Homeಅಂತರಾಷ್ಟ್ರೀಯಶ್ರೀಲಂಕಾ ಮೇಲೆ ವಾಣಿಜ್ಯ ನಿರ್ಬಂಧ ಹೇರಲು ಮುಂದಾದ ಯುರೋಪಿಯನ್‌ ಸಂಸತ್ತು

ಶ್ರೀಲಂಕಾ ಮೇಲೆ ವಾಣಿಜ್ಯ ನಿರ್ಬಂಧ ಹೇರಲು ಮುಂದಾದ ಯುರೋಪಿಯನ್‌ ಸಂಸತ್ತು

ಶ್ರೀಲಂಕಾ ದೇಶದಲ್ಲಿ ಹೆಚ್ಚಾಗಿ ತಮಿಳರನ್ನು ಬಂಧಿಸಲು, ಶಿಕ್ಷಿಸಲು ಬಳಕೆಯಾಗುವ ಪ್ರಿವೆನ್ಶನ್‌ ಆಫ್‌ ಟೆರರಿಸಮ್‌ ಆಕ್ಟ್‌ (PTA) ನ್ನು ವಜಾಗೊಳಿಸಲು ಯುರೋಪಿಯನ್‌ ಒತ್ತಡ ಹೇರಿದೆ.

- Advertisement -
- Advertisement -

ಶ್ರೀಲಂಕಾ ಸರ್ಕಾರದ ತಮಿಳರ ಮೇಲಿನ ಧೋರಣೆ ಇಡಿ ಜಗತ್ತಿಗೆ ತಿಳಿದಿರುವಂತದ್ದು. ಶ್ರೀಲಂಕಾ ಸರ್ಕಾರವೇ ಮುಂದೆ ನಿಂತು ಅಲ್ಲಿನ ತಮಿಳು ಭಾಷಿಕ ಜನಾಂಗದ ಮೇಲೆ ದೌರ್ಜನ್ಯ ನಡೆಸಿದ ಪರಿಣಾಮ ಇಂದು ಲಕ್ಷಾಂತರ ಜನ ಶ್ರೀಲಂಕನ್‌ ತಮಿಳರು ತಮ್ಮ ತಾಯ್ನಾಡು ತೊರೆದು ಭಾರತ, ಸಿಂಗಾಪುರ್‌, ಯುರೋಪ್‌, ಬ್ರಿಟನ್‌, ಚೀನಾಗಳಲ್ಲಿ ನಿರಾಶ್ರಿತರಾಗಿ ನೆಲೆಸಿದ್ದಾರೆ. ಶ್ರೀಲಂಕಾ ಸರ್ಕಾರ ತಮಿಳರ ಹಕ್ಕೊತ್ತಾಯದ ಪ್ರತಿಭಟನೆಗಳನ್ನು ಭಯೋತ್ಪಾದನೆಯಂತೆಯೇ ಕಾಣುತ್ತ ಬಂದಿದೆ. ಇದನ್ನು ಅಂತರಾಷ್ಟ್ರೀಯ ಸಮುದಾಯ, ವಿಶ್ವ ಸಂಸ್ಥೆ, ವಿಶ್ವ ಮಾನವ ಹಕ್ಕುಗಳ ಆಯೋಗಳು ಖಂಡಿಸುತ್ತಲೇ ಬಂದಿವೆ. ವಿಶ್ವ ಸಂಸ್ಥೆಯು ಶ್ರೀಲಂಕಾ ದೇಶದ ಮೇಲೆ ಹಲವು ನಿರ್ಬಂಧಗಳನ್ನು ಈಗಾಗಲೇ ವಿಧಿಸಿದೆ. ಈಗ ಯುರೋಪಿಯನ್‌ ಯೂನಿಯನ್‌ ಕೂಡ ವಿಶ್ವ ಸಂಸ್ಥೆಯ ಹಾದಿಯಲ್ಲಿಯೇ ಹೆಜ್ಜೆ ಹಾಕಿದೆ.

ನೆನ್ನೆ ಗುರುವಾರ ಜೂನ್‌ 10 ರಂದು ಯುರೋಪಿಯನ್‌ ಯೂನಿಯನ್‌ನ ಸಂಸತ್ತು ಹೊಸ ನಿರ್ಣಯ ಒಂದನ್ನು ಅಂಗೀಕರಿಸಿದೆ. ಶ್ರೀಲಂಕಾ ದೇಶದಲ್ಲಿ ಹೆಚ್ಚಾಗಿ ತಮಿಳರನ್ನು ಬಂಧಿಸಲು, ಶಿಕ್ಷಿಸಲು ಬಳಕೆಯಾಗುವ ಪ್ರಿವೆನ್ಶನ್‌ ಆಫ್‌ ಟೆರರಿಸಮ್‌ ಆಕ್ಟ್‌ (PTA) ನ್ನು ವಜಾಗೊಳಿಸಲು ಒತ್ತಡ ಹೇರುವಂತೆ ಯುರೋಪಿಯನ್‌ ಯೂನಿಯನ್‌ ಭಾರಿ ಬಹುಮತದಿಂದ ನಿರ್ಣಯ ಅಂಗೀಕರಿಸಿದೆ. ಯೂನಿಯನ್‌ ಸಂಸತ್‌ ನ 705 ಸದಸ್ಯರಲ್ಲಿ 628 ಸದಸ್ಯರು ನಿರ್ಣಯದ ಪರವಾಗಿ ಮತ ಚಲಾಯಿಸಿದ್ದಾರೆ.

ಇದನ್ನೂ ಓದಿ : ರೈತರ ಪ್ರತಿಭಟನೆಗೆ ಬೆದರಿದ ಹರಿಯಾಣ ಸಿಎಂ: ಆನ್‌ಲೈನ್‌ನಲ್ಲೇ ಕಾರ್ಯಕ್ರಮ ಉದ್ಘಾಟಿಸಲು ನಿರ್ಧಾರ

ಗುರುವಾರ ಯುರೋಪಿಯನ್‌ ಯೂನಿಯನ್‌ ಸ್ವೀಕರಿಸಿದ ಈ ರೆಸಲ್ಯೂಶನ್‌ನಲ್ಲಿ ಶ್ರೀಲಂಕಾದ ಮೇಲೆ ತಾತ್ಕಾಲಿಕ ವಾಣಿಜ್ಯ ನಿರ್ಬಂಧ ಹೇರುವುದು ಮುಖ್ಯವಾದ ಅಂಶವಾಗಿದೆ. ಶ್ರೀಲಂಕಾದ ಉತ್ಪನ್ನಗಳು ಯೂರೋಪಿನ ಮಾರುಕಟ್ಟೆಗೆ ಪ್ರವೇಶಿಸಿದಂತೆ ತಾತ್ಕಾಲಿಕ ನಿರ್ಬಂಧ ವಿಧಿಸಬೇಕು ಎಂದು ಯುರೋಪಿಯನ್‌ ಪಾರ್ಲಿಮೆಂಟ್ ತನ್ನ ಸದಸ್ಯ ರಾಷ್ಟ್ರಗಳಿಗೆ ತಿಳಿಸಿದೆ. ಶ್ರೀಲಂಕಾದ ಮುತ್ತು, ರತ್ನ, ರಬ್ಬರ್‌, ಸಾಂಬಾರು, ಚಹ ಉತ್ಪನ್ನಗಳಿಗೆ ಯುರೋಪನಲ್ಲಿ ಸಾಕಷ್ಟು ಬೇಡಿಕೆ ಇದೆ. ಈ ನಿರ್ಬಂಧ ಶ್ರೀಲಂಕಾದ ಆರ್ಥಿಕತೆ ಮತ್ತು ವಿದೇಶಿ ವಹಿವಾಟಿನ ಮೇಲೆ ತೀವ್ರ ಪರಿಣಾಮ ಬೀರಲಿದೆ.

ನಾವು ಶ್ರೀಲಂಕಾ ಸರ್ಕಾರ ತನ್ನ ಜನರಿಗೆ ನೀಡಿದ್ದ ಸಂವಿಧಾನಿಕ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿರುವುದನ್ನು ನೋಡುತ್ತಿದ್ದೇವೆ. ನಾವು ಶ್ರೀಲಂಕಾದ ಅಪಾರದರ್ಶಕ ನ್ಯಾಯ ನಿರ್ಣಯಗಳನ್ನು ನೋಡುತ್ತಿದ್ದೇವೆ. ನಿರ್ದಿಷ್ಟ ಸಮುದಾಯವನ್ನು ಶ್ರೀಲಂಕಾದಿಂದ ಹೊರಹಾಕುವ ಪ್ರಯತ್ನವನ್ನು ನೋಡುತ್ತಿದ್ದೇವೆ. ಶ್ರೀಲಂಕಾದಲ್ಲಿ ಪ್ರಿವೆನ್ಶನ್‌ ಆಫ್‌ ಟೆರರಿಸಮ್‌ ಕಾಯ್ದೆಯು ಹೋರಾಟಗಾರರು, ಬರಹಗಾರರನ್ನು ಮತ್ತು ವ್ಯವಸ್ಥೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸುವವರನ್ನು ದಮನಿಸಲು ಬಳಕೆಯಾಗುತ್ತಿರುವುದನ್ನು ನೋಡುತ್ತಿದ್ದೇವೆ ಎಂದು ಯುರೋಪಿನ್‌ ಕಮಿಷನರ್‌ ಹೆಲೇನಾ ಡಾಲಿ ಅವರು ತಿಳಿಸಿದ್ದಾರೆ.

ಶ್ರೀಲಂಕಾ

 

ಯುರೋಪಿಯನ್‌ ಯುನಿಯನ್‌ ಜಗತ್ತಿನ ಎಲ್ಲರ ಮಾನವ ಹಕ್ಕುಗಳನ್ನು ಬೆಂಬಲಿಸುತ್ತದೆ. ಶ್ರೀಲಂಕಾದಲ್ಲಿ ಭಯೋತ್ಪಾದನಾ ನಿಷೇಧ ಕಾಯ್ದೆಯಡಿ ಬಂಧಿಸಿದವರನ್ನು ಸರಿಯಾದ ರೀತಿಯಲ್ಲಿ ಕಾನೂನು ಪ್ರಕಾರ ವಿಚಾರಣೆ ನಡೆಸಬೇಕು. ಈ ಕ್ರೂರಿ ದಮನಕಾರಿ ಕಾನೂನು ವಜಾಗೊಳ್ಳಬೇಕೆಂದು ಯುರೋಪಿಯನ್‌ ಯೂನಿಯನ್‌ ಶ್ರೀಲಂಕಾದ ಮೇಲೆ ಒತ್ತಡವನ್ನು ಹೇರುತ್ತದೆ ಎಂದು ಹೆಲೇನಾ ಡಾಲಿ ತಿಳಿಸಿದ್ದಾರೆ.

ಶ್ರೀಲಂಕಾದಲ್ಲಿ ಸತತವಾಗಿ ನಡೆಯುತ್ತಿರುವ ಮಾನವ ಹಕ್ಕುಗಳ ಕಗ್ಗೊಲೆಯ ಕುರಿತು ಹೊಸ ರೆಸಲ್ಯೂಶನ್‌ನಲ್ಲಿ ಯುರೋಪಿಯನ್‌ ಸಂಸತ್ತು ತೀವ್ರ ಕಳವಳವನ್ನು ವ್ಯಕ್ತಪಡಿಸಿದೆ. ಜೊತೆಗೆ ಶ್ರೀಲಂಕಾ ಕುರಿತಾದ ವಿಶ್ವಸಂಸ್ಥೆಯ ವಿವಿಧ ವರದಿಗಳನ್ನೂ ಸಹ ರೆಸಲ್ಯೂಶನ್‌ನಲ್ಲಿ ಉಲ್ಲೇಖಿಸಲಾಗಿದೆ.

ಶ್ರೀಲಂಕಾಗೆ ಯುರೋಪ್‌ನಲ್ಲಿ ಕಲ್ಪಿಸಲಾಗಿದ್ದ ವಿಶೇಷ ತೆರಿಗೆ ಮತ್ತು ಆಮದು ಸುಂಕ ರಹಿತ ಮಾರುಕಟ್ಟೆ ಸೌಲಭ್ಯಕ್ಕೆ (GSP) ಯುರೋಪಿಯನ್‌ ಸಂಸತ್ತು ಅಂತ್ಯ ಹಾಡಿದೆ.

ಈ ಹಿಂದೆ 2021 ರ ಮಾರ್ಚ್‌ನಲ್ಲಿ ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್‌ ಮಿಷೆಲ್‌ ಬ್ಯಾಚಲೆಟ್‌ ಶ್ರೀಲಂಕಾದ ಮೇಲೆ ಸಾಧ್ಯವಾದಷ್ಟು ನಿರ್ಬಂಧಗಳನ್ನು ಹೇರುವಂತೆ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಲ್ಲಿ ಮನವಿ ಮಾಡಿದ್ದರು.

ಶ್ರೀಲಂಕಾದಲ್ಲಿ ದಿನೇ ದಿನೇ ಭಯೋತ್ಪಾದನಾ ನಿಷೇಧ ಕಾಯ್ದೆ ಅಡಿಯಲ್ಲಿ ಹೋರಾಟಗಾರರ ಮೇಲೆ, ತಮಿಳು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ. ಲೈಂಗಿಕ ದೌರ್ಜನ್ಯ, ಕಗ್ಗೊಲೆ ಮುಂತಾದ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಯ ವರದಿಗಳು ಶ್ರೀಲಂಕಾದಿಂದ ಬರುತ್ತಿವೆ. ಯುರೋಪಿಯನ್‌ ಯೂನಿಯನ್‌ ನಿರ್ಬಂಧದ ನಂತರ ವಿಶ್ವ ಸಂಸ್ಥೆ ಕೂಡ ಶ್ರೀಲಂಕಾದ ಮೇಲೆ ಇನ್ನಷ್ಟು ನಿರ್ಬಂಧಗಳನ್ನು ವಿಧಿಸುವ ಸಾಧ್ಯತೆಗಳಿವೆ.


ಇದನ್ನೂ ಓದಿ : ಸಂಚಾರ ನಿರ್ಬಂಧ ತೆರವಿಗೆ ಚೀನಾ ಜೊತೆ ಭಾರತ ಮಾತುಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...