Homeಕರ್ನಾಟಕಚುನಾವಣಾ ಫಲಿತಾಂಶ ಹೊರಬಿದ್ದು 24 ದಿನಗಳು ಕಳೆದರೂ ಪ್ರತಿಪಕ್ಷ ನಾಯಕನ ನೇಮಕ ಮಾಡದ ಬಿಜೆಪಿ

ಚುನಾವಣಾ ಫಲಿತಾಂಶ ಹೊರಬಿದ್ದು 24 ದಿನಗಳು ಕಳೆದರೂ ಪ್ರತಿಪಕ್ಷ ನಾಯಕನ ನೇಮಕ ಮಾಡದ ಬಿಜೆಪಿ

- Advertisement -
- Advertisement -

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದು 24 ದಿನಗಳು ಕಳೆದಿವೆ. ಕಾಂಗ್ರೆಸ್ ಪಕ್ಷ ಅತ್ಯಧಿಕ ಸ್ಥಾನ ಪಡೆದು ಸರ್ಕಾರ ಕೂಡ ರಚನೆ ಮಾಡಿದೆ. ಆದರೆ ಬಿಜೆಪಿಯು ರಾಜ್ಯದಲ್ಲಿ ಶಾಸಕಾಂಗ ಪಕ್ಷದ ನೂತನ ನಾಯಕನನ್ನು, ಅಂದರೆ ಪ್ರತಿಪಕ್ಷದ ನಾಯಕನನ್ನು ಇನ್ನೂ ಆಯ್ಕೆ ಮಾಡಿಲ್ಲ.

ಈ ವಿಚಾರವಾಗಿ ದೆಹಲಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮುಂದಿನ ಮೂರು ದಿನಗಳಲ್ಲಿ ಪಕ್ಷವು ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಮುಂದಿನ ಮೂರು ದಿನಗಳಲ್ಲಿ ಪ್ರತಿಪಕ್ಷ ನಾಯಕ ಸ್ಥಾನದ ಬಗ್ಗೆ ಪಕ್ಷವು ನಿರ್ಧಾರ ಕೈಗೊಳ್ಳಲಿದೆ” ಎಂದು ತಿಳಿಸಿದ್ದಾರೆ.

”ವಿರೋಧ ಪಕ್ಷದ ನಾಯಕರ ಆಯ್ಕೆ ಈಗಾಗಲೇ ನೇಮಿಸಿಬೇಕಿತ್ತು. ಆದರೆ ನಮ್ಮ ನಾಯಕರು ಒಡಿಶಾ ರೈಲು ಅಪಘಾತದ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ” ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ, ಸುನೀಲ್ ಕುಮಾರ್ ಹಾಗೂ ಅರವಿಂದ್ ಬೆಲ್ಲದ್ ಅವರ ಹೆಸರು ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಮುಂಚೂಣಿಯಲ್ಲಿವೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ನಮ್ಮ ಸಚಿವರಿವರು; ಕಾಂಗ್ರೆಸ್‌ ಪಕ್ಷದ ಕಟ್ಟಾಳು, ಛಲದಂಕಮಲ್ಲ ಆರ್.ಬಿ.ತಿಮ್ಮಾಪೂರಗೆ ಅಬಕಾರಿ ಖಾತೆ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಬದಲಾಯಿಸುವ ಮಾತುಗಳು ಕೇಳಿಬಂದಿವೆ. ಈಗಾಗಲೇ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಕಳೆದ ವರ್ಷ ಆಗಸ್ಟ್‌ನಲ್ಲಿ ಕೊನೆಗೊಂಡಿತ್ತು. ವಿಧಾನಸಭಾ ಚುನಾವಣೆಯ ಕಾರಣದಿಂದ ಅವಧಿಯನ್ನು ವಿಸ್ತರಿಸಲಾಗಿತ್ತು. ಇದೀಗ ಬಿಜೆಪಿಯ ಹೀನಾಯ ಸೋಲಿನ ನಂತರೆ ರಾಜ್ಯಾಧ್ಯಕ್ಷರನ್ನು ಬದಲಾಯಿಸುವ ಮಾತುಗಳು ಮುನ್ನೆಲೆಗೆ ಬಂದಿದೆ.

ಈ ಬಗ್ಗೆ ಮಾಧ್ಯಮದವರು ಜೋಶಿವರನ್ನು ಪ್ರಶ್ನಿಸಿದಾಗ, ”ಪಕ್ಷವು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಅಧಿಕಾರಾವಧಿ ಈಗಾಗಲೇ ಮುಗಿದಿದೆ ಮತ್ತು ಪಕ್ಷವು ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7ರಂದು ಬಜೆಟ್ ಅಧಿವೇಶನ ನಡೆಸುವ ಸಾಧ್ಯತೆ ಇದೆ. ಹಾಗಾಗಿ ಅದಕ್ಕೂ ಮುನ್ನವೇ ವಿರೋಧ ಪಕ್ಷದ ಸ್ಥಾನವಕ್ಕೆ ಸೂಕ್ತ ವ್ಯಕ್ತಿಯನ್ನು ಬಿಜೆಪಿ ನೇಮಿಸುವ ಸಾಧ್ಯತೆ ಇದೆ.

ವಿರೋಧ ಪಕ್ಷದ ನಾಯಕನನ್ನು ನೇಮಿಸಲು ಬಿಜೆಪಿ ವಿಳಂಬ ಮಾಡುತ್ತಿದ್ದರೂ ಪಕ್ಷದ ನಾಯಕರು ಮಾತ್ರ ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳ ಬೆನ್ನುಬಿದ್ದಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಸಚಿವ ಸಂಪುಟ ರಚನೆಯಾದ ಬಳಿಕ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಆದರೆ ಅದಕ್ಕೂ ಮುನ್ನ ಬಿಜೆಪಿ ನಾಯಕರು, ಯಾವಾಗ ಜಾರಿ ಮಾಡುತ್ತೀರಿ? ಬೇಗ ಜಾರಿ ಮಾಡದಿದ್ದರೆ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು.

ಬಿಜೆಪಿ ನಾಯಕರ ಹೇಳಿಕೆಗಳಿಗೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿ ಪ್ರತಿಪಕ್ಷದ ನಾಯಕನ ಆಯ್ಕೆಗೆ ಕೇಸರಿ ಪಕ್ಷವು ಏಕೆ ಇಷ್ಟು ಸಮಯ ತೆಗೆದುಕೊಳ್ಳುತ್ತಿದೆ? ಎಂದು ತಿರುಗೇಟು ನೀಡಿತ್ತು.

”ನಾವು ಗೆದ್ದೂ ಆಯ್ತು, ಸಿಎಂ, ಡಿಸಿಎಂ ಆಯ್ಕೆಯೂ ಆಯ್ತು, ಸಚಿವ ಸಂಪುಟವೂ ರೆಡಿ ಆಯ್ತು, ಸರ್ಕಾರದ ರಚನೆಯೂ ಆಯ್ತು. ಇದುವರೆಗೂ ನಮ್ಮ ಸರ್ಕಾರವನ್ನು ಎದುರಿಸಲು ಬಿಜೆಪಿಗೆ ಸಮರ್ಥ ವಿರೋಧ ಪಕ್ಷದ ನಾಯಕ ಸಿಗದಿರುವುದು ದುರಂತ!. ನೈತಿಕತೆ ಇರದಿದ್ದರೇನಂತೆ, ಕನಿಷ್ಠ ವಿರೋಧ ಪಕ್ಷದ ನಾಯಕನನ್ನು ಮುಂದಿಟ್ಟುಕೊಂಡಾದರು ಬಿಜೆಪಿ ನಮ್ಮನ್ನು ವಿರೋಧಿಸಲಿ!” ಎಂದು ಕಾಂಗ್ರೆಸ್ ತಿರುಗೇಟು ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...