Homeಮುಖಪುಟಬಿಜೆಪಿಯವರೆ ನನಗೆ ತೊಂದರೆ ಕೊಡುತ್ತಿದ್ದಾರೆ: ಜನಾರ್ದನ ರೆಡ್ಡಿ ಅಸಮಾಧಾನ

ಬಿಜೆಪಿಯವರೆ ನನಗೆ ತೊಂದರೆ ಕೊಡುತ್ತಿದ್ದಾರೆ: ಜನಾರ್ದನ ರೆಡ್ಡಿ ಅಸಮಾಧಾನ

ಹಾಗಾಗಿ ಬರುವಂತಹ ದಿನಗಳಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂಬುದನ್ನು ಶೀಘ್ರವೇ ಘೋಷಿಸುತ್ತೇನೆ ಎಂದಿದ್ದಾರೆ.

- Advertisement -
- Advertisement -

ನಾನು ಕರ್ನಾಟಕ ರಾಜ್ಯದಲ್ಲಿ ಕಟ್ಟಿ ಬೆಳೆಸಿದ ಬಿಜೆಪಿ ಪಕ್ಷದವರೆ ನನಗೆ ತೊಂದರೆ ಕೊಡುತ್ತಿದ್ದಾರೆ ಎಂದು ಗಣಿ ಉದ್ಯಮಿ ಜನಾರ್ದನ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿಯ ಈದ್ಗಾ ಮೈದಾನದಲ್ಲಿ ಭಾನುವಾರ ನಡೆದ ಮುಸ್ಲಿಂ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನನ್ನ ಶತ್ರುಗಳು ಕಾಂಗ್ರೆಸ್‌ನವರು ಇರಬಹುದು. ಅವರ ರಾಜಕೀಯ ಧರ್ಮ ಈ ಹಿಂದೆ ನನಗೆ ತೊಂದರೆ ಕೊಟ್ಟಿರಬಹುದು. ಆದರೆ ಇವತ್ತು ನಮ್ಮವರೆ ನನಗೆ ಕಿರುಕುಳ ಕೊಡುವ ಪರಿಸ್ಥಿತಿಯಲ್ಲಿದ್ದಾರೆ” ಎಂದಿದ್ದಾರೆ.

ಹಾಗಾಗಿ ಬರುವಂತಹ ದಿನಗಳಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂಬುದನ್ನು ಶೀಘ್ರವೇ ಘೋಷಿಸುತ್ತೇನೆ ಎಂದಿದ್ದಾರೆ. ನನ್ನ ಜೊತೆಯಲ್ಲಿ ಮುಸ್ಲಿಂ ಬಾಂಧವರೂ ಕೂಡ ಬರುತ್ತಾರೆ ಎಂಬ ನಂಬಿಕೆ ಇದೆ ಎಂದು ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.

ನವೆಂಬರ್ 06ರ ನಂತರ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಬಳ್ಳಾರಿ ಜಿಲ್ಲೆಯಿಂದ ಹೊರಹೋಗುತ್ತಿದ್ದೇನೆ. ಹಾಗಂತ ಬೆಂಗಳೂರಿನಲ್ಲಿ ಕೂರುವುದಿಲ್ಲ. ಜನರ ನಡುವೆಯೇ ಇರುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಬಿಜೆಪಿ ಶಾಸಕ ಜಿ.ಸೋಮಶೇಖರ ರೆಡ್ಡಿಯವರು ಈ ಹಿಂದೆ ಯಾವುದೋ ಒಂದು ಮಾತು ಆಡಿದ್ದಾರೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅವರು ಆ ಮಾತು ಆಡಿದ್ದಕ್ಕೆ ಕ್ಷಮೆ ಕೇಳಿದ್ದಾರೆ. ಅವರು ಆ ಮಾತಾಡಲು ಯಾರು ಪ್ರಚೋದನೆ ನೀಡಿದ್ದರು ಎಂಬುದನ್ನು ಶೀಘ್ರದಲ್ಲಿಯೇ ಬಹಿರಂಗ ಪಡಿಸುತ್ತೇನೆ ಎಂದು ಸಹ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಸಿಎಎ ವಿರೋಧಿ ಪ್ರತಿಭಟನೆ ಸಂದರ್ಭದಲ್ಲಿ 2020ರ ಜನವರಿ 03 ರಂದು ಸೋಮಶೇಖರ ರೆಡ್ಡಿ ಕೋಮು ಪ್ರಚೋದಕ ಭಾಷಣ ಮಾಡಿದ್ದರು. “ನಿಮಗೆ ಪಂಕ್ಚರ್‌ ಹಾಕುವವರಿಗೆ ಏನೂ ಗೊತ್ತಿಲ್ಲ. ಯಾರದೋ ಮಾತು ಕೇಳಿಕೊಂಡು ಪ್ರತಿಭಟನೆ ಮಾಡುತ್ತಿದ್ದೀರಿ. ನಾವು ಒಂದು ಕೂಗು ಕೊಟ್ರೆ 95% ಮಂದಿ ಬರ್‍ತಾರೆ. ನಾವು ಉಫ್‌ ಅಂತ ಊದಿದರೆ ನೀವು ಹಾರಿಹೋಗ್ತೀರಿ” ಎಂದಿದ್ದರು.

“ಒಬ್ಬೊಬ್ಬ ಹಿಂದೂ ಒಬ್ಬೊಬ್ಬ ಶಿವಾಜಿ ಥರ ಆಗಿ ಮಚ್ಚು ಹಿಡಿದುಕೊಂಡರೆ, ಬಳ್ಳಾರಿ ದುರ್ಗಮ್ಮ ದರ್ಶನ ಮಾಡಿಕೊಂಡು ಖಡ್ಗ ಹಿಡಿದುಕೊಂಡರೆ ರಣರಂಗ ಸೃಷ್ಟಿಯಾಗುತ್ತೆ. ಸಿಎಎ ಮತ್ತು ಎನ್‌ಆರ್‌ಸಿ ನಮ್ಮ ಆಕ್ಟ್‌ಗಳು. ಮೋದಿ ಸಾಹೇಬರು, ಅಮಿತ್‌ ಶಾ ಮಾಡಿರುವ ತಂದಿರುವ ಆಕ್ಟ್‌ಗಳು. ಇದಕ್ಕೆ ಯಾರಾದರೂ ವಿರುದ್ಧವಾಗಿ ನಡೆದುಕೊಂಡರೆ ಚೆನ್ನಾಗಿರೋಲ್ಲ” ಎಂದು ಭಾಷಣ ಮಾಡಿದ್ದರು.

ಸದ್ಯ ಜನಾರ್ದನ ರೆಡ್ಡಿ ಅಧಿಕೃತವಾಗಿ ವಾಪಸ್ ಬಿಜೆಪಿ ಪಕ್ಷ ಸೇರುವ ಯೋಚನೆಯಲ್ಲಿದ್ದಾರೆ. ಆದರೆ ಅವರ ಮೇಲಿನ ಭ್ರಷ್ಟಾಚಾರದ ಕಾರಣಕ್ಕೆ ಬಿಜೆಪಿ ಮುಖಂಡರು ಪಕ್ಷಕ್ಕೆ ಸೇರಿಸಿಕೊಳ್ಳಲು ಸಿದ್ದರಿಲ್ಲ. ಹಾಗಾಗಿ ಬಿಜೆಪಿ ಮತ್ತು ರೆಡ್ಡಿ ನಡುವೆ ಮನಸ್ತಾಪ ಶುರುವಾಗಿದೆ. ಇದು ಎಲ್ಲಿಗೆ ಹೋಗಿ ತಲುಪುತ್ತದೆ ಕಾದು ನೋಡಬೇಕಿದೆ.

ಇದನ್ನೂ ಓದಿ; ಮುಸ್ಲಿಮರೆ ಜಾಸ್ತಿ ನಖರಾ ಮಾಡಿದರೆ ಉಫ್‌ ಅಂತ ಊದಿಬಿಡ್ತೇವೆ: ಬಹಿರಂಗ ಕೋಮು ಪ್ರಚೋದಾನಕಾರಿ ಭಾಷಣ ಮಾಡಿದ BJP ಶಾಸಕ ಸೋಮಶೇಖರ್‌ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...