Homeಅಂತರಾಷ್ಟ್ರೀಯಶ್ರೀಲಂಕಾ ಮೇಲೆ ವಾಣಿಜ್ಯ ನಿರ್ಬಂಧ ಹೇರಲು ಮುಂದಾದ ಯುರೋಪಿಯನ್‌ ಸಂಸತ್ತು

ಶ್ರೀಲಂಕಾ ಮೇಲೆ ವಾಣಿಜ್ಯ ನಿರ್ಬಂಧ ಹೇರಲು ಮುಂದಾದ ಯುರೋಪಿಯನ್‌ ಸಂಸತ್ತು

ಶ್ರೀಲಂಕಾ ದೇಶದಲ್ಲಿ ಹೆಚ್ಚಾಗಿ ತಮಿಳರನ್ನು ಬಂಧಿಸಲು, ಶಿಕ್ಷಿಸಲು ಬಳಕೆಯಾಗುವ ಪ್ರಿವೆನ್ಶನ್‌ ಆಫ್‌ ಟೆರರಿಸಮ್‌ ಆಕ್ಟ್‌ (PTA) ನ್ನು ವಜಾಗೊಳಿಸಲು ಯುರೋಪಿಯನ್‌ ಒತ್ತಡ ಹೇರಿದೆ.

- Advertisement -
- Advertisement -

ಶ್ರೀಲಂಕಾ ಸರ್ಕಾರದ ತಮಿಳರ ಮೇಲಿನ ಧೋರಣೆ ಇಡಿ ಜಗತ್ತಿಗೆ ತಿಳಿದಿರುವಂತದ್ದು. ಶ್ರೀಲಂಕಾ ಸರ್ಕಾರವೇ ಮುಂದೆ ನಿಂತು ಅಲ್ಲಿನ ತಮಿಳು ಭಾಷಿಕ ಜನಾಂಗದ ಮೇಲೆ ದೌರ್ಜನ್ಯ ನಡೆಸಿದ ಪರಿಣಾಮ ಇಂದು ಲಕ್ಷಾಂತರ ಜನ ಶ್ರೀಲಂಕನ್‌ ತಮಿಳರು ತಮ್ಮ ತಾಯ್ನಾಡು ತೊರೆದು ಭಾರತ, ಸಿಂಗಾಪುರ್‌, ಯುರೋಪ್‌, ಬ್ರಿಟನ್‌, ಚೀನಾಗಳಲ್ಲಿ ನಿರಾಶ್ರಿತರಾಗಿ ನೆಲೆಸಿದ್ದಾರೆ. ಶ್ರೀಲಂಕಾ ಸರ್ಕಾರ ತಮಿಳರ ಹಕ್ಕೊತ್ತಾಯದ ಪ್ರತಿಭಟನೆಗಳನ್ನು ಭಯೋತ್ಪಾದನೆಯಂತೆಯೇ ಕಾಣುತ್ತ ಬಂದಿದೆ. ಇದನ್ನು ಅಂತರಾಷ್ಟ್ರೀಯ ಸಮುದಾಯ, ವಿಶ್ವ ಸಂಸ್ಥೆ, ವಿಶ್ವ ಮಾನವ ಹಕ್ಕುಗಳ ಆಯೋಗಳು ಖಂಡಿಸುತ್ತಲೇ ಬಂದಿವೆ. ವಿಶ್ವ ಸಂಸ್ಥೆಯು ಶ್ರೀಲಂಕಾ ದೇಶದ ಮೇಲೆ ಹಲವು ನಿರ್ಬಂಧಗಳನ್ನು ಈಗಾಗಲೇ ವಿಧಿಸಿದೆ. ಈಗ ಯುರೋಪಿಯನ್‌ ಯೂನಿಯನ್‌ ಕೂಡ ವಿಶ್ವ ಸಂಸ್ಥೆಯ ಹಾದಿಯಲ್ಲಿಯೇ ಹೆಜ್ಜೆ ಹಾಕಿದೆ.

ನೆನ್ನೆ ಗುರುವಾರ ಜೂನ್‌ 10 ರಂದು ಯುರೋಪಿಯನ್‌ ಯೂನಿಯನ್‌ನ ಸಂಸತ್ತು ಹೊಸ ನಿರ್ಣಯ ಒಂದನ್ನು ಅಂಗೀಕರಿಸಿದೆ. ಶ್ರೀಲಂಕಾ ದೇಶದಲ್ಲಿ ಹೆಚ್ಚಾಗಿ ತಮಿಳರನ್ನು ಬಂಧಿಸಲು, ಶಿಕ್ಷಿಸಲು ಬಳಕೆಯಾಗುವ ಪ್ರಿವೆನ್ಶನ್‌ ಆಫ್‌ ಟೆರರಿಸಮ್‌ ಆಕ್ಟ್‌ (PTA) ನ್ನು ವಜಾಗೊಳಿಸಲು ಒತ್ತಡ ಹೇರುವಂತೆ ಯುರೋಪಿಯನ್‌ ಯೂನಿಯನ್‌ ಭಾರಿ ಬಹುಮತದಿಂದ ನಿರ್ಣಯ ಅಂಗೀಕರಿಸಿದೆ. ಯೂನಿಯನ್‌ ಸಂಸತ್‌ ನ 705 ಸದಸ್ಯರಲ್ಲಿ 628 ಸದಸ್ಯರು ನಿರ್ಣಯದ ಪರವಾಗಿ ಮತ ಚಲಾಯಿಸಿದ್ದಾರೆ.

ಇದನ್ನೂ ಓದಿ : ರೈತರ ಪ್ರತಿಭಟನೆಗೆ ಬೆದರಿದ ಹರಿಯಾಣ ಸಿಎಂ: ಆನ್‌ಲೈನ್‌ನಲ್ಲೇ ಕಾರ್ಯಕ್ರಮ ಉದ್ಘಾಟಿಸಲು ನಿರ್ಧಾರ

ಗುರುವಾರ ಯುರೋಪಿಯನ್‌ ಯೂನಿಯನ್‌ ಸ್ವೀಕರಿಸಿದ ಈ ರೆಸಲ್ಯೂಶನ್‌ನಲ್ಲಿ ಶ್ರೀಲಂಕಾದ ಮೇಲೆ ತಾತ್ಕಾಲಿಕ ವಾಣಿಜ್ಯ ನಿರ್ಬಂಧ ಹೇರುವುದು ಮುಖ್ಯವಾದ ಅಂಶವಾಗಿದೆ. ಶ್ರೀಲಂಕಾದ ಉತ್ಪನ್ನಗಳು ಯೂರೋಪಿನ ಮಾರುಕಟ್ಟೆಗೆ ಪ್ರವೇಶಿಸಿದಂತೆ ತಾತ್ಕಾಲಿಕ ನಿರ್ಬಂಧ ವಿಧಿಸಬೇಕು ಎಂದು ಯುರೋಪಿಯನ್‌ ಪಾರ್ಲಿಮೆಂಟ್ ತನ್ನ ಸದಸ್ಯ ರಾಷ್ಟ್ರಗಳಿಗೆ ತಿಳಿಸಿದೆ. ಶ್ರೀಲಂಕಾದ ಮುತ್ತು, ರತ್ನ, ರಬ್ಬರ್‌, ಸಾಂಬಾರು, ಚಹ ಉತ್ಪನ್ನಗಳಿಗೆ ಯುರೋಪನಲ್ಲಿ ಸಾಕಷ್ಟು ಬೇಡಿಕೆ ಇದೆ. ಈ ನಿರ್ಬಂಧ ಶ್ರೀಲಂಕಾದ ಆರ್ಥಿಕತೆ ಮತ್ತು ವಿದೇಶಿ ವಹಿವಾಟಿನ ಮೇಲೆ ತೀವ್ರ ಪರಿಣಾಮ ಬೀರಲಿದೆ.

ನಾವು ಶ್ರೀಲಂಕಾ ಸರ್ಕಾರ ತನ್ನ ಜನರಿಗೆ ನೀಡಿದ್ದ ಸಂವಿಧಾನಿಕ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿರುವುದನ್ನು ನೋಡುತ್ತಿದ್ದೇವೆ. ನಾವು ಶ್ರೀಲಂಕಾದ ಅಪಾರದರ್ಶಕ ನ್ಯಾಯ ನಿರ್ಣಯಗಳನ್ನು ನೋಡುತ್ತಿದ್ದೇವೆ. ನಿರ್ದಿಷ್ಟ ಸಮುದಾಯವನ್ನು ಶ್ರೀಲಂಕಾದಿಂದ ಹೊರಹಾಕುವ ಪ್ರಯತ್ನವನ್ನು ನೋಡುತ್ತಿದ್ದೇವೆ. ಶ್ರೀಲಂಕಾದಲ್ಲಿ ಪ್ರಿವೆನ್ಶನ್‌ ಆಫ್‌ ಟೆರರಿಸಮ್‌ ಕಾಯ್ದೆಯು ಹೋರಾಟಗಾರರು, ಬರಹಗಾರರನ್ನು ಮತ್ತು ವ್ಯವಸ್ಥೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸುವವರನ್ನು ದಮನಿಸಲು ಬಳಕೆಯಾಗುತ್ತಿರುವುದನ್ನು ನೋಡುತ್ತಿದ್ದೇವೆ ಎಂದು ಯುರೋಪಿನ್‌ ಕಮಿಷನರ್‌ ಹೆಲೇನಾ ಡಾಲಿ ಅವರು ತಿಳಿಸಿದ್ದಾರೆ.

ಶ್ರೀಲಂಕಾ

 

ಯುರೋಪಿಯನ್‌ ಯುನಿಯನ್‌ ಜಗತ್ತಿನ ಎಲ್ಲರ ಮಾನವ ಹಕ್ಕುಗಳನ್ನು ಬೆಂಬಲಿಸುತ್ತದೆ. ಶ್ರೀಲಂಕಾದಲ್ಲಿ ಭಯೋತ್ಪಾದನಾ ನಿಷೇಧ ಕಾಯ್ದೆಯಡಿ ಬಂಧಿಸಿದವರನ್ನು ಸರಿಯಾದ ರೀತಿಯಲ್ಲಿ ಕಾನೂನು ಪ್ರಕಾರ ವಿಚಾರಣೆ ನಡೆಸಬೇಕು. ಈ ಕ್ರೂರಿ ದಮನಕಾರಿ ಕಾನೂನು ವಜಾಗೊಳ್ಳಬೇಕೆಂದು ಯುರೋಪಿಯನ್‌ ಯೂನಿಯನ್‌ ಶ್ರೀಲಂಕಾದ ಮೇಲೆ ಒತ್ತಡವನ್ನು ಹೇರುತ್ತದೆ ಎಂದು ಹೆಲೇನಾ ಡಾಲಿ ತಿಳಿಸಿದ್ದಾರೆ.

ಶ್ರೀಲಂಕಾದಲ್ಲಿ ಸತತವಾಗಿ ನಡೆಯುತ್ತಿರುವ ಮಾನವ ಹಕ್ಕುಗಳ ಕಗ್ಗೊಲೆಯ ಕುರಿತು ಹೊಸ ರೆಸಲ್ಯೂಶನ್‌ನಲ್ಲಿ ಯುರೋಪಿಯನ್‌ ಸಂಸತ್ತು ತೀವ್ರ ಕಳವಳವನ್ನು ವ್ಯಕ್ತಪಡಿಸಿದೆ. ಜೊತೆಗೆ ಶ್ರೀಲಂಕಾ ಕುರಿತಾದ ವಿಶ್ವಸಂಸ್ಥೆಯ ವಿವಿಧ ವರದಿಗಳನ್ನೂ ಸಹ ರೆಸಲ್ಯೂಶನ್‌ನಲ್ಲಿ ಉಲ್ಲೇಖಿಸಲಾಗಿದೆ.

ಶ್ರೀಲಂಕಾಗೆ ಯುರೋಪ್‌ನಲ್ಲಿ ಕಲ್ಪಿಸಲಾಗಿದ್ದ ವಿಶೇಷ ತೆರಿಗೆ ಮತ್ತು ಆಮದು ಸುಂಕ ರಹಿತ ಮಾರುಕಟ್ಟೆ ಸೌಲಭ್ಯಕ್ಕೆ (GSP) ಯುರೋಪಿಯನ್‌ ಸಂಸತ್ತು ಅಂತ್ಯ ಹಾಡಿದೆ.

ಈ ಹಿಂದೆ 2021 ರ ಮಾರ್ಚ್‌ನಲ್ಲಿ ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್‌ ಮಿಷೆಲ್‌ ಬ್ಯಾಚಲೆಟ್‌ ಶ್ರೀಲಂಕಾದ ಮೇಲೆ ಸಾಧ್ಯವಾದಷ್ಟು ನಿರ್ಬಂಧಗಳನ್ನು ಹೇರುವಂತೆ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಲ್ಲಿ ಮನವಿ ಮಾಡಿದ್ದರು.

ಶ್ರೀಲಂಕಾದಲ್ಲಿ ದಿನೇ ದಿನೇ ಭಯೋತ್ಪಾದನಾ ನಿಷೇಧ ಕಾಯ್ದೆ ಅಡಿಯಲ್ಲಿ ಹೋರಾಟಗಾರರ ಮೇಲೆ, ತಮಿಳು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ. ಲೈಂಗಿಕ ದೌರ್ಜನ್ಯ, ಕಗ್ಗೊಲೆ ಮುಂತಾದ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಯ ವರದಿಗಳು ಶ್ರೀಲಂಕಾದಿಂದ ಬರುತ್ತಿವೆ. ಯುರೋಪಿಯನ್‌ ಯೂನಿಯನ್‌ ನಿರ್ಬಂಧದ ನಂತರ ವಿಶ್ವ ಸಂಸ್ಥೆ ಕೂಡ ಶ್ರೀಲಂಕಾದ ಮೇಲೆ ಇನ್ನಷ್ಟು ನಿರ್ಬಂಧಗಳನ್ನು ವಿಧಿಸುವ ಸಾಧ್ಯತೆಗಳಿವೆ.


ಇದನ್ನೂ ಓದಿ : ಸಂಚಾರ ನಿರ್ಬಂಧ ತೆರವಿಗೆ ಚೀನಾ ಜೊತೆ ಭಾರತ ಮಾತುಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...