Homeಅಂತರಾಷ್ಟ್ರೀಯಶ್ರೀಲಂಕಾ ಮೇಲೆ ವಾಣಿಜ್ಯ ನಿರ್ಬಂಧ ಹೇರಲು ಮುಂದಾದ ಯುರೋಪಿಯನ್‌ ಸಂಸತ್ತು

ಶ್ರೀಲಂಕಾ ಮೇಲೆ ವಾಣಿಜ್ಯ ನಿರ್ಬಂಧ ಹೇರಲು ಮುಂದಾದ ಯುರೋಪಿಯನ್‌ ಸಂಸತ್ತು

ಶ್ರೀಲಂಕಾ ದೇಶದಲ್ಲಿ ಹೆಚ್ಚಾಗಿ ತಮಿಳರನ್ನು ಬಂಧಿಸಲು, ಶಿಕ್ಷಿಸಲು ಬಳಕೆಯಾಗುವ ಪ್ರಿವೆನ್ಶನ್‌ ಆಫ್‌ ಟೆರರಿಸಮ್‌ ಆಕ್ಟ್‌ (PTA) ನ್ನು ವಜಾಗೊಳಿಸಲು ಯುರೋಪಿಯನ್‌ ಒತ್ತಡ ಹೇರಿದೆ.

- Advertisement -
- Advertisement -

ಶ್ರೀಲಂಕಾ ಸರ್ಕಾರದ ತಮಿಳರ ಮೇಲಿನ ಧೋರಣೆ ಇಡಿ ಜಗತ್ತಿಗೆ ತಿಳಿದಿರುವಂತದ್ದು. ಶ್ರೀಲಂಕಾ ಸರ್ಕಾರವೇ ಮುಂದೆ ನಿಂತು ಅಲ್ಲಿನ ತಮಿಳು ಭಾಷಿಕ ಜನಾಂಗದ ಮೇಲೆ ದೌರ್ಜನ್ಯ ನಡೆಸಿದ ಪರಿಣಾಮ ಇಂದು ಲಕ್ಷಾಂತರ ಜನ ಶ್ರೀಲಂಕನ್‌ ತಮಿಳರು ತಮ್ಮ ತಾಯ್ನಾಡು ತೊರೆದು ಭಾರತ, ಸಿಂಗಾಪುರ್‌, ಯುರೋಪ್‌, ಬ್ರಿಟನ್‌, ಚೀನಾಗಳಲ್ಲಿ ನಿರಾಶ್ರಿತರಾಗಿ ನೆಲೆಸಿದ್ದಾರೆ. ಶ್ರೀಲಂಕಾ ಸರ್ಕಾರ ತಮಿಳರ ಹಕ್ಕೊತ್ತಾಯದ ಪ್ರತಿಭಟನೆಗಳನ್ನು ಭಯೋತ್ಪಾದನೆಯಂತೆಯೇ ಕಾಣುತ್ತ ಬಂದಿದೆ. ಇದನ್ನು ಅಂತರಾಷ್ಟ್ರೀಯ ಸಮುದಾಯ, ವಿಶ್ವ ಸಂಸ್ಥೆ, ವಿಶ್ವ ಮಾನವ ಹಕ್ಕುಗಳ ಆಯೋಗಳು ಖಂಡಿಸುತ್ತಲೇ ಬಂದಿವೆ. ವಿಶ್ವ ಸಂಸ್ಥೆಯು ಶ್ರೀಲಂಕಾ ದೇಶದ ಮೇಲೆ ಹಲವು ನಿರ್ಬಂಧಗಳನ್ನು ಈಗಾಗಲೇ ವಿಧಿಸಿದೆ. ಈಗ ಯುರೋಪಿಯನ್‌ ಯೂನಿಯನ್‌ ಕೂಡ ವಿಶ್ವ ಸಂಸ್ಥೆಯ ಹಾದಿಯಲ್ಲಿಯೇ ಹೆಜ್ಜೆ ಹಾಕಿದೆ.

ನೆನ್ನೆ ಗುರುವಾರ ಜೂನ್‌ 10 ರಂದು ಯುರೋಪಿಯನ್‌ ಯೂನಿಯನ್‌ನ ಸಂಸತ್ತು ಹೊಸ ನಿರ್ಣಯ ಒಂದನ್ನು ಅಂಗೀಕರಿಸಿದೆ. ಶ್ರೀಲಂಕಾ ದೇಶದಲ್ಲಿ ಹೆಚ್ಚಾಗಿ ತಮಿಳರನ್ನು ಬಂಧಿಸಲು, ಶಿಕ್ಷಿಸಲು ಬಳಕೆಯಾಗುವ ಪ್ರಿವೆನ್ಶನ್‌ ಆಫ್‌ ಟೆರರಿಸಮ್‌ ಆಕ್ಟ್‌ (PTA) ನ್ನು ವಜಾಗೊಳಿಸಲು ಒತ್ತಡ ಹೇರುವಂತೆ ಯುರೋಪಿಯನ್‌ ಯೂನಿಯನ್‌ ಭಾರಿ ಬಹುಮತದಿಂದ ನಿರ್ಣಯ ಅಂಗೀಕರಿಸಿದೆ. ಯೂನಿಯನ್‌ ಸಂಸತ್‌ ನ 705 ಸದಸ್ಯರಲ್ಲಿ 628 ಸದಸ್ಯರು ನಿರ್ಣಯದ ಪರವಾಗಿ ಮತ ಚಲಾಯಿಸಿದ್ದಾರೆ.

ಇದನ್ನೂ ಓದಿ : ರೈತರ ಪ್ರತಿಭಟನೆಗೆ ಬೆದರಿದ ಹರಿಯಾಣ ಸಿಎಂ: ಆನ್‌ಲೈನ್‌ನಲ್ಲೇ ಕಾರ್ಯಕ್ರಮ ಉದ್ಘಾಟಿಸಲು ನಿರ್ಧಾರ

ಗುರುವಾರ ಯುರೋಪಿಯನ್‌ ಯೂನಿಯನ್‌ ಸ್ವೀಕರಿಸಿದ ಈ ರೆಸಲ್ಯೂಶನ್‌ನಲ್ಲಿ ಶ್ರೀಲಂಕಾದ ಮೇಲೆ ತಾತ್ಕಾಲಿಕ ವಾಣಿಜ್ಯ ನಿರ್ಬಂಧ ಹೇರುವುದು ಮುಖ್ಯವಾದ ಅಂಶವಾಗಿದೆ. ಶ್ರೀಲಂಕಾದ ಉತ್ಪನ್ನಗಳು ಯೂರೋಪಿನ ಮಾರುಕಟ್ಟೆಗೆ ಪ್ರವೇಶಿಸಿದಂತೆ ತಾತ್ಕಾಲಿಕ ನಿರ್ಬಂಧ ವಿಧಿಸಬೇಕು ಎಂದು ಯುರೋಪಿಯನ್‌ ಪಾರ್ಲಿಮೆಂಟ್ ತನ್ನ ಸದಸ್ಯ ರಾಷ್ಟ್ರಗಳಿಗೆ ತಿಳಿಸಿದೆ. ಶ್ರೀಲಂಕಾದ ಮುತ್ತು, ರತ್ನ, ರಬ್ಬರ್‌, ಸಾಂಬಾರು, ಚಹ ಉತ್ಪನ್ನಗಳಿಗೆ ಯುರೋಪನಲ್ಲಿ ಸಾಕಷ್ಟು ಬೇಡಿಕೆ ಇದೆ. ಈ ನಿರ್ಬಂಧ ಶ್ರೀಲಂಕಾದ ಆರ್ಥಿಕತೆ ಮತ್ತು ವಿದೇಶಿ ವಹಿವಾಟಿನ ಮೇಲೆ ತೀವ್ರ ಪರಿಣಾಮ ಬೀರಲಿದೆ.

ನಾವು ಶ್ರೀಲಂಕಾ ಸರ್ಕಾರ ತನ್ನ ಜನರಿಗೆ ನೀಡಿದ್ದ ಸಂವಿಧಾನಿಕ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿರುವುದನ್ನು ನೋಡುತ್ತಿದ್ದೇವೆ. ನಾವು ಶ್ರೀಲಂಕಾದ ಅಪಾರದರ್ಶಕ ನ್ಯಾಯ ನಿರ್ಣಯಗಳನ್ನು ನೋಡುತ್ತಿದ್ದೇವೆ. ನಿರ್ದಿಷ್ಟ ಸಮುದಾಯವನ್ನು ಶ್ರೀಲಂಕಾದಿಂದ ಹೊರಹಾಕುವ ಪ್ರಯತ್ನವನ್ನು ನೋಡುತ್ತಿದ್ದೇವೆ. ಶ್ರೀಲಂಕಾದಲ್ಲಿ ಪ್ರಿವೆನ್ಶನ್‌ ಆಫ್‌ ಟೆರರಿಸಮ್‌ ಕಾಯ್ದೆಯು ಹೋರಾಟಗಾರರು, ಬರಹಗಾರರನ್ನು ಮತ್ತು ವ್ಯವಸ್ಥೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸುವವರನ್ನು ದಮನಿಸಲು ಬಳಕೆಯಾಗುತ್ತಿರುವುದನ್ನು ನೋಡುತ್ತಿದ್ದೇವೆ ಎಂದು ಯುರೋಪಿನ್‌ ಕಮಿಷನರ್‌ ಹೆಲೇನಾ ಡಾಲಿ ಅವರು ತಿಳಿಸಿದ್ದಾರೆ.

ಶ್ರೀಲಂಕಾ

 

ಯುರೋಪಿಯನ್‌ ಯುನಿಯನ್‌ ಜಗತ್ತಿನ ಎಲ್ಲರ ಮಾನವ ಹಕ್ಕುಗಳನ್ನು ಬೆಂಬಲಿಸುತ್ತದೆ. ಶ್ರೀಲಂಕಾದಲ್ಲಿ ಭಯೋತ್ಪಾದನಾ ನಿಷೇಧ ಕಾಯ್ದೆಯಡಿ ಬಂಧಿಸಿದವರನ್ನು ಸರಿಯಾದ ರೀತಿಯಲ್ಲಿ ಕಾನೂನು ಪ್ರಕಾರ ವಿಚಾರಣೆ ನಡೆಸಬೇಕು. ಈ ಕ್ರೂರಿ ದಮನಕಾರಿ ಕಾನೂನು ವಜಾಗೊಳ್ಳಬೇಕೆಂದು ಯುರೋಪಿಯನ್‌ ಯೂನಿಯನ್‌ ಶ್ರೀಲಂಕಾದ ಮೇಲೆ ಒತ್ತಡವನ್ನು ಹೇರುತ್ತದೆ ಎಂದು ಹೆಲೇನಾ ಡಾಲಿ ತಿಳಿಸಿದ್ದಾರೆ.

ಶ್ರೀಲಂಕಾದಲ್ಲಿ ಸತತವಾಗಿ ನಡೆಯುತ್ತಿರುವ ಮಾನವ ಹಕ್ಕುಗಳ ಕಗ್ಗೊಲೆಯ ಕುರಿತು ಹೊಸ ರೆಸಲ್ಯೂಶನ್‌ನಲ್ಲಿ ಯುರೋಪಿಯನ್‌ ಸಂಸತ್ತು ತೀವ್ರ ಕಳವಳವನ್ನು ವ್ಯಕ್ತಪಡಿಸಿದೆ. ಜೊತೆಗೆ ಶ್ರೀಲಂಕಾ ಕುರಿತಾದ ವಿಶ್ವಸಂಸ್ಥೆಯ ವಿವಿಧ ವರದಿಗಳನ್ನೂ ಸಹ ರೆಸಲ್ಯೂಶನ್‌ನಲ್ಲಿ ಉಲ್ಲೇಖಿಸಲಾಗಿದೆ.

ಶ್ರೀಲಂಕಾಗೆ ಯುರೋಪ್‌ನಲ್ಲಿ ಕಲ್ಪಿಸಲಾಗಿದ್ದ ವಿಶೇಷ ತೆರಿಗೆ ಮತ್ತು ಆಮದು ಸುಂಕ ರಹಿತ ಮಾರುಕಟ್ಟೆ ಸೌಲಭ್ಯಕ್ಕೆ (GSP) ಯುರೋಪಿಯನ್‌ ಸಂಸತ್ತು ಅಂತ್ಯ ಹಾಡಿದೆ.

ಈ ಹಿಂದೆ 2021 ರ ಮಾರ್ಚ್‌ನಲ್ಲಿ ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್‌ ಮಿಷೆಲ್‌ ಬ್ಯಾಚಲೆಟ್‌ ಶ್ರೀಲಂಕಾದ ಮೇಲೆ ಸಾಧ್ಯವಾದಷ್ಟು ನಿರ್ಬಂಧಗಳನ್ನು ಹೇರುವಂತೆ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಲ್ಲಿ ಮನವಿ ಮಾಡಿದ್ದರು.

ಶ್ರೀಲಂಕಾದಲ್ಲಿ ದಿನೇ ದಿನೇ ಭಯೋತ್ಪಾದನಾ ನಿಷೇಧ ಕಾಯ್ದೆ ಅಡಿಯಲ್ಲಿ ಹೋರಾಟಗಾರರ ಮೇಲೆ, ತಮಿಳು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ. ಲೈಂಗಿಕ ದೌರ್ಜನ್ಯ, ಕಗ್ಗೊಲೆ ಮುಂತಾದ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಯ ವರದಿಗಳು ಶ್ರೀಲಂಕಾದಿಂದ ಬರುತ್ತಿವೆ. ಯುರೋಪಿಯನ್‌ ಯೂನಿಯನ್‌ ನಿರ್ಬಂಧದ ನಂತರ ವಿಶ್ವ ಸಂಸ್ಥೆ ಕೂಡ ಶ್ರೀಲಂಕಾದ ಮೇಲೆ ಇನ್ನಷ್ಟು ನಿರ್ಬಂಧಗಳನ್ನು ವಿಧಿಸುವ ಸಾಧ್ಯತೆಗಳಿವೆ.


ಇದನ್ನೂ ಓದಿ : ಸಂಚಾರ ನಿರ್ಬಂಧ ತೆರವಿಗೆ ಚೀನಾ ಜೊತೆ ಭಾರತ ಮಾತುಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...