HomeUncategorizedಅಂಬೇಡ್ಕರ್‌ ಈಗ ಇದ್ದಿದ್ದರೆ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

ಅಂಬೇಡ್ಕರ್‌ ಈಗ ಇದ್ದಿದ್ದರೆ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

- Advertisement -
- Advertisement -

ಭಾರತೀಯ ಸಂವಿಧಾನದ ಪಿತಾಮಹ ಡಾ.ಬಿ.ಆರ್. ಅಂಬೇಡ್ಕರ್ ಜೀವಂತವಾಗಿ ಇದ್ದಿದ್ದರೇ ಅವರನ್ನೂ ಪಾಕಿಸ್ತಾನ ಪರ ಎಂದು ಬಿಜೆಪಿ ದೂಷಿಸುತ್ತಿತ್ತು ಎಂದು ಪಿಡಿಪಿ ಅಧ್ಯಕ್ಷ ಮೆಹಬೂಬಾ ಮುಫ್ತಿ ಭಾನುವಾರ ಹೇಳಿದ್ದಾರೆ.

ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದ 370 ನೇ ವಿಧಿಯಲ್ಲಿ ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಲಾಗಿತ್ತು. ಆದರೆ ಕೇಂದ್ರ ಸರ್ಕಾರ ಅದನ್ನು ತೆಗೆದುಹಾಕಿದೆ ಎಂದು ಹೇಳಿದ್ದಾರೆ. 2019 ರಲ್ಲಿ ಕೇಂದ್ರವು ಕಾಶ್ಮೀರರಕ್ಕಿದ್ದ ವಿಶೇಷ ಸ್ಥಾನಮಾನವನ್ನು ತೆಗೆದು ಹಾಕಿದೆ.

ತಮ್ಮ ಪಕ್ಷ ಅಧಿಕಾರಕ್ಕೆ ಮರಳಿದರೆ ಆರ್ಟಿಕಲ್ 370 ರದ್ದತಿ ಮತ್ತು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನದ ಬಗ್ಗೆ ಮತ್ತೊಮ್ಮೆ ಚಿಂತಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದು ಬಿಜೆಪಿ ವಲಯದಲ್ಲಿ ಭಾರಿ ಟೀಕೆಗೆ ಕಾರಣವಾಗಿತ್ತು.

ಇದನ್ನೂ ಓದಿ: ಗೋಹತ್ಯೆ ತಡೆ ಕಾನೂನಿನ ದುರ್ಬಳಕೆ: ಪೊಲೀಸರ ವಿರುದ್ಧ ಅಲಹಾಬಾದ್ ಹೈಕೋರ್ಟ್ ಗರಂ

ದಿಗ್ವಿಜಯ್ ಸಿಂಗ್ ಅವರ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷವು ಪಾಕಿಸ್ತಾನದ ಕೈಗೊಂಬೆಯಾಗಿ ವರ್ತಿಸುತ್ತಿರುವುದಕ್ಕೆ ಸಾಕ್ಷಿ ಎಂದು ಬಿಜೆಪಿ ಹೇಳಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ವಲ್ಪ ಕಾಲ ಬಿಜೆಪಿ ಮಿತ್ರರಾಗಿದ್ದ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಬಿಜೆಪಿಯನ್ನು ಟೀಕಿಸಿದರು.

“ದೇವರಿಗೆ ಧನ್ಯವಾದಗಳು ಅಂಬೇಡ್ಕರ್ ಜೀ ಜೀವಂತವಾಗಿಲ್ಲ, ಇಲ್ಲದಿದ್ದರೆ ಅವರನ್ನೂ ಬಿಜೆಪಿ ಪಾಕಿಸ್ತಾನ ಪರ ಎಂದು ದೂಷಿಸುತ್ತಿತ್ತು” ಎಂದು ಅವರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಕ್ಲಬ್‌ಹೌಸ್ ಸಂಭಾಷಣೆಯ ಸಂದರ್ಭದಲ್ಲಿ ಸಿಂಗ್ ಈ ಹೇಳಿಕೆ ನೀಡಿದ್ದು, ಆ ವ್ಯಕ್ತಿಯನ್ನು ಪಾಕಿಸ್ತಾನ ಮೂಲದ ಪತ್ರಕರ್ತ ಎಂದು ಬಿಜೆಪಿ ಹೇಳಿದೆ.

“ಆರ್ಟಿಕಲ್ 370 ಅನ್ನು ಹಿಂತೆಗೆದುಕೊಳ್ಳುವ ಮತ್ತು ಜಮ್ಮು ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನ ತೆಗೆದು ಹಾಕಿರುವ ನಿರ್ಧಾರವು ಅತ್ಯಂತ ದುಃಖಕರ. ಕಾಂಗ್ರೆಸ್ ಪಕ್ಷವು ಖಂಡಿತವಾಗಿಯೂ ಈ ವಿಷಯದ ಬಗ್ಗೆ ಮರು ಚಿಂತನೆ ಮಾಡುತ್ತಿತ್ತು” ಎಂದು ಕ್ಲಬ್ ಹೌಸ್ ಸಂಭಾಷಣೆಯಲ್ಲಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಡಿಯೋ ವೈರಲ್ ಆಗಿದೆ.


ಇದನ್ನೂ ಓದಿ: ಕೊರೋನಾಗೆ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥವಾದ ರಾಜ್ಯದ 42 ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...