Homeಕರ್ನಾಟಕಚುನಾವಣಾ ಫಲಿತಾಂಶ ಹೊರಬಿದ್ದು 24 ದಿನಗಳು ಕಳೆದರೂ ಪ್ರತಿಪಕ್ಷ ನಾಯಕನ ನೇಮಕ ಮಾಡದ ಬಿಜೆಪಿ

ಚುನಾವಣಾ ಫಲಿತಾಂಶ ಹೊರಬಿದ್ದು 24 ದಿನಗಳು ಕಳೆದರೂ ಪ್ರತಿಪಕ್ಷ ನಾಯಕನ ನೇಮಕ ಮಾಡದ ಬಿಜೆಪಿ

- Advertisement -
- Advertisement -

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದು 24 ದಿನಗಳು ಕಳೆದಿವೆ. ಕಾಂಗ್ರೆಸ್ ಪಕ್ಷ ಅತ್ಯಧಿಕ ಸ್ಥಾನ ಪಡೆದು ಸರ್ಕಾರ ಕೂಡ ರಚನೆ ಮಾಡಿದೆ. ಆದರೆ ಬಿಜೆಪಿಯು ರಾಜ್ಯದಲ್ಲಿ ಶಾಸಕಾಂಗ ಪಕ್ಷದ ನೂತನ ನಾಯಕನನ್ನು, ಅಂದರೆ ಪ್ರತಿಪಕ್ಷದ ನಾಯಕನನ್ನು ಇನ್ನೂ ಆಯ್ಕೆ ಮಾಡಿಲ್ಲ.

ಈ ವಿಚಾರವಾಗಿ ದೆಹಲಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮುಂದಿನ ಮೂರು ದಿನಗಳಲ್ಲಿ ಪಕ್ಷವು ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಮುಂದಿನ ಮೂರು ದಿನಗಳಲ್ಲಿ ಪ್ರತಿಪಕ್ಷ ನಾಯಕ ಸ್ಥಾನದ ಬಗ್ಗೆ ಪಕ್ಷವು ನಿರ್ಧಾರ ಕೈಗೊಳ್ಳಲಿದೆ” ಎಂದು ತಿಳಿಸಿದ್ದಾರೆ.

”ವಿರೋಧ ಪಕ್ಷದ ನಾಯಕರ ಆಯ್ಕೆ ಈಗಾಗಲೇ ನೇಮಿಸಿಬೇಕಿತ್ತು. ಆದರೆ ನಮ್ಮ ನಾಯಕರು ಒಡಿಶಾ ರೈಲು ಅಪಘಾತದ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ” ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ, ಸುನೀಲ್ ಕುಮಾರ್ ಹಾಗೂ ಅರವಿಂದ್ ಬೆಲ್ಲದ್ ಅವರ ಹೆಸರು ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಮುಂಚೂಣಿಯಲ್ಲಿವೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ನಮ್ಮ ಸಚಿವರಿವರು; ಕಾಂಗ್ರೆಸ್‌ ಪಕ್ಷದ ಕಟ್ಟಾಳು, ಛಲದಂಕಮಲ್ಲ ಆರ್.ಬಿ.ತಿಮ್ಮಾಪೂರಗೆ ಅಬಕಾರಿ ಖಾತೆ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಬದಲಾಯಿಸುವ ಮಾತುಗಳು ಕೇಳಿಬಂದಿವೆ. ಈಗಾಗಲೇ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಕಳೆದ ವರ್ಷ ಆಗಸ್ಟ್‌ನಲ್ಲಿ ಕೊನೆಗೊಂಡಿತ್ತು. ವಿಧಾನಸಭಾ ಚುನಾವಣೆಯ ಕಾರಣದಿಂದ ಅವಧಿಯನ್ನು ವಿಸ್ತರಿಸಲಾಗಿತ್ತು. ಇದೀಗ ಬಿಜೆಪಿಯ ಹೀನಾಯ ಸೋಲಿನ ನಂತರೆ ರಾಜ್ಯಾಧ್ಯಕ್ಷರನ್ನು ಬದಲಾಯಿಸುವ ಮಾತುಗಳು ಮುನ್ನೆಲೆಗೆ ಬಂದಿದೆ.

ಈ ಬಗ್ಗೆ ಮಾಧ್ಯಮದವರು ಜೋಶಿವರನ್ನು ಪ್ರಶ್ನಿಸಿದಾಗ, ”ಪಕ್ಷವು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಅಧಿಕಾರಾವಧಿ ಈಗಾಗಲೇ ಮುಗಿದಿದೆ ಮತ್ತು ಪಕ್ಷವು ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7ರಂದು ಬಜೆಟ್ ಅಧಿವೇಶನ ನಡೆಸುವ ಸಾಧ್ಯತೆ ಇದೆ. ಹಾಗಾಗಿ ಅದಕ್ಕೂ ಮುನ್ನವೇ ವಿರೋಧ ಪಕ್ಷದ ಸ್ಥಾನವಕ್ಕೆ ಸೂಕ್ತ ವ್ಯಕ್ತಿಯನ್ನು ಬಿಜೆಪಿ ನೇಮಿಸುವ ಸಾಧ್ಯತೆ ಇದೆ.

ವಿರೋಧ ಪಕ್ಷದ ನಾಯಕನನ್ನು ನೇಮಿಸಲು ಬಿಜೆಪಿ ವಿಳಂಬ ಮಾಡುತ್ತಿದ್ದರೂ ಪಕ್ಷದ ನಾಯಕರು ಮಾತ್ರ ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳ ಬೆನ್ನುಬಿದ್ದಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಸಚಿವ ಸಂಪುಟ ರಚನೆಯಾದ ಬಳಿಕ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಆದರೆ ಅದಕ್ಕೂ ಮುನ್ನ ಬಿಜೆಪಿ ನಾಯಕರು, ಯಾವಾಗ ಜಾರಿ ಮಾಡುತ್ತೀರಿ? ಬೇಗ ಜಾರಿ ಮಾಡದಿದ್ದರೆ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು.

ಬಿಜೆಪಿ ನಾಯಕರ ಹೇಳಿಕೆಗಳಿಗೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿ ಪ್ರತಿಪಕ್ಷದ ನಾಯಕನ ಆಯ್ಕೆಗೆ ಕೇಸರಿ ಪಕ್ಷವು ಏಕೆ ಇಷ್ಟು ಸಮಯ ತೆಗೆದುಕೊಳ್ಳುತ್ತಿದೆ? ಎಂದು ತಿರುಗೇಟು ನೀಡಿತ್ತು.

”ನಾವು ಗೆದ್ದೂ ಆಯ್ತು, ಸಿಎಂ, ಡಿಸಿಎಂ ಆಯ್ಕೆಯೂ ಆಯ್ತು, ಸಚಿವ ಸಂಪುಟವೂ ರೆಡಿ ಆಯ್ತು, ಸರ್ಕಾರದ ರಚನೆಯೂ ಆಯ್ತು. ಇದುವರೆಗೂ ನಮ್ಮ ಸರ್ಕಾರವನ್ನು ಎದುರಿಸಲು ಬಿಜೆಪಿಗೆ ಸಮರ್ಥ ವಿರೋಧ ಪಕ್ಷದ ನಾಯಕ ಸಿಗದಿರುವುದು ದುರಂತ!. ನೈತಿಕತೆ ಇರದಿದ್ದರೇನಂತೆ, ಕನಿಷ್ಠ ವಿರೋಧ ಪಕ್ಷದ ನಾಯಕನನ್ನು ಮುಂದಿಟ್ಟುಕೊಂಡಾದರು ಬಿಜೆಪಿ ನಮ್ಮನ್ನು ವಿರೋಧಿಸಲಿ!” ಎಂದು ಕಾಂಗ್ರೆಸ್ ತಿರುಗೇಟು ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...