Homeಅಂತರಾಷ್ಟ್ರೀಯಶ್ರೀಲಂಕಾ ಮೇಲೆ ವಾಣಿಜ್ಯ ನಿರ್ಬಂಧ ಹೇರಲು ಮುಂದಾದ ಯುರೋಪಿಯನ್‌ ಸಂಸತ್ತು

ಶ್ರೀಲಂಕಾ ಮೇಲೆ ವಾಣಿಜ್ಯ ನಿರ್ಬಂಧ ಹೇರಲು ಮುಂದಾದ ಯುರೋಪಿಯನ್‌ ಸಂಸತ್ತು

ಶ್ರೀಲಂಕಾ ದೇಶದಲ್ಲಿ ಹೆಚ್ಚಾಗಿ ತಮಿಳರನ್ನು ಬಂಧಿಸಲು, ಶಿಕ್ಷಿಸಲು ಬಳಕೆಯಾಗುವ ಪ್ರಿವೆನ್ಶನ್‌ ಆಫ್‌ ಟೆರರಿಸಮ್‌ ಆಕ್ಟ್‌ (PTA) ನ್ನು ವಜಾಗೊಳಿಸಲು ಯುರೋಪಿಯನ್‌ ಒತ್ತಡ ಹೇರಿದೆ.

- Advertisement -
- Advertisement -

ಶ್ರೀಲಂಕಾ ಸರ್ಕಾರದ ತಮಿಳರ ಮೇಲಿನ ಧೋರಣೆ ಇಡಿ ಜಗತ್ತಿಗೆ ತಿಳಿದಿರುವಂತದ್ದು. ಶ್ರೀಲಂಕಾ ಸರ್ಕಾರವೇ ಮುಂದೆ ನಿಂತು ಅಲ್ಲಿನ ತಮಿಳು ಭಾಷಿಕ ಜನಾಂಗದ ಮೇಲೆ ದೌರ್ಜನ್ಯ ನಡೆಸಿದ ಪರಿಣಾಮ ಇಂದು ಲಕ್ಷಾಂತರ ಜನ ಶ್ರೀಲಂಕನ್‌ ತಮಿಳರು ತಮ್ಮ ತಾಯ್ನಾಡು ತೊರೆದು ಭಾರತ, ಸಿಂಗಾಪುರ್‌, ಯುರೋಪ್‌, ಬ್ರಿಟನ್‌, ಚೀನಾಗಳಲ್ಲಿ ನಿರಾಶ್ರಿತರಾಗಿ ನೆಲೆಸಿದ್ದಾರೆ. ಶ್ರೀಲಂಕಾ ಸರ್ಕಾರ ತಮಿಳರ ಹಕ್ಕೊತ್ತಾಯದ ಪ್ರತಿಭಟನೆಗಳನ್ನು ಭಯೋತ್ಪಾದನೆಯಂತೆಯೇ ಕಾಣುತ್ತ ಬಂದಿದೆ. ಇದನ್ನು ಅಂತರಾಷ್ಟ್ರೀಯ ಸಮುದಾಯ, ವಿಶ್ವ ಸಂಸ್ಥೆ, ವಿಶ್ವ ಮಾನವ ಹಕ್ಕುಗಳ ಆಯೋಗಳು ಖಂಡಿಸುತ್ತಲೇ ಬಂದಿವೆ. ವಿಶ್ವ ಸಂಸ್ಥೆಯು ಶ್ರೀಲಂಕಾ ದೇಶದ ಮೇಲೆ ಹಲವು ನಿರ್ಬಂಧಗಳನ್ನು ಈಗಾಗಲೇ ವಿಧಿಸಿದೆ. ಈಗ ಯುರೋಪಿಯನ್‌ ಯೂನಿಯನ್‌ ಕೂಡ ವಿಶ್ವ ಸಂಸ್ಥೆಯ ಹಾದಿಯಲ್ಲಿಯೇ ಹೆಜ್ಜೆ ಹಾಕಿದೆ.

ನೆನ್ನೆ ಗುರುವಾರ ಜೂನ್‌ 10 ರಂದು ಯುರೋಪಿಯನ್‌ ಯೂನಿಯನ್‌ನ ಸಂಸತ್ತು ಹೊಸ ನಿರ್ಣಯ ಒಂದನ್ನು ಅಂಗೀಕರಿಸಿದೆ. ಶ್ರೀಲಂಕಾ ದೇಶದಲ್ಲಿ ಹೆಚ್ಚಾಗಿ ತಮಿಳರನ್ನು ಬಂಧಿಸಲು, ಶಿಕ್ಷಿಸಲು ಬಳಕೆಯಾಗುವ ಪ್ರಿವೆನ್ಶನ್‌ ಆಫ್‌ ಟೆರರಿಸಮ್‌ ಆಕ್ಟ್‌ (PTA) ನ್ನು ವಜಾಗೊಳಿಸಲು ಒತ್ತಡ ಹೇರುವಂತೆ ಯುರೋಪಿಯನ್‌ ಯೂನಿಯನ್‌ ಭಾರಿ ಬಹುಮತದಿಂದ ನಿರ್ಣಯ ಅಂಗೀಕರಿಸಿದೆ. ಯೂನಿಯನ್‌ ಸಂಸತ್‌ ನ 705 ಸದಸ್ಯರಲ್ಲಿ 628 ಸದಸ್ಯರು ನಿರ್ಣಯದ ಪರವಾಗಿ ಮತ ಚಲಾಯಿಸಿದ್ದಾರೆ.

ಇದನ್ನೂ ಓದಿ : ರೈತರ ಪ್ರತಿಭಟನೆಗೆ ಬೆದರಿದ ಹರಿಯಾಣ ಸಿಎಂ: ಆನ್‌ಲೈನ್‌ನಲ್ಲೇ ಕಾರ್ಯಕ್ರಮ ಉದ್ಘಾಟಿಸಲು ನಿರ್ಧಾರ

ಗುರುವಾರ ಯುರೋಪಿಯನ್‌ ಯೂನಿಯನ್‌ ಸ್ವೀಕರಿಸಿದ ಈ ರೆಸಲ್ಯೂಶನ್‌ನಲ್ಲಿ ಶ್ರೀಲಂಕಾದ ಮೇಲೆ ತಾತ್ಕಾಲಿಕ ವಾಣಿಜ್ಯ ನಿರ್ಬಂಧ ಹೇರುವುದು ಮುಖ್ಯವಾದ ಅಂಶವಾಗಿದೆ. ಶ್ರೀಲಂಕಾದ ಉತ್ಪನ್ನಗಳು ಯೂರೋಪಿನ ಮಾರುಕಟ್ಟೆಗೆ ಪ್ರವೇಶಿಸಿದಂತೆ ತಾತ್ಕಾಲಿಕ ನಿರ್ಬಂಧ ವಿಧಿಸಬೇಕು ಎಂದು ಯುರೋಪಿಯನ್‌ ಪಾರ್ಲಿಮೆಂಟ್ ತನ್ನ ಸದಸ್ಯ ರಾಷ್ಟ್ರಗಳಿಗೆ ತಿಳಿಸಿದೆ. ಶ್ರೀಲಂಕಾದ ಮುತ್ತು, ರತ್ನ, ರಬ್ಬರ್‌, ಸಾಂಬಾರು, ಚಹ ಉತ್ಪನ್ನಗಳಿಗೆ ಯುರೋಪನಲ್ಲಿ ಸಾಕಷ್ಟು ಬೇಡಿಕೆ ಇದೆ. ಈ ನಿರ್ಬಂಧ ಶ್ರೀಲಂಕಾದ ಆರ್ಥಿಕತೆ ಮತ್ತು ವಿದೇಶಿ ವಹಿವಾಟಿನ ಮೇಲೆ ತೀವ್ರ ಪರಿಣಾಮ ಬೀರಲಿದೆ.

ನಾವು ಶ್ರೀಲಂಕಾ ಸರ್ಕಾರ ತನ್ನ ಜನರಿಗೆ ನೀಡಿದ್ದ ಸಂವಿಧಾನಿಕ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿರುವುದನ್ನು ನೋಡುತ್ತಿದ್ದೇವೆ. ನಾವು ಶ್ರೀಲಂಕಾದ ಅಪಾರದರ್ಶಕ ನ್ಯಾಯ ನಿರ್ಣಯಗಳನ್ನು ನೋಡುತ್ತಿದ್ದೇವೆ. ನಿರ್ದಿಷ್ಟ ಸಮುದಾಯವನ್ನು ಶ್ರೀಲಂಕಾದಿಂದ ಹೊರಹಾಕುವ ಪ್ರಯತ್ನವನ್ನು ನೋಡುತ್ತಿದ್ದೇವೆ. ಶ್ರೀಲಂಕಾದಲ್ಲಿ ಪ್ರಿವೆನ್ಶನ್‌ ಆಫ್‌ ಟೆರರಿಸಮ್‌ ಕಾಯ್ದೆಯು ಹೋರಾಟಗಾರರು, ಬರಹಗಾರರನ್ನು ಮತ್ತು ವ್ಯವಸ್ಥೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸುವವರನ್ನು ದಮನಿಸಲು ಬಳಕೆಯಾಗುತ್ತಿರುವುದನ್ನು ನೋಡುತ್ತಿದ್ದೇವೆ ಎಂದು ಯುರೋಪಿನ್‌ ಕಮಿಷನರ್‌ ಹೆಲೇನಾ ಡಾಲಿ ಅವರು ತಿಳಿಸಿದ್ದಾರೆ.

ಶ್ರೀಲಂಕಾ

 

ಯುರೋಪಿಯನ್‌ ಯುನಿಯನ್‌ ಜಗತ್ತಿನ ಎಲ್ಲರ ಮಾನವ ಹಕ್ಕುಗಳನ್ನು ಬೆಂಬಲಿಸುತ್ತದೆ. ಶ್ರೀಲಂಕಾದಲ್ಲಿ ಭಯೋತ್ಪಾದನಾ ನಿಷೇಧ ಕಾಯ್ದೆಯಡಿ ಬಂಧಿಸಿದವರನ್ನು ಸರಿಯಾದ ರೀತಿಯಲ್ಲಿ ಕಾನೂನು ಪ್ರಕಾರ ವಿಚಾರಣೆ ನಡೆಸಬೇಕು. ಈ ಕ್ರೂರಿ ದಮನಕಾರಿ ಕಾನೂನು ವಜಾಗೊಳ್ಳಬೇಕೆಂದು ಯುರೋಪಿಯನ್‌ ಯೂನಿಯನ್‌ ಶ್ರೀಲಂಕಾದ ಮೇಲೆ ಒತ್ತಡವನ್ನು ಹೇರುತ್ತದೆ ಎಂದು ಹೆಲೇನಾ ಡಾಲಿ ತಿಳಿಸಿದ್ದಾರೆ.

ಶ್ರೀಲಂಕಾದಲ್ಲಿ ಸತತವಾಗಿ ನಡೆಯುತ್ತಿರುವ ಮಾನವ ಹಕ್ಕುಗಳ ಕಗ್ಗೊಲೆಯ ಕುರಿತು ಹೊಸ ರೆಸಲ್ಯೂಶನ್‌ನಲ್ಲಿ ಯುರೋಪಿಯನ್‌ ಸಂಸತ್ತು ತೀವ್ರ ಕಳವಳವನ್ನು ವ್ಯಕ್ತಪಡಿಸಿದೆ. ಜೊತೆಗೆ ಶ್ರೀಲಂಕಾ ಕುರಿತಾದ ವಿಶ್ವಸಂಸ್ಥೆಯ ವಿವಿಧ ವರದಿಗಳನ್ನೂ ಸಹ ರೆಸಲ್ಯೂಶನ್‌ನಲ್ಲಿ ಉಲ್ಲೇಖಿಸಲಾಗಿದೆ.

ಶ್ರೀಲಂಕಾಗೆ ಯುರೋಪ್‌ನಲ್ಲಿ ಕಲ್ಪಿಸಲಾಗಿದ್ದ ವಿಶೇಷ ತೆರಿಗೆ ಮತ್ತು ಆಮದು ಸುಂಕ ರಹಿತ ಮಾರುಕಟ್ಟೆ ಸೌಲಭ್ಯಕ್ಕೆ (GSP) ಯುರೋಪಿಯನ್‌ ಸಂಸತ್ತು ಅಂತ್ಯ ಹಾಡಿದೆ.

ಈ ಹಿಂದೆ 2021 ರ ಮಾರ್ಚ್‌ನಲ್ಲಿ ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್‌ ಮಿಷೆಲ್‌ ಬ್ಯಾಚಲೆಟ್‌ ಶ್ರೀಲಂಕಾದ ಮೇಲೆ ಸಾಧ್ಯವಾದಷ್ಟು ನಿರ್ಬಂಧಗಳನ್ನು ಹೇರುವಂತೆ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಲ್ಲಿ ಮನವಿ ಮಾಡಿದ್ದರು.

ಶ್ರೀಲಂಕಾದಲ್ಲಿ ದಿನೇ ದಿನೇ ಭಯೋತ್ಪಾದನಾ ನಿಷೇಧ ಕಾಯ್ದೆ ಅಡಿಯಲ್ಲಿ ಹೋರಾಟಗಾರರ ಮೇಲೆ, ತಮಿಳು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ. ಲೈಂಗಿಕ ದೌರ್ಜನ್ಯ, ಕಗ್ಗೊಲೆ ಮುಂತಾದ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಯ ವರದಿಗಳು ಶ್ರೀಲಂಕಾದಿಂದ ಬರುತ್ತಿವೆ. ಯುರೋಪಿಯನ್‌ ಯೂನಿಯನ್‌ ನಿರ್ಬಂಧದ ನಂತರ ವಿಶ್ವ ಸಂಸ್ಥೆ ಕೂಡ ಶ್ರೀಲಂಕಾದ ಮೇಲೆ ಇನ್ನಷ್ಟು ನಿರ್ಬಂಧಗಳನ್ನು ವಿಧಿಸುವ ಸಾಧ್ಯತೆಗಳಿವೆ.


ಇದನ್ನೂ ಓದಿ : ಸಂಚಾರ ನಿರ್ಬಂಧ ತೆರವಿಗೆ ಚೀನಾ ಜೊತೆ ಭಾರತ ಮಾತುಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...