೆಟ್‌ ಅವಶ್ಯಕತೆಯಿದೆ. ಆದರೆ ಅದನ್ನೇ ಅಲ್ಲಿಯ ಜನತೆಗೆ ನೀಡುತ್ತಿಲ್ಲ ಎಂದು ವಿಪಕ್ಷದ ಪ್ರಮುಖರು ಕೇಂದ್ರದ ನಿಲುವನ್ನು ಖಂಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...