Homeಅಂತರಾಷ್ಟ್ರೀಯಶ್ರೀಲಂಕಾ ಮೇಲೆ ವಾಣಿಜ್ಯ ನಿರ್ಬಂಧ ಹೇರಲು ಮುಂದಾದ ಯುರೋಪಿಯನ್‌ ಸಂಸತ್ತು

ಶ್ರೀಲಂಕಾ ಮೇಲೆ ವಾಣಿಜ್ಯ ನಿರ್ಬಂಧ ಹೇರಲು ಮುಂದಾದ ಯುರೋಪಿಯನ್‌ ಸಂಸತ್ತು

ಶ್ರೀಲಂಕಾ ದೇಶದಲ್ಲಿ ಹೆಚ್ಚಾಗಿ ತಮಿಳರನ್ನು ಬಂಧಿಸಲು, ಶಿಕ್ಷಿಸಲು ಬಳಕೆಯಾಗುವ ಪ್ರಿವೆನ್ಶನ್‌ ಆಫ್‌ ಟೆರರಿಸಮ್‌ ಆಕ್ಟ್‌ (PTA) ನ್ನು ವಜಾಗೊಳಿಸಲು ಯುರೋಪಿಯನ್‌ ಒತ್ತಡ ಹೇರಿದೆ.

- Advertisement -
- Advertisement -

ಶ್ರೀಲಂಕಾ ಸರ್ಕಾರದ ತಮಿಳರ ಮೇಲಿನ ಧೋರಣೆ ಇಡಿ ಜಗತ್ತಿಗೆ ತಿಳಿದಿರುವಂತದ್ದು. ಶ್ರೀಲಂಕಾ ಸರ್ಕಾರವೇ ಮುಂದೆ ನಿಂತು ಅಲ್ಲಿನ ತಮಿಳು ಭಾಷಿಕ ಜನಾಂಗದ ಮೇಲೆ ದೌರ್ಜನ್ಯ ನಡೆಸಿದ ಪರಿಣಾಮ ಇಂದು ಲಕ್ಷಾಂತರ ಜನ ಶ್ರೀಲಂಕನ್‌ ತಮಿಳರು ತಮ್ಮ ತಾಯ್ನಾಡು ತೊರೆದು ಭಾರತ, ಸಿಂಗಾಪುರ್‌, ಯುರೋಪ್‌, ಬ್ರಿಟನ್‌, ಚೀನಾಗಳಲ್ಲಿ ನಿರಾಶ್ರಿತರಾಗಿ ನೆಲೆಸಿದ್ದಾರೆ. ಶ್ರೀಲಂಕಾ ಸರ್ಕಾರ ತಮಿಳರ ಹಕ್ಕೊತ್ತಾಯದ ಪ್ರತಿಭಟನೆಗಳನ್ನು ಭಯೋತ್ಪಾದನೆಯಂತೆಯೇ ಕಾಣುತ್ತ ಬಂದಿದೆ. ಇದನ್ನು ಅಂತರಾಷ್ಟ್ರೀಯ ಸಮುದಾಯ, ವಿಶ್ವ ಸಂಸ್ಥೆ, ವಿಶ್ವ ಮಾನವ ಹಕ್ಕುಗಳ ಆಯೋಗಳು ಖಂಡಿಸುತ್ತಲೇ ಬಂದಿವೆ. ವಿಶ್ವ ಸಂಸ್ಥೆಯು ಶ್ರೀಲಂಕಾ ದೇಶದ ಮೇಲೆ ಹಲವು ನಿರ್ಬಂಧಗಳನ್ನು ಈಗಾಗಲೇ ವಿಧಿಸಿದೆ. ಈಗ ಯುರೋಪಿಯನ್‌ ಯೂನಿಯನ್‌ ಕೂಡ ವಿಶ್ವ ಸಂಸ್ಥೆಯ ಹಾದಿಯಲ್ಲಿಯೇ ಹೆಜ್ಜೆ ಹಾಕಿದೆ.

ನೆನ್ನೆ ಗುರುವಾರ ಜೂನ್‌ 10 ರಂದು ಯುರೋಪಿಯನ್‌ ಯೂನಿಯನ್‌ನ ಸಂಸತ್ತು ಹೊಸ ನಿರ್ಣಯ ಒಂದನ್ನು ಅಂಗೀಕರಿಸಿದೆ. ಶ್ರೀಲಂಕಾ ದೇಶದಲ್ಲಿ ಹೆಚ್ಚಾಗಿ ತಮಿಳರನ್ನು ಬಂಧಿಸಲು, ಶಿಕ್ಷಿಸಲು ಬಳಕೆಯಾಗುವ ಪ್ರಿವೆನ್ಶನ್‌ ಆಫ್‌ ಟೆರರಿಸಮ್‌ ಆಕ್ಟ್‌ (PTA) ನ್ನು ವಜಾಗೊಳಿಸಲು ಒತ್ತಡ ಹೇರುವಂತೆ ಯುರೋಪಿಯನ್‌ ಯೂನಿಯನ್‌ ಭಾರಿ ಬಹುಮತದಿಂದ ನಿರ್ಣಯ ಅಂಗೀಕರಿಸಿದೆ. ಯೂನಿಯನ್‌ ಸಂಸತ್‌ ನ 705 ಸದಸ್ಯರಲ್ಲಿ 628 ಸದಸ್ಯರು ನಿರ್ಣಯದ ಪರವಾಗಿ ಮತ ಚಲಾಯಿಸಿದ್ದಾರೆ.

ಇದನ್ನೂ ಓದಿ : ರೈತರ ಪ್ರತಿಭಟನೆಗೆ ಬೆದರಿದ ಹರಿಯಾಣ ಸಿಎಂ: ಆನ್‌ಲೈನ್‌ನಲ್ಲೇ ಕಾರ್ಯಕ್ರಮ ಉದ್ಘಾಟಿಸಲು ನಿರ್ಧಾರ

ಗುರುವಾರ ಯುರೋಪಿಯನ್‌ ಯೂನಿಯನ್‌ ಸ್ವೀಕರಿಸಿದ ಈ ರೆಸಲ್ಯೂಶನ್‌ನಲ್ಲಿ ಶ್ರೀಲಂಕಾದ ಮೇಲೆ ತಾತ್ಕಾಲಿಕ ವಾಣಿಜ್ಯ ನಿರ್ಬಂಧ ಹೇರುವುದು ಮುಖ್ಯವಾದ ಅಂಶವಾಗಿದೆ. ಶ್ರೀಲಂಕಾದ ಉತ್ಪನ್ನಗಳು ಯೂರೋಪಿನ ಮಾರುಕಟ್ಟೆಗೆ ಪ್ರವೇಶಿಸಿದಂತೆ ತಾತ್ಕಾಲಿಕ ನಿರ್ಬಂಧ ವಿಧಿಸಬೇಕು ಎಂದು ಯುರೋಪಿಯನ್‌ ಪಾರ್ಲಿಮೆಂಟ್ ತನ್ನ ಸದಸ್ಯ ರಾಷ್ಟ್ರಗಳಿಗೆ ತಿಳಿಸಿದೆ. ಶ್ರೀಲಂಕಾದ ಮುತ್ತು, ರತ್ನ, ರಬ್ಬರ್‌, ಸಾಂಬಾರು, ಚಹ ಉತ್ಪನ್ನಗಳಿಗೆ ಯುರೋಪನಲ್ಲಿ ಸಾಕಷ್ಟು ಬೇಡಿಕೆ ಇದೆ. ಈ ನಿರ್ಬಂಧ ಶ್ರೀಲಂಕಾದ ಆರ್ಥಿಕತೆ ಮತ್ತು ವಿದೇಶಿ ವಹಿವಾಟಿನ ಮೇಲೆ ತೀವ್ರ ಪರಿಣಾಮ ಬೀರಲಿದೆ.

ನಾವು ಶ್ರೀಲಂಕಾ ಸರ್ಕಾರ ತನ್ನ ಜನರಿಗೆ ನೀಡಿದ್ದ ಸಂವಿಧಾನಿಕ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿರುವುದನ್ನು ನೋಡುತ್ತಿದ್ದೇವೆ. ನಾವು ಶ್ರೀಲಂಕಾದ ಅಪಾರದರ್ಶಕ ನ್ಯಾಯ ನಿರ್ಣಯಗಳನ್ನು ನೋಡುತ್ತಿದ್ದೇವೆ. ನಿರ್ದಿಷ್ಟ ಸಮುದಾಯವನ್ನು ಶ್ರೀಲಂಕಾದಿಂದ ಹೊರಹಾಕುವ ಪ್ರಯತ್ನವನ್ನು ನೋಡುತ್ತಿದ್ದೇವೆ. ಶ್ರೀಲಂಕಾದಲ್ಲಿ ಪ್ರಿವೆನ್ಶನ್‌ ಆಫ್‌ ಟೆರರಿಸಮ್‌ ಕಾಯ್ದೆಯು ಹೋರಾಟಗಾರರು, ಬರಹಗಾರರನ್ನು ಮತ್ತು ವ್ಯವಸ್ಥೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸುವವರನ್ನು ದಮನಿಸಲು ಬಳಕೆಯಾಗುತ್ತಿರುವುದನ್ನು ನೋಡುತ್ತಿದ್ದೇವೆ ಎಂದು ಯುರೋಪಿನ್‌ ಕಮಿಷನರ್‌ ಹೆಲೇನಾ ಡಾಲಿ ಅವರು ತಿಳಿಸಿದ್ದಾರೆ.

ಶ್ರೀಲಂಕಾ

 

ಯುರೋಪಿಯನ್‌ ಯುನಿಯನ್‌ ಜಗತ್ತಿನ ಎಲ್ಲರ ಮಾನವ ಹಕ್ಕುಗಳನ್ನು ಬೆಂಬಲಿಸುತ್ತದೆ. ಶ್ರೀಲಂಕಾದಲ್ಲಿ ಭಯೋತ್ಪಾದನಾ ನಿಷೇಧ ಕಾಯ್ದೆಯಡಿ ಬಂಧಿಸಿದವರನ್ನು ಸರಿಯಾದ ರೀತಿಯಲ್ಲಿ ಕಾನೂನು ಪ್ರಕಾರ ವಿಚಾರಣೆ ನಡೆಸಬೇಕು. ಈ ಕ್ರೂರಿ ದಮನಕಾರಿ ಕಾನೂನು ವಜಾಗೊಳ್ಳಬೇಕೆಂದು ಯುರೋಪಿಯನ್‌ ಯೂನಿಯನ್‌ ಶ್ರೀಲಂಕಾದ ಮೇಲೆ ಒತ್ತಡವನ್ನು ಹೇರುತ್ತದೆ ಎಂದು ಹೆಲೇನಾ ಡಾಲಿ ತಿಳಿಸಿದ್ದಾರೆ.

ಶ್ರೀಲಂಕಾದಲ್ಲಿ ಸತತವಾಗಿ ನಡೆಯುತ್ತಿರುವ ಮಾನವ ಹಕ್ಕುಗಳ ಕಗ್ಗೊಲೆಯ ಕುರಿತು ಹೊಸ ರೆಸಲ್ಯೂಶನ್‌ನಲ್ಲಿ ಯುರೋಪಿಯನ್‌ ಸಂಸತ್ತು ತೀವ್ರ ಕಳವಳವನ್ನು ವ್ಯಕ್ತಪಡಿಸಿದೆ. ಜೊತೆಗೆ ಶ್ರೀಲಂಕಾ ಕುರಿತಾದ ವಿಶ್ವಸಂಸ್ಥೆಯ ವಿವಿಧ ವರದಿಗಳನ್ನೂ ಸಹ ರೆಸಲ್ಯೂಶನ್‌ನಲ್ಲಿ ಉಲ್ಲೇಖಿಸಲಾಗಿದೆ.

ಶ್ರೀಲಂಕಾಗೆ ಯುರೋಪ್‌ನಲ್ಲಿ ಕಲ್ಪಿಸಲಾಗಿದ್ದ ವಿಶೇಷ ತೆರಿಗೆ ಮತ್ತು ಆಮದು ಸುಂಕ ರಹಿತ ಮಾರುಕಟ್ಟೆ ಸೌಲಭ್ಯಕ್ಕೆ (GSP) ಯುರೋಪಿಯನ್‌ ಸಂಸತ್ತು ಅಂತ್ಯ ಹಾಡಿದೆ.

ಈ ಹಿಂದೆ 2021 ರ ಮಾರ್ಚ್‌ನಲ್ಲಿ ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್‌ ಮಿಷೆಲ್‌ ಬ್ಯಾಚಲೆಟ್‌ ಶ್ರೀಲಂಕಾದ ಮೇಲೆ ಸಾಧ್ಯವಾದಷ್ಟು ನಿರ್ಬಂಧಗಳನ್ನು ಹೇರುವಂತೆ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಲ್ಲಿ ಮನವಿ ಮಾಡಿದ್ದರು.

ಶ್ರೀಲಂಕಾದಲ್ಲಿ ದಿನೇ ದಿನೇ ಭಯೋತ್ಪಾದನಾ ನಿಷೇಧ ಕಾಯ್ದೆ ಅಡಿಯಲ್ಲಿ ಹೋರಾಟಗಾರರ ಮೇಲೆ, ತಮಿಳು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ. ಲೈಂಗಿಕ ದೌರ್ಜನ್ಯ, ಕಗ್ಗೊಲೆ ಮುಂತಾದ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಯ ವರದಿಗಳು ಶ್ರೀಲಂಕಾದಿಂದ ಬರುತ್ತಿವೆ. ಯುರೋಪಿಯನ್‌ ಯೂನಿಯನ್‌ ನಿರ್ಬಂಧದ ನಂತರ ವಿಶ್ವ ಸಂಸ್ಥೆ ಕೂಡ ಶ್ರೀಲಂಕಾದ ಮೇಲೆ ಇನ್ನಷ್ಟು ನಿರ್ಬಂಧಗಳನ್ನು ವಿಧಿಸುವ ಸಾಧ್ಯತೆಗಳಿವೆ.


ಇದನ್ನೂ ಓದಿ : ಸಂಚಾರ ನಿರ್ಬಂಧ ತೆರವಿಗೆ ಚೀನಾ ಜೊತೆ ಭಾರತ ಮಾತುಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...