Homeಕರ್ನಾಟಕಚುನಾವಣಾ ಫಲಿತಾಂಶ ಹೊರಬಿದ್ದು 24 ದಿನಗಳು ಕಳೆದರೂ ಪ್ರತಿಪಕ್ಷ ನಾಯಕನ ನೇಮಕ ಮಾಡದ ಬಿಜೆಪಿ

ಚುನಾವಣಾ ಫಲಿತಾಂಶ ಹೊರಬಿದ್ದು 24 ದಿನಗಳು ಕಳೆದರೂ ಪ್ರತಿಪಕ್ಷ ನಾಯಕನ ನೇಮಕ ಮಾಡದ ಬಿಜೆಪಿ

- Advertisement -
- Advertisement -

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದು 24 ದಿನಗಳು ಕಳೆದಿವೆ. ಕಾಂಗ್ರೆಸ್ ಪಕ್ಷ ಅತ್ಯಧಿಕ ಸ್ಥಾನ ಪಡೆದು ಸರ್ಕಾರ ಕೂಡ ರಚನೆ ಮಾಡಿದೆ. ಆದರೆ ಬಿಜೆಪಿಯು ರಾಜ್ಯದಲ್ಲಿ ಶಾಸಕಾಂಗ ಪಕ್ಷದ ನೂತನ ನಾಯಕನನ್ನು, ಅಂದರೆ ಪ್ರತಿಪಕ್ಷದ ನಾಯಕನನ್ನು ಇನ್ನೂ ಆಯ್ಕೆ ಮಾಡಿಲ್ಲ.

ಈ ವಿಚಾರವಾಗಿ ದೆಹಲಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮುಂದಿನ ಮೂರು ದಿನಗಳಲ್ಲಿ ಪಕ್ಷವು ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಮುಂದಿನ ಮೂರು ದಿನಗಳಲ್ಲಿ ಪ್ರತಿಪಕ್ಷ ನಾಯಕ ಸ್ಥಾನದ ಬಗ್ಗೆ ಪಕ್ಷವು ನಿರ್ಧಾರ ಕೈಗೊಳ್ಳಲಿದೆ” ಎಂದು ತಿಳಿಸಿದ್ದಾರೆ.

”ವಿರೋಧ ಪಕ್ಷದ ನಾಯಕರ ಆಯ್ಕೆ ಈಗಾಗಲೇ ನೇಮಿಸಿಬೇಕಿತ್ತು. ಆದರೆ ನಮ್ಮ ನಾಯಕರು ಒಡಿಶಾ ರೈಲು ಅಪಘಾತದ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ” ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ, ಸುನೀಲ್ ಕುಮಾರ್ ಹಾಗೂ ಅರವಿಂದ್ ಬೆಲ್ಲದ್ ಅವರ ಹೆಸರು ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಮುಂಚೂಣಿಯಲ್ಲಿವೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ನಮ್ಮ ಸಚಿವರಿವರು; ಕಾಂಗ್ರೆಸ್‌ ಪಕ್ಷದ ಕಟ್ಟಾಳು, ಛಲದಂಕಮಲ್ಲ ಆರ್.ಬಿ.ತಿಮ್ಮಾಪೂರಗೆ ಅಬಕಾರಿ ಖಾತೆ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಬದಲಾಯಿಸುವ ಮಾತುಗಳು ಕೇಳಿಬಂದಿವೆ. ಈಗಾಗಲೇ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಕಳೆದ ವರ್ಷ ಆಗಸ್ಟ್‌ನಲ್ಲಿ ಕೊನೆಗೊಂಡಿತ್ತು. ವಿಧಾನಸಭಾ ಚುನಾವಣೆಯ ಕಾರಣದಿಂದ ಅವಧಿಯನ್ನು ವಿಸ್ತರಿಸಲಾಗಿತ್ತು. ಇದೀಗ ಬಿಜೆಪಿಯ ಹೀನಾಯ ಸೋಲಿನ ನಂತರೆ ರಾಜ್ಯಾಧ್ಯಕ್ಷರನ್ನು ಬದಲಾಯಿಸುವ ಮಾತುಗಳು ಮುನ್ನೆಲೆಗೆ ಬಂದಿದೆ.

ಈ ಬಗ್ಗೆ ಮಾಧ್ಯಮದವರು ಜೋಶಿವರನ್ನು ಪ್ರಶ್ನಿಸಿದಾಗ, ”ಪಕ್ಷವು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಅಧಿಕಾರಾವಧಿ ಈಗಾಗಲೇ ಮುಗಿದಿದೆ ಮತ್ತು ಪಕ್ಷವು ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7ರಂದು ಬಜೆಟ್ ಅಧಿವೇಶನ ನಡೆಸುವ ಸಾಧ್ಯತೆ ಇದೆ. ಹಾಗಾಗಿ ಅದಕ್ಕೂ ಮುನ್ನವೇ ವಿರೋಧ ಪಕ್ಷದ ಸ್ಥಾನವಕ್ಕೆ ಸೂಕ್ತ ವ್ಯಕ್ತಿಯನ್ನು ಬಿಜೆಪಿ ನೇಮಿಸುವ ಸಾಧ್ಯತೆ ಇದೆ.

ವಿರೋಧ ಪಕ್ಷದ ನಾಯಕನನ್ನು ನೇಮಿಸಲು ಬಿಜೆಪಿ ವಿಳಂಬ ಮಾಡುತ್ತಿದ್ದರೂ ಪಕ್ಷದ ನಾಯಕರು ಮಾತ್ರ ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳ ಬೆನ್ನುಬಿದ್ದಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಸಚಿವ ಸಂಪುಟ ರಚನೆಯಾದ ಬಳಿಕ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಆದರೆ ಅದಕ್ಕೂ ಮುನ್ನ ಬಿಜೆಪಿ ನಾಯಕರು, ಯಾವಾಗ ಜಾರಿ ಮಾಡುತ್ತೀರಿ? ಬೇಗ ಜಾರಿ ಮಾಡದಿದ್ದರೆ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು.

ಬಿಜೆಪಿ ನಾಯಕರ ಹೇಳಿಕೆಗಳಿಗೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿ ಪ್ರತಿಪಕ್ಷದ ನಾಯಕನ ಆಯ್ಕೆಗೆ ಕೇಸರಿ ಪಕ್ಷವು ಏಕೆ ಇಷ್ಟು ಸಮಯ ತೆಗೆದುಕೊಳ್ಳುತ್ತಿದೆ? ಎಂದು ತಿರುಗೇಟು ನೀಡಿತ್ತು.

”ನಾವು ಗೆದ್ದೂ ಆಯ್ತು, ಸಿಎಂ, ಡಿಸಿಎಂ ಆಯ್ಕೆಯೂ ಆಯ್ತು, ಸಚಿವ ಸಂಪುಟವೂ ರೆಡಿ ಆಯ್ತು, ಸರ್ಕಾರದ ರಚನೆಯೂ ಆಯ್ತು. ಇದುವರೆಗೂ ನಮ್ಮ ಸರ್ಕಾರವನ್ನು ಎದುರಿಸಲು ಬಿಜೆಪಿಗೆ ಸಮರ್ಥ ವಿರೋಧ ಪಕ್ಷದ ನಾಯಕ ಸಿಗದಿರುವುದು ದುರಂತ!. ನೈತಿಕತೆ ಇರದಿದ್ದರೇನಂತೆ, ಕನಿಷ್ಠ ವಿರೋಧ ಪಕ್ಷದ ನಾಯಕನನ್ನು ಮುಂದಿಟ್ಟುಕೊಂಡಾದರು ಬಿಜೆಪಿ ನಮ್ಮನ್ನು ವಿರೋಧಿಸಲಿ!” ಎಂದು ಕಾಂಗ್ರೆಸ್ ತಿರುಗೇಟು ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...