Homeಕರ್ನಾಟಕಚುನಾವಣಾ ಫಲಿತಾಂಶ ಹೊರಬಿದ್ದು 24 ದಿನಗಳು ಕಳೆದರೂ ಪ್ರತಿಪಕ್ಷ ನಾಯಕನ ನೇಮಕ ಮಾಡದ ಬಿಜೆಪಿ

ಚುನಾವಣಾ ಫಲಿತಾಂಶ ಹೊರಬಿದ್ದು 24 ದಿನಗಳು ಕಳೆದರೂ ಪ್ರತಿಪಕ್ಷ ನಾಯಕನ ನೇಮಕ ಮಾಡದ ಬಿಜೆಪಿ

- Advertisement -
- Advertisement -

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದು 24 ದಿನಗಳು ಕಳೆದಿವೆ. ಕಾಂಗ್ರೆಸ್ ಪಕ್ಷ ಅತ್ಯಧಿಕ ಸ್ಥಾನ ಪಡೆದು ಸರ್ಕಾರ ಕೂಡ ರಚನೆ ಮಾಡಿದೆ. ಆದರೆ ಬಿಜೆಪಿಯು ರಾಜ್ಯದಲ್ಲಿ ಶಾಸಕಾಂಗ ಪಕ್ಷದ ನೂತನ ನಾಯಕನನ್ನು, ಅಂದರೆ ಪ್ರತಿಪಕ್ಷದ ನಾಯಕನನ್ನು ಇನ್ನೂ ಆಯ್ಕೆ ಮಾಡಿಲ್ಲ.

ಈ ವಿಚಾರವಾಗಿ ದೆಹಲಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮುಂದಿನ ಮೂರು ದಿನಗಳಲ್ಲಿ ಪಕ್ಷವು ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಮುಂದಿನ ಮೂರು ದಿನಗಳಲ್ಲಿ ಪ್ರತಿಪಕ್ಷ ನಾಯಕ ಸ್ಥಾನದ ಬಗ್ಗೆ ಪಕ್ಷವು ನಿರ್ಧಾರ ಕೈಗೊಳ್ಳಲಿದೆ” ಎಂದು ತಿಳಿಸಿದ್ದಾರೆ.

”ವಿರೋಧ ಪಕ್ಷದ ನಾಯಕರ ಆಯ್ಕೆ ಈಗಾಗಲೇ ನೇಮಿಸಿಬೇಕಿತ್ತು. ಆದರೆ ನಮ್ಮ ನಾಯಕರು ಒಡಿಶಾ ರೈಲು ಅಪಘಾತದ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ” ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ, ಸುನೀಲ್ ಕುಮಾರ್ ಹಾಗೂ ಅರವಿಂದ್ ಬೆಲ್ಲದ್ ಅವರ ಹೆಸರು ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಮುಂಚೂಣಿಯಲ್ಲಿವೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ನಮ್ಮ ಸಚಿವರಿವರು; ಕಾಂಗ್ರೆಸ್‌ ಪಕ್ಷದ ಕಟ್ಟಾಳು, ಛಲದಂಕಮಲ್ಲ ಆರ್.ಬಿ.ತಿಮ್ಮಾಪೂರಗೆ ಅಬಕಾರಿ ಖಾತೆ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಬದಲಾಯಿಸುವ ಮಾತುಗಳು ಕೇಳಿಬಂದಿವೆ. ಈಗಾಗಲೇ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಕಳೆದ ವರ್ಷ ಆಗಸ್ಟ್‌ನಲ್ಲಿ ಕೊನೆಗೊಂಡಿತ್ತು. ವಿಧಾನಸಭಾ ಚುನಾವಣೆಯ ಕಾರಣದಿಂದ ಅವಧಿಯನ್ನು ವಿಸ್ತರಿಸಲಾಗಿತ್ತು. ಇದೀಗ ಬಿಜೆಪಿಯ ಹೀನಾಯ ಸೋಲಿನ ನಂತರೆ ರಾಜ್ಯಾಧ್ಯಕ್ಷರನ್ನು ಬದಲಾಯಿಸುವ ಮಾತುಗಳು ಮುನ್ನೆಲೆಗೆ ಬಂದಿದೆ.

ಈ ಬಗ್ಗೆ ಮಾಧ್ಯಮದವರು ಜೋಶಿವರನ್ನು ಪ್ರಶ್ನಿಸಿದಾಗ, ”ಪಕ್ಷವು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಅಧಿಕಾರಾವಧಿ ಈಗಾಗಲೇ ಮುಗಿದಿದೆ ಮತ್ತು ಪಕ್ಷವು ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7ರಂದು ಬಜೆಟ್ ಅಧಿವೇಶನ ನಡೆಸುವ ಸಾಧ್ಯತೆ ಇದೆ. ಹಾಗಾಗಿ ಅದಕ್ಕೂ ಮುನ್ನವೇ ವಿರೋಧ ಪಕ್ಷದ ಸ್ಥಾನವಕ್ಕೆ ಸೂಕ್ತ ವ್ಯಕ್ತಿಯನ್ನು ಬಿಜೆಪಿ ನೇಮಿಸುವ ಸಾಧ್ಯತೆ ಇದೆ.

ವಿರೋಧ ಪಕ್ಷದ ನಾಯಕನನ್ನು ನೇಮಿಸಲು ಬಿಜೆಪಿ ವಿಳಂಬ ಮಾಡುತ್ತಿದ್ದರೂ ಪಕ್ಷದ ನಾಯಕರು ಮಾತ್ರ ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳ ಬೆನ್ನುಬಿದ್ದಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಸಚಿವ ಸಂಪುಟ ರಚನೆಯಾದ ಬಳಿಕ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಆದರೆ ಅದಕ್ಕೂ ಮುನ್ನ ಬಿಜೆಪಿ ನಾಯಕರು, ಯಾವಾಗ ಜಾರಿ ಮಾಡುತ್ತೀರಿ? ಬೇಗ ಜಾರಿ ಮಾಡದಿದ್ದರೆ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು.

ಬಿಜೆಪಿ ನಾಯಕರ ಹೇಳಿಕೆಗಳಿಗೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿ ಪ್ರತಿಪಕ್ಷದ ನಾಯಕನ ಆಯ್ಕೆಗೆ ಕೇಸರಿ ಪಕ್ಷವು ಏಕೆ ಇಷ್ಟು ಸಮಯ ತೆಗೆದುಕೊಳ್ಳುತ್ತಿದೆ? ಎಂದು ತಿರುಗೇಟು ನೀಡಿತ್ತು.

”ನಾವು ಗೆದ್ದೂ ಆಯ್ತು, ಸಿಎಂ, ಡಿಸಿಎಂ ಆಯ್ಕೆಯೂ ಆಯ್ತು, ಸಚಿವ ಸಂಪುಟವೂ ರೆಡಿ ಆಯ್ತು, ಸರ್ಕಾರದ ರಚನೆಯೂ ಆಯ್ತು. ಇದುವರೆಗೂ ನಮ್ಮ ಸರ್ಕಾರವನ್ನು ಎದುರಿಸಲು ಬಿಜೆಪಿಗೆ ಸಮರ್ಥ ವಿರೋಧ ಪಕ್ಷದ ನಾಯಕ ಸಿಗದಿರುವುದು ದುರಂತ!. ನೈತಿಕತೆ ಇರದಿದ್ದರೇನಂತೆ, ಕನಿಷ್ಠ ವಿರೋಧ ಪಕ್ಷದ ನಾಯಕನನ್ನು ಮುಂದಿಟ್ಟುಕೊಂಡಾದರು ಬಿಜೆಪಿ ನಮ್ಮನ್ನು ವಿರೋಧಿಸಲಿ!” ಎಂದು ಕಾಂಗ್ರೆಸ್ ತಿರುಗೇಟು ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...