Homeಕರ್ನಾಟಕಚುನಾವಣಾ ಫಲಿತಾಂಶ ಹೊರಬಿದ್ದು 24 ದಿನಗಳು ಕಳೆದರೂ ಪ್ರತಿಪಕ್ಷ ನಾಯಕನ ನೇಮಕ ಮಾಡದ ಬಿಜೆಪಿ

ಚುನಾವಣಾ ಫಲಿತಾಂಶ ಹೊರಬಿದ್ದು 24 ದಿನಗಳು ಕಳೆದರೂ ಪ್ರತಿಪಕ್ಷ ನಾಯಕನ ನೇಮಕ ಮಾಡದ ಬಿಜೆಪಿ

- Advertisement -
- Advertisement -

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದು 24 ದಿನಗಳು ಕಳೆದಿವೆ. ಕಾಂಗ್ರೆಸ್ ಪಕ್ಷ ಅತ್ಯಧಿಕ ಸ್ಥಾನ ಪಡೆದು ಸರ್ಕಾರ ಕೂಡ ರಚನೆ ಮಾಡಿದೆ. ಆದರೆ ಬಿಜೆಪಿಯು ರಾಜ್ಯದಲ್ಲಿ ಶಾಸಕಾಂಗ ಪಕ್ಷದ ನೂತನ ನಾಯಕನನ್ನು, ಅಂದರೆ ಪ್ರತಿಪಕ್ಷದ ನಾಯಕನನ್ನು ಇನ್ನೂ ಆಯ್ಕೆ ಮಾಡಿಲ್ಲ.

ಈ ವಿಚಾರವಾಗಿ ದೆಹಲಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮುಂದಿನ ಮೂರು ದಿನಗಳಲ್ಲಿ ಪಕ್ಷವು ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಮುಂದಿನ ಮೂರು ದಿನಗಳಲ್ಲಿ ಪ್ರತಿಪಕ್ಷ ನಾಯಕ ಸ್ಥಾನದ ಬಗ್ಗೆ ಪಕ್ಷವು ನಿರ್ಧಾರ ಕೈಗೊಳ್ಳಲಿದೆ” ಎಂದು ತಿಳಿಸಿದ್ದಾರೆ.

”ವಿರೋಧ ಪಕ್ಷದ ನಾಯಕರ ಆಯ್ಕೆ ಈಗಾಗಲೇ ನೇಮಿಸಿಬೇಕಿತ್ತು. ಆದರೆ ನಮ್ಮ ನಾಯಕರು ಒಡಿಶಾ ರೈಲು ಅಪಘಾತದ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ” ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ, ಸುನೀಲ್ ಕುಮಾರ್ ಹಾಗೂ ಅರವಿಂದ್ ಬೆಲ್ಲದ್ ಅವರ ಹೆಸರು ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಮುಂಚೂಣಿಯಲ್ಲಿವೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ನಮ್ಮ ಸಚಿವರಿವರು; ಕಾಂಗ್ರೆಸ್‌ ಪಕ್ಷದ ಕಟ್ಟಾಳು, ಛಲದಂಕಮಲ್ಲ ಆರ್.ಬಿ.ತಿಮ್ಮಾಪೂರಗೆ ಅಬಕಾರಿ ಖಾತೆ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಬದಲಾಯಿಸುವ ಮಾತುಗಳು ಕೇಳಿಬಂದಿವೆ. ಈಗಾಗಲೇ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಕಳೆದ ವರ್ಷ ಆಗಸ್ಟ್‌ನಲ್ಲಿ ಕೊನೆಗೊಂಡಿತ್ತು. ವಿಧಾನಸಭಾ ಚುನಾವಣೆಯ ಕಾರಣದಿಂದ ಅವಧಿಯನ್ನು ವಿಸ್ತರಿಸಲಾಗಿತ್ತು. ಇದೀಗ ಬಿಜೆಪಿಯ ಹೀನಾಯ ಸೋಲಿನ ನಂತರೆ ರಾಜ್ಯಾಧ್ಯಕ್ಷರನ್ನು ಬದಲಾಯಿಸುವ ಮಾತುಗಳು ಮುನ್ನೆಲೆಗೆ ಬಂದಿದೆ.

ಈ ಬಗ್ಗೆ ಮಾಧ್ಯಮದವರು ಜೋಶಿವರನ್ನು ಪ್ರಶ್ನಿಸಿದಾಗ, ”ಪಕ್ಷವು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಅಧಿಕಾರಾವಧಿ ಈಗಾಗಲೇ ಮುಗಿದಿದೆ ಮತ್ತು ಪಕ್ಷವು ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7ರಂದು ಬಜೆಟ್ ಅಧಿವೇಶನ ನಡೆಸುವ ಸಾಧ್ಯತೆ ಇದೆ. ಹಾಗಾಗಿ ಅದಕ್ಕೂ ಮುನ್ನವೇ ವಿರೋಧ ಪಕ್ಷದ ಸ್ಥಾನವಕ್ಕೆ ಸೂಕ್ತ ವ್ಯಕ್ತಿಯನ್ನು ಬಿಜೆಪಿ ನೇಮಿಸುವ ಸಾಧ್ಯತೆ ಇದೆ.

ವಿರೋಧ ಪಕ್ಷದ ನಾಯಕನನ್ನು ನೇಮಿಸಲು ಬಿಜೆಪಿ ವಿಳಂಬ ಮಾಡುತ್ತಿದ್ದರೂ ಪಕ್ಷದ ನಾಯಕರು ಮಾತ್ರ ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳ ಬೆನ್ನುಬಿದ್ದಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಸಚಿವ ಸಂಪುಟ ರಚನೆಯಾದ ಬಳಿಕ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಆದರೆ ಅದಕ್ಕೂ ಮುನ್ನ ಬಿಜೆಪಿ ನಾಯಕರು, ಯಾವಾಗ ಜಾರಿ ಮಾಡುತ್ತೀರಿ? ಬೇಗ ಜಾರಿ ಮಾಡದಿದ್ದರೆ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು.

ಬಿಜೆಪಿ ನಾಯಕರ ಹೇಳಿಕೆಗಳಿಗೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿ ಪ್ರತಿಪಕ್ಷದ ನಾಯಕನ ಆಯ್ಕೆಗೆ ಕೇಸರಿ ಪಕ್ಷವು ಏಕೆ ಇಷ್ಟು ಸಮಯ ತೆಗೆದುಕೊಳ್ಳುತ್ತಿದೆ? ಎಂದು ತಿರುಗೇಟು ನೀಡಿತ್ತು.

”ನಾವು ಗೆದ್ದೂ ಆಯ್ತು, ಸಿಎಂ, ಡಿಸಿಎಂ ಆಯ್ಕೆಯೂ ಆಯ್ತು, ಸಚಿವ ಸಂಪುಟವೂ ರೆಡಿ ಆಯ್ತು, ಸರ್ಕಾರದ ರಚನೆಯೂ ಆಯ್ತು. ಇದುವರೆಗೂ ನಮ್ಮ ಸರ್ಕಾರವನ್ನು ಎದುರಿಸಲು ಬಿಜೆಪಿಗೆ ಸಮರ್ಥ ವಿರೋಧ ಪಕ್ಷದ ನಾಯಕ ಸಿಗದಿರುವುದು ದುರಂತ!. ನೈತಿಕತೆ ಇರದಿದ್ದರೇನಂತೆ, ಕನಿಷ್ಠ ವಿರೋಧ ಪಕ್ಷದ ನಾಯಕನನ್ನು ಮುಂದಿಟ್ಟುಕೊಂಡಾದರು ಬಿಜೆಪಿ ನಮ್ಮನ್ನು ವಿರೋಧಿಸಲಿ!” ಎಂದು ಕಾಂಗ್ರೆಸ್ ತಿರುಗೇಟು ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...